Homeಮುಖಪುಟಕೇರಳ | ಸಿಪಿಐ(ಎಂ) ನಾಯಕಿಯಿಂದ ಟೀಕೆಗೊಳಗಾದ ಮರುದಿನ ಶವವಾಗಿ ಪತ್ತೆಯಾದ ಹೆಚ್ಚುವರಿ ಜಿಲ್ಲಾಧಿಕಾರಿ

ಕೇರಳ | ಸಿಪಿಐ(ಎಂ) ನಾಯಕಿಯಿಂದ ಟೀಕೆಗೊಳಗಾದ ಮರುದಿನ ಶವವಾಗಿ ಪತ್ತೆಯಾದ ಹೆಚ್ಚುವರಿ ಜಿಲ್ಲಾಧಿಕಾರಿ

- Advertisement -
- Advertisement -

ಸಿಪಿಐ(ಎಂ) ನಾಯಕಿ ಮತ್ತು ಕಣ್ಣೂರು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಪಿ ಪಿ ದಿವ್ಯಾ ಅವರಿಂದ ಸಾರ್ವಜನಿಕ ಸಮಾರಂಭದಲ್ಲಿ ಟೀಕೆಗೊಳಗಾದ ಮರುದಿನವೇ, ಹೆಚ್ಚುವರಿ ಜಿಲ್ಲಾಧಿಕಾರಿ (ಎಡಿಎಂ) ನವೀನ್ ಬಾಬು ಮಂಗಳವಾರ ಅವರ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಬಾಬು ಅವರ ಅಧಿಕೃತ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಬು ಅವರು ನಾಳೆ ಪತ್ತನಂತಿಟ್ಟದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಲಿದ್ದರು.

ಸೋಮವಾರ ಕಣ್ಣೂರಿನಲ್ಲಿ ಬಾಬು ಅವರ ಬೀಳ್ಕೊಡುಗೆ ಕಾರ್ಯಕ್ರಮಕ್ಕೆ ಆಯೋಜಿಸಲಾಗಿತ್ತು. ಜಿಲ್ಲಾಧಿಕಾರಿ ಅರ್ಜುನ್ ಪಾಂಡನ್ ಮುಖ್ಯ ಅತಿಥಿಯಾಗಿದ್ದ ಭಾಗವಹಿಸಿದ್ದರು. ಈ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ದಿವ್ಯಾ ಅವರನ್ನು ಆಹ್ವಾನಿಸಿರಲಿಲ್ಲ.

ಆದರೆ, ದಿವ್ಯಾ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಅಲ್ಲಿ ಮಾತನಾಡಿದ್ದ ಅವರು, “ಬೇರೆ ಜಿಲ್ಲೆಗೆ ತೆರಳುತ್ತಿರುವ ಎಡಿಎಂಗೆ ನಾನು ಎಲ್ಲಾ ರೀತಿಯ ಶುಭಾಶಯಗಳನ್ನು ತಿಳಿಸುತ್ತಿದ್ದೇನೆ. ಮಾಜಿ ಎಡಿಎಂ ಅಧಿಕಾರಾವಧಿಯಲ್ಲಿ ಹಲವು ಬಾರಿ ನಾನು ಅವರ ಜೊತೆ ಮಾತನಾಡಿದ್ದೆ. ಆದರೆ, ಈ ಎಡಿಎಂ ಜೊತೆ ನನಗೆ ಅಂತಹ ಅವಕಾಶ ಸಿಕ್ಕಿಲ್ಲ. ಚೆಂಗಲೈನಲ್ಲಿ ಪೆಟ್ರೋಲ್ ಬಂಕ್ ಒಂದಕ್ಕೆ ನಿರಾಕ್ಷೇಪಣಾ ಪ್ರಮಾಣಪತ್ರ (ಎನ್ಒಸಿ) ಕೊಡಿಸುವ ಬಗ್ಗೆ ಮಾತನಾಡಲು ಇವರಿಗೆ ನಾನು ಒಮ್ಮೆ ಕರೆ ಮಾಡಿದ್ದೆ. ಎಡಿಎಂ ಸೈಟ್‌ಗೆ ಭೇಟಿ ನೀಡಿ ಪರಿಶೀಲಿಸಲು ನಾನು ಬಯಸಿದ್ದೆ. ಬಳಿಕ ಎಡಿಎಂ ಪೆಟ್ರೋಲ್ ಬಂಕ್‌ಗೆ ಭೇಟಿ ನೀಡಿರುವುದಾಗಿ ತಿಳಿಸಿದ್ದರು. ಆದರೆ, ಪೆಟ್ರೋಲ್ ಬಂಕ್ ಮಾಲೀಕ ಎಡಿಎಂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ನನ್ನ ಬಳಿ ಹಲವು ಬಾರಿ ಬಂದಿದ್ದರು. ಈ ಬಗ್ಗೆ ಎಡಿಎಂ ಅವರನ್ನು ಕೇಳಿದಾಗ, ಅಂಕುಡೊಂಕು ರಸ್ತೆಯಿಂದ ಕೆಲವು ಸಮಸ್ಯೆಗಳಿದ್ದು, ಎನ್‌ಒಸಿ ನೀಡಲು ಸಮಸ್ಯೆ ಇದೆ ಎಂದಿದ್ದರು. ನೀವು ಆಗಾಗ ಎಡಿಎಂ ಅವರನ್ನು ಭೇಟಿ ಮಾಡುವ ಅಗತ್ಯ ಇಲ್ಲ ಎಂದು ಬಂಕ್ ಮಾಲೀಕರಿಗೆ ಹೇಳಿದ್ದ ನಾನು, ಎನ್‌ಒಸಿ ಪಡೆಯಲು ಅವರಿಗೆ ಸಹಾಯ ಮಾಡಲು ಮುಂದಾಗಿದ್ದೆ” ಎಂದಿದ್ದರು.

“ಈಗ ಎಡಿಎಂ ಇಲ್ಲಿಂದ ಬಿಟ್ಟು ಹೋಗುವಾಗ ಎನ್‌ಒಸಿ ನೀಡಲಾಗಿದೆ ಎನ್ನುತ್ತಿದ್ದಾರೆ. ಎನ್‌ಒಸಿ ಕೊಟ್ಟಿದ್ದು ಹೇಗೆ ಅಂತ ನನಗೆ ಗೊತ್ತು. ಆ ಎನ್‌ಒಸಿ ನೀಡಿದ್ದಕ್ಕೆ ಕೃತಜ್ಞತೆ ಸಲ್ಲಿಸಲು ಈ ಕಾರ್ಯಕ್ರಮಕ್ಕೆ ಬಂದಿದ್ದೇನೆ. ಜೀವನದಲ್ಲಿ ನಾವು ಪ್ರಾಮಾಣಿಕರಾಗಿರಬೇಕು. ಹೊಸ ಪೋಸ್ಟಿಂಗ್ ಜಾಗದಲ್ಲಿ ಕಣ್ಣೂರಿನಲ್ಲಿ ಮಾಡಿದ ರೀತಿಯಲ್ಲಿ ಕೆಲಸ ಮಾಡಬೇಡಿ. ನೀವು ಜನರಿಗೆ ಉತ್ತಮ ರೀತಿಯಲ್ಲಿ ಸಹಾಯ ಮಾಡಿ. ಇದು ಸರ್ಕಾರಿ ಸೇವೆ ಮತ್ತು ಏನಾದರೂ ಆಗಲು ಒಂದು ಕ್ಷಣ ಸಾಕು” ಎಂದು ಹೇಳಿದ್ದರು.

ಎಡಿಎಂಗೆ ಉಡುಗೊರೆ ನೀಡುವಾಗ ಅಲ್ಲಿ ತಾನು ಇರಬಾರದು ಎಂದು ಹೇಳಿದ ದಿವ್ಯಾ ಅವರು, ವೇದಿಕೆಯಲ್ಲಿ ಜಿಲ್ಲಾಧಿಕಾರಿ ಮತ್ತು ಅವರ ಸಹೋದ್ಯೋಗಿಗಳು ಹಾಜರಿದ್ದಾಗಲೇ ಸ್ಥಳದಿಂದ ನಿರ್ಗಮಿಸಿದ್ದರು. ಅವರು ಕಾರ್ಯಕ್ರಮದಿಂದ ಅರ್ಧಕ್ಕೆ ಹೋಗಲು ಕಾರಣ ಏನು ಎಂಬುವುದನ್ನು ಎರಡು ದಿನಗಳಲ್ಲಿ ಬಹಿರಂಗಪಡಿಸಲಾಗುವುದು ಎಂದಿದ್ದರು.

ಈ ನಡುವೆ ಇಂದು ಬಾಬು ಅವರು ಶವವಾಗಿ ಪತ್ತೆಯಾಗಿದ್ದಾರೆ. ಈ ಘಟನೆ ಕುರಿತು ಸಿಪಿಐ(ಎಂ) ಕಣ್ಣೂರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ದಿವ್ಯಾ ಅವರು ಸಿಪಿಐ(ಎಂ) ಮಹಿಳಾ ಘಟಕ, ಅಖಿಲ ಭಾರತ ಪ್ರಜಾಸತ್ತಾತ್ಮಕ ಮಹಿಳಾ ಸಂಘದ ರಾಜ್ಯ ಜಂಟಿ ಕಾರ್ಯದರ್ಶಿಯೂ ಆಗಿದ್ದಾರೆ.

ದಿವ್ಯಾ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣ ದಾಖಲಿಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.

ಇದನ್ನೂ ಓದಿ : ಚೆನ್ನೈ ಮಳೆ: ಪ್ರವಾಹಕ್ಕೆ ಹೆದರಿ ಫ್ಲೈಓವರ್‌ಗಳ ಮೇಲೆ ಕಾರು ಪಾರ್ಕ್‌ ಮಾಡುತ್ತಿರುವ ಮಾಲೀಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...