Homeಮುಖಪುಟತಮಿಳುನಾಡು | ಮುಷ್ಕರ ಕೈಬಿಟ್ಟ ಸ್ಯಾಮ್‌ಸಂಗ್ ಕಾರ್ಮಿಕರು : ಸಂಧಾನ ಸಭೆ ಬಳಿಕ ಸರ್ಕಾರ ಘೋಷಣೆ

ತಮಿಳುನಾಡು | ಮುಷ್ಕರ ಕೈಬಿಟ್ಟ ಸ್ಯಾಮ್‌ಸಂಗ್ ಕಾರ್ಮಿಕರು : ಸಂಧಾನ ಸಭೆ ಬಳಿಕ ಸರ್ಕಾರ ಘೋಷಣೆ

- Advertisement -
- Advertisement -

ಸ್ಯಾಮ್‌ಸಂಗ್ ಇಂಡಿಯಾದ ಶ್ರೀಪೆರಂಬದೂರ್ ಘಟಕದಲ್ಲಿ ಕಳೆದ ಒಂದು ತಿಂಗಳಿನಿಂದ ನಡೆಸುತ್ತಿದ್ದ ಮುಷ್ಕರವನ್ನು ಕಾರ್ಮಿಕರು ಹಿಂಪಡೆದಿದ್ದಾರೆ ಎಂದು ತಮಿಳುನಾಡು ಸರ್ಕಾರದ ಕಾರ್ಮಿಕ ಇಲಾಖೆ ಅಕ್ಟೋಬರ್ 15 ಮಂಗಳವಾರ ಪ್ರಕಟಿಸಿದೆ.

ಕೆಲಸದ ಸ್ಥಳದ ವಾತಾವರಣ ಸುಧಾರಿಸಬೇಕು, ವೇತನ ಪರಿಷ್ಕರಣೆ ಮತ್ತು ಕಾರ್ಮಿಕ ಒಕ್ಕೂಟದ ನೋಂದಣಿಗೆ ಆಗ್ರಹಿಸಿ ಕಳೆದ ಒಂದು ತಿಂಗಳಿನಿಂದ ‘ಸ್ಯಾಮ್‌ಸಂಗ್ ಇಂಡಿಯಾ ವರ್ಕರ್ಸ್ ಯೂನಿಯನ್’ (ಎಸ್‌ಐಡಬ್ಲ್ಯೂಯು) ಬ್ಯಾನರ್ ಅಡಿಯಲ್ಲಿ ಕಾರ್ಮಿಕರು ಪ್ರತಿಭಟಿಸುತ್ತಿದ್ದರು.

ಕಾರ್ಮಿಕರು ಮುಷ್ಕರವನ್ನು ಹಿಂಪಡೆದು ಕೆಲಸಕ್ಕೆ ಮರಳಲು ಒಪ್ಪಿಗೆ ನೀಡಿದ್ದಾರೆ ಎಂದು ಕಾರ್ಮಿಕ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. “ಕೆಲಸಕ್ಕೆ ಹಿಂದಿರುಗಿದ ನಂತರ, ಮುಷ್ಕರದಲ್ಲಿ ಭಾಗವಹಿಸಿದ್ದಕ್ಕಾಗಿ ಕಂಪನಿಯು ಕಾರ್ಮಿಕರನ್ನು ಗುರಿಯಾಗಿಸಬಾರದು. ಕಾರ್ಮಿಕರು ಕೂಡ ಕಂಪನಿಯೊಂದಿಗೆ ಸಹಕರಿಸಬೇಕು, ಕಂಪನಿಯ ಹಿತಾಸಕ್ತಿಗೆ ಹಾನಿಯುಂಟುಮಾಡುವ ಯಾವುದೇ ಕೃತ್ಯಗಳನ್ನು ಮಾಡಬಾರದು. ಸಂಧಾನ ಅಧಿಕಾರಿಯ ಮುಂದೆ ಕಾರ್ಮಿಕರು ಸಲ್ಲಿಸಿರುವ ಬೇಡಿಕೆಗಳ ಪಟ್ಟಿಗೆ ಕಂಪನಿಯ ಆಡಳಿತವು ಲಿಖಿತ ರೂಪದಲ್ಲಿ ಉತ್ತರ ಸಲ್ಲಿಸಬೇಕು ಎಂದು ಹೇಳಿದೆ.

“ಮಾತುಕತೆಗಳು ಉತ್ತಮವಾಗಿ ನಡೆದಿವೆ. ನಾವು ಅನುಕೂಲಕರ ಒಪ್ಪಂದಗಳಿಗೆ ಬಂದಿದ್ದೇವೆ. ನಾಳೆ ನಾವು ಕಾರ್ಮಿಕರೊಂದಿಗೆ ಕೌನ್ಸಿಲ್ ಸಭೆ ನಡೆಸಿ ಉತ್ತಮ ನಿರ್ಧಾರ ತೆಗೆದುಕೊಳ್ಳುತ್ತೇವೆ. ಇಂದಿನ ಸಭೆಯಲ್ಲಿ ಲೋಕಪಯೋಗಿ ಸಚಿವ ಇವಿ ವೇಲು, ಕಾರ್ಮಿಕ ಕಲ್ಯಾಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಸಿವಿ ಗಣೇಶನ್, ಕೈಗಾರಿಕಾ ಸಚಿವ ಟಿಆರ್‌ಬಿ ರಾಜಾ ಮತ್ತು ಎಂಎಸ್‌ಎಂಇ ಸಚಿವ ಟಿಎಂ ಅನ್ಬರಸನ್ ಉಪಸ್ಥಿತರಿದ್ದರು” ಎಂದು ಸಿಐಟಿಯು ಅಧ್ಯಕ್ಷ ಎ ಸೌಂದರರಾಜನ್ ತಿಳಿಸಿದ್ದಾರೆ.

ಮುಷ್ಕರ ನಿರತ ಕಾರ್ಮಿಕರು ಕೆಲಸಕ್ಕೆ ಮರಳುತ್ತಿರುವ ಬಗ್ಗೆ ಮಾತನಾಡಿರುವ ಸೌಂದರರಾಜನ್, ಅಕ್ಟೋಬರ್ 16ರ ಸಭೆಯಲ್ಲಿ ಒಮ್ಮತದ ತೀರ್ಮಾನಕ್ಕೆ ಬಂದರೆ, ಕಾರ್ಮಿಕರು ಮರುದಿನ ಕೆಲಸಕ್ಕೆ ಹಾಜರಾಗಲಿದ್ದಾರೆ. ನಮ್ಮೊಂದಿಗೆ ಮಾತನಾಡಲು ನಿರಾಕರಿಸಿದ್ದ ಸ್ಯಾಮ್‌ಸಂಗ್ ಕಂಪನಿ ಇಂದು ನಮ್ಮ ಬೇಡಿಕೆಗಳ ಬಗ್ಗೆ ಮಾತುಕತೆ ನಡೆಸಿದ್ದು, ಸಚಿವರು ಮತ್ತು ರಾಜ್ಯ ಸರ್ಕಾರದ ಪ್ರಯತ್ನಗಳಿಂದಾಗಿ ಈ ಮಹತ್ವದ ಬೆಳವಣಿಗೆಯಾಗಿದೆ” ಎಂದಿದ್ದಾರೆ.

ಸೆಪ್ಟೆಂಬರ್ 9ರಿಂದ ಕೆಲಸ ಸ್ಥಗಿತಗೊಳಿಸಿದ್ದ ಕಾರ್ಮಿಕರು, ತಮ್ಮ ಒಕ್ಕೂಟ ‘ಸ್ಯಾಮ್‌ಸಂಗ್ ಇಂಡಿಯಾ ವರ್ಕರ್ಸ್ ಯೂನಿಯನ್ (ಎಸ್‌ಐಡಬ್ಲ್ಯೂಯು) ಅನ್ನು ರಾಜ್ಯ ಕಾರ್ಮಿಕ ಇಲಾಖೆಯಲ್ಲಿ ನೋಂದಾಯಿಬೇಕು ಎಂಬ ಪ್ರಮುಖ ಬೇಡಿಕೆಯಿಟ್ಟಿದ್ದರು. ಸರ್ಕಾರ ಕಾನೂನಿನ ಪ್ರಕಾರ 45 ದಿನಗಳ ನಂತರವೂ ಒಕ್ಕೂಟವನ್ನು ನೋಂದಣಿ ಮಾಡದ ಕಾರಣ ಸಿಐಟಿಯು ಮದ್ರಾಸ್ ಹೈಕೋರ್ಟ್‌ ಮೊರೆ ಹೋಗಿದೆ. ಸರ್ಕಾರದ ಮೂಲಗಳ ಪ್ರಕಾರ, ಒಕ್ಕೂಟದ ನೋಂದಣಿ ಶೀಘ್ರದಲ್ಲೇ ನಡೆಯಲಿದೆ.

ಈ ವರ್ಷದ ಜುಲೈನಲ್ಲಿ ಸ್ಯಾಮ್‌ಸಂಗ್‌ ಘಟಕದಲ್ಲಿ ಕೆಲಸ ಮಾಡುವ ಸುಮಾರು 1,700 ಉದ್ಯೋಗಿಗಳಲ್ಲಿ 1,500 ಉದ್ಯೋಗಿಗಳು ‘ಸ್ಯಾಮ್‌ಸಂಗ್ ಇಂಡಿಯಾ ಥೋಝಿಲಾಲರ್ ಸಂಗಮ್‌’ನ ಸದಸ್ಯರಾಗಲು ಸಹಿ ಹಾಕಿದ್ದರು. ಇದನ್ನು ಸ್ಯಾಮ್‌ಸಂಗ್ ಇಂಡಿಯಾ ವರ್ಕರ್ಸ್ ಯೂನಿಯನ್ (SIWU)ಎಂದೂ ಕರೆಯಲಾಗುತ್ತದೆ. ಇದು ಸೆಂಟರ್ ಆಫ್ ಇಂಡಿಯನ್ ಟ್ರೇಡ್‌ ಯೂನಿಯನ್‌ (ಸಿಐಟಿಯು) ಗೆ ಸಂಯೋಜಿತವಾಗಿದೆ. ತಮ್ಮ ಒಕ್ಕೂಟದ ನೋಂದಣಿಗಾಗಿ ಕಾರ್ಮಿಕರು ಜುಲೈ 25 ರಂದು ರಾಜ್ಯ ಕಾರ್ಮಿಕ ಇಲಾಖೆಗೆ ಆನ್‌ಲೈನ್‌ನಲ್ಲಿ ದಾಖಲೆಗಳನ್ನು ಸಲ್ಲಿಸಿದ್ದರು.

ಪ್ರತಿಭಟನೆಯ ಒಂದು ತಿಂಗಳ ನಂತರ, ಸ್ಯಾಮ್‌ಸಂಗ್ ಕೆಲವು ಉದ್ಯೋಗಿಗಳೊಂದಿಗೆ ತಿಳುವಳಿಕೆ ಒಪ್ಪಂದಕ್ಕೆ (ಎಂಒಯು) ಸಹಿ ಹಾಕಿತ್ತು. ಆದರೆ, ಅದನ್ನು ಸಿಐಟಿಯು ತಿರಸ್ಕರಿಸಿತ್ತು. “ಮುಷ್ಕರಕ್ಕೆ ಹಾಜರಾಗದ ಸುಮಾರು 200 ಮಂದಿಯನ್ನು ಆಯ್ಕೆ ಮಾಡಿ ಸೆಕ್ರೆಟರಿಯೇಟ್‌ಗೆ ಕರೆದೊಯ್ದು ಮೂವರು ಮಂತ್ರಿಗಳ ಮುಂದೆ ಕುಳಿತುಕೊಳ್ಳಲು ಹೇಳಿದ್ದಾರೆ. ಕಂಪನಿಯು ಕೆಲವು ನಿಯಮಗಳನ್ನು ನಿರ್ದೇಶಿಸಿದೆ. ಅದನ್ನೇ ಎಂಒಯು ಎಂದು ಕರೆಯುತ್ತಿದ್ದಾರೆ. ಆದ್ದರಿಂದ ಮುಷ್ಕರ ನಿರತ ಕಾರ್ಮಿಕರಿಗೂ ಆ ಎಂಒಯುಗೂ ಯಾವುದೇ ಸಂಬಂಧವಿಲ್ಲ. ಪ್ರತಿಭಟನೆ ಮುಂದುವರಿಯಲಿದೆ” ಎಂದು ಸಿಐಟಿಯು ತಿಳಿಸಿತ್ತು.

ಈ ಬೆಳವಣಿಗೆಯ ನಂತರ, ನೌಕರರು ತಮ್ಮ ಪ್ರತಿಭಟನೆಯನ್ನು ತೀವ್ರಗೊಳಿಸಿದ್ದರು. ಇದರಿಂದಾಗಿ ಪ್ರತಿಭಟನಾ ಸ್ಥಳದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಯಿತು. ಮಧ್ಯರಾತ್ರಿಯ ಸಮಯದಲ್ಲಿ ಹಲವಾರು ಯೂನಿಯನ್ ಮುಖಂಡರನ್ನು ಬಂಧಿಸಲಾಯಿತು ಮತ್ತು ಪ್ರತಿಭಟನಾ ಸ್ಥಳದಲ್ಲಿದ್ದ ಪೆಂಡಾಲ್‌ ಅನ್ನು ತೆಗೆದುಹಾಕಲಾಯಿತು. ಕಾರ್ಮಿಕರಿಗೆ ಶಾಂತಿಯುತ ಪ್ರತಿಭಟನೆಗೆ ಹಕ್ಕಿದೆ ಎಂದು ಮದ್ರಾಸ್ ಹೈಕೋರ್ಟ್ ಆದೇಶ ನೀಡಿದ ನಂತರವೂ ಪೊಲೀಸ್ ಸಿಬ್ಬಂದಿ ಕಾರ್ಮಿಕರನ್ನು ಬಂಧಿಸಿದ್ದರು. ಇದರ ವಿರುದ್ದ ಸಿಐಟಿಯು ಈಗಾಗಲೇ ನ್ಯಾಯಾಲಯಕ್ಕೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದೆ.

ಒಟ್ಟಿನಲ್ಲಿ ಒಂದು ತಿಂಗಳ ಬಳಿಕ ಸರ್ಕಾರ ಮತ್ತು ಕಂಪನಿ ಕನಿಷ್ಠ ಪಕ್ಷ ಕಾರ್ಮಿಕರ ಬೇಡಿಕೆ ಅಳಿಸಲು ಮುಂದಾಗಿದೆ. ಕಾರ್ಮಿಕರ ಬೇಡಿಕೆಗೆ ಎರಡೂ ಕಡೆಯವರು ಒಪ್ಪಿಗೆ ಸೂಚಿಸಿದರೆ ಪ್ರತಿಭಟನೆ ಅಂತ್ಯಗೊಳ್ಳಬಹುದು. ಪ್ರಸ್ತುತ ಸರ್ಕಾರ ಮುಷ್ಕರ ಕೈ ಬಿಟ್ಟಿದ್ದಾರೆ ಎಂದು ಘೋಷಣೆ ಮಾಡಿದೆ. ಆದರೆ, ಕಾರ್ಮಿಕರು ಇಂದು ಸಭೆ ನಡೆಸಿ ಅಂತಿಮ ನಿರ್ಧಾರಕ್ಕೆ ಬರಲಿದ್ದಾರೆ.

ಇದನ್ನೂ ಓದಿ : ವಯನಾಡ್ ಕ್ಷೇತ್ರದ ಉಪಚುನಾವಣೆ ಘೋಷಣೆ | ಪ್ರಿಯಾಂಕಾ ಸ್ಪರ್ಧೆಗೆ ಅಖಾಡ ರೆಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...