Homeಫ್ಯಾಕ್ಟ್‌ಚೆಕ್FACT CHECK : ಮುಸ್ಲಿಮರು ದುರ್ಗಾ ಮೂರ್ತಿಯನ್ನು ಧ್ವಂಸಗೊಳಿಸಿದ್ದಾರೆ ಎಂಬುವುದು ಸುಳ್ಳು

FACT CHECK : ಮುಸ್ಲಿಮರು ದುರ್ಗಾ ಮೂರ್ತಿಯನ್ನು ಧ್ವಂಸಗೊಳಿಸಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

ಹೈದರಾಬಾದ್‌ನಲ್ಲಿ ಮುಸ್ಲಿಮರು ದುರ್ಗಾ ಮೂರ್ತಿಯನ್ನು ಧ್ವಸಂಗೊಳಿಸಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು ಹರಿದಾಡುತ್ತಿದೆ.

ವಿಡಿಯೋದಲ್ಲಿ ದುರ್ಗಾ ಮೂರ್ತಿಯ ಕೈ ಸೇರಿದಂತೆ ಕೆಲ ಭಾಗಗಳು ಮುರಿದಿರುವುದು ಮತ್ತು ಸುತ್ತಮುತ್ತ ವಸ್ತುಗಳೆಲ್ಲ ಚೆಲ್ಲಾಪಿಲ್ಲಿಯಾಗಿ ಬಿದ್ದಿರುವುದು ನೋಡಬಹುದು.

ಅರುಣ್ ಕುಮಾರ್ ಹಿಂದೂ (@arukumrhin11669)ಎಂಬ ಎಕ್ಸ್‌ ಬಳಕೆದಾರ ಅಕ್ಟೋಬರ್ 12ರಂದು ವಿಡಿಯೋ ಹಂಚಿಕೊಂಡು ” ಇದು ಪಾಕಿಸ್ತಾನ, ಬಾಂಗ್ಲಾದೇಶ ಅಲ್ಲ.. ಇದು ಹೈದರಾಬಾದ್. ಹೈದರಾಬಾದ್‌ನಲ್ಲಿ ಮಾತೆ ದುರ್ಗಾ ಮೂರ್ತಿ ಧ್ವಂಸ ಮಾಡಿದ ಜಿಹಾದಿ ಮುಸ್ಲಿಮರು. ಗಣೇಶನ ಮೂರ್ತಿ ಆಯಿತು ಈಗ ದುರ್ಗಾ ಮೂರ್ತಿ.. ಹಿಂದೂಗಳೆ ಇನ್ನಾದರು ಎಚ್ಚೆತ್ತುಕೊಳ್ಳಿ ಇಲ್ಲದಿದ್ದರೆ ಸನಾತನ ಧರ್ಮ ನಾಶ ನಿಶ್ಚಿತ” ಎಂದು ಬರೆದುಕೊಂಡಿದ್ದರು.

ಶ್ರೇಯಾ ಸನಾತನಿ (@Shreya_Sanatani) ಎಂಬವರು ಅಕ್ಟೋಬರ್ 12ರಂದು ವಿಡಿಯೋ ಹಂಚಿಕೊಂಡು ” ಇದು ಎಲ್ಲೋ ದೂರದ ಪಾಕಿಸ್ತಾನ ಮತ್ತು ಪಕ್ಕದ ಬಾಂಗ್ಲಾದೇಶದಲ್ಲಿ ನಡೆದಿರುವ ಘಟನೆ ಅಲ್ಲವೇ ಅಲ್ಲ. ನಮ್ಮ ಪಕ್ಕದ ಕಾಂಗ್ರೆಸ್ ಆಡಳಿತದ ತೆಲಂಗಾಣದ ಹೈದರಾಬಾದ್ ನಗರದಲ್ಲಿ…ದುರ್ಗಾ ಮಾತೆಯನ್ನ ಧ್ವಂಸ ಮಾಡಿದ್ದಾರೆ” ಎಂದು ಬರೆದುಕೊಂಡಿದ್ದರು.

ಸುಳ್ಳು, ಕೋಮು ದ್ವೇಷದ ಸುದ್ದಿಗಳನ್ನು ಹಬ್ಬಿಸುವುದರಲ್ಲಿ ಕುಖ್ಯಾತಿ ಪಡೆದಿರುವ ಬಲಪಂಥೀಯ ಎಕ್ಸ್ ಬಳಕೆದಾರ ರೌಶನ್ ಸಿನ್ಹಾ ಅಥವಾ ಮಿ.ಸಿನ್ಹಾ (@MrSinha_) ಅಕ್ಟೋಬರ್ 11ರಂದು ವಿಡಿಯೋ ಹಂಚಿಕೊಂಡು “ಅತಿರೇಕ: ಹೈದರಾಬಾದ್‌ನಲ್ಲಿ ಮಾತೆ ದುರ್ಗೆಯ ಮೂರ್ತಿ ಧ್ವಂಸಗೊಳಿಸಲಾಗಿದೆ. ಇದು ಪಾಕಿಸ್ತಾನದ ಹೈದರಾಬಾದ್ ಅಲ್ಲ, ಕಾಂಗ್ರೆಸ್ ಆಡಳಿತ ಭಾರತದ ಹೈದರಾಬಾದ್” ಎಂದು ಬರೆದುಕೊಂಡಿದ್ದರು.

ಹಾಗಾದರೆ, ಮುಸ್ಲಿಮರು ದುರ್ಗಾ ಮೂರ್ತಿಯನ್ನು ಧ್ವಂಸಗೊಳಿಸಿರುವುದು ನಿಜಾನಾ? ಎಂದು ಪರಿಶೀಲಿಸೋಣ

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋ ಕುರಿತು ನಾವು ಮಾಹಿತಿ ಹುಡುಕಿದಾಗ, ಹೈದರಾಬಾದ್‌ನ ನಾಂಪಲ್ಲಿಯ ಎಕ್ಸಿಬಿಷನ್ ಗ್ರೌಂಡ್ (ವಸ್ತು ಪ್ರದರ್ಶನ ಮೈದಾನ) ನಲ್ಲಿ ಸ್ಥಾಪಿಸಿದ್ದ ದುರ್ಗಾ ಮೂರ್ತಿಗೆ ಹಾನಿ ಮಾಡಿರುವ ಕುರಿತು ಮಾಹಿತಿ ಲಭ್ಯವಾಗಿದೆ.

ಈ ಕುರಿತು ಅಕ್ಟೋಬರ್ 11ರಂದು ವರದಿ ಪ್ರಕಟಿಸಿದ್ದ ತೆಲಂಗಾಣ ಟುಡೇ ಸುದ್ದಿ ವೆಬ್‌ಸೈಟ್ “ಹೈದರಾಬಾದ್‌ನ ನಾಂಪಲ್ಲಿಯ ಎಕ್ಸಿಬಿಷನ್ ಗ್ರೌಂಡ್‌ನಲ್ಲಿ ದುರ್ಗಾ ಮೂರ್ತಿಯನ್ನು ಧ್ವಂಸಗೊಳಿಸಿದ ಪ್ರಕರಣವನ್ನು ಬೇಗಂ ಬಝಾರ್ ಪೊಲೀಸರು ಬೇಧಿಸಿದ್ದು, ಆರೋಪಿ ನಾಗರ್‌ಕರ್ನೂಲ್ ಜಿಲ್ಲೆಯ ಕೃಷ್ಣಯ್ಯ ಗೌಡ್ ಎಂಬಾತನನ್ನು ಬಂಧಿಸಿದ್ದಾರೆ” ಎಂದು ತಿಳಿಸಿತ್ತು.

“ತಡರಾತ್ರಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ವಲಯ ಡಿಸಿಪಿ ಅಕ್ಷಾಂಶ್ ಯಾದವ್, ಕೃಷ್ಣಯ್ಯಗೌಡ್‌ ಮಾನಸಿಕ ಸ್ಥಿತಿ ಸ್ಥಿರವಾಗಿಲ್ಲ ಮತ್ತು ಅವರು ಹಸಿದಿದ್ದರು. ಹಾಗಾಗಿ, ಆಹಾರಕ್ಕಾಗಿ ದುರ್ಗಾ ಮೂರ್ತಿಯ ಬಳಿ ದಾಂಧಲೆ ನಡೆಸಿದ್ದಾರೆ” ಎಂದು ವಿವರಿಸಿದ್ದಾಗಿ ಹೇಳಿತ್ತು.

ಸಿಯಾಸತ್ ಡೈಲಿ‘ ಮತ್ತೊ ‘ಇಂಡಿಯಾ ಟುಡೇ‘ ಅಕ್ಟೋಬರ್ 12ರಂದು ಪ್ರಕಟಿಸಿದ್ದ ವರದಿಯಲ್ಲೂ ಇದೇ ವಿಷಯವನ್ನು ಹೇಳಲಾಗಿತ್ತು. ಆದ್ದರಿಂದ, ದುರ್ಗಾ ಮೂರ್ತಿಯನ್ನು ಮುಸ್ಲಿಮರು ಧ್ವಂಸಗೊಳಿಸಿದ್ದಾರೆ ಎಂಬುವುದು ಸುಳ್ಳು

ಇದನ್ನೂ ಓದಿ : FACT CHECK | ತಾಲಿಬಾನ್ ಕಾರ್ಯದರ್ಶಿ ಆರೆಸ್ಸೆಸ್‌, ಬಿಜೆಪಿಯನ್ನು ಹೊಗಳಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

PTCL ಕಾಯ್ದೆ ಅನುಷ್ಠಾನ ವೈಫಲ್ಯ: ನ್ಯಾಯಾಂಗ ಹಾಗೂ ಸರ್ಕಾರದ ಧೋರಣೆ ಖಂಡಿಸಿ ಜ್ಯೂರಿ ವರದಿ ಬಿಡುಗಡೆ

ದಲಿತ ಸಮುದಾಯಗಳಿಗೆ ಮಂಜೂರಾದ ಭೂಮಿ ಅನ್ಯಯವಾಗುವುದನ್ನು ತಡೆಯುವಲ್ಲಿ ಹಾಗೂ ಪಿಟಿಸಿಎಲ್ (PTCL) ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಲ್ಲಿ ನ್ಯಾಯಾಂಗ ಮತ್ತು ಸರ್ಕಾರ ಸಂಪೂರ್ಣವಾಗಿ ವಿಫಲವಾಗಿವೆ ಎಂದು ಜ್ಯೂರಿ ವರದಿಯು ತೀವ್ರವಾಗಿ ಅತೃಪ್ತಿ ವ್ಯಕ್ತಪಡಿಸಿದೆ. ಪಿಟಿಸಿಎಲ್...

SIR ಪ್ರಕ್ರಿಯೆಗೆ 6 ತಿಂಗಳ ಕಾಲಾವಕಾಶ ನೀಡಿ: ಸೆಪ್ಟೆಂಬರ್ 1 ರಂದು ‘ಎಲೆಕ್ಷನ್ ಕಮಿಷನ್ ಚಲೋ’ ಗೆ ಒಕ್ಕೂಟ ಕರೆ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿನ ಅವೈಜ್ಞಾನಿಕ ಧೋರಣೆ ಹಾಗೂ ಗೊಂದಲಮಯ ಕ್ರಮಗಳನ್ನು ತೀವ್ರವಾಗಿ ಖಂಡಿಸಿರುವ 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ', ಮತದಾರರ ಹಕ್ಕುಗಳನ್ನು...

ನೇಪಾಳದಲ್ಲಿ ದಿಢೀರ್ ಪ್ರವಾಹ : 105 ಭಾರತೀಯರು ಸೇರಿದಂತೆ 384 ಮಂದಿ ನಾಪತ್ತೆ

ನೇಪಾಳ ಪ್ರವಾಸೋದ್ಯಮ ಮಂಡಳಿಯ ಮಾಹಿತಿ ಪ್ರಕಾರ, ಬುಧವಾರ (ಆ.26) ಬೆಳಿಗ್ಗೆ ನೇಪಾಳದ ರಸುವಾ ಜಿಲ್ಲೆಯ ಭೋಟೆ ಕೋಶಿ ನದಿಯಲ್ಲಿ ಸಂಭವಿಸಿದ ಹಠಾತ್ ಪ್ರವಾಹದ ನಂತರ 105 ಭಾರತೀಯ ಪ್ರಜೆಗಳು ಸೇರಿದಂತೆ ಕನಿಷ್ಠ 384...

ರಾಜ್ಯದಲ್ಲಿ 102 ತಾಲೂಕುಗಳಲ್ಲಿ ಬರ: ಡಿಸಿಎಂ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿ ತಲೆದೋರಿದ್ದು, 102 ತಾಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದೆ. ಕೇಂದ್ರ ಸರ್ಕಾರದ ಮಾನದಂಡಗಳನ್ವಯ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಧಿಕೃತವಾಗಿ ಬರ ಘೋಷಿಸಲಾಗುವುದು ಹಾಗೂ ಪ್ರತಿ ವಾರವೂ...

ಪ. ಬಂಗಾಳ SIR : ನ್ಯಾಯಮಂಡಳಿಗಳಿಂದ ಇದುವರೆಗೆ ಕೇವಲ 2.17% ಮೇಲ್ಮನವಿಗಳ ಇತ್ಯರ್ಥ; ಇನ್ನು 37 ಲಕ್ಷಕ್ಕೂ ಹೆಚ್ಚು ಬಾಕಿ!

ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ಭಗವಾಂಗೋಲಾದ ನಿವಾಸಿಯಾದ ಮೊಹಮ್ಮದ್ ದುವಾಲ್ ಅಲಿ ಅವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾಗ, ಕರ್ತವ್ಯದ ಅವಧಿಯಲ್ಲಿ ಗುಂಡೇಟಿಗೆ ಒಳಗಾಗಿದ್ದರು. ಪ್ರಾಣಾಪಾಯದಿಂದ ಬದುಕುಳಿದ ಅವರು ನಂತರ ಭಾರತೀಯ ರೈಲ್ವೆಯಲ್ಲಿ ಕೆಲಸ...

ಬಂಡಾಯ ಸಂಸದರಿಗೆ ಸಂಕಷ್ಟ: 7 ದಿನಗಳಲ್ಲಿ ಉತ್ತರಿಸಲು ಲೋಕಸಭೆ ಸಚಿವಾಲಯ ತಾಕೀತು

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ 20 ಬಂಡಾಯ ಸಂಸದರಿಗೆ ಲೋಕಸಭಾ ಸಚಿವಾಲಯವು ನೋಟಿಸ್ ಜಾರಿ ಮಾಡಿದ್ದು, ಏಳು ದಿನಗಳ ಒಳಗಾಗಿ ಸೂಕ್ತ ಉತ್ತರ ನೀಡುವಂತೆ ಸೂಚಿಸಿದೆ. ಪಕ್ಷಾಂತರ ಕಾಯ್ದೆಯಡಿ ಸಂಸದರ ಅನರ್ಹತೆ ಪ್ರಕ್ರಿಯೆಗಳನ್ನು...

ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ನ್ಯೂಯಾರ್ಕ್ ಮೇಯರ್ ವಿರೋಧ: ಸಂಘದ ‘ಹೊರಗಿಡುವ ದೃಷ್ಟಿಕೋನ’ ಖಂಡಿಸಿದ ಮಮ್ದಾನಿ

ಅಮೆರಿಕದ ನ್ಯೂಯಾರ್ಕ್ ನಗರದ ಅತ್ಯಂತ ಪ್ರಸಿದ್ಧ ಹಾಗೂ ಐತಿಹಾಸಿಕ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಉಪಸ್ಥಿತಿಯಲ್ಲಿ ಆಯೋಜಿಸಲಾಗಿರುವ ಬೃಹತ್ ಭಾರತೀಯ ಮೂಲದವರ ಸಮಾವೇಶವು...

ಕರ್ನಾಟಕದಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಕರ್ನಾಟಕದಲ್ಲಿ ಇನ್ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಇಂಡಿಯಾ ಟುಡೇ ರೌಂಡ್‌ಟೇಬಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ...

ಬೀದಿ ಬದಿ ವ್ಯಾಪಾರಿಗಳ ತೆರವು ಅಕ್ರಮ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ

ಮಂಗಳೂರಿನ ಟೌನ್ ಹಾಲ್ ಸಮೀಪ ನಡೆಯುವ ಸಂಡೇ ಬಜಾರ್‌ನಲ್ಲಿ ಪಾದಚಾರಿ ಮಾರ್ಗದ ಬಳಿ ಇದ್ದ ಬೀದಿ ವ್ಯಾಪಾರಿಗಳನ್ನು ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಏಕಾಏಕಿ ತೆರವುಗೊಳಿಸಲು ಮುಂದಾಗಿದ್ದರು. ಇದನ್ನು ದಕ್ಷಿಣ ಕನ್ನಡ ಜಿಲ್ಲಾ...

ತೆಲಂಗಾಂಣ | ಹೈದರಾಬಾದ್‌-ವಿಜಯವಾಡ ಹೆದ್ದಾರಿಯಲ್ಲಿ ಭೀಕರ ಅಪಘಾತ: 6 ಮಂದಿ ಸಾವು; ಹಲವರಿಗೆ ಗಾಯ

ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯಲ್ಲಿ ಬುಧವಾರ (ಆ.26) ಮುಂಜಾನೆ ಖಾಸಗಿ ಎಲೆಕ್ಟ್ರಿಕ್ ಬಸ್‌ವೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 12 ಜನರು ಗಾಯಗೊಂಡಿದ್ದಾರೆ...