ಮದ್ಯ ನಿಷೇಧ ಇರುವ ರಾಜ್ಯವಾದ ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಸಂಭವಿಸಿದ ಶಂಕಿತ ನಕಲಿ ಮದ್ಯ ದುರಂತದಲ್ಲಿ ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಅಸ್ವಸ್ಥರಾಗಿದ್ದಾರೆ ಎಂದು ವರದಿಯಾಗಿದೆ. ಒಂದು ದಿನದ ಹಿಂದೆಯಷ್ಟೆ, ನೆರೆಯ ಸರನ್ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವಿಸಿ ಒಬ್ಬರು ಸಾವನ್ನಪ್ಪಿದರು ಮತ್ತು ಇನ್ನೊಬ್ಬರು ಅಸ್ವಸ್ಥರಾಗಿದ್ದರು.
ಮಂಗಳವಾರ ತಡರಾತ್ರಿ ಸಿವಾನ್ ಜಿಲ್ಲೆಯ ಭಗವಾನ್ಪುರ ಪೊಲೀಸ್ ವ್ಯಾಪ್ತಿಯ ಮಧಾರ್ ಗ್ರಾಮದಲ್ಲಿ ನಕಲಿ ಮದ್ಯ ಸೇವಿಸಿ ಏಳು ಮಂದಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಕಚೇರಿಗೆ ವರದಿಗಳು ತಿಳಿಸಿವೆ. ಇನ್ನಿಬ್ಬರು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮದ್ಯ ನಿಷೇಧ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಸಂತ್ರಸ್ತರು ಅಂಗಡಿಯೊಂದರಲ್ಲಿ ಜಮಾಯಿಸಿ ಸಂಜೆ ವೇಳೆ ಮದ್ಯ ಸೇವಿಸಿದ್ದಾರೆ. ಮನೆಗೆ ತಲುಪಿದ ನಂತರ ದೃಷ್ಟಿ ನಷ್ಟ, ವಾಂತಿ ಮತ್ತು ಹೊಟ್ಟೆ ನೋವು ಎಂದು ಅಸ್ವಸ್ಥರಾಗಿದ್ದಾರೆ. ಚಿಕಿತ್ಸೆ ವೇಳೆ ಆರು ಮಂದಿ ಮೃತಪಟ್ಟರೆ, ಏಳನೇ ವ್ಯಕ್ತಿ ಪಾಟ್ನಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ (ಪಿಎಂಸಿಎಚ್) ಸಾಗಿಸುವ ದಾರಿಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ.
ಅರವಿಂದ್ ಸಿಂಗ್ (40), ರಾಮೇಂದ್ರ ಸಿಂಗ್ (30), ಸಂತೋಷ್ ಮಹ್ತೋ (35), ಮುನ್ನಾ (32) ಮತ್ತು ಬ್ರಿಜ್ ಮೋಹನ್ ಸಿಂಗ್ (38) ಅವರು ಸ್ಥಳೀಯ ಖಾಸಗಿ ಕ್ಲಿನಿಕ್ನಲ್ಲಿ ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದಾರೆ, ಮಧಾರ್ ಗ್ರಾಮದ ನಿವಾಸಿ ಮೋಹನ್ ಶಾ (28) PMCH ಗೆ ಹೋಗುವ ದಾರಿಯಲ್ಲಿ ಕೊನೆಯುಸಿರೆಳೆದಿದ್ದಾರೆ. ಉಳಿದ ಇಬ್ಬರು ಮೃತರು ಬಿಲಾಸ್ಪುರ ಮತ್ತು ಸರ್ಸಯ್ಯಾ ಗ್ರಾಮದ ನಿವಾಸಿಗಳಾಗಿದ್ದು, ಮಾಧರ್ ಗ್ರಾಮದಲ್ಲಿ ಅಕ್ರಮ ಮದ್ಯ ಸೇವಿಸಿದ ಗುಂಪಿನ ಭಾಗವಾಗಿದ್ದರು.
ಮಂಗಳವಾರ ತಡರಾತ್ರಿ ಅರವಿಂದ್ ಸಿಂಗ್ ಅವರ ಕುಟುಂಬ ಸದಸ್ಯರು ಅಂತ್ಯಕ್ರಿಯೆ ನೆರವೇರಿಸಿದರು ಎಂದು ಮೂಲಗಳು ತಿಳಿಸಿವೆ. ಹೊಸ ನಿಷೇಧ ಕಾನೂನಿನ ಅಡಿಯಲ್ಲಿ ಬಿಹಾರದಲ್ಲಿ ಮದ್ಯದ ಉತ್ಪಾದನೆ, ಮಾರಾಟ, ಬಳಕೆ ಮತ್ತು ಸಂಗ್ರಹಣೆಯನ್ನು ಸಂಪೂರ್ಣವಾಗಿ ನಿಷೇಧಿಸಿರುವುದರಿಂದ ಸಿವಾನ್ನ ಹಿರಿಯ ಅಧಿಕಾರಿಗಳು ಘಟನೆಯ ಬಗ್ಗೆ ಬಾಯಿ ಮುಚ್ಚಿಕೊಂಡಿದ್ದಾರೆ ಎಂದು ವರದಿ ಹೇಳಿದೆ.
ರಾಜ್ಯದಲ್ಲಿ 2016ರಲ್ಲಿ ನಿಷೇಧಾಜ್ಞೆ ಜಾರಿಗೆ ಬಂದಿದೆ. ಘಟನೆ ಈ ಬಗ್ಗೆ ವಿಚಾರಣೆ ನಡೆಸಲು ಗ್ರಾಮಕ್ಕೆ ತಂಡವನ್ನು ಕಳುಹಿಸಲಾಗಿದೆ ಎಂದು ಸಿವಾನ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಮುಕುಲ್ ಕುಮಾರ್ ಗುಪ್ತಾ ತಿಳಿಸಿದ್ದಾರೆ. “ಮಧಾರ್ ಗ್ರಾಮದಲ್ಲಿ ಕೆಲವು ಜನರ ಸಾವಿಗೀಡಾಗಿರುವ ಬಗ್ಗೆ ವರದಿಗಳು ನಮಗೆ ಬಂದಿವೆ. ಸಾವಿನ ಕಾರಣ ಇನ್ನೂ ಪತ್ತೆಯಾಗಿಲ್ಲ,” ಎಂದು ಅವರು ಹೇಳಿದ್ದಾರೆ.
ಒಂದು ದಿನದ ಹಿಂದೆ, ಸರನ್ ಜಿಲ್ಲೆಯ ಮಸಾರಖ್ನಲ್ಲಿ ಅಕ್ರಮ ಮದ್ಯ ಸೇವಿಸಿ ಒಬ್ಬರು ಸಾವನ್ನಪ್ಪಿದರು ಮತ್ತು ಇನ್ನೊಬ್ಬರು ಅಸ್ವಸ್ಥರಾಗಿದ್ದರು. ಮೃತರನ್ನು ಇಬ್ರಾಹಿಂಪುರ ಕೈಯಾ ಗ್ರಾಮದ ನಿವಾಸಿ ಇಸ್ಮಾಯಿಲುದ್ದೀನ್ ಎಂದು ಗುರುತಿಸಲಾಗಿದೆ. ಇನ್ನೋರ್ವ ಸಂತ್ರಸ್ತೆ ಮಸರಖ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ: ಮಸೀದಿ ಬಳಿ ‘ಜೈ ಶ್ರೀರಾಮ್’ ಘೋಷಣೆ ಕೂಗುವುದರಿಂದ ಧಾರ್ಮಿಕ ಭಾವನೆಗಳಿಗೆ ಘಾಸಿಯಾಗುವುದಿಲ್ಲ: ಕರ್ನಾಟಕ ಹೈಕೋರ್ಟ್
ಮಸೀದಿ ಬಳಿ ‘ಜೈ ಶ್ರೀರಾಮ್’ ಘೋಷಣೆ ಕೂಗುವುದರಿಂದ ಧಾರ್ಮಿಕ ಭಾವನೆಗಳಿಗೆ ಘಾಸಿಯಾಗುವುದಿಲ್ಲ: ಕರ್ನಾಟಕ ಹೈಕೋರ್ಟ್


