Homeಫ್ಯಾಕ್ಟ್‌ಚೆಕ್FACT CHECK | ತಾಲಿಬಾನ್ ಕಾರ್ಯದರ್ಶಿ ಆರೆಸ್ಸೆಸ್‌, ಬಿಜೆಪಿಯನ್ನು ಹೊಗಳಿದ್ದಾರೆ ಎಂಬುವುದು ಸುಳ್ಳು

FACT CHECK | ತಾಲಿಬಾನ್ ಕಾರ್ಯದರ್ಶಿ ಆರೆಸ್ಸೆಸ್‌, ಬಿಜೆಪಿಯನ್ನು ಹೊಗಳಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

“ಭಾರತದಲ್ಲಿ ಆರೆಸ್ಸೆಸ್‌ ಮತ್ತು ಬಿಜೆಪಿ ಇರುವವರೆಗೂ ಯಾವುದೇ ದೇಶ ಭಾರತದ ಮೇಲೆ ದಾಳಿ ಮಾಡಲು ಸಾಧ್ಯವಿಲ್ಲ” ಎಂದು ತಾಲಿಬಾನ್ ನಾಯಕ ಹೇಳಿದ್ದಾನೆಂದು ಪ್ರತಿಪಾದಿಸಿ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ವಿಡಿಯೋದಲ್ಲಿರುವ ವ್ಯಕ್ತಿಯು ಗಡ್ಡದಾರಿಯಾಗಿದ್ದು, ಟೋಪಿ ಧರಿಸಿದ್ದಾರೆ. ಅವರ ವೇಷ ಭೂಷಣ ನೋಡಿದರೆ ಅವರು ಮುಸ್ಲಿಂ ವ್ಯಕ್ತಿ ಎಂದು ಹೇಳಬಹುದಾಗಿದೆ.

ANU ANITHA(@Ani_Sanatani) ಎಂಬವರು ಅಕ್ಟೋಬರ್ 13, 2024ರಂದು ಎಕ್ಸ್‌ನಲ್ಲಿ ವೈರಲ್ ವಿಡಿಯೋ ಹಂಚಿಕೊಂಡಿದ್ದಾರೆ. ಈ ಹಿಂದೆ Karnataka BJP Supporters ಎಂಬ ಫೇಸ್‌ಬುಕ್ ಪೇಜ್ ಸೇರಿದಂತೆ ಹಲವೆಡೆ ಈ ವಿಡಿಯೋ ಹಂಚಿಕೊಳ್ಳಲಾಗಿತ್ತು.

“ಭಾರತದಲ್ಲಿ ಬಿಜೆಪಿ ಇರುವವರೆಗೂ ಯಾವುದೇ ದೇಶ ಭಾರತದ ಮೇಲೆ ದಾಳಿ ಮಾಡಲು ಸಾಧ್ಯವಿಲ್ಲ. ಆರೆಸ್ಸೆಸ್‌ ಮತ್ತು ಬಿಜೆಪಿ ಅತ್ಯಂತ ಶಕ್ತಿಶಾಲಿ. ಮೊದಲು ಬಿಜೆಪಿಯನ್ನು ತೊಡೆದುಹಾಕಿ ನಂತರ ಮಾತ್ರ ಭಾರತದ ಮೇಲೆ ಜಯ ಸಿಗುತ್ತದೆ…ಭಯೋತ್ಪಾದಕ ಸಂಘಟನೆ ತಾಲಿಬಾನ್‌ನ ಮುಖ್ಯ ಕಾರ್ಯದರ್ಶಿ ಅಲ್ ಬೇಡರ್ ಇಲ್ಯಾಸಿ ಹೇಳಿಕೆ” ಎಂಬ ಪ್ರತಿಪಾದನೆಯೊಂದಿಗೆ ಅಕ್ಟೋಬರ್ 9, 2023ರಂದು Karnataka BJP Supporters ಫೇಸ್‌ಬುಕ್ ಪೇಜ್‌ನಲ್ಲಿ ವಿಡಿಯೋ ಪೋಸ್ಟ್ ಮಾಡಲಾಗಿತ್ತು.

ಇದೇ ಪ್ರತಿಪಾದನೆಯೊಂದಿಗೆ ಹಲವಾರು ಜನರು ಬೇರೆ ಬೇರೆ ಭಾಷೆಯಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ. ಅವುಗಳನ್ನು ಇಲ್ಲಿಇಲ್ಲಿಇಲ್ಲಿಇಲ್ಲಿಇಲ್ಲಿ ನೋಡಬಹುದಾಗಿದೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆ ತಿಳಿಯಲು ನಾವು ವಿಡಿಯೋ ಕುರಿತು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಮಾಹಿತಿ ಹುಡುಕಿದ್ದೇವೆ. ಈ ವೇಳೆ ವಿಡಿಯೋದಲ್ಲಿರುವ ವ್ಯಕ್ತಿ ಪಾಕಿಸ್ತಾನದ ಇಸ್ಲಾಮಾಬಾದ್‌ನ ಖಾಲಿದ್ ಮೆಹಮೂದ್ ಅಬ್ಬಾಸಿ ಎಂಬ ಮುಸ್ಲಿಂ ಧಾರ್ಮಿಕ ವಿದ್ವಾಂಸ ಎಂದು ತಿಳಿದು ಬಂದಿದೆ. ಅವರು ತಾಲಿಬಾನ್‌ನ ಜೊತೆಗೆ ಸಂಬಂಧ ಹೊಂದಿಲ್ಲ.

ಅವರ ಬಗ್ಗೆ ಮತ್ತಷ್ಟು ಮಾಹಿತಿ ಹುಡುಕಾಡಿದಾಗ Khalid Mehmood Abbasi Official ಎಂಬ ಯೂಟ್ಯೂಬ್ ಚಾನೆಲ್‌ ಅವರ ಹೆಸರಿನಲ್ಲಿ ಇರುವುದು ಕಂಡು ಬಂದಿದೆ. ಈ ಚಾನೆಲ್‌ನಲ್ಲಿ ಬಿಜೆಪಿ ಬೆಂಬಲಿಗರು ವೈರಲ್ ಮಾಡಿರುವ ಕ್ಲಿಪ್‌ ಇರುವ ವಿಡಿಯೋ ಕೂಡ ನಮಗೆ ಲಭ್ಯವಾಗಿದೆ. ಈ ವಿಡಿಯೋದಲ್ಲಿ 0.53 ಸೆಕೆಂಡ್‌ನಿಂದ ಕ್ಲಿಪ್ ಕಟ್‌ ಮಾಡಿ ವೈರಲ್ ಮಾಡಲಾಗಿದೆ.

ಈ ವಿಡಿಯೋ 3 ಆಗಸ್ಟ್ 2021ರಂದು ಅಪ್‌ಲೋಡ್ ಮಾಡಲಾಗಿದ್ದು, ಅದನ್ನು 1 ಮಾರ್ಚ್ 2019 ರಂದು ರೆಕಾರ್ಡ್ ಮಾಡಲಾಗಿದೆ ಎಂದು ಉಲ್ಲೇಖಿಸಲಾಗಿದೆ. ಜೊತೆಗೆ ವಿಡಿಯೋ ಶೀರ್ಷಿಕೆಯು ಮಾತನಾಡುತ್ತಿರುವವರು ಖಾಲಿದ್ ಮೆಹಮೂದ್ ಅಬ್ಬಾಸಿ ಎಂದು ಉಲ್ಲೇಖಿಸಿದೆ.

ಅವರ ಅಧಿಕೃತ ಫೇಸ್‌ಬುಕ್ ಪೇಜ್‌ನಲ್ಲಿ, ಅವರು ಇಸ್ಲಾಮಿಕ್ ವಿದ್ವಾಂಸ ಎಂದು ಹೇಳಿಕೊಂಡಿದ್ದು, ತಂಝೀಮ್-ಎ-ಇಸ್ಲಾಮಿ ಎಂಬ ಸಂಘಟನೆಯೊಂದಿಗೆ 30 ವರ್ಷಗಳ ಕಾಲ ಕೆಲಸ ಮಾಡಿದ ಅವರು 2018ರಲ್ಲಿ ತಂಝೀಮ್-ಎ-ಇಸ್ಲಾಮಿ ತೊರೆದು ಶುಬ್ಬನ್-ಉಲ್-ಮುಸ್ಲಿಮೀನ್ ಅನ್ನು ಸ್ಥಾಪಿಸಿದ್ದಾರೆ ಎಂದು ಫೇಸ್‌ಬುಕ್‌ನಲ್ಲಿ ಉಲ್ಲೇಖವಿದೆ.

ದಿ ಕ್ವಿಂಟ್ ಮಾಧ್ಯಮದ ಜೊತೆಗೆ ಈ ಹಿಂದೆ ಮಾತನಾಡಿದ್ದ ಅಬ್ಬಾಸಿ ಅವರು, ತಾಲಿಬಾನ್‌ ಜೊತೆಗೆ ತನಗೆ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದರು. ವೈರಲ್ ಆಗಿರುವ ವಿಡಿಯೊ ಹಳೆಯದು ಎಂದಿದ್ದರು. ಅಲ್ಲದೆ, ಖಾಲಿದ್ ಅಬ್ಬಾಸಿ ಅವರು “ಶುಬ್ಬನ್ ಉಲ್ ಮುಸ್ಲಿಮೀನ್” ಹೆಸರಿನ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದಾರೆಯಾದರೂ, ಅದು ರಾಜಕೀಯ ಪಕ್ಷವಲ್ಲ ಎಂದು ಅವರು ಸ್ಪಷ್ಟಪಡಿಸಿದ್ದರು.

“ನಾನು ತಾಲಿಬಾನ್‌ನ ಮುಖ್ಯ ಕಾರ್ಯದರ್ಶಿ ಎಂಬುವುದು ಸಂಪೂರ್ಣ ಸುಳ್ಳು ಹೇಳಿಕೆಯಾಗಿದೆ. ತಾಲಿಬಾನ್ ಈಗ ಅಫ್ಘಾನಿಸ್ತಾನದಲ್ಲಿ ಅಧಿಕಾರಕ್ಕೆ ಬಂದಿದೆ, ಆದರೆ ವೈರಲ್ ಕ್ಲಿಪ್‌ನ ಭಾಗವು ಸುಮಾರು 1.5 ವರ್ಷಗಳ ಹಿಂದಿನ ವಿಡಿಯೋ ಆಗಿದೆ. ತಾಲಿಬಾನ್ ಅಥವಾ ಯಾವುದೇ ರಾಜಕೀಯ ಪಕ್ಷದೊಂದಿಗೆ ನನಗೆ ಯಾವುದೇ ಸಂಬಂಧ ಇಲ್ಲ” ಎಂದು ಖಾಲಿದ್ ಮೆಹಮೂದ್ ಅಬ್ಬಾಸಿ ಹೇಳಿದ್ದಾಗಿ ದಿ ಕ್ವಿಂಟ್ ವರದಿ ಹೇಳಿತ್ತು.

ಒಟ್ಟಿನಲ್ಲಿ, ವೈರಲ್ ವಿಡಿಯೋ 1 ಮಾರ್ಚ್ 2019 ರಂದು ರೆಕಾರ್ಡ್ ಮಾಡಲಾದ ಕ್ಲಿಪ್‌ನ ಸಣ್ಣ ಭಾಗವಾಗಿದೆ. ಇದರಲ್ಲಿ ಕಾಣಿಸಿಕೊಂಡಿರುವ ವ್ಯಕ್ತಿ ಖಾಲಿದ್ ಮೆಹಮೂದ್ ಅಬ್ಬಾಸಿ. ಖಾಲಿದ್ ಅವರು ಪಾಕಿಸ್ತಾನದ ಇಸ್ಲಾಮಾಬಾದ್ ಮೂಲದ ಮುಸ್ಲಿಂ ಧಾರ್ಮಿಕ ಬೋಧಕರಾಗಿದ್ದಾರೆ. ಅವರು ಶುಬ್ಬನ್-ಉಲ್-ಮುಸ್ಲಿಮೀನ್ ಎಂಬ ಸಂಘಟನೆ 2018ರಲ್ಲಿ ಸ್ಥಾಪಿಸಿ ಅದರಲ್ಲಿ ಕೆಲಸ ಮಾಡುತ್ತಿದ್ದಾರೆ. ತನಗೂ ತಾಲಿಬಾನ್ ಅಥವಾ ಯಾವುದೇ ರಾಜಕೀಯ ಪಕ್ಷದೊಂದಿಗೆ ಸಂಬಂಧ ಇಲ್ಲ ಎಂದು ಸ್ವತಃ ಅವರೇ ಈ ಹಿಂದೆಯೇ ಹೇಳಿದ್ದರು. ಆದ್ದರಿಂದ ವೈರಲ್ ವಿಡಿಯೋದಲ್ಲಿ ಖಾಲಿದ್ ಮೆಹಮೂದ್ ಅಬ್ಬಾಸಿ ಅವರನ್ನು ತಾಲಿಬಾನ್‌ನ ಮುಖ್ಯ ಕಾರ್ಯದರ್ಶಿ ಎಂಬಂತೆ ತಪ್ಪಾಗಿ ಬಿಂಬಿಸಿ ಸುಳ್ಳು ಸುದ್ದಿ ಹಬ್ಬಿಸಲಾಗಿದೆ.

ಇದನ್ನೂ ಓದಿ : FACT CHECK : ವೈರಲ್ ಫೋಟೋ ಎಪಿಜೆ ಅಬ್ದುಲ್ ಕಲಾಂ ಅವರ ಬಾಲ್ಯದ್ದಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...