Homeಮುಖಪುಟಹೈದರಾಬಾದ್ | ಹುತಾತ್ಮರ ಸ್ಮಾರಕದಲ್ಲಿ ಪ್ರೊ. ಸಾಯಿಬಾಬಾ ಪಾರ್ಥಿವ ಶರೀರ ಇರಿಸಲು ಪೊಲೀಸರಿಂದ ಅಡ್ಡಿ

ಹೈದರಾಬಾದ್ | ಹುತಾತ್ಮರ ಸ್ಮಾರಕದಲ್ಲಿ ಪ್ರೊ. ಸಾಯಿಬಾಬಾ ಪಾರ್ಥಿವ ಶರೀರ ಇರಿಸಲು ಪೊಲೀಸರಿಂದ ಅಡ್ಡಿ

- Advertisement -
- Advertisement -

ಹೈದರಾಬಾದ್‌ನ ಗನ್ ಪಾರ್ಕ್‌ನಲ್ಲಿರುವ ತೆಲಂಗಾಣ ಹುತಾತ್ಮರ ಸ್ಮಾರಕದ ಆವರಣದಲ್ಲಿ ಪ್ರೊಫೆಸರ್ ಜಿಎನ್ ಸಾಯಿಬಾಬಾ ಅವರ ಪಾರ್ಥಿವ ಶರೀರವನ್ನು ಇರಿಸಲು ತೆಲಂಗಾಣ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ ಎಂದು ವರದಿಯಾಗಿದೆ.

ಆದರೆ, ಸಾಯಿಬಾಬಾ ಅವರ ಕುಟುಂಬ ಸದಸ್ಯರು ಮತ್ತು ಹೋರಾಟಗಾರರು ಪಟ್ಟುಹಿಡಿದು ಪೊಲೀಸರೊಂದಿಗೆ ವಾಗ್ವಾದ ನಡೆಸಿದ ನಂತರ, ಸಾಯಿಬಾಬಾ ಅವರ ದೇಹ ಹೊತ್ತ ಆಂಬ್ಯುಲೆನ್ಸ್ ಅನ್ನು ಗನ್ ಪಾರ್ಕ್‌ನಲ್ಲಿ ಸುಮಾರು ಒಂದು ಗಂಟೆಗಳ ಕಾಲ ಇರಿಸಲಾಯಿತು.

“ಹುತಾತ್ಮರ ಸ್ಮಾರಕದ ಒಳಗೆ ಯಾವುದೇ ಮೃತದೇಹಗಳನ್ನು ಇರಿಸಲು ಅನುಮತಿಸುವುದಿಲ್ಲ ಎಂದು ಪೊಲೀಸರು ನಮಗೆ ತಿಳಿಸಿರಲಿಲ್ಲ. ತೆಲಂಗಾಣ ಚಳವಳಿಗೆ ಸಾಯಿಬಾಬಾ ಅವರು ನೀಡಿದ ಕೊಡುಗೆಗಾಗಿ ನಾವು ಅವರಿಗೆ ಗೌರವ ಸಲ್ಲಿಸಲು ಬಯಸಿದ್ದೆವು” ಎಂದು ದಮನ ವಿರೋಧಿ ವೇದಿಕೆಯ ಸಂಚಾಲಕ ಕೆ ರವಿಚಂದರ್ ಹೇಳಿರುವುದಾಗಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಹುತಾತ್ಮರ ಸ್ಮಾರಕದಲ್ಲಿ ಸಾಯಿಬಾಬಾ ಅವರ ಪಾರ್ಥಿವ ಶರೀರ ಇರಿಸಲು ಪೊಲೀಸರು ಅನುಮತಿ ನಿರಾಕರಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.

“ರಾಹುಲ್ ಗಾಂಧಿಯವರೇ ನೀವು ಜನರನ್ನು ಮರುಳು ಮಾಡುತ್ತಿರುವ ‘ಮೊಹಬ್ಬತ್ ಕಿ ದುಕಾನ್’ ಇದೆನಾ? ನಾಚಿಕೆಗೇಡಿನ ದ್ವಂದ್ವ ನೀತಿ! ನಿಮ್ಮ ಪಕ್ಷದ ರೇವಂತ್ ರೆಡ್ಡಿ ಅವರ ಸೂಚನೆ ಮೇರೆಗೆ ತೆಲಂಗಾಣ ಪೊಲೀಸರು ಪ್ರೊಫೆಸರ್ ಸಾಯಿಬಾಬಾ ಅವರ ಪಾರ್ಥಿವ ಶರೀರವನ್ನು ಹೈದರಾಬಾದ್‌ನಲ್ಲಿರುವ ತೆಲಂಗಾಣ ಹುತಾತ್ಮರ ಸ್ಮಾರಕದಲ್ಲಿ ಇಡುವುದನ್ನು ತಡೆದಿದ್ದಾರೆ” ಎಂದು ತೆಲಂಗಾಣ ಮಾಜಿ ಡಿಜಿಟಲ್ ಮೀಡಿಯಾ ನಿರ್ದೇಶಕ ಕೊನಾಥಮ್ ದಿಲೀಪ್ ಎಕ್ಸ್‌ನಲ್ಲಿ ಪ್ರಶ್ನಿಸಿದ್ದಾರೆ.

“ಸಾಯಿಬಾಬಾ ಅವರ ಕುಟುಂಬ ಸದಸ್ಯರು, ನಾಗರಿಕ ಸಮಾಜದ ಮುಖಂಡರು ಮತ್ತು ನಾಗರಿಕ ಹಕ್ಕುಗಳ ಕಾರ್ಯಕರ್ತರು ಸರ್ಕಾರದ ವಿರುದ್ದ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಂಬ್ಯುಲೆನ್ಸ್‌ನಲ್ಲೇ ಸಾಯಿಬಾಬಾ ಅವರ ಪಾರ್ಥಿವ ಶರೀರ ಇಟ್ಟು ಗೌರವ ಸಲ್ಲಿಸಲಾಯಿತು. ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾದಾಗ ಸಾಯಿಬಾಬಾ ಅವರ ದೇಹವನ್ನು ಗನ್ ಪಾರ್ಕ್‌ನಿಂದ ಮೌಲಾ ಅಲಿಯಲ್ಲಿರುವ ಅವರ ಮನೆಗೆ ಕೊಂಡೊಯ್ಯಲಾಯಿತು” ಎಂದು ದಿಲೀಪ್ ತಿಳಿಸಿದ್ದಾರೆ.

 

ದೆಹಲಿ ವಿಶ್ವವಿದ್ಯಾನಿಲಯದ ಮಾಜಿ ಪ್ರಾಧ್ಯಾಪಕ, ಮಾನವಹಕ್ಕುಗಳ ಹೋರಾಟಗಾರ ಪ್ರೊಫೆಸರ್ ಜಿ.ಎನ್. ಸಾಯಿಬಾಬಾ ಅವರು ಹೈದರಾಬಾದ್‌ನ ನಿಝಾಮ್‌ ವೈದ್ಯಕೀಯ ವಿಜ್ಞಾನ ಆಸ್ಪತ್ರೆ (ನಿಮ್ಸ್‌)ಯಲ್ಲಿ ಶನಿವಾರ ನಿಧನರಾಗಿದ್ದಾರೆ. ಹೃದಯ ಸ್ತಂಭನಕ್ಕೆ ಒಳಗಾಗಿದ್ದ ಅವರು ರಾತ್ರಿ 8.30ಕ್ಕೆ ಕೊನೆಯುಸಿರೆಳೆದಿದ್ದಾರೆ ಎಂದು ಅವರ ಆಪ್ತರು ಹೇಳಿದ್ದಾರೆ.

ಸಾಯಿಬಾಬಾ ಅವರ ದೇಹವನ್ನು ಶೈಕ್ಷಣಿಕ ಮತ್ತು ಸಂಶೋಧನಾ ಉದ್ದೇಶಗಳಿಗಾಗಿ ಸರ್ಕಾರಿ ಗಾಂಧಿ ಆಸ್ಪತ್ರೆಗೆ ಹಸ್ತಾಂತರಿಸಲು ಅವರ ಕುಟುಂಬ ನಿರ್ಧರಿಸಿದೆ.

ಮಾವೋವಾದಿಗಳೊಂದಿಗೆ ಸಂಪರ್ಕ ಪ್ರಕರಣದಲ್ಲಿ ಸಾಯಿಬಾಬಾ ಮತ್ತು ಇತರ ಐವರಿಗೆ ಶಿಕ್ಷೆಯನ್ನು ರದ್ದುಗೊಳಿಸಿ ಕಳೆದ ಮಾರ್ಚ್‌ನಲ್ಲಿ ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠ ತೀರ್ಪು ನೀಡಿತ್ತು.

ಇದನ್ನೂ ಓದಿ : ಪ್ರೊ. ಜಿಎನ್ ಸಾಯಿಬಾಬಾ ಅವರ ಇಚ್ಛೆಯಂತೆ ಆಸ್ಪತ್ರೆಗೆ ದೇಹದಾನ ಮಾಡಿದ ಕುಟುಂಬ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...