Homeಮುಖಪುಟಕೇರಳ | ಸಿಪಿಐ(ಎಂ) ನಾಯಕಿಯಿಂದ ಟೀಕೆಗೊಳಗಾದ ಮರುದಿನ ಶವವಾಗಿ ಪತ್ತೆಯಾದ ಹೆಚ್ಚುವರಿ ಜಿಲ್ಲಾಧಿಕಾರಿ

ಕೇರಳ | ಸಿಪಿಐ(ಎಂ) ನಾಯಕಿಯಿಂದ ಟೀಕೆಗೊಳಗಾದ ಮರುದಿನ ಶವವಾಗಿ ಪತ್ತೆಯಾದ ಹೆಚ್ಚುವರಿ ಜಿಲ್ಲಾಧಿಕಾರಿ

- Advertisement -
- Advertisement -

ಸಿಪಿಐ(ಎಂ) ನಾಯಕಿ ಮತ್ತು ಕಣ್ಣೂರು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಪಿ ಪಿ ದಿವ್ಯಾ ಅವರಿಂದ ಸಾರ್ವಜನಿಕ ಸಮಾರಂಭದಲ್ಲಿ ಟೀಕೆಗೊಳಗಾದ ಮರುದಿನವೇ, ಹೆಚ್ಚುವರಿ ಜಿಲ್ಲಾಧಿಕಾರಿ (ಎಡಿಎಂ) ನವೀನ್ ಬಾಬು ಮಂಗಳವಾರ ಅವರ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಬಾಬು ಅವರ ಅಧಿಕೃತ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಬು ಅವರು ನಾಳೆ ಪತ್ತನಂತಿಟ್ಟದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಲಿದ್ದರು.

ಸೋಮವಾರ ಕಣ್ಣೂರಿನಲ್ಲಿ ಬಾಬು ಅವರ ಬೀಳ್ಕೊಡುಗೆ ಕಾರ್ಯಕ್ರಮಕ್ಕೆ ಆಯೋಜಿಸಲಾಗಿತ್ತು. ಜಿಲ್ಲಾಧಿಕಾರಿ ಅರ್ಜುನ್ ಪಾಂಡನ್ ಮುಖ್ಯ ಅತಿಥಿಯಾಗಿದ್ದ ಭಾಗವಹಿಸಿದ್ದರು. ಈ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ದಿವ್ಯಾ ಅವರನ್ನು ಆಹ್ವಾನಿಸಿರಲಿಲ್ಲ.

ಆದರೆ, ದಿವ್ಯಾ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಅಲ್ಲಿ ಮಾತನಾಡಿದ್ದ ಅವರು, “ಬೇರೆ ಜಿಲ್ಲೆಗೆ ತೆರಳುತ್ತಿರುವ ಎಡಿಎಂಗೆ ನಾನು ಎಲ್ಲಾ ರೀತಿಯ ಶುಭಾಶಯಗಳನ್ನು ತಿಳಿಸುತ್ತಿದ್ದೇನೆ. ಮಾಜಿ ಎಡಿಎಂ ಅಧಿಕಾರಾವಧಿಯಲ್ಲಿ ಹಲವು ಬಾರಿ ನಾನು ಅವರ ಜೊತೆ ಮಾತನಾಡಿದ್ದೆ. ಆದರೆ, ಈ ಎಡಿಎಂ ಜೊತೆ ನನಗೆ ಅಂತಹ ಅವಕಾಶ ಸಿಕ್ಕಿಲ್ಲ. ಚೆಂಗಲೈನಲ್ಲಿ ಪೆಟ್ರೋಲ್ ಬಂಕ್ ಒಂದಕ್ಕೆ ನಿರಾಕ್ಷೇಪಣಾ ಪ್ರಮಾಣಪತ್ರ (ಎನ್ಒಸಿ) ಕೊಡಿಸುವ ಬಗ್ಗೆ ಮಾತನಾಡಲು ಇವರಿಗೆ ನಾನು ಒಮ್ಮೆ ಕರೆ ಮಾಡಿದ್ದೆ. ಎಡಿಎಂ ಸೈಟ್‌ಗೆ ಭೇಟಿ ನೀಡಿ ಪರಿಶೀಲಿಸಲು ನಾನು ಬಯಸಿದ್ದೆ. ಬಳಿಕ ಎಡಿಎಂ ಪೆಟ್ರೋಲ್ ಬಂಕ್‌ಗೆ ಭೇಟಿ ನೀಡಿರುವುದಾಗಿ ತಿಳಿಸಿದ್ದರು. ಆದರೆ, ಪೆಟ್ರೋಲ್ ಬಂಕ್ ಮಾಲೀಕ ಎಡಿಎಂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ನನ್ನ ಬಳಿ ಹಲವು ಬಾರಿ ಬಂದಿದ್ದರು. ಈ ಬಗ್ಗೆ ಎಡಿಎಂ ಅವರನ್ನು ಕೇಳಿದಾಗ, ಅಂಕುಡೊಂಕು ರಸ್ತೆಯಿಂದ ಕೆಲವು ಸಮಸ್ಯೆಗಳಿದ್ದು, ಎನ್‌ಒಸಿ ನೀಡಲು ಸಮಸ್ಯೆ ಇದೆ ಎಂದಿದ್ದರು. ನೀವು ಆಗಾಗ ಎಡಿಎಂ ಅವರನ್ನು ಭೇಟಿ ಮಾಡುವ ಅಗತ್ಯ ಇಲ್ಲ ಎಂದು ಬಂಕ್ ಮಾಲೀಕರಿಗೆ ಹೇಳಿದ್ದ ನಾನು, ಎನ್‌ಒಸಿ ಪಡೆಯಲು ಅವರಿಗೆ ಸಹಾಯ ಮಾಡಲು ಮುಂದಾಗಿದ್ದೆ” ಎಂದಿದ್ದರು.

“ಈಗ ಎಡಿಎಂ ಇಲ್ಲಿಂದ ಬಿಟ್ಟು ಹೋಗುವಾಗ ಎನ್‌ಒಸಿ ನೀಡಲಾಗಿದೆ ಎನ್ನುತ್ತಿದ್ದಾರೆ. ಎನ್‌ಒಸಿ ಕೊಟ್ಟಿದ್ದು ಹೇಗೆ ಅಂತ ನನಗೆ ಗೊತ್ತು. ಆ ಎನ್‌ಒಸಿ ನೀಡಿದ್ದಕ್ಕೆ ಕೃತಜ್ಞತೆ ಸಲ್ಲಿಸಲು ಈ ಕಾರ್ಯಕ್ರಮಕ್ಕೆ ಬಂದಿದ್ದೇನೆ. ಜೀವನದಲ್ಲಿ ನಾವು ಪ್ರಾಮಾಣಿಕರಾಗಿರಬೇಕು. ಹೊಸ ಪೋಸ್ಟಿಂಗ್ ಜಾಗದಲ್ಲಿ ಕಣ್ಣೂರಿನಲ್ಲಿ ಮಾಡಿದ ರೀತಿಯಲ್ಲಿ ಕೆಲಸ ಮಾಡಬೇಡಿ. ನೀವು ಜನರಿಗೆ ಉತ್ತಮ ರೀತಿಯಲ್ಲಿ ಸಹಾಯ ಮಾಡಿ. ಇದು ಸರ್ಕಾರಿ ಸೇವೆ ಮತ್ತು ಏನಾದರೂ ಆಗಲು ಒಂದು ಕ್ಷಣ ಸಾಕು” ಎಂದು ಹೇಳಿದ್ದರು.

ಎಡಿಎಂಗೆ ಉಡುಗೊರೆ ನೀಡುವಾಗ ಅಲ್ಲಿ ತಾನು ಇರಬಾರದು ಎಂದು ಹೇಳಿದ ದಿವ್ಯಾ ಅವರು, ವೇದಿಕೆಯಲ್ಲಿ ಜಿಲ್ಲಾಧಿಕಾರಿ ಮತ್ತು ಅವರ ಸಹೋದ್ಯೋಗಿಗಳು ಹಾಜರಿದ್ದಾಗಲೇ ಸ್ಥಳದಿಂದ ನಿರ್ಗಮಿಸಿದ್ದರು. ಅವರು ಕಾರ್ಯಕ್ರಮದಿಂದ ಅರ್ಧಕ್ಕೆ ಹೋಗಲು ಕಾರಣ ಏನು ಎಂಬುವುದನ್ನು ಎರಡು ದಿನಗಳಲ್ಲಿ ಬಹಿರಂಗಪಡಿಸಲಾಗುವುದು ಎಂದಿದ್ದರು.

ಈ ನಡುವೆ ಇಂದು ಬಾಬು ಅವರು ಶವವಾಗಿ ಪತ್ತೆಯಾಗಿದ್ದಾರೆ. ಈ ಘಟನೆ ಕುರಿತು ಸಿಪಿಐ(ಎಂ) ಕಣ್ಣೂರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ದಿವ್ಯಾ ಅವರು ಸಿಪಿಐ(ಎಂ) ಮಹಿಳಾ ಘಟಕ, ಅಖಿಲ ಭಾರತ ಪ್ರಜಾಸತ್ತಾತ್ಮಕ ಮಹಿಳಾ ಸಂಘದ ರಾಜ್ಯ ಜಂಟಿ ಕಾರ್ಯದರ್ಶಿಯೂ ಆಗಿದ್ದಾರೆ.

ದಿವ್ಯಾ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣ ದಾಖಲಿಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.

ಇದನ್ನೂ ಓದಿ : ಚೆನ್ನೈ ಮಳೆ: ಪ್ರವಾಹಕ್ಕೆ ಹೆದರಿ ಫ್ಲೈಓವರ್‌ಗಳ ಮೇಲೆ ಕಾರು ಪಾರ್ಕ್‌ ಮಾಡುತ್ತಿರುವ ಮಾಲೀಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...