Homeಮುಖಪುಟತಮಿಳುನಾಡು| ಕಾರ್ಮಿಕ ಹಕ್ಕು ವಿಚಾರದಲ್ಲಿ ಕೇಂದ್ರದ ಬಿಜೆಪಿಗೂ, ರಾಜ್ಯದ ಡಿಎಂಕೆಗೂ ಯಾವುದೇ ವ್ಯತ್ಯಾಸವಿಲ್ಲ : ನ್ಯಾ....

ತಮಿಳುನಾಡು| ಕಾರ್ಮಿಕ ಹಕ್ಕು ವಿಚಾರದಲ್ಲಿ ಕೇಂದ್ರದ ಬಿಜೆಪಿಗೂ, ರಾಜ್ಯದ ಡಿಎಂಕೆಗೂ ಯಾವುದೇ ವ್ಯತ್ಯಾಸವಿಲ್ಲ : ನ್ಯಾ. ಚಂದ್ರು

ಎರಡನೇ ತಿಂಗಳಿಗೆ ಕಾಲಿಟ್ಟ ಸ್ಯಾಮ್‌ಸಂಗ್ ಕಾರ್ಮಿಕರ ಹೋರಾಟ

- Advertisement -
- Advertisement -

ತಮಿಳುನಾಡಿನ ಶ್ರೀಪೆರಂಬದೂರಿನ ಸ್ಯಾಮ್‌ಸಂಗ್‌ ಘಟಕದಲ್ಲಿ ಕಾರ್ಮಿಕರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಎರಡನೇ ತಿಂಗಳಿಗೆ ಕಾಲಿಟ್ಟಿದ್ದು, ತಮಿಳುನಾಡು ಸರ್ಕಾರ ಸಮಸ್ಯೆ ಪರಿಹರಿಸಲು ಏಕೆ ವಿಳಂಬ ಮಾಡುತ್ತಿದೆ? ಎಂದು ಕಾರ್ಮಿಕ ಕಾನೂನು ಮತ್ತು ಕೈಗಾರಿಕಾ ವಿವಾದಗಳ ತಜ್ಞ ಮತ್ತು ನಿವೃತ್ತ ಹೈಕೋರ್ಟ್ ನ್ಯಾಯಾಧೀಶ ಕೆ.ಚಂದ್ರು ಪ್ರಶ್ನಿಸಿದ್ದಾರೆ.

ಸ್ಯಾಮ್‌ಸಂಗ್ ಇಂಡಿಯಾ ವರ್ಕರ್ಸ್ ಯೂನಿಯನ್ (ಎಸ್‌ಐಡಬ್ಲ್ಯುಯು) ನೋಂದಣಿಯು ಸೆಪ್ಟೆಂಬರ್ 9ರಿಂದ ಪ್ರತಿಭಟನೆ ನಡೆಸುತ್ತಿರುವ ನೂರಾರು ಸ್ಯಾಮ್‌ಸಂಗ್ ಕಾರ್ಮಿಕರ ಪ್ರಮುಖ ಬೇಡಿಕೆಯಾಗಿದೆ. ಅವರು ಕಳೆದ ಜುಲೈ 25 ರಂದು ರಾಜ್ಯ ಕಾರ್ಮಿಕ ಇಲಾಖೆಗೆ ಆನ್‌ಲೈನ್‌ನಲ್ಲಿ ದಾಖಲೆಗಳನ್ನು ಸಲ್ಲಿಸಿದ್ದಾರೆ. ಕಾನೂನಿನ ಪ್ರಕಾರ, ಇಲಾಖೆಗೆ ಅರ್ಜಿ ಕಳುಹಿಸಿದ 45 ದಿನಗಳಲ್ಲಿ ಒಕ್ಕೂಟವನ್ನು ನೋಂದಾಯಿಸಬೇಕು. ಆದರೆ, ಸರ್ಕಾರ ಇದುವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇದು ಕಾರ್ಮಿಕರನ್ನು ಕೆರಳಿಸಿದೆ.

ಪ್ರಸ್ತಾವಿತ ಕಾರ್ಮಿಕ ಒಕ್ಕೂಟದ ಹೆಸರಿನಲ್ಲಿ ‘ಸ್ಯಾಮ್‌ಸಂಗ್’ ಎಂದು ಕಂಪನಿಯ ಹೆಸರಿರುವುದು ಮತ್ತು ಕಾರ್ಮಿಕರ ಹೋರಾಟದ ಹಿಂದೆ ಸಿಪಿಐ (ಎಂ) ಬೆಂಬಲಿತ ಕಾರ್ಮಿಕ ಸಂಘಟನೆ ಸಿಐಟಿಯು ಇರುವುದರಿಂದ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎನ್ನಲಾಗಿದೆ.

“ಭಾರತದಲ್ಲಿ ತಮ್ಮ ಘಟಕಗಳನ್ನು ಸ್ಥಾಪಿಸುವ ವಿದೇಶಿ ಕಂಪನಿಗಳು ಸಾಮಾನ್ಯವಾಗಿ ಯಾವುದೇ ಕಾರ್ಮಿಕ ಒಕ್ಕೂಟಗಳಿಗೆ ಸರ್ಕಾರ ಅವಕಾಶ ನೀಡಬಾರದು ಎಂಬುವುದು ಮೊಟ್ಟ ಮೊದಲು ಬೇಡಿಕೆಯಾಗಿರುತ್ತದೆ” ಎಂದು ದಿ ನ್ಯೂಸ್ ಮಿನಿಟ್‌ನ ಶಬೀರ್ ಅಹ್ಮದ್ ಅವರೊಂದಿಗಿನ ಸಂದರ್ಶನದಲ್ಲಿ ನ್ಯಾಯಮೂರ್ತಿ ಚಂದ್ರು ಹೇಳಿದ್ದಾರೆ.

“ಸಂವಿಧಾನದ ಪ್ರಕಾರ ಒಕ್ಕೂಟ ಅಥವಾ ಸಂಘವನ್ನು ರಚಿಸುವುದು ಕಾರ್ಮಿಕರ ಮೂಲಭೂತ ಹಕ್ಕು. ಇದು 1965ರಲ್ಲಿ ಸುಪ್ರೀಂ ಕೋರ್ಟ್‌ನಿಂದ ಅಂಗೀಕರಿಸಲ್ಪಟ್ಟ ಟ್ರೇಡ್ ಯೂನಿಯನ್‌ಗಳನ್ನು ಒಳಗೊಂಡಿದೆ. ಯಾವುದೇ ಕಡ್ಡಾಯ ಮಾನ್ಯತೆ ಇಲ್ಲದಿದ್ದರೂ, ಒಕ್ಕೂಟದ ನೋಂದಣಿಯನ್ನು ನಿರಾಕರಿಸಲು ಕಾರ್ಮಿಕ ನ್ಯಾಯಾಲಯಕ್ಕೆ ಯಾವುದೇ ವಿವೇಚನಾಧಿಕಾರವಿಲ್ಲ. ಟ್ರೇಡ್ ಯೂನಿಯನ್ಸ್ ಆಕ್ಟ್, 1926 ರ ಅಡಿಯಲ್ಲಿ, ಕಾರ್ಮಿಕರು ಒಟ್ಟು ಉದ್ಯೋಗಿಗಳ 10% ಅನ್ನು ಪ್ರತಿನಿಧಿಸಬೇಕು. ಹಾಗಿದ್ದಲ್ಲಿ, ಕಾರ್ಮಿಕ ಆಯುಕ್ತರು ಒಕ್ಕೂಟದ ಮಾನ್ಯತೆಗೆ ಶಿಫಾರಸು ಮಾಡಬಹುದು. ತಮಿಳುನಾಡಿನಲ್ಲಿ ಇದೇ ಮೊದಲ ಬಾರಿಗೆ ಸಮಸ್ಯೆ ಪರಿಹರಿಸಲಾಗದೆ, ಹೂಡಿಕೆಯ ರಹಸ್ಯ ಒಳ ಒಪ್ಪಂದವನ್ನು ಬಹಿರಂಗಪಡಿಸಲಾಗದೆ ಪೊಲೀಸರನ್ನು ಬಳಸಿಕೊಂಡು ಸರ್ಕಾರ ಕಾರ್ಮಿಕರನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ” ಎಂದು ಚಂದ್ರು ತಿಳಿಸಿದ್ದಾರೆ.

“ಕಾರ್ಮಿಕ ಹಕ್ಕುಗಳು ಮತ್ತು ಸಮಸ್ಯೆಗಳ ವಿಷಯಕ್ಕೆ ಬಂದರೆ, ರಾಷ್ಟ್ರೀಯ ಮಟ್ಟದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ರಾಜ್ಯ ಮಟ್ಟದಲ್ಲಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ನಡುವೆ ಹೆಚ್ಚಿನ ವ್ಯತ್ಯಾಸವಿಲ್ಲ ಎಂದಿರುವ ಚಂದ್ರು, “ಕಾರ್ಮಿಕ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರಗಳು ಸರಿಯಾದ ನೀತಿಗಳನ್ನು ಹೊಂದಿಲ್ಲ” ಎಂದು ಹೇಳಿದ್ದಾರೆ.

“ಮಾಜಿ ಮುಖ್ಯಮಂತ್ರಿ ಸಿಎನ್ ಅಣ್ಣಾದೊರೈ ಕಾರ್ಮಿಕರ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸಿದ್ದರು. ಆದರೆ, ಬಳಿಕ ಅವರು ಸಂಪೂರ್ಣ ತಟಸ್ಥತೆಯನ್ನು ಕಾಯ್ದುಕೊಂಡರು. ಪ್ರಸ್ತುತ ಸರ್ಕಾರ ನಾವು ಸಮಸ್ಯೆ ಪರಿಹರಿಸುತ್ತಿದ್ದೇವೆ ಎನ್ನುತ್ತಿದೆ. ಆದರೆ, ಅವರು ಇನ್ನೂ ಕಾರ್ಮಿಕರ ಒಕ್ಕೂಟಕ್ಕೆ ಮಾನ್ಯತೆಯೇ ನೀಡಿಲ್ಲ. ನ್ಯಾಯ ಸಿಗುತ್ತದೆ ಎಂಬ ನಂಬಿಕೆಯಿಂದ ಕಾರ್ಮಿಕರು ನ್ಯಾಯಾಲಯದ ಮೊರೆ ಹೋಗುತ್ತಿಲ್ಲ ಎಂದು ಚಂದ್ರು ವಿವರಿಸಿದ್ದಾರೆ.

ಮದ್ರಾಸ್ ಹೈಕೋರ್ಟ್ ನೌಕರರಿಗೆ ಶಾಂತಿಯುತ ಪ್ರತಿಭಟನೆ ನಡೆಸಲು ಅನುಮತಿ ನೀಡಿತ್ತು. ಈ ನಡುವೆ ಅಕ್ಟೋಬರ್ 10ರಂದು ಸಂಜೆ ತಮಿಳುನಾಡು ಪೊಲೀಸರು ಸುಮಾರು 300 ಕಾರ್ಮಿಕರನ್ನು ಬಂಧಿಸಿದ್ದರು. ಕಾರ್ಮಿಕರ ಅಕ್ರಮ ಬಂಧನದ ವಿರುದ್ದ ಸಿಐಟಿಯು ನ್ಯಾಯಾಲಯಕ್ಕೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದೆ. ಕಾರ್ಮಿಕರನ್ನು ಕೂಡಲೇ ಬಿಡುಗಡೆ ಮಾಡುವಂತೆ ಶ್ರೀಪೆರಂಬದೂರು ನ್ಯಾಯಾಂಗ ಮ್ಯಾಜಿಸ್ಟ್ರೇಟ್‌ಗೆ ವಿಶೇಷ ಅರ್ಜಿಯನ್ನೂ ಸಲ್ಲಿಸಿದೆ.

ಸೌಜನ್ಯ : ದಿ ನ್ಯೂಸ್ ಮಿನಿಟ್

ಇದನ್ನೂ ಓದಿ : ಮೂರು ತಿಂಗಳಿನಿಂದ ಬಿಡುಗಡೆಯಾಗದ ಗೌರವಧನ; ಸಂಕಷ್ಟದಲ್ಲಿ ಅಂಗನವಾಡಿ ನೌಕರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...