Homeಮುಖಪುಟವಯನಾಡ್ ಕ್ಷೇತ್ರದ ಉಪಚುನಾವಣೆ ಘೋಷಣೆ | ಪ್ರಿಯಾಂಕಾ ಸ್ಪರ್ಧೆಗೆ ಅಖಾಡ ರೆಡಿ

ವಯನಾಡ್ ಕ್ಷೇತ್ರದ ಉಪಚುನಾವಣೆ ಘೋಷಣೆ | ಪ್ರಿಯಾಂಕಾ ಸ್ಪರ್ಧೆಗೆ ಅಖಾಡ ರೆಡಿ

- Advertisement -
- Advertisement -

ಹಲವು ವರ್ಷಗಳಿಂದ ರಾಜಕೀಯದಲ್ಲಿ ಸಕ್ರಿಯರಾಗಿರುವ ಪ್ರಿಯಾಂಕಾ ಗಾಂಧಿ ವಯನಾಡ್ ಕ್ಷೇತ್ರದಲ್ಲಿ ಸ್ಪರ್ಧಿಸುವ ಮೂಲಕ ಮೊದಲ ಬಾರಿಗೆ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸಲಿದ್ದಾರೆ.

ಪ್ರಿಯಾಂಕಾ ಗಾಂಧಿ ಅಭ್ಯರ್ಥಿಯಾಗಿ ಹೆಸರು ಘೋಷಣೆಯಾಗುತ್ತಿದ್ದಂತೆ ವಯನಾಡ್‌ನ ಕಾಂಗ್ರೆಸ್ ಕಾರ್ಯಕರ್ತರು ಪೋಸ್ಟರ್‌ ಅಂಟಿಸಿ ಸ್ವಾಗತಿಸುವ ಮೂಲಕ ಪ್ರಚಾರ ಕಾರ್ಯ ಆರಂಭಿಸಿದ್ದಾರೆ.

ಈ ಬಾರಿಯ (2024) ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿ ವಯನಾಡ್ ಮತ್ತು ಉತ್ತರ ಪ್ರದೇಶದ ರಾಯ್‌ಬರೇಲಿ ಕ್ಷೇತ್ರಗಳಿಂದ ಸ್ಪರ್ಧಿಸಿದ್ದರು. ಎರಡೂ ಕ್ಷೇತ್ರಗಳಲ್ಲಿ ಅವರು ಭರ್ಜರಿ ಜಯಗಳಿಸಿದ್ದರು. ನಿಯಮದಂತೆ ಒಂದು ಕ್ಷೇತ್ರವನ್ನು ಮಾತ್ರ ಉಳಿಸಿಕೊಳ್ಳಬೇಕಾದ ಕಾರಣ, ಅವರು ರಾಯ್‌ಬರೇಲಿ ಕ್ಷೇತ್ರವನ್ನು ಉಳಿಸಿಕೊಂಡು ವಯನಾಡ್ ಕ್ಷೇತ್ರದ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ರಾಹುಲ್ ಗಾಂಧಿಯಿಂದ ತೆರವಾದ ಸ್ಥಾನಕ್ಕೆ ಪ್ರಿಯಾಂಕಾ ಗಾಂಧಿಯನ್ನು ಅಭ್ಯರ್ಥಿಯಾಗಿ ಕಾಂಗ್ರೆಸ್ ಘೋಷಿಸಿದೆ.

2019ರ ಲೋಕಸಭೆ ಚುನಾವಣೆಯಲ್ಲೂ ವಯನಾಡ್‌ನಿಂದ ಸ್ಪರ್ಧಿಸಿದ್ದ ರಾಹುಲ್ ಗಾಂಧಿ ಗೆಲುವು ಸಾಧಿಸಿದ್ದರು. ಐದು ವರ್ಷಗಳ ಕಾಲ ಸಂಸದರಾಗಿದ್ದ ಅವರು, 2024ರಲ್ಲಿ ಎರಡನೇ ಬಾರಿ ಸ್ಪರ್ಧಿಸಿದ್ದರು. ಕಮ್ಯುನಿಸ್ಟ್ ಪಕ್ಷದ ಅಭ್ಯರ್ಥಿ ಅನ್ನಿ ರಾಜಾ ಅವರ ವಿರುದ್ದ 3,64,000 ಮತಗಳ ಭಾರೀ ಅಂತರದಿಂದ ಗೆಲುವು ದಾಖಲಿಸಿದ್ದರು.

ಉಪಚುನಾವಣೆಗೆ ಕಾಂಗ್ರೆಸ್ ಮತ್ತು ಮುಸ್ಲಿಂ ಲೀಗ್ ಮೈತ್ರಿಕೂಟ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಪ್ರಿಯಾಂಕಾ ಗಾಂಧಿಯನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದರೆ, ಸಿಪಿಐ(ಎಂ) ನೇತೃತ್ವದ ಲೆಫ್ಟ್‌ ಡೆಮಾಕ್ರಟಿಕ್ ಫ್ರಂಟ್ (ಎಲ್‌ಡಿಎಫ್‌) ಮತ್ತು ಬಿಜೆಪಿ ಇನ್ನೂ ಅಭ್ಯರ್ಥಿಗಳನ್ನು ಘೋಷಿಸಿಲ್ಲ.

ಪಾಲಕ್ಕಾಡ್ ಮತ್ತು ಚೇಲಕ್ಕರ ಕ್ಷೇತ್ರಗಳಿಗೂ ಅಭ್ಯರ್ಥಿಗಳ ಘೋಷಣೆ

ಕೇರಳದ ಎರಡು ವಿಧಾನಸಭಾ ಕ್ಷೇತ್ರಗಳಾದ ಪಾಲಕ್ಕಾಡ್ ಮತ್ತು ಚೇಲಕ್ಕರದಲ್ಲಿಯೂ ನವೆಂಬರ್ 13ರಂದು ಉಪಚುನಾವಣೆ ನಡೆಯಲಿದೆ. ಕಾಂಗ್ರೆಸ್ ಶಾಸಕ ಶಾಫಿ ಪರಂಬಿಲ್ ಅವರಿಂದ ತೆರವಾದ ಪಾಲಕ್ಕಾಡ್ ಕ್ಷೇತ್ರ ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಶಾಸಕ ರಾಧಾಕೃಷ್ಣನ್ ಅವರಿಂದ ತೆರವಾದ ಚೇಲಕ್ಕರ ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಶಾಫಿ ಪರಂಬಿಲ್ ಪ್ರಸ್ತುತ ವಡಗರ ಕ್ಷೇತ್ರದ ಸಂಸದರಾಗಿದ್ದಾರೆ. ರಾಧಾಕೃಷ್ಣನ್ ಅಲತ್ತೂರು ಕ್ಷೇತ್ರದಿಂದ ಸಂಸತ್‌ಗೆ ಆಯ್ಕೆಯಾಗಿದ್ದಾರೆ.

ವಿಧಾನಸಭಾ ಉಪಚುನಾವಣೆಗೆ ಪಾಲಕ್ಕಾಡ್ ಕ್ಷೇತ್ರದ ಅಭ್ಯರ್ಥಿಯಾಗಿ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಮಮ್ಕೂಟತ್ತಿಲ್ ಮತ್ತು ಚೇಲಕ್ಕರ ಕ್ಷೇತ್ರದ ಅಭ್ಯರ್ಥಿಯಾಗಿ ಅಲತ್ತೂರು ಲೋಕಸಭಾ ಕ್ಷೇತ್ರದ ಮಾಜಿ ಸಂಸದೆ ರಮ್ಯಾ ಹರಿದಾಸ್ ಅವರನ್ನು ಕಾಂಗ್ರೆಸ್ ಘೋಷಣೆ ಮಾಡಿದೆ.

ಇದನ್ನೂ ಓದಿ : ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ದಿನಾಂಕ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...