Homeಮುಖಪುಟಮದ್ಯ ನಿಷೇಧ ಬಿಹಾರದಲ್ಲಿ ನಕಲಿ ಮದ್ಯ ಸೇವಿಸಿ 7 ಜನರು ಸಾವು!

ಮದ್ಯ ನಿಷೇಧ ಬಿಹಾರದಲ್ಲಿ ನಕಲಿ ಮದ್ಯ ಸೇವಿಸಿ 7 ಜನರು ಸಾವು!

- Advertisement -
- Advertisement -

ಮದ್ಯ ನಿಷೇಧ ಇರುವ ರಾಜ್ಯವಾದ ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಸಂಭವಿಸಿದ ಶಂಕಿತ ನಕಲಿ ಮದ್ಯ ದುರಂತದಲ್ಲಿ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಅಸ್ವಸ್ಥರಾಗಿದ್ದಾರೆ ಎಂದು ವರದಿಯಾಗಿದೆ. ಒಂದು ದಿನದ ಹಿಂದೆಯಷ್ಟೆ, ನೆರೆಯ ಸರನ್ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವಿಸಿ ಒಬ್ಬರು ಸಾವನ್ನಪ್ಪಿದರು ಮತ್ತು ಇನ್ನೊಬ್ಬರು ಅಸ್ವಸ್ಥರಾಗಿದ್ದರು.

ಮಂಗಳವಾರ ತಡರಾತ್ರಿ ಸಿವಾನ್ ಜಿಲ್ಲೆಯ ಭಗವಾನ್‌ಪುರ ಪೊಲೀಸ್ ವ್ಯಾಪ್ತಿಯ ಮಧಾರ್ ಗ್ರಾಮದಲ್ಲಿ ನಕಲಿ ಮದ್ಯ ಸೇವಿಸಿ ಏಳು ಮಂದಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಕಚೇರಿಗೆ ವರದಿಗಳು ತಿಳಿಸಿವೆ. ಇನ್ನಿಬ್ಬರು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮದ್ಯ ನಿಷೇಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಂತ್ರಸ್ತರು ಅಂಗಡಿಯೊಂದರಲ್ಲಿ ಜಮಾಯಿಸಿ ಸಂಜೆ ವೇಳೆ ಮದ್ಯ ಸೇವಿಸಿದ್ದಾರೆ. ಮನೆಗೆ ತಲುಪಿದ ನಂತರ ದೃಷ್ಟಿ ನಷ್ಟ, ವಾಂತಿ ಮತ್ತು ಹೊಟ್ಟೆ ನೋವು ಎಂದು ಅಸ್ವಸ್ಥರಾಗಿದ್ದಾರೆ. ಚಿಕಿತ್ಸೆ ವೇಳೆ ಆರು ಮಂದಿ ಮೃತಪಟ್ಟರೆ, ಏಳನೇ ವ್ಯಕ್ತಿ ಪಾಟ್ನಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ (ಪಿಎಂಸಿಎಚ್) ಸಾಗಿಸುವ ದಾರಿಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ.

ಅರವಿಂದ್ ಸಿಂಗ್ (40), ರಾಮೇಂದ್ರ ಸಿಂಗ್ (30), ಸಂತೋಷ್ ಮಹ್ತೋ (35), ಮುನ್ನಾ (32) ಮತ್ತು ಬ್ರಿಜ್ ಮೋಹನ್ ಸಿಂಗ್ (38) ಅವರು ಸ್ಥಳೀಯ ಖಾಸಗಿ ಕ್ಲಿನಿಕ್‌ನಲ್ಲಿ ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದಾರೆ, ಮಧಾರ್ ಗ್ರಾಮದ ನಿವಾಸಿ ಮೋಹನ್ ಶಾ (28) PMCH ಗೆ ಹೋಗುವ ದಾರಿಯಲ್ಲಿ ಕೊನೆಯುಸಿರೆಳೆದಿದ್ದಾರೆ. ಉಳಿದ ಇಬ್ಬರು ಮೃತರು ಬಿಲಾಸ್‌ಪುರ ಮತ್ತು ಸರ್ಸಯ್ಯಾ ಗ್ರಾಮದ ನಿವಾಸಿಗಳಾಗಿದ್ದು, ಮಾಧರ್ ಗ್ರಾಮದಲ್ಲಿ ಅಕ್ರಮ ಮದ್ಯ ಸೇವಿಸಿದ ಗುಂಪಿನ ಭಾಗವಾಗಿದ್ದರು.

ಮಂಗಳವಾರ ತಡರಾತ್ರಿ ಅರವಿಂದ್ ಸಿಂಗ್ ಅವರ ಕುಟುಂಬ ಸದಸ್ಯರು ಅಂತ್ಯಕ್ರಿಯೆ ನೆರವೇರಿಸಿದರು ಎಂದು ಮೂಲಗಳು ತಿಳಿಸಿವೆ. ಹೊಸ ನಿಷೇಧ ಕಾನೂನಿನ ಅಡಿಯಲ್ಲಿ ಬಿಹಾರದಲ್ಲಿ ಮದ್ಯದ ಉತ್ಪಾದನೆ, ಮಾರಾಟ, ಬಳಕೆ ಮತ್ತು ಸಂಗ್ರಹಣೆಯನ್ನು ಸಂಪೂರ್ಣವಾಗಿ ನಿಷೇಧಿಸಿರುವುದರಿಂದ ಸಿವಾನ್‌ನ ಹಿರಿಯ ಅಧಿಕಾರಿಗಳು ಘಟನೆಯ ಬಗ್ಗೆ ಬಾಯಿ ಮುಚ್ಚಿಕೊಂಡಿದ್ದಾರೆ ಎಂದು ವರದಿ ಹೇಳಿದೆ.

ರಾಜ್ಯದಲ್ಲಿ 2016ರಲ್ಲಿ ನಿಷೇಧಾಜ್ಞೆ ಜಾರಿಗೆ ಬಂದಿದೆ. ಘಟನೆ ಈ ಬಗ್ಗೆ ವಿಚಾರಣೆ ನಡೆಸಲು ಗ್ರಾಮಕ್ಕೆ ತಂಡವನ್ನು ಕಳುಹಿಸಲಾಗಿದೆ ಎಂದು ಸಿವಾನ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಮುಕುಲ್ ಕುಮಾರ್ ಗುಪ್ತಾ ತಿಳಿಸಿದ್ದಾರೆ. “ಮಧಾರ್ ಗ್ರಾಮದಲ್ಲಿ ಕೆಲವು ಜನರ ಸಾವಿಗೀಡಾಗಿರುವ ಬಗ್ಗೆ ವರದಿಗಳು ನಮಗೆ ಬಂದಿವೆ. ಸಾವಿನ ಕಾರಣ ಇನ್ನೂ ಪತ್ತೆಯಾಗಿಲ್ಲ,” ಎಂದು ಅವರು ಹೇಳಿದ್ದಾರೆ.

ಒಂದು ದಿನದ ಹಿಂದೆ, ಸರನ್ ಜಿಲ್ಲೆಯ ಮಸಾರಖ್‌ನಲ್ಲಿ ಅಕ್ರಮ ಮದ್ಯ ಸೇವಿಸಿ ಒಬ್ಬರು ಸಾವನ್ನಪ್ಪಿದರು ಮತ್ತು ಇನ್ನೊಬ್ಬರು ಅಸ್ವಸ್ಥರಾಗಿದ್ದರು. ಮೃತರನ್ನು ಇಬ್ರಾಹಿಂಪುರ ಕೈಯಾ ಗ್ರಾಮದ ನಿವಾಸಿ ಇಸ್ಮಾಯಿಲುದ್ದೀನ್ ಎಂದು ಗುರುತಿಸಲಾಗಿದೆ. ಇನ್ನೋರ್ವ ಸಂತ್ರಸ್ತೆ ಮಸರಖ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ಮಸೀದಿ ಬಳಿ ‘ಜೈ ಶ್ರೀರಾಮ್’ ಘೋಷಣೆ ಕೂಗುವುದರಿಂದ ಧಾರ್ಮಿಕ ಭಾವನೆಗಳಿಗೆ ಘಾಸಿಯಾಗುವುದಿಲ್ಲ: ಕರ್ನಾಟಕ ಹೈಕೋರ್ಟ್

ಮಸೀದಿ ಬಳಿ ‘ಜೈ ಶ್ರೀರಾಮ್’ ಘೋಷಣೆ ಕೂಗುವುದರಿಂದ ಧಾರ್ಮಿಕ ಭಾವನೆಗಳಿಗೆ ಘಾಸಿಯಾಗುವುದಿಲ್ಲ: ಕರ್ನಾಟಕ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...