Homeಮುಖಪುಟವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣದ ತನಿಖೆ ಅತ್ಯಂತ ಗಂಭೀರವಾಗಿ ನಡೆಯುತ್ತಿದೆ: ಸಿಬಿಐ

ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣದ ತನಿಖೆ ಅತ್ಯಂತ ಗಂಭೀರವಾಗಿ ನಡೆಯುತ್ತಿದೆ: ಸಿಬಿಐ

- Advertisement -
- Advertisement -

ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಟ್ರೈನಿ ವೈದ್ಯೆಯೊಬ್ಬರ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆ ಅತ್ಯಂತ ಗಂಭೀರವಾಗಿ ನಡೆಯುತ್ತಿದೆ ಎಂದು ಕೇಂದ್ರೀಯ ತನಿಖಾ ದಳ (ಸಿಬಿಐ) ಮಂಗಳವಾರ ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದೆ.

ಸಿಬಿಐ ಅನ್ನು ಪ್ರತಿನಿಧಿಸುವ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರ ಪೀಠದ ಮುಂದೆ ಏಜೆನ್ಸಿಯ ಐದನೇ ತನಿಖಾ ಸ್ಥಿತಿ ವರದಿಯನ್ನು ಸಲ್ಲಿಸಿದರು.

“ಈ ವಿಷಯದಲ್ಲಿ ಅತ್ಯಂತ ಗಂಭೀರವಾಗಿ ತನಿಖೆ ನಡೆಯುತ್ತಿದೆ. ಈ ಪ್ರಕರಣದ ಆರೋಪಪಟ್ಟಿಯನ್ನು ಅಕ್ಟೋಬರ್ 7 ರಂದು ಆರೋಪಿ ಸಂಜಯ್ ರಾಯ್ ವಿರುದ್ಧ ಸಲ್ಲಿಸಲಾಗಿದೆ. ಸೀಲ್ದಾ ನ್ಯಾಯಾಲಯವು ವಿಚಾರಣೆಗೆ ತೆಗೆದುಕೊಂಡಿದೆ” ಎಂದು ಅವರು ಪೀಠಕ್ಕೆ ತಿಳಿಸಿದರು.

ನಡೆಯುತ್ತಿರುವ ತನಿಖೆಯ ಭಾಗವಾಗಿ ಇತರ ವ್ಯಕ್ತಿಗಳ ಪಾತ್ರವನ್ನು ಸಿಬಿಐ ತನಿಖೆ ನಡೆಸುತ್ತಿದೆ ಎಂದು ಹೇಳಿದೆ. ಮೂರು ವಾರಗಳಲ್ಲಿ ಹೆಚ್ಚಿನ ತನಿಖಾ ಸ್ಥಿತಿ ವರದಿ ಕೇಳಿದೆ ಎಂದು ಸುಪ್ರೀಂ ಕೋರ್ಟ್ ಗಮನಿಸಿದೆ.

ವೈದ್ಯಕೀಯ ವೃತ್ತಿಪರರ ಸುರಕ್ಷತೆ ಮತ್ತು ಭದ್ರತೆಯ ಕುರಿತು ಶಿಫಾರಸುಗಳನ್ನು ಮಾಡಲು ರಚಿಸಲಾದ ರಾಷ್ಟ್ರೀಯ ಕಾರ್ಯಪಡೆ (ಎನ್‌ಟಿಎಫ್) ವಿಷಯದ ಕುರಿತು, ಸೆಪ್ಟೆಂಬರ್ ಮೊದಲ ವಾರದಿಂದ ಯಾವುದೇ ಸಭೆ ನಡೆಸಿಲ್ಲ ಎಂಬುದನ್ನು ಸುಪ್ರೀಂ ಕೋರ್ಟ್ ಇದೇ ಸಂದರ್ಭದಲ್ಲಿ ಗಮನಿಸಿದೆ.

ಹಾಗಾಗಿ, ತನಿಖೆಯನ್ನು ಸೂಕ್ತ ಅವಧಿಯಲ್ಲಿ ಪೂರ್ಣಗೊಳಿಸಲು ಪೂರ್ವಭಾವಿ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದೆ.

“ಎನ್‌ಟಿಎಫ್‌ನ ಸಭೆಗಳು ನಡೆಯಬೇಕು ಮತ್ತು ಎಲ್ಲ ಉಪ ಗುಂಪುಗಳು ನಿಯಮಿತ ಸಭೆಗಳನ್ನು ನಡೆಸಬೇಕು” ಎಂದು ಮೂರು ವಾರಗಳಲ್ಲಿ ಕೋಲ್ಕತ್ತಾ ವೈದ್ಯರ ಸುರಕ್ಷತೆಯ ಕುರಿತು ಶಿಫಾರಸುಗಳನ್ನು ರೂಪಿಸಲು ನಿರ್ದೇಶಿಸಿದಾಗ ಪೀಠವು ಹೇಳಿದೆ.

ಸೆಪ್ಟೆಂಬರ್ 30 ರಂದು, ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಸಿಸಿಟಿವಿಗಳ ಅಳವಡಿಕೆ ಮತ್ತು ಶೌಚಾಲಯಗಳು, ಪ್ರತ್ಯೇಕ ವಿಶ್ರಾಂತಿ ಕೊಠಡಿಗಳ ನಿರ್ಮಾಣದಲ್ಲಿ ಪಶ್ಚಿಮ ಬಂಗಾಳ ಸರ್ಕಾರದ ವಿಳಂಭದ ಬಗ್ಗೆ ಸುಪ್ರೀಂ ಕೋರ್ಟ್ ಅತೃಪ್ತಿ ವ್ಯಕ್ತಪಡಿಸಿತು. ಅಕ್ಟೋಬರ್ 15ರ ಒಳಗೆ ನಡೆಯುತ್ತಿರುವ ಕೆಲಸವನ್ನು ಪೂರ್ಣಗೊಳಿಸಲು ರಾಜ್ಯಕ್ಕೆ ನಿರ್ದೇಶನ ನೀಡಿತು.

ಆಗಸ್ಟ್ 22 ರಂದು, ಮಹಿಳಾ ವೈದ್ಯರ ಅಸಹಜ ಸಾವಿನ ಪ್ರಕರಣವನ್ನು ದಾಖಲಿಸುವಲ್ಲಿ ವಿಳಂಬವಾದ ಬಗ್ಗೆ ಸುಪ್ರೀಂ ಕೋರ್ಟ್ ಕೋಲ್ಕತ್ತಾ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿತು. ಇದನ್ನು “ಅತ್ಯಂತ ಗೊಂದಲ” ಎಂದು ಕರೆದಿತ್ತು.

ವೈದ್ಯರು ಮತ್ತು ಇತರ ಆರೋಗ್ಯ ವೃತ್ತಿಪರರ ಸುರಕ್ಷತೆ, ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಪ್ರೋಟೋಕಾಲ್ ಅನ್ನು ರೂಪಿಸಲು ಉನ್ನತ ನ್ಯಾಯಾಲಯವು 10 ಸದಸ್ಯರ ರಾಷ್ಟ್ರೀಯ ಕಾರ್ಯಪಡೆಯನ್ನು ರಚಿಸಿದೆ.

ಘಟನೆಯನ್ನು “ಭಯಾನಕ” ಎಂದು ಬಣ್ಣಿಸಿದ ಸುಪ್ರೀಂ ಕೋರ್ಟ್, ಎಫ್‌ಐಆರ್ ದಾಖಲಿಸುವಲ್ಲಿ ವಿಳಂಬ ಮತ್ತು ಸರ್ಕಾರಿ ಸೌಲಭ್ಯವನ್ನು ಧ್ವಂಸಗೊಳಿಸಲು ಸಾವಿರಾರು ಜನರಿಗೆ ಅವಕಾಶ ನೀಡಿದ ಆರೋಪದ ಮೇಲೆ ರಾಜ್ಯ ಸರ್ಕಾರವನ್ನು ಖಂಡಿಸಿದೆ.

ಗಾಯದ ಗುರುತುಗಳೊಂದಿಗೆ ವೈದ್ಯೆಯನ್ನು ಕೊಂದ ಘಟನೆ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾರಣವಾಗಿತ್ತು. ಅಪರಾಧದ ಮರುದಿನ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗರಿಕ ಸ್ವಯಂಸೇವಕನನ್ನು ಕೋಲ್ಕತ್ತಾ ಪೊಲೀಸರು ಬಂಧಿಸಿದರು. ಆಗಸ್ಟ್ 13 ರಂದು ಕಲ್ಕತ್ತಾ ಹೈಕೋರ್ಟ್ ತನಿಖೆಯನ್ನು ಕೋಲ್ಕತ್ತಾ ಪೊಲೀಸರಿಂದ ಸಿಬಿಐಗೆ ವರ್ಗಾಯಿಸಲು ಆದೇಶಿಸಿತು, ಅದು ಆಗಸ್ಟ್ 14 ರಂದು ತನಿಖೆಯನ್ನು ಪ್ರಾರಂಭಿಸಿತು.

ಇದನ್ನೂ ಓದಿ; ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭೆಗೆ ಚುನಾವಣಾ ದಿನಾಂಕ ಘೋಷಣೆ; ನವೆಂಬರ್ 23ರಂದು ಎರಡೂ ರಾಜ್ಯಗಳ ಫಲಿತಾಂಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...