Homeಮುಖಪುಟತಮಿಳುನಾಡು| ಕಾರ್ಮಿಕ ಹಕ್ಕು ವಿಚಾರದಲ್ಲಿ ಕೇಂದ್ರದ ಬಿಜೆಪಿಗೂ, ರಾಜ್ಯದ ಡಿಎಂಕೆಗೂ ಯಾವುದೇ ವ್ಯತ್ಯಾಸವಿಲ್ಲ : ನ್ಯಾ....

ತಮಿಳುನಾಡು| ಕಾರ್ಮಿಕ ಹಕ್ಕು ವಿಚಾರದಲ್ಲಿ ಕೇಂದ್ರದ ಬಿಜೆಪಿಗೂ, ರಾಜ್ಯದ ಡಿಎಂಕೆಗೂ ಯಾವುದೇ ವ್ಯತ್ಯಾಸವಿಲ್ಲ : ನ್ಯಾ. ಚಂದ್ರು

ಎರಡನೇ ತಿಂಗಳಿಗೆ ಕಾಲಿಟ್ಟ ಸ್ಯಾಮ್‌ಸಂಗ್ ಕಾರ್ಮಿಕರ ಹೋರಾಟ

- Advertisement -
- Advertisement -

ತಮಿಳುನಾಡಿನ ಶ್ರೀಪೆರಂಬದೂರಿನ ಸ್ಯಾಮ್‌ಸಂಗ್‌ ಘಟಕದಲ್ಲಿ ಕಾರ್ಮಿಕರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಎರಡನೇ ತಿಂಗಳಿಗೆ ಕಾಲಿಟ್ಟಿದ್ದು, ತಮಿಳುನಾಡು ಸರ್ಕಾರ ಸಮಸ್ಯೆ ಪರಿಹರಿಸಲು ಏಕೆ ವಿಳಂಬ ಮಾಡುತ್ತಿದೆ? ಎಂದು ಕಾರ್ಮಿಕ ಕಾನೂನು ಮತ್ತು ಕೈಗಾರಿಕಾ ವಿವಾದಗಳ ತಜ್ಞ ಮತ್ತು ನಿವೃತ್ತ ಹೈಕೋರ್ಟ್ ನ್ಯಾಯಾಧೀಶ ಕೆ.ಚಂದ್ರು ಪ್ರಶ್ನಿಸಿದ್ದಾರೆ.

ಸ್ಯಾಮ್‌ಸಂಗ್ ಇಂಡಿಯಾ ವರ್ಕರ್ಸ್ ಯೂನಿಯನ್ (ಎಸ್‌ಐಡಬ್ಲ್ಯುಯು) ನೋಂದಣಿಯು ಸೆಪ್ಟೆಂಬರ್ 9ರಿಂದ ಪ್ರತಿಭಟನೆ ನಡೆಸುತ್ತಿರುವ ನೂರಾರು ಸ್ಯಾಮ್‌ಸಂಗ್ ಕಾರ್ಮಿಕರ ಪ್ರಮುಖ ಬೇಡಿಕೆಯಾಗಿದೆ. ಅವರು ಕಳೆದ ಜುಲೈ 25 ರಂದು ರಾಜ್ಯ ಕಾರ್ಮಿಕ ಇಲಾಖೆಗೆ ಆನ್‌ಲೈನ್‌ನಲ್ಲಿ ದಾಖಲೆಗಳನ್ನು ಸಲ್ಲಿಸಿದ್ದಾರೆ. ಕಾನೂನಿನ ಪ್ರಕಾರ, ಇಲಾಖೆಗೆ ಅರ್ಜಿ ಕಳುಹಿಸಿದ 45 ದಿನಗಳಲ್ಲಿ ಒಕ್ಕೂಟವನ್ನು ನೋಂದಾಯಿಸಬೇಕು. ಆದರೆ, ಸರ್ಕಾರ ಇದುವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇದು ಕಾರ್ಮಿಕರನ್ನು ಕೆರಳಿಸಿದೆ.

ಪ್ರಸ್ತಾವಿತ ಕಾರ್ಮಿಕ ಒಕ್ಕೂಟದ ಹೆಸರಿನಲ್ಲಿ ‘ಸ್ಯಾಮ್‌ಸಂಗ್’ ಎಂದು ಕಂಪನಿಯ ಹೆಸರಿರುವುದು ಮತ್ತು ಕಾರ್ಮಿಕರ ಹೋರಾಟದ ಹಿಂದೆ ಸಿಪಿಐ (ಎಂ) ಬೆಂಬಲಿತ ಕಾರ್ಮಿಕ ಸಂಘಟನೆ ಸಿಐಟಿಯು ಇರುವುದರಿಂದ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎನ್ನಲಾಗಿದೆ.

“ಭಾರತದಲ್ಲಿ ತಮ್ಮ ಘಟಕಗಳನ್ನು ಸ್ಥಾಪಿಸುವ ವಿದೇಶಿ ಕಂಪನಿಗಳು ಸಾಮಾನ್ಯವಾಗಿ ಯಾವುದೇ ಕಾರ್ಮಿಕ ಒಕ್ಕೂಟಗಳಿಗೆ ಸರ್ಕಾರ ಅವಕಾಶ ನೀಡಬಾರದು ಎಂಬುವುದು ಮೊಟ್ಟ ಮೊದಲು ಬೇಡಿಕೆಯಾಗಿರುತ್ತದೆ” ಎಂದು ದಿ ನ್ಯೂಸ್ ಮಿನಿಟ್‌ನ ಶಬೀರ್ ಅಹ್ಮದ್ ಅವರೊಂದಿಗಿನ ಸಂದರ್ಶನದಲ್ಲಿ ನ್ಯಾಯಮೂರ್ತಿ ಚಂದ್ರು ಹೇಳಿದ್ದಾರೆ.

“ಸಂವಿಧಾನದ ಪ್ರಕಾರ ಒಕ್ಕೂಟ ಅಥವಾ ಸಂಘವನ್ನು ರಚಿಸುವುದು ಕಾರ್ಮಿಕರ ಮೂಲಭೂತ ಹಕ್ಕು. ಇದು 1965ರಲ್ಲಿ ಸುಪ್ರೀಂ ಕೋರ್ಟ್‌ನಿಂದ ಅಂಗೀಕರಿಸಲ್ಪಟ್ಟ ಟ್ರೇಡ್ ಯೂನಿಯನ್‌ಗಳನ್ನು ಒಳಗೊಂಡಿದೆ. ಯಾವುದೇ ಕಡ್ಡಾಯ ಮಾನ್ಯತೆ ಇಲ್ಲದಿದ್ದರೂ, ಒಕ್ಕೂಟದ ನೋಂದಣಿಯನ್ನು ನಿರಾಕರಿಸಲು ಕಾರ್ಮಿಕ ನ್ಯಾಯಾಲಯಕ್ಕೆ ಯಾವುದೇ ವಿವೇಚನಾಧಿಕಾರವಿಲ್ಲ. ಟ್ರೇಡ್ ಯೂನಿಯನ್ಸ್ ಆಕ್ಟ್, 1926 ರ ಅಡಿಯಲ್ಲಿ, ಕಾರ್ಮಿಕರು ಒಟ್ಟು ಉದ್ಯೋಗಿಗಳ 10% ಅನ್ನು ಪ್ರತಿನಿಧಿಸಬೇಕು. ಹಾಗಿದ್ದಲ್ಲಿ, ಕಾರ್ಮಿಕ ಆಯುಕ್ತರು ಒಕ್ಕೂಟದ ಮಾನ್ಯತೆಗೆ ಶಿಫಾರಸು ಮಾಡಬಹುದು. ತಮಿಳುನಾಡಿನಲ್ಲಿ ಇದೇ ಮೊದಲ ಬಾರಿಗೆ ಸಮಸ್ಯೆ ಪರಿಹರಿಸಲಾಗದೆ, ಹೂಡಿಕೆಯ ರಹಸ್ಯ ಒಳ ಒಪ್ಪಂದವನ್ನು ಬಹಿರಂಗಪಡಿಸಲಾಗದೆ ಪೊಲೀಸರನ್ನು ಬಳಸಿಕೊಂಡು ಸರ್ಕಾರ ಕಾರ್ಮಿಕರನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ” ಎಂದು ಚಂದ್ರು ತಿಳಿಸಿದ್ದಾರೆ.

“ಕಾರ್ಮಿಕ ಹಕ್ಕುಗಳು ಮತ್ತು ಸಮಸ್ಯೆಗಳ ವಿಷಯಕ್ಕೆ ಬಂದರೆ, ರಾಷ್ಟ್ರೀಯ ಮಟ್ಟದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ರಾಜ್ಯ ಮಟ್ಟದಲ್ಲಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ನಡುವೆ ಹೆಚ್ಚಿನ ವ್ಯತ್ಯಾಸವಿಲ್ಲ ಎಂದಿರುವ ಚಂದ್ರು, “ಕಾರ್ಮಿಕ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರಗಳು ಸರಿಯಾದ ನೀತಿಗಳನ್ನು ಹೊಂದಿಲ್ಲ” ಎಂದು ಹೇಳಿದ್ದಾರೆ.

“ಮಾಜಿ ಮುಖ್ಯಮಂತ್ರಿ ಸಿಎನ್ ಅಣ್ಣಾದೊರೈ ಕಾರ್ಮಿಕರ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸಿದ್ದರು. ಆದರೆ, ಬಳಿಕ ಅವರು ಸಂಪೂರ್ಣ ತಟಸ್ಥತೆಯನ್ನು ಕಾಯ್ದುಕೊಂಡರು. ಪ್ರಸ್ತುತ ಸರ್ಕಾರ ನಾವು ಸಮಸ್ಯೆ ಪರಿಹರಿಸುತ್ತಿದ್ದೇವೆ ಎನ್ನುತ್ತಿದೆ. ಆದರೆ, ಅವರು ಇನ್ನೂ ಕಾರ್ಮಿಕರ ಒಕ್ಕೂಟಕ್ಕೆ ಮಾನ್ಯತೆಯೇ ನೀಡಿಲ್ಲ. ನ್ಯಾಯ ಸಿಗುತ್ತದೆ ಎಂಬ ನಂಬಿಕೆಯಿಂದ ಕಾರ್ಮಿಕರು ನ್ಯಾಯಾಲಯದ ಮೊರೆ ಹೋಗುತ್ತಿಲ್ಲ ಎಂದು ಚಂದ್ರು ವಿವರಿಸಿದ್ದಾರೆ.

ಮದ್ರಾಸ್ ಹೈಕೋರ್ಟ್ ನೌಕರರಿಗೆ ಶಾಂತಿಯುತ ಪ್ರತಿಭಟನೆ ನಡೆಸಲು ಅನುಮತಿ ನೀಡಿತ್ತು. ಈ ನಡುವೆ ಅಕ್ಟೋಬರ್ 10ರಂದು ಸಂಜೆ ತಮಿಳುನಾಡು ಪೊಲೀಸರು ಸುಮಾರು 300 ಕಾರ್ಮಿಕರನ್ನು ಬಂಧಿಸಿದ್ದರು. ಕಾರ್ಮಿಕರ ಅಕ್ರಮ ಬಂಧನದ ವಿರುದ್ದ ಸಿಐಟಿಯು ನ್ಯಾಯಾಲಯಕ್ಕೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದೆ. ಕಾರ್ಮಿಕರನ್ನು ಕೂಡಲೇ ಬಿಡುಗಡೆ ಮಾಡುವಂತೆ ಶ್ರೀಪೆರಂಬದೂರು ನ್ಯಾಯಾಂಗ ಮ್ಯಾಜಿಸ್ಟ್ರೇಟ್‌ಗೆ ವಿಶೇಷ ಅರ್ಜಿಯನ್ನೂ ಸಲ್ಲಿಸಿದೆ.

ಸೌಜನ್ಯ : ದಿ ನ್ಯೂಸ್ ಮಿನಿಟ್

ಇದನ್ನೂ ಓದಿ : ಮೂರು ತಿಂಗಳಿನಿಂದ ಬಿಡುಗಡೆಯಾಗದ ಗೌರವಧನ; ಸಂಕಷ್ಟದಲ್ಲಿ ಅಂಗನವಾಡಿ ನೌಕರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...