HomeUncategorizedಜಾರ್ಖಂಡ್ ಮತ್ತು ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ ಸಾಧ್ಯತೆ

ಜಾರ್ಖಂಡ್ ಮತ್ತು ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ ಸಾಧ್ಯತೆ

- Advertisement -
- Advertisement -

ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಚುನಾವಣಾ ಆಯೋಗ (ಇಸಿ) ಮಂಗಳವಾರ ಪ್ರಕಟಿಸಲಿದೆ. ಆಯೋಗವು ಮಧ್ಯಾಹ್ನ 3.30ಕ್ಕೆ ದೆಹಲಿಯಲ್ಲಿ ಪತ್ರಿಕಾಗೋಷ್ಠಿ ಕರೆದು ವಿವರಗಳನ್ನು ಪ್ರಕಟಿಸಿದೆ. ಮಹಾರಾಷ್ಟ್ರ ವಿಧಾನಸಭೆಯ ಅವಧಿ ನವೆಂಬರ್ 26 ರಂದು ಕೊನೆಗೊಂಡರೆ, ಜಾರ್ಖಂಡ್ ಮುಂದಿನ ವರ್ಷ ಜನವರಿ 5 ರಂದು ಕೊನೆಗೊಳ್ಳುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಜಾರ್ಖಂಡ್‌ನಲ್ಲಿ ಹೆಮಂತ್ ಸೊರೆನ್ ನೇತೃತ್ವದ ಜೆಎಂಎಂ ಪಕ್ಷ ಆಡಳಿತದಲ್ಲಿದ್ದು, ಅಲ್ಲಿ ಬಿಜೆಪಿ ಅವರಿಗೆ ಸವಾಲು ಹಾಕುತ್ತಿದೆ. ಇತ್ತಿಚೆಗಷ್ಟೆ ಪ್ರಕಣವೊಂದಲ್ಲಿ ಕೇಂದ್ರ ತನಿಖಾ ಸಂಸ್ಥೆ ಸೊರೆನ್ ಅವರನ್ನು ಬಂಧಿಸಿತ್ತು. ಈ ವೇಳೆ ಅವರು ರಾಜೀನಾಮೆ ನೀಡಿದ್ದ ಅವರು ಜಾಮೀನಿನ ಮೇಲೆ ಬಿಡುಗಡೆಯಾದ ನಂತರ ಮತ್ತೆ ಅಧಿಕಾರಕ್ಕೆ ಏರಿದ್ದರು.

ಮಹಾರಾಷ್ಟ್ರದಲ್ಲಿ ಶಿವಸೇನೆ, ಬಿಜೆಪಿ ಮತ್ತು ಎನ್‌ಸಿಪಿ ಅಧಿಕಾರದಲ್ಲಿದೆ. ಅದಾಗ್ಯೂ ಬಿಜೆಪಿ ಆಪಾದಿತ ಆಪರೇಷನ್ ಕಮಲ ರಾಜ್ಯದಲ್ಲಿ ಅಧಿಕಾರಕ್ಕೆ ಏರಿತ್ತು. ಅಲ್ಲದೆ, ಎನ್‌ಸಿಪಿ ಮತ್ತು ಶಿವಸೇನೆ ಪಕ್ಷಗಳು ಒಡೆದುಹೋಗುವಂತೆ ಕೂಡಾ ಬಿಜೆಪಿ ಮಾಡಿತ್ತು ಎಂದು ಆರೋಪಿಸಲಾಗಿದೆ. ಕಾಂಗ್ರೆಸ್, ಎನ್‌ಸಿಪಿ ಮತ್ತು ಶಿವಸೇನೆ ಮೈತ್ರಿಯಿಂದ ಅಧಿಕಾರನ್ನು ಕಿತ್ತ ಬಿಜೆಪಿ ಶಿವಸೇನೆಯನ್ನು ಶಿವಸೇನೆ ಮತ್ತು ಶಿವಸೇನೆ(ಉದ್ಧವ್ ಠಾಕ್ರೆ) ಮತ್ತು ಎನ್‌ಸಿಪಿಯನ್ನು ಎನ್‌ಸಿಪಿ(ಶರದ್ ಪವಾರ್) ಎಂದು ವಿಭಜನೆ ಮಾಡುವಂತೆ ರಾಜಕೀಯ ತಂತ್ರ ಮಾಡಿತ್ತು.

ಇದನ್ನೂ ಓದಿ: ಬಂಗಾಳದ ಪ್ರತಿಭಟನಾನಿರತ ಕಿರಿಯ ವೈದ್ಯರ ಬೆಂಬಲಕ್ಕೆ ನಿಂತ ಐಎಂಎ; ರಾಷ್ಟ್ರವ್ಯಾಪಿ ಉಪವಾಸ ಸತ್ಯಾಗ್ರಹಕ್ಕೆ ನಿರ್ಧಾರ

288 ವಿಧಾನಸಭಾ ಕ್ಷೇತ್ರಗಳಿರುವ ಮಹಾರಾಷ್ಟ್ರದಲ್ಲಿ ಪ್ರಸ್ತುತ ಆಡಳಿತರೂಢ ಮಹಾ ಯುತಿ ಮೈತ್ರಿಯಲ್ಲಿ 202 ಶಾಸಕರಿದ್ದಾರೆ. ಇದರಲ್ಲಿ ಬಿಜೆಪಿ 102, ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ 40, ಮುಖ್ಯಮಂತ್ರಿ ಶಿಂಧೆ ನೇತೃತ್ವದ ಶಿವಸೇನೆ 38 ಹಾಗೂ ಇತರ ಪಕ್ಷಗಳ ಮತ್ತು ಪಕ್ಷೇತರರ 22 ಶಾಸಕರ ಬೆಂಬಲವಿದೆ.

ವಿಪಕ್ಷ ಮಹಾ ವಿಕಾಸ್ ಅಘಾಡಿಯಲ್ಲಿ 69 ಸ್ಥಾನಗಳಿದ್ದು, ಇದರಲ್ಲಿ ಕಾಂಗ್ರೆಸ್ 37, ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ 16, ಶರಾದ್ ಪವಾರ್ ನೇತೃತ್ವದ ಎನ್‌ಸಿಪಿ 12, ಸಮಾಜವಾದಿ ಪಕ್ಷದ 2, ಸಿಪಿಐ(ಎಂ) 1 ಪಿಡಬ್ಲ್ಯೂಪಿಐ ಪಕ್ಷದ 1 ಶಾಸಕರಿದ್ದಾರೆ. ಇಷ್ಟೆ ಅಲ್ಲದೆ, ಎಂಐಎಂ ಪಕ್ಷದ ಇಬ್ಬರು ಶಾಸಕರು ಕೂಡಾ ವಿಪಕ್ಷದಲ್ಲಿದ್ದಾರೆ. ಅದಾಗ್ಯೂ, ರಾಜ್ಯದ 15 ಸ್ಥಾನಗಳು ವಿವಿಧ ಕಾರಣಗಳಿಗೆ ತೆರವುಗೊಂಡಿದೆ.

81 ವಿಧಾನಸಭಾ ಕ್ಷೇತ್ರಗಳಿರುವ ಜಾರ್ಖಂಡ್‌ನಲ್ಲಿ ಇಂಡಿಯಾ ಮೈತ್ರಿಕೂಟದ ಸರ್ಕಾರವಿದ್ದು, ಹೇಮಂತ್ ಸೋರೆನ್ ಅವರ ಜೆಎಂಎಂ ನೇತೃತ್ವದವಿದೆ. ರಾಜ್ಯದಲ್ಲಿ ಜೆಎಂಎಂ 25, ಕಾಂಗ್ರೆಸ್17, ಸಿಪಿಐಎಂಲ್ 1 ಮತ್ತು ಆರ್‌ಜೆಡಿಗೆ ಒಬ್ಬ ಶಾಸಕರಿದ್ದಾರೆ. ವಿಪಕ್ಷದಲ್ಲಿ ಬಿಜೆಪಿ 25, ಎಜೆಎಸ್‌ಯು 3, ಜೆಡಿಯು 1 ಮತ್ತು ಒಬ್ಬ ಪಕ್ಷೇತರ ಶಾಸಕರಿದ್ದಾರೆ. ಇದಲ್ಲದೆ ಜಾರ್ಖಂಡ್ ವಿಧಾನಸಭೆಯಲ್ಲಿ 7 ಸ್ಥಾನಗಳು ತೆರವುಗೊಂಡಿದೆ.

ಇದನ್ನೂ ಓದಿ: ತಮಿಳುನಾಡು| ಕಾರ್ಮಿಕ ಹಕ್ಕು ವಿಚಾರದಲ್ಲಿ ಕೇಂದ್ರದ ಬಿಜೆಪಿಗೂ, ರಾಜ್ಯದ ಡಿಎಂಕೆಗೂ ಯಾವುದೇ ವ್ಯತ್ಯಾಸವಿಲ್ಲ : ನ್ಯಾ. ಚಂದ್ರು

ಎರಡು ರಾಜ್ಯಗಳ ವಿಧಾನಸಭಾ ಚುನಾವಣೆಗಳಲ್ಲದೆ, ವಿವಿಧ ಕಾರಣಗಳಿಂದ ತೆರವಾಗಿರುವ ಮೂರು ಲೋಕಸಭೆ ಮತ್ತು ಕನಿಷ್ಠ 47 ವಿಧಾನಸಭಾ ಸ್ಥಾನಗಳಿಗೆ ಉಪಚುನಾವಣೆಯನ್ನೂ ಆಯೋಗ ಇಂದು ಘೋಷಿಸುವ ಸಂಭವವಿದೆ.

ಕೇರಳದ ವಯನಾಡ್, ಮಹಾರಾಷ್ಟ್ರದ ನಾಂದೇಡ್ ಮತ್ತು ಪಶ್ಚಿಮ ಬಂಗಾಳದ ಬಸಿರ್ಹತ್ ಮೂರು ಲೋಕಸಭಾ ಸ್ಥಾನಗಳು ಖಾಲಿ ಇವೆ. ವಯನಾಡ್ ಕ್ಷೇತ್ರವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ರಾಯ್ ಬರೇಲಿ ಕ್ಷೇತ್ರವನ್ನು ಉಳಿಸಿಕೊಂಡಿದ್ದರಿಂದ ತೆರವಾಗಿತ್ತು. ಅವರು ಲೋಕಸಭೆ ಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರು.

ನಾಂದೇಡ್ ಪ್ರತಿನಿಧಿಸಿದ್ದ ಕಾಂಗ್ರೆಸ್ ಸಂಸದ ವಸಂತ್ ಚವಾಣ್ ಮತ್ತು ಬಸಿರ್ ಹತ್ ಪ್ರತಿನಿಧಿಸಿದ್ದ ಟಿಎಂಸಿ ಸಂಸದ ಹಾಜಿ ಶೇಖ್ ನೂರುಲ್ ಇಸ್ಲಾಂ ಇತ್ತೀಚೆಗೆ ನಿಧನರಾಗಿದ್ದರಿಂದ ಕ್ಷೇತ್ರವು ತೆರವುಗೊಂಡಿತ್ತು.

ವಿಡಿಯೊ ನೋಡಿ: ನೋಡಬನ್ನಿ ಬಸವನಗುಡಿ ಕಡ್ಲೇಕಾಯಿ ಪರಿಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...