Homeಕರ್ನಾಟಕರಾಜಕೀಯ ವಿರೋಧಿಗಳಿಗೆ ದೀಪಾವಳಿ ಸಂದೇಶ ನೀಡಿದ ಸಿದ್ದರಾಮಯ್ಯ..!

ರಾಜಕೀಯ ವಿರೋಧಿಗಳಿಗೆ ದೀಪಾವಳಿ ಸಂದೇಶ ನೀಡಿದ ಸಿದ್ದರಾಮಯ್ಯ..!

- Advertisement -
- Advertisement -

ನನ್ನ ಮನೆಯಲ್ಲಿ ನಡೆದ ಖಾಸಗಿ ಮಾತುಕತೆಯ ವಿಡಿಯೋದ ತಪ್ಪು ವ್ಯಾಖ್ಯಾನ ಮಾಡುತ್ತಾ, ಪ್ರಚಾರ ಮಾಡುತ್ತಾ ನಾಯಕರು, ವಿಕೃತ ಆನಂದ ಪಡುತ್ತಿದ್ದಾರೆ. ಇದು ನನಗೆ ಹೊಸತಲ್ಲ. ಸುಳ್ಳಿನ ಕತ್ತಲನ್ನು ಸತ್ಯದ ಬೆಳಕು ಅಳಿಸಿ ಹಾಕುತ್ತೆ ಎಂದು ಫೇಸ್‌ಬುಕ್‌ನಲ್ಲಿ ಬರೆದುಕೊಳ್ಳುವ ಮೂಲಕ ಮಾಜಿ ಸಿಎಂ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ರಾಜಕೀಯ ವಿರೋಧಿಗಳಿಗೆ ದೀಪಾವಳಿ ಸಂದೇಶ ನೀಡಿದ್ದಾರೆ.

’ನಾನು ಜಾತಿವಾದಿ ಅಲ್ಲ, ಸಾಮಾಜಿಕ ನ್ಯಾಯಕ್ಕೆ ಬದ್ಧನಾಗಿರುವ ನಾನು, ಅಂಬೇಡ್ಕರ್, ಗಾಂಧೀಜಿ, ಬಸವಣ್ಣ ಮತ್ತು ಕುವೆಂಪು ಅವರ ಚಿಂತನೆಯಿಂದ ಪ್ರೇರಿತನಾದ ಜಾತ್ಯತೀತ. ಅವರ ಚಿಂತನೆಗಳ ಫಲವೇ ನನ್ನ ಸರ್ಕಾರದ ಯೋಜನೆಗಳಾಗಿದ್ದವು. ಇದು ನನ್ನ ಜಾತಿ ವಿನಾಶದ ಹಾದಿ. ನಿಮ್ಮದು ಯಾವ ಹಾದಿ’..? ಎಂದು ಪ್ರಶ್ನಿಸಿದ್ದಾರೆ. ’

ಇದನ್ನೂ ಓದಿ: ಸಿದ್ದರಾಮಯ್ಯ ನನ್ನ ವೆಲ್ ವಿಶರ್, ಅವರಿಗೆ ನನ್ನ ಮೇಲೆ ಪ್ರೀತಿ ಜಾಸ್ತಿ: ಡಿ.ಕೆ.ಶಿವಕುಮಾರ್

’ನಾನು ಜಾತಿ ರಾಜಕೀಯ ಮಾಡುತ್ತಿದ್ದೇನೆ ಎಂದು ಆರೋಪಿಸುವವರು ಅವರ ಪಕ್ಷಗಳ ನೀತಿ ಮತ್ತು ಕಾರ್ಯಕ್ರಮಗಳಲ್ಲಿ ಗಾಂಧಿ ಅಂಬೇಡ್ಕರ್,ಬಸವಣ್ಣ ಮತ್ತು ಕುವೆಂಪು ವಿಚಾರಧಾರೆಗಳೆಷ್ಟು ಇವೆ ಎನ್ನುವುದನ್ನು ಬಹಿರಂಗಪಡಿಸಲಿ. ಇದರ ಬಗ್ಗೆ ಬಹಿರಂಗ ಚರ್ಚೆಗೆ ನಾನು ಸಿದ್ಧ. ಇದು ನನ್ನ ಸವಾಲು ಕೂಡಾ ಹೌದು. ರಾಜ್ಯದ ಮತದಾರರು ಜಾತಿ ಬಿಟ್ಟು ಯೋಚನೆ ಮಾಡುತ್ತಿದ್ದಾರೆ. ಲಿಂಗಾಯತರು ಯಡಿಯೂರಪ್ಪನವರಿಂದ, ಒಕ್ಕಲಿಗರು ಜೆಡಿಎಸ್ ಪಕ್ಷದಿಂದ ದೂರವಾಗುತ್ತಿದ್ದಾರೆ ಎಂಬ ಗೆಳೆಯರ ಮಾತಿಗೆ ನಾನು ಸಹಮತ ಸೂಚಿಸಿದ್ದು ನಿಜ. ಜನ ಜಾತ್ಯತೀತರಾಗುತ್ತಿದ್ದಾರೆ ಎಂದು ಹೇಳಿದ್ದರಲ್ಲಿ ಏನು ತಪ್ಪಿದೆ’..?”

’ರಾಜಕೀಯ ಪಕ್ಷಗಳು ನೈತಿಕವಾಗಿ ದಿವಾಳಿಯಾದಾಗ ಇಂತಹ ಅಪಸವ್ಯಗಳು ಹುಟ್ಟಿಕೊಳ್ಳುತ್ತವೆ.
ವೈಯುಕ್ತಿಕ ದಾಳಿಗಳು ನನ್ನ ಸಾಮಾಜಿಕ ಬದ್ದತೆಯನ್ನು ಇನ್ನಷ್ಟು ಗಟ್ಟಿಗೊಳಿಸುತ್ತದೆ ಮತ್ತು ಜನರಿಗಾಗಿ ಹೋರಾಡುವ ಹುಮ್ಮಸ್ಸನ್ನು ಇಮ್ಮಡಿಗೊಳಿಸುತ್ತದೆ. ಇದಕ್ಕಾಗಿ ನನ್ನ ರಾಜಕೀಯ ವಿರೋಧಿಗಳಿಗೆ ಧನ್ಯವಾದಗಳು’ ಎಂದು ರಾಜಕೀಯ ವಿರೋಧಿಗಳಿಗೆ ದೀಪಾವಳಿಯ ಸಂದೇಶ ನೀಡಿದ್ದಾರೆ.

ಇನ್ನು ಸಿದ್ದರಾಮಯ್ಯ ಅವರು, ಡಿಕೆಶಿ ಜೆಡಿಎಸ್ ಬಾವುಟ ಹಿಡಿದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂಬ ವಿಡಿಯೋ ಹರಿದಾಡಿತ್ತು. ಅಲ್ಲದೇ ಅದಕ್ಕೆ ಸಂಬಂಧಪಟ್ಟಂತೆ ವ್ಯಾಪಕ ಚರ್ಚೆ ಮತ್ತು ವಿರೋಧ ವ್ಯಕ್ತವಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...