Homeಫ್ಯಾಕ್ಟ್‌ಚೆಕ್FACT CHECK : ಮುಸ್ಲಿಮರು ದುರ್ಗಾ ಮೂರ್ತಿಯನ್ನು ಧ್ವಂಸಗೊಳಿಸಿದ್ದಾರೆ ಎಂಬುವುದು ಸುಳ್ಳು

FACT CHECK : ಮುಸ್ಲಿಮರು ದುರ್ಗಾ ಮೂರ್ತಿಯನ್ನು ಧ್ವಂಸಗೊಳಿಸಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

ಹೈದರಾಬಾದ್‌ನಲ್ಲಿ ಮುಸ್ಲಿಮರು ದುರ್ಗಾ ಮೂರ್ತಿಯನ್ನು ಧ್ವಸಂಗೊಳಿಸಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು ಹರಿದಾಡುತ್ತಿದೆ.

ವಿಡಿಯೋದಲ್ಲಿ ದುರ್ಗಾ ಮೂರ್ತಿಯ ಕೈ ಸೇರಿದಂತೆ ಕೆಲ ಭಾಗಗಳು ಮುರಿದಿರುವುದು ಮತ್ತು ಸುತ್ತಮುತ್ತ ವಸ್ತುಗಳೆಲ್ಲ ಚೆಲ್ಲಾಪಿಲ್ಲಿಯಾಗಿ ಬಿದ್ದಿರುವುದು ನೋಡಬಹುದು.

ಅರುಣ್ ಕುಮಾರ್ ಹಿಂದೂ (@arukumrhin11669)ಎಂಬ ಎಕ್ಸ್‌ ಬಳಕೆದಾರ ಅಕ್ಟೋಬರ್ 12ರಂದು ವಿಡಿಯೋ ಹಂಚಿಕೊಂಡು ” ಇದು ಪಾಕಿಸ್ತಾನ, ಬಾಂಗ್ಲಾದೇಶ ಅಲ್ಲ.. ಇದು ಹೈದರಾಬಾದ್. ಹೈದರಾಬಾದ್‌ನಲ್ಲಿ ಮಾತೆ ದುರ್ಗಾ ಮೂರ್ತಿ ಧ್ವಂಸ ಮಾಡಿದ ಜಿಹಾದಿ ಮುಸ್ಲಿಮರು. ಗಣೇಶನ ಮೂರ್ತಿ ಆಯಿತು ಈಗ ದುರ್ಗಾ ಮೂರ್ತಿ.. ಹಿಂದೂಗಳೆ ಇನ್ನಾದರು ಎಚ್ಚೆತ್ತುಕೊಳ್ಳಿ ಇಲ್ಲದಿದ್ದರೆ ಸನಾತನ ಧರ್ಮ ನಾಶ ನಿಶ್ಚಿತ” ಎಂದು ಬರೆದುಕೊಂಡಿದ್ದರು.

ಶ್ರೇಯಾ ಸನಾತನಿ (@Shreya_Sanatani) ಎಂಬವರು ಅಕ್ಟೋಬರ್ 12ರಂದು ವಿಡಿಯೋ ಹಂಚಿಕೊಂಡು ” ಇದು ಎಲ್ಲೋ ದೂರದ ಪಾಕಿಸ್ತಾನ ಮತ್ತು ಪಕ್ಕದ ಬಾಂಗ್ಲಾದೇಶದಲ್ಲಿ ನಡೆದಿರುವ ಘಟನೆ ಅಲ್ಲವೇ ಅಲ್ಲ. ನಮ್ಮ ಪಕ್ಕದ ಕಾಂಗ್ರೆಸ್ ಆಡಳಿತದ ತೆಲಂಗಾಣದ ಹೈದರಾಬಾದ್ ನಗರದಲ್ಲಿ…ದುರ್ಗಾ ಮಾತೆಯನ್ನ ಧ್ವಂಸ ಮಾಡಿದ್ದಾರೆ” ಎಂದು ಬರೆದುಕೊಂಡಿದ್ದರು.

ಸುಳ್ಳು, ಕೋಮು ದ್ವೇಷದ ಸುದ್ದಿಗಳನ್ನು ಹಬ್ಬಿಸುವುದರಲ್ಲಿ ಕುಖ್ಯಾತಿ ಪಡೆದಿರುವ ಬಲಪಂಥೀಯ ಎಕ್ಸ್ ಬಳಕೆದಾರ ರೌಶನ್ ಸಿನ್ಹಾ ಅಥವಾ ಮಿ.ಸಿನ್ಹಾ (@MrSinha_) ಅಕ್ಟೋಬರ್ 11ರಂದು ವಿಡಿಯೋ ಹಂಚಿಕೊಂಡು “ಅತಿರೇಕ: ಹೈದರಾಬಾದ್‌ನಲ್ಲಿ ಮಾತೆ ದುರ್ಗೆಯ ಮೂರ್ತಿ ಧ್ವಂಸಗೊಳಿಸಲಾಗಿದೆ. ಇದು ಪಾಕಿಸ್ತಾನದ ಹೈದರಾಬಾದ್ ಅಲ್ಲ, ಕಾಂಗ್ರೆಸ್ ಆಡಳಿತ ಭಾರತದ ಹೈದರಾಬಾದ್” ಎಂದು ಬರೆದುಕೊಂಡಿದ್ದರು.

ಹಾಗಾದರೆ, ಮುಸ್ಲಿಮರು ದುರ್ಗಾ ಮೂರ್ತಿಯನ್ನು ಧ್ವಂಸಗೊಳಿಸಿರುವುದು ನಿಜಾನಾ? ಎಂದು ಪರಿಶೀಲಿಸೋಣ

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋ ಕುರಿತು ನಾವು ಮಾಹಿತಿ ಹುಡುಕಿದಾಗ, ಹೈದರಾಬಾದ್‌ನ ನಾಂಪಲ್ಲಿಯ ಎಕ್ಸಿಬಿಷನ್ ಗ್ರೌಂಡ್ (ವಸ್ತು ಪ್ರದರ್ಶನ ಮೈದಾನ) ನಲ್ಲಿ ಸ್ಥಾಪಿಸಿದ್ದ ದುರ್ಗಾ ಮೂರ್ತಿಗೆ ಹಾನಿ ಮಾಡಿರುವ ಕುರಿತು ಮಾಹಿತಿ ಲಭ್ಯವಾಗಿದೆ.

ಈ ಕುರಿತು ಅಕ್ಟೋಬರ್ 11ರಂದು ವರದಿ ಪ್ರಕಟಿಸಿದ್ದ ತೆಲಂಗಾಣ ಟುಡೇ ಸುದ್ದಿ ವೆಬ್‌ಸೈಟ್ “ಹೈದರಾಬಾದ್‌ನ ನಾಂಪಲ್ಲಿಯ ಎಕ್ಸಿಬಿಷನ್ ಗ್ರೌಂಡ್‌ನಲ್ಲಿ ದುರ್ಗಾ ಮೂರ್ತಿಯನ್ನು ಧ್ವಂಸಗೊಳಿಸಿದ ಪ್ರಕರಣವನ್ನು ಬೇಗಂ ಬಝಾರ್ ಪೊಲೀಸರು ಬೇಧಿಸಿದ್ದು, ಆರೋಪಿ ನಾಗರ್‌ಕರ್ನೂಲ್ ಜಿಲ್ಲೆಯ ಕೃಷ್ಣಯ್ಯ ಗೌಡ್ ಎಂಬಾತನನ್ನು ಬಂಧಿಸಿದ್ದಾರೆ” ಎಂದು ತಿಳಿಸಿತ್ತು.

“ತಡರಾತ್ರಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ವಲಯ ಡಿಸಿಪಿ ಅಕ್ಷಾಂಶ್ ಯಾದವ್, ಕೃಷ್ಣಯ್ಯಗೌಡ್‌ ಮಾನಸಿಕ ಸ್ಥಿತಿ ಸ್ಥಿರವಾಗಿಲ್ಲ ಮತ್ತು ಅವರು ಹಸಿದಿದ್ದರು. ಹಾಗಾಗಿ, ಆಹಾರಕ್ಕಾಗಿ ದುರ್ಗಾ ಮೂರ್ತಿಯ ಬಳಿ ದಾಂಧಲೆ ನಡೆಸಿದ್ದಾರೆ” ಎಂದು ವಿವರಿಸಿದ್ದಾಗಿ ಹೇಳಿತ್ತು.

ಸಿಯಾಸತ್ ಡೈಲಿ‘ ಮತ್ತೊ ‘ಇಂಡಿಯಾ ಟುಡೇ‘ ಅಕ್ಟೋಬರ್ 12ರಂದು ಪ್ರಕಟಿಸಿದ್ದ ವರದಿಯಲ್ಲೂ ಇದೇ ವಿಷಯವನ್ನು ಹೇಳಲಾಗಿತ್ತು. ಆದ್ದರಿಂದ, ದುರ್ಗಾ ಮೂರ್ತಿಯನ್ನು ಮುಸ್ಲಿಮರು ಧ್ವಂಸಗೊಳಿಸಿದ್ದಾರೆ ಎಂಬುವುದು ಸುಳ್ಳು

ಇದನ್ನೂ ಓದಿ : FACT CHECK | ತಾಲಿಬಾನ್ ಕಾರ್ಯದರ್ಶಿ ಆರೆಸ್ಸೆಸ್‌, ಬಿಜೆಪಿಯನ್ನು ಹೊಗಳಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...