Homeಕರ್ನಾಟಕಮೂರು ತಿಂಗಳಿನಿಂದ ಬಿಡುಗಡೆಯಾಗದ ಗೌರವಧನ; ಸಂಕಷ್ಟದಲ್ಲಿ ಅಂಗನವಾಡಿ ನೌಕರರು

ಮೂರು ತಿಂಗಳಿನಿಂದ ಬಿಡುಗಡೆಯಾಗದ ಗೌರವಧನ; ಸಂಕಷ್ಟದಲ್ಲಿ ಅಂಗನವಾಡಿ ನೌಕರರು

- Advertisement -
- Advertisement -

ಕಳೆದ ಮೂರು ತಿಂಗಳಿನಿಂದ (ಜೂನ್‌ನಿಂದ) ಸರ್ಕಾರ ಗೌರವಧನ ಬಿಡುಗಡೆ ಮಾಡದೇ ಇರುವುದರಿಂದ ರಾಜ್ಯದ ಅಂಗನವಾಡಿ ನೌಕರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಕ್ಕಳಿಗೆ ಅಕ್ಷರ ಕಲಿಸುವ ಜೊತೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಆರೋಗ್ಯ ಇಲಾಖೆಯ ಹಲವು ಯೋಜನೆಗಳ ಜಾರಿಗೆ ಹಗಲಿರುಳು ಶ್ರಮಿಸುತ್ತಿರುವ ನೌಕರರು ಹಬ್ಬದ ಸಂದರ್ಭದಲ್ಲಿ ಹಣ ಇಲ್ಲದೆ ತೊಂದರೆಗೆ ಒಳಗಾಗಿದ್ದಾರೆ. “ಕೂಡಲೇ ಬಾಕಿ ಬಿಡುಗಡೆ ಮಾಡುವ ಜೊತೆಗೆ, ಪ್ರತಿತಿಂಗಳು ನಿಯಮಿತವಾಗಿ ಗೌರವಧನ ಕೊಡಬೇಕು” ಎಂದು ‘ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ’ದ ರಾಜ್ಯ ಸಮಿತಿ ಆಗ್ರಹಿಸಿದೆ.

ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ರಾಜ್ಯ ಸಮಿತಿ, “ಸಮಗ್ರ ಶಿಶು ಅಭಿವೃದ್ಧಿ ಯೋಜನೆ (ಐಸಿಡಿಎಸ್)ಯು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪಾವತಿಯಾಧಾರದಲ್ಲಿ ನಡೆಯುತ್ತಿದೆ. 2016 ರವರೆಗೂ ಗೌರವಧನ ನಿಯಮಿತವಾಗಿ ಬರುತ್ತಿರಲಿಲ್ಲ. ಆಗ ರಾಜ್ಯ ಸರ್ಕಾರ ವೇತನಕ್ಕೆ ಬೇಕಾದ ಹಣವನ್ನೊದಗಿಸಿ, ಕೇಂದ್ರದಿಂದ ಬ೦ದಾಗ ತಗೆದುಕೊಳ್ಳುವ ವಿಶೇಷ ತೀರ್ಮಾನವನ್ನು ಮಾಡಲಾಗಿತ್ತು. ಅಂದಿನಿಂದ ಇಂದಿನವರೆಗೂ ಅದೇ ರೀತಿ ಪಕ್ರಿಯೆ ಇತ್ತು. 2024 ಜೂನ್‌ನಿಂದ ಪುನಃ ಅ೦ಗನವಾಡಿ ನೌಕರರ ಗೌರವಧನ ಪಾವತಿಯಲ್ಲಿ ವ್ಯತ್ಯಯ ಉಂಟಾಗಿ, ಹಲವು ತಾಲ್ಲೂಕುಗಳಲ್ಲಿ 2 ರಿಂದ 3 ತಿಂಗಳು ಗೌರವಧನ ಬಂದಿಲ್ಲ” ಎಂದು ಸಮಿತಿ ಹೇಳಿದೆ.

“ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನಿರ್ದೇಶಕರ ಮಾಹಿತಿಯಂತೆ, ಕಚೇರಿಗಳಲ್ಲಿರುವ ಹಣ ಖರ್ಚಾಗದೇ ಇರುವುದರಿಂದ 2024 ಏಪ್ರಿಲ್‌ನಿಂದ ಕೇಂದ್ರ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಿಲ್ಲ. ಆದ್ದರಿಂದ, ಈ ಸಮಸ್ಯೆ ಉದ್ಭವಿಸಿದೆ ಎಂದು ಹೇಳುತ್ತಿದ್ದಾರೆ. ಈ ಬಗ್ಗೆ ವಿಚಾರಿಸಿದರೆ ಕೇಂದ್ರ ಕಚೇರಿಯಿಂದ ಅನುದಾನಗಳು ಬಂ೦ದಿಲ್ಲ ಎಂದು ನಿರ್ದೇಶಕರ ಕಚೇರಿಯಲ್ಲಿ ಹೇಳುತ್ತಿದ್ದಾರೆ. ಕೆಲವಡೆ 2 ತಿಂಗಳು, ಕೆಲವಡೆ 3 ತಿಂಗಳು, ಕೆಲವಡೆ ಒಂದೇ ತಾಲ್ಲೂಕಿನಲ್ಲಿ 3-4 ತಿಂಗಳ ವೇತನ ಪಾವತಿಯಿಲ್ಲ. ಇನ್ನು ಕೆಲವಡೆ ಸಹಾಯಕಿಯರಿಗೆ ವೇತನವಾಗಿದೆ. ಆದರೆ, ಕಾರ್ಯಕರ್ತೆಯರಿಗೆ ಬಂದಿಲ್ಲ. ಈ ರೀತಿಯಲ್ಲಿ ಹಲವು ಗೊ೦ದಲದಗೂಡಾಗಿದೆ. ಆದ್ದರಿ೦ದ, ತಾವು ಮಧ್ಯಪ್ರವೇಶಿಸಿ ಪ್ರತಿ ತಿಂಗಳು ಗೌರವಧನ ಸಿಗುವ ಹಾಗೆ ಸೂಕ್ತಕ್ರಮ ವಹಿಸಬೇಕು” ಎಂದು ಅಂಗನವಾಡಿ ನೌಕರರ ಸಂಘಟನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

ಈ ಬಗ್ಗೆ ‘ನಾನುಗೌರಿ.ಕಾಮ್’ ಜೊತೆಗೆ ಮಾತನಾಡಿ ಅಂಗನವಾಡಿ ಕಾರ್ಯಕರ್ತೆ ಎಂ.ಬಿ ಪುಷ್ಪಾ, “ಇದು ಮಹಾಲಯ ಅಮಾವಸ್ಯೆ ತಿಂಗಳು.. ನಮ್ಮಲ್ಲಿ ಈಗ ಆಚರಣೆಗಳು ಹೆಚ್ಚಾಗಿರುತ್ತವೆ. ಕಳೆದ ಎರಡುಮೂರು ತಿಂಗಳಿನಿಂದ ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕರಿಗೆ ಗೌರವಧನ ಬಿಡುಗಡೆಯಾಗಿಲ್ಲ. ಅಧಿಕಾರಿಗಳನ್ನು ಈ ಬಗ್ಗೆ ಪ್ರಶ್ನಿಸಿದರೆ, ‘ಅನುದಾನ ಬಂದರೆ ಮಾಡಿಕೊಡುತ್ತೇವೆ’ ಎನ್ನುತ್ತಿದ್ದಾರೆ. ಮೇಲಾಧಿಕಾರಿಗಳನ್ನು ಕೇಳಿದರೆ ಅನುದಾನ ಕಳಿಸಿದ್ದೇವೆ ಎನ್ನುತ್ತಾರೆ. ಇಂಥ ಪರಿಸ್ಥಿತಿಯಲ್ಲಿ ನಾವು ಯಾರನ್ನು ನಂಬಬೇಕು ಎನ್ನುವುದೇ ಗೊತ್ತಾಗುತ್ತಿಲ್ಲ. ಅಂಗನವಾಡಿ ನೌಕರರು ಯಾರೂ ಕೂಡ ಆರ್ಥಿಕವಾಗಿ ಸಬಲರಾಗಿರುವುದಿಲ್ಲ. ಇದನ್ನೇ ನಂಬಿಕೊಂಡು ಜೀವನ ಮಾಡುವವರಿಗೆ ಎರಡು ಮೂರು ತಿಂಗಳು ಗೌರವಧನ ನೀಡದೇ ಇದ್ದರೆ ನಮ್ಮ ಬದುಕಿಗೆ ಕಷ್ಟವಾಗುತ್ತದೆ” ಎಂದು ಬೇಸರ ಹೊರಹಾಕಿದರು.

“ಈ ಪರಿಸ್ಥಿತಿಯನ್ನು ನಿರ್ವಹಿಸಲಾಗದೆ ದಾವಣಗೆರೆಯ ಅಂಗನವಾಡಿ ಸಹಾಯಕರೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸರ್ಕಾರ ಈವರೆಗೆ ಒಂದು ಸ್ಪಷ್ಟನೆ ನೀಡಿಲ್ಲ.. ಗೌರವಧನ ನೀಡದಿದ್ದರೂ ನಮ್ಮ ಕೆಲಸಗಳು ನಿಂತಿಲ್ಲ. ದಿನದಿಂದ ದಿನಕ್ಕೆ ಕೆಲಸದ ಹೊರೆ ಹೆಚ್ಚುತ್ತಿದೆ. ಸಂಬಳ ಕೊಡದೆ ಕೆಲಸ ಮಾಡಿಸುತ್ತಿರುವುದರಿಂದ ಕಾರ್ಯಕರ್ತರು ಒತ್ತಡಕ್ಕೆ ಒಳಗಾಗುತ್ತಿದ್ದಾರೆ. ಬೆಲೆ ಏರಿಕೆಗೆ ಅನುಗುಣವಾಗಿ ನಮಗೆ ಕನಿ‍ಷ್ಠ ವೇತನವನ್ನೂ ಸರ್ಕಾರ ಕೊಡುತ್ತಿಲ್ಲ. ಬರಬೇಕಾದ ಕಡಿಮೆ ಗೌರವಧನವನ್ನೂ ಸಮಯಕ್ಕೆ ಸರಿಯಾಗಿ ಕೊಡುತ್ತಿಲ್ಲ. ನಮಗೆ ಜೀವನ ಮಾಡುವುದು ಕಷ್ಟವಾಗುತ್ತಿದೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಪ್ರತಿ ತಿಂಗಳು ಹಣ ಬಿಡುಗಡೆ ಮಾಡಬೇಕು” ಎಂದು ಆಗ್ರಹಿಸಿದರು.

“ಕೆಲವು ತಾಲೂಕುಗಳಲ್ಲಿ ಗೌರವಧನ ಕೊಡದಿದ್ದರೂ ತಮ್ಮದೇ ಹಣದಲ್ಲಿ ಮಕ್ಕಳಿಗೆ ಮೊಟ್ಟೆ ಕೊಡಿ ಎಂದು ಅಧಿಕಾರಿಗಳು ಒತ್ತಡ ಹಾಕುತ್ತಿದ್ದಾರೆ. ನಮಗೆ ಜೀವನ ಮಾಡುವುದೇ ಕಷ್ಟವಾಗಿರುವಾಗ ಮಕ್ಕಳಿಗೆ ಮೊಟ್ಟೆ ಖರೀದಿ ಮಾಡುವುದು ಹೇಗೆ? ಇದನ್ನೂ ತಡೆಗಟ್ಟಬೇಕು. ಕಾರ್ಯಕರ್ತೆಯರ ಬದುಕು ಚಿಂತಾಜನಕವಾಗಿದೆ. ಸರ್ಕಾರ ಈ ಬಗ್ಗೆ ಗಮನಕೊಟ್ಟು ಪ್ರತಿ ತಿಂಗಳು ಗೌರವಧನ ಕೊಡಬೇಕು” ಎಂದರು.

ಅಂಗನವಾಡಿ ನೌಕರರ ಬೇಡಿಕೆಗಳೇನು?

1. ಸಮಗ್ರ ಶಿಶು ಅಭಿವೃದ್ಧಿ ಯೋಜನೆ 2023 ರ ಆದೇಶದ ಪ್ರಕಾರ ಕೂಡಲೇ ಗ್ರಾಜ್ಯುಟಿ ಹಣವನ್ನು ಕೊಡಬೇಕು.

2. ನಿವೃತ್ತಿಯಾದವರಿಗೆ ಇಡಗ೦ಟು ಅಥವಾ ಎನ್‌ಪಿಎಸ್‌ ಹಣ ಕೊಡಬೇಕು.

3. 2023 ರ ವಿಧಾನಸಭಾ ಚುನಾವಣೆಯ ಸಂಧರ್ಭದಲ್ಲಿ ಘೋಷಣೆ ಮಾಡಿದ 14 ಸಾವಿರ ರೂಗಳಿಗೆ
ಗೌರವಧನ ಹೆಚ್ಚಿಸಬೇಕು.

4. ಶಿಕ್ಷಣ ಇಲಾಖೆ, ಎಸ್‌ಡಿಎಂಸಿ ಗಳಿಂದ ಪ್ರಾರಂಭ ಮಾಡಿರುವ ಎಲ್‌ಕೆಜಿ-ಯುಕೆಜಿ ನಿಲ್ಲಿಸಿ, ಎಲ್ಲ ಅ೦ಗನವಾಡಿ
ಕೇ೦ದ್ರಗಳನ್ನು ಮೇಲ್ದರ್ಜೆಗೇರಿಸಿ ಅಂಗನವಾಡಿ ಕೇ೦ದ್ರಗಳಲ್ಲಿಯೇ ಎಲ್‌ಕೆಜಿ-ಯುಕೆಜಿ ಪ್ರಾರಂಭಿಸಬೇಕು.

5. ಇಲಾಖಾ ಸಚಿವರು ಒಪ್ಪಿಕೊ೦ಡಂತೆ ಸಾಮೂಹಿಕ ಆರೋಗ್ಯ ವಿಮೆಯನ್ನು ಕೂಡಲೇ
ಜಾರಿಗೊಳಿಸಬೇಕು.

6. ಐಸಿಡಿಎಸ್ ಯೋಜನೆಯನ್ನು ಕಾಯ್ದೆಯನ್ನಾಗಿ ರೂಪಿಸಬೇಕು.

7. ಪೌಷ್ಟಿಕ ಆಹಾರ ಮತ್ತು ಪೂರ್ವಪ್ರಾರ್ಥಮಿಕ ಶಿಕ್ಷಣ ಹಕ್ಕಗಬೇಕು.

8. ಐಸಿಡಿಎಸ್ ಯೋಜನೆಗೆ ಬಜೆಟ್‌ನ್ನು ಹೆಚ್ಚಿಸಬೇಕು.

9. ಅ೦ಗನವಾಡಿ ಕೇಂದ್ರಗಳಿಗೆ ಕೊಡುವ ಪೂರಕ ಪೌಷ್ಟಿಕ ಆಹಾರಕ್ಕೆ ಜಿಎಸ್‌ಟಿ ಹಾಕಬಾರದು.

10. ಐಸಿಡಿಎಸ್ ಯೋಜನೆಗೆ ಪ್ರತ್ಯೇಕ ನಿರ್ದೇಶಾನಾಲಯ ಬೇಕು.

11. 2018 ಸೆಪ್ಟಂಬರ್‌ನಿ೦ದ ಇದುವರೆಗೂ ಅಂಗನವಾಡಿ ನೌಕರರಿಗೆ ಯಾವುದೇ ವೇತನ ಹೆಚ್ಚಿಸಿಲ್ಲ.
ಆದ್ದರಿ೦ದ 26 ಸಾವಿರಕ್ಕೆ ಕನಿಷ್ಠ ವೇತನ ಹೆಚ್ಚಳ ಮಾಡಬೇಕು.

12. 45ನೇ ಐಎಲ್‌ಸಿ ಶಿಫಾರಸ್ಸುಗಳನ್ನು ಜಾರಿ ಮಾಡಬೇಕು.

13. ಕೇಂದ್ರ ಸರ್ಕಾರದ ಪಾಲಿನ ಐಸಿಡಿಎಸ್‌ಗೆ ಕೊಡುವ ಅನುದಾನ ಸಮಯಕ್ಕೆ ಸರಿಯಾಗಿ ಬಿಡುಗಡೆ
ಮಾಡಬೇಕು.

14. ಬೆಲೆಯೇರಿಕೆಯ ಆಧಾರದಲ್ಲಿ ಫಲಾನುಭವಿಗಳ ಘಟಕವೆಚ್ಚವನ್ನು ಹೆಚ್ಚಳಗೊಳಿಸಬೇಕು. 2017 ರಿಂದ
ಘಟಕ ವೆಚ್ಚವನ್ನು ಹೆಚ್ಚಳ ಮಾಡಲಿಲ್ಲ.

15. ನಗರಸಭೆ, ನಗರಪಾಲಿಕೆ, ಮಹಾನಗರ ಪಾಲಿಕೆ, ವಿಧಾನಸಭೆ, ಲೋಕಸಭಾ ಚುನಾವಣೆಗಳು ಅಲ್ಲದೇ
ಉಪಚುನಾವಣೆಗಳಲ್ಲಿ ಮತದಾರರನ್ನು ಗುರ್ತಿಸುವುದು, ಅನರ್ಹಗೊಳಿಸುವುದು, ಚುನಾವಣಾ
ಸಂಧರ್ಭದಲ್ಲಿ ಚೀಟಿ ಹ೦ಚುವುದು, ಬೂತ್‌ಗಳಲ್ಲಿ ಕೆಲಸ ಮಾಡುವ ಮುಂತಾದ ಕೆಲಸಗಳಿಂದ
ಅ೦ಗನವಾಡಿ ಕೇಂದ್ರದ ದಿನನಿತ್ಯದ ಕೆಲಸಗಳಲ್ಲಿ ಅಂಗನವಾಡಿ ನೌಕರರು ತೊಂದರೆ ಅನುಭವಿಸುತ್ತದ್ದಾರೆ.
ಆದ್ದರಿಂದ ಅವರನ್ನು ಚುನಾವಣಾ ಕಲಸಗಳಿ೦ದ ಮುಕ್ತಿಗೊಳಿಸಬೇಕು.

ಇದನ್ನೂ ಓದಿ; ರೈತರು, ವಿದ್ಯಾರ್ಥಿಗಳು, ಸಾಮಾನ್ಯರ ಪ್ರಕರಣಗಳನ್ನೂ ವಾಪಸ್ ಪಡೆಯಲಾಗಿದೆ : ಸಚಿವ ಪರಮೇಶ್ವರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...