Homeಮುಖಪುಟಆಕಾಶ ಏರ್, ಇಂಡಿಗೋ ವಿಮಾನಗಳಿಗೆ ಬಾಂಬ್ ಬೆದರಿಕೆ, 3 ದಿನಗಳಲ್ಲಿ 12ನೇ ಘಟನೆ

ಆಕಾಶ ಏರ್, ಇಂಡಿಗೋ ವಿಮಾನಗಳಿಗೆ ಬಾಂಬ್ ಬೆದರಿಕೆ, 3 ದಿನಗಳಲ್ಲಿ 12ನೇ ಘಟನೆ

- Advertisement -
- Advertisement -

ದೇಶದಾದ್ಯಂತ ಕಳೆದ ಮೂರು ದಿನಗಳಲ್ಲಿ ಸತತವಾಗಿ 12ನೇ ವಿಮಾನಕ್ಕೆ ಬಾಂಬ್ ದಾಳಿ ಬೆದರಿಕೆ ಕರೆಗಳು ಬಂದಿವೆ ಮಾಧ್ಯಮಗಳು ವರದಿ ಮಾಡಿವೆ. ಬುಧವಾರದಂದು ಆಕಾಶ ಏರ್ ಮತ್ತು ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆಗಳನ್ನು ಮಾಡಲಾಗಿದ್ದು, ತೀವ್ರ ಆತಂಕ ಸೃಷ್ಟಿಯಾಗಿತ್ತು. ಆದರೆ ತನಿಖೆಯ ವೇಳೆ ಇದು ಸುಳ್ಳು ಕರೆಗಳು ಎಂದು ತಿಳಿದುಬಂದಿದೆ ಎಂದು ವರದಿಗಳು ಉಲ್ಲೇಖಿಸಿವೆ.

ಇದಕ್ಕೂ ಮುನ್ನ ಮುಂಬೈನಿಂದ ದೆಹಲಿಗೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಸಾಮಾಜಿಕ ಜಾಲತಾಣಗಳ ಮೂಲಕ ಹುಸಿ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಅಹಮದಾಬಾದ್‌ಗೆ ಮಾರ್ಗ ಬದಲಿಸಲಾಗಿತ್ತು. ಸುಮಾರು 200 ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಹೊತ್ತ ವಿಮಾನ ಮಂಗಳವಾರ ರಾತ್ರಿ ಮುಂಬೈನಿಂದ ಹೊರಟಿತ್ತು. ಬುಧವಾರ ಈ ಬೆದರಿಕೆ ಸುಳ್ಳು ಎಂದು ದೃಢಪಟ್ಟಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಇಂದು ಬೆಂಗಳೂರಿಗೆ ಹೊರಟಿದ್ದ ಆಕಾಶ ಏರ್‌ ವಿಮಾನಕ್ಕೆ ಬಾಂಬ್‌ ಬೆದರಿಕೆ ಬಂದಿದ್ದರಿಂದ ದೆಹಲಿಗೆ ವಾಪಸ್‌ ಕಳುಹಿಸಲಾಯಿತು. 184 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಫ್ಲೈಟ್ QP1335, ದೆಹಲಿಯಿಂದ ಟೇಕ್ ಆಫ್ ಆಗಿದ್ದು, ಮಧ್ಯಾಹ್ನ 1:15 ಕ್ಕೆ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಯಿತು. ನಂತರ ವಿಮಾನವನ್ನು ರಾಷ್ಟ್ರ ರಾಜಧಾನಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು. ಅದಾಗ್ಯೂ ಈ ಬೆದರಿಕೆ ಕರೆ ಕೂಡಾ ಸುಳ್ಳು ಎಂದು ತನಿಖೆಯ ವೇಳೆ ತಿಳಿದು ಬಂದಿದೆ.

“ಅಕಾಸ ಏರ್ ಫ್ಲೈಟ್ QP 1335, ಅಕ್ಟೋಬರ್ 16, 2024 ರಂದು ದೆಹಲಿಯಿಂದ ಬೆಂಗಳೂರಿಗೆ ಹಾರುತ್ತಿದ್ದಾಗ ಬೆದರಿಕೆ ಕರೆ ಸ್ವೀಕರಿಸಲಾಗಿತ್ತು. ಅದರಲ್ಲಿ 174 ಪ್ರಯಾಣಿಕರು, ಮೂರು ಶಿಶುಗಳು ಮತ್ತು ಏಳು ಸಿಬ್ಬಂದಿ ಇದ್ದರು. ಈ ವೇಳೆ ಆಕಾಶ ಏರ್ ತುರ್ತು ಪ್ರತಿಕ್ರಿಯೆ ತಂಡಗಳು ಎಲ್ಲಾ ಬೆಂಬಲವನ್ನು ಖಚಿತಪಡಿಸಿಕೊಳ್ಳಲು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಿದೆ. ಕಾರ್ಯಾಚರಣಾ ತಂಡಗಳಿಗೆ ಒದಗಿಸಲಾಗಿದೆ ಮತ್ತು ಸಂಬಂಧಿತ ಮಧ್ಯಸ್ಥಗಾರರಿಗೆ ಮಾಹಿತಿಯನ್ನು ಪಾರದರ್ಶಕವಾಗಿ ಪ್ರಸಾರ ಮಾಡಲಾಗಿದೆ” ಎಂದು ಆಕಾಶ ಏರ್ ವಕ್ತಾರರು ತಿಳಿಸಿದ್ದಾರೆ.

“ಕ್ಯಾಪ್ಟನ್ ಅಗತ್ಯವಿರುವ ಎಲ್ಲಾ ತುರ್ತು ವಿಧಾನಗಳನ್ನು ಅನುಸರಿಸಿದರು, ವಿಮಾನವನ್ನು ದೆಹಲಿಗೆ ಹಿಂತಿರುಗಿಸಿದರು ಮತ್ತು ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಧ್ಯಾಹ್ನ 1:48 ಕ್ಕೆ ಸುರಕ್ಷಿತವಾಗಿ ಇಳಿದರು” ಎಂದು ಅದು ಹೇಳಿದೆ.

“ನಿಗದಿತ ಸುರಕ್ಷತೆ ಮತ್ತು ಭದ್ರತಾ ಕಾರ್ಯವಿಧಾನಗಳ ಪ್ರಕಾರ, ವಿಮಾನವನ್ನು ಲ್ಯಾಂಡಿಂಗ್ ನಂತರ ಪ್ರತ್ಯೇಕ ಸ್ಥಳಕ್ಕೆ ಕೊಂಡೊಯ್ಯಲಾಯಿತು. ಅಗತ್ಯ ಸುರಕ್ಷತೆ ಮತ್ತು ಭದ್ರತೆಯನ್ನು ಕೈಗೊಂಡ ಸ್ಥಳೀಯ ಅಧಿಕಾರಿಗಳ ಸಮನ್ವಯದಲ್ಲಿ ಎಲ್ಲಾ ಪ್ರಯಾಣಿಕರನ್ನು ಮಧ್ಯಾಹ್ನ 1:57 ಕ್ಕೆ ಇಳಿಸಲಾಯಿತು” ಎಂದು ಕಂಪನಿ ಹೇಳಿದೆ.

ಕಳೆದ 48 ಗಂಟೆಗಳಲ್ಲಿ 10 ವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆ

ಮಂಗಳವಾರ, ದೆಹಲಿ-ಶಿಕಾಗೋ ಏರ್ ಇಂಡಿಯಾ ವಿಮಾನ, ಜೈಪುರ-ಬೆಂಗಳೂರು ಏರ್ ಇಂಡಿಯಾ ಎಕ್ಸ್‌ಪ್ರೆಸ್, ದಮಾಮ್-ಲಕ್ನೋ ಇಂಡಿಗೋ ವಿಮಾನ, ದರ್ಭಾಂಗ-ಮುಂಬೈ ಸ್ಪೈಸ್‌ಜೆಟ್ ವಿಮಾನ, ಸಿಲಿಗುರಿ-ಬೆಂಗಳೂರು ಆಕಾಶ ಏರ್ ವಿಮಾನ, ಅಲಯನ್ಸ್ ಏರ್ ಅಮೃತಸರ-ಡೆಹ್ರಾಡೂನ್-ದೆಹಲಿ ವಿಮಾನ ಮತ್ತು ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಮಧುರೈನಿಂದ ಸಿಂಗಾಪುರಕ್ಕೆ ಹೊರಟಿದ್ದ ಏಳು ವಿಮಾನಗಳಿಗೆ ಬಾಂಬ್ ಬೆದರಿಕೆ ಬಂದಿತ್ತು.

ಸೋಮವಾರ ಎರಡು ಇಂಡಿಗೋ ವಿಮಾನಗಳು ಮತ್ತು ಏರ್ ಇಂಡಿಯಾ ವಿಮಾನಕ್ಕೆ ಇದೇ ರೀತಿಯ ಹುಸಿ ಬಾಂಬ್ ಬೆದರಿಕೆ ಬಂದಿತ್ತು. ಅವುಗಳಲ್ಲಿ ಒಂದು ಮುಂಬೈ-ನ್ಯೂಯಾರ್ಕ್ ಏರ್ ಇಂಡಿಯಾ ವಿಮಾನ, ಇನ್ನೊಂದು ಮಸ್ಕತ್‌ಗೆ ಹೋಗುವ ಇಂಡಿಗೋ ವಿಮಾನ ಮತ್ತು ಮತ್ತೊಂದು ಇಂಡಿಗೋ ವಿಮಾನ ಜಿದ್ದಾಕ್ಕೆ ಹೋಗುತ್ತಿತ್ತು.

ಇದನ್ನೂ ಓದಿ: ಉತ್ತರ ಪ್ರದೇಶ | ಬಾರ್ ಮಾಲೀಕನಿಂದ ಬಿಜೆಪಿ ಶಾಸಕನಿಗೆ ಹಲ್ಲೆ

ಉತ್ತರ ಪ್ರದೇಶ | ಬಾರ್ ಮಾಲೀಕನಿಂದ ಬಿಜೆಪಿ ಶಾಸಕನಿಗೆ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...