Homeಮುಖಪುಟಉತ್ತರಾಖಂಡ | ಕೋಮುಗಲಭೆಗೆ ತಿರುಗಿದ ಪಾರ್ಕಿಂಗ್ ಜಗಳ!

ಉತ್ತರಾಖಂಡ | ಕೋಮುಗಲಭೆಗೆ ತಿರುಗಿದ ಪಾರ್ಕಿಂಗ್ ಜಗಳ!

- Advertisement -
- Advertisement -

ಮಂಗಳವಾರ ಉತ್ತರಾಖಂಡದ ಚಮೋಲಿ ಜಿಲ್ಲೆಯ ಗೌಚಾರ್ ಮಾರುಕಟ್ಟೆಯಲ್ಲಿ ವಿವಿಧ ಸಮುದಾಯಗಳ ಇಬ್ಬರು ಯುವಕರ ನಡುವೆ ವಾಹನ ನಿಲುಗಡೆಗೆ ಸಂಬಂಧಿಸಿದಂತೆ ಪ್ರಾರಂಭವಾದ ವಾಗ್ವಾದವು ಕೋಮು ಹಿಂಸಾಚಾರಕ್ಕೆ ತಿರುಗಿದೆ. ಹಿಂಸಾಚಾರದಲ್ಲಿ ಅಂಗಡಿಗಳನ್ನು ಧ್ವಂಸಗೊಳಿಸಿ, ಸೂಚನಾ ಫಲಕಗಳನ್ನು ಹಾನಿಗೊಳಿಸಲಾಗಿದೆ ಎಂದು ವರದಿಯಾಗಿದೆ. ನಾಗರಿಕರಿಗೆ ಶಾಂತ ರೀತಿಯಲ್ಲಿ ವರ್ತಿಸುವಂತೆ ಪೊಲೀಸರು ಹೇಳಿಕೊಂಡಿದ್ದರೂ, ಆ ಪ್ರದೇಶದಲ್ಲಿ ನಿಯೋಜನೆಯನ್ನು ಹೆಚ್ಚಿಸಲಾಗಿದೆ ಎಂದು ವರದಿ ಹೇಳಿದೆ. ಉತ್ತರಾಖಂಡ

“ಕರ್ಣಪ್ರಯಾಗ ಪೊಲೀಸ್ ಠಾಣಾ ವ್ಯಾಪ್ತಿಯ ಗೌಚಾರ್‌ನಲ್ಲಿರುವ ಅಂಗಡಿಯೊಂದರ ಮುಂದೆ ಸ್ಕೂಟರ್ ನಿಲ್ಲಿಸುವ ವಿವಾದದ ನಂತರ ಇಬ್ಬರು ಯುವಕರ ನಡುವೆ ಮಾರಾಮಾರಿ ನಡೆದಿದೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದು, ಚಿಕಿತ್ಸೆಗಾಗಿ ಎರಡೂ ಕಡೆಯವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ” ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಸ್ಥಳೀಯ ಹಿಂದೂ ವ್ಯಕ್ತಿಯೊರೊಬ್ಬರು ಮುಸ್ಲಿಂ ಅಂಗಡಿ ಮಾಲೀಕರ ಮುಂದೆ ಸ್ಕೂಟರ್ ನಿಲ್ಲಿಸುತ್ತಿದ್ದಾಗ ಮಂಗಳವಾರ ಬೆಳಗ್ಗೆ 9.30ರ ಸುಮಾರಿಗೆ ಈ ಘಟನೆ ನಡೆದಿದೆ. ಅಂಗಡಿ ಮಾಲೀಕರು ವಾಹನವನ್ನು ನಿಲ್ಲಿಸದಂತೆ ವ್ಯಕ್ತಿಯನ್ನು ಕೇಳಿದಾಗ ವಾಗ್ವಾದ ಪ್ರಾರಂಭವಾಯಿತು. ಈ ವೇಳೆ ಹಿಂದೂ ವ್ಯಕ್ತಿಯನ್ನು ಥಳಿಸಲಾಗಿದೆ” ಎಂದು ಪೊಲೀಸ್ ವರಿಷ್ಠಾಧಿಕಾರಿ ಸರ್ವೇಶ್ ಪನ್ವಾರ್ ಹೇಳಿದ್ದಾರೆ.

“ಹಲ್ಲೆಗೊಳಗಾದ ವ್ಯಕ್ತಿ ಪೊಲೀಸರ ಮೊರೆ ಹೋಗಿದ್ದು, ವೈದ್ಯಕೀಯ ತಪಾಸಣೆಗೆ ಕಳುಹಿಸಲಾಗಿದೆ. ಆದಾಗ್ಯೂ, ಕೆಲವು ಸಂಘಟನೆಗಳ ಸದಸ್ಯರು ಜಮಾಯಿಸಿ ಪ್ರತಿಭಟನೆ ನಡೆಸಿದರು” ಎಂದು ಪೊಲೀಸ್  ಅಧಿಕಾರಿ ಹೇಳಿದ್ದಾರೆ. ಈ ವೇಳೆ ಗುಂಪು ಗದ್ದಲವನ್ನು ಸೃಷ್ಟಿಸಿದ್ದು, ಕೆಲವು ಅಂಗಡಿಗಳನ್ನು ಧ್ವಂಸಗೊಳಿಸಿ ಸೂಚನಾ ಫಲಕಗಳನ್ನು ಹಾನಿಗೊಳಿಸಿದೆ. ಮಧ್ಯಾಹ್ನ 2 ಗಂಟೆಯವರೆಗೂ ಗಲಾಟೆ ನಡೆದಿದ್ದು, ಗಾಯಗೊಂಡ ಕೆಲವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

“ಜಗಳದ ನಂತರ, ಗೌಚಾರ್ ಔಟ್‌ಪೋಸ್ಟ್‌ನಲ್ಲಿ ಎರಡು ಸಮುದಾಯಗಳ ದೊಡ್ಡ ಗುಂಪು ಜಮಾಯಿಸಿದ್ದು, ಪ್ರದೇಶದಲ್ಲಿ ಉದ್ವಿಗ್ನತೆಗೆ ಸೃಷ್ಟಿಯಾಗಿತ್ತು. ಪೊಲೀಸರು ಎರಡೂ ಗುಂಪುಗಳನ್ನು ಸಮಾಧಾನಪಡಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದರು. ಕ್ಷಿಪ್ರವಾಗಿ ಕಾರ್ಯನಿರ್ವಹಿಸಿದ ಪೊಲೀಸರು ಆರೋಪಿಗಳಾದ ರಿಜ್ವಾನ್, ಸಲ್ಮಾನ್, ಆಸಿಫ್ ಮತ್ತು 70-80 ಅಪರಿಚಿತ ವ್ಯಕ್ತಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 115 (2), 191 (2), ಮತ್ತು 352 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ” ಎಂದು ಚಮೋಲಿ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುವ್ಯವಸ್ಥೆ ಕಾಪಾಡಲು ನಗರದಾದ್ಯಂತ ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ. ಕೋಮು ಸೌಹಾರ್ದತೆಯನ್ನು ಎತ್ತಿಹಿಡಿಯಬೇಕು, ಸಂಯಮದಿಂದ ವರ್ತಿಸಬೇಕು ಮತ್ತು ಸಹೋದರತ್ವವನ್ನು ಉತ್ತೇಜಿಸಬೇಕು ಎಂದು ಎಸ್ಪಿ ಪನ್ವಾರ್ ನಾಗರಿಕರನ್ನು ಒತ್ತಾಯಿಸಿದ್ದಾರೆ. ಹೆಚ್ಚುವರಿಯಾಗಿ, ಭಾರತೀಯ ನ್ಯಾಯ ಸುರಕ್ಷಾ ಸಂಹಿತೆಯ (BNSS) ಸೆಕ್ಷನ್ 163 ಅನ್ನು ಗೌಚಾರ್‌ನಾದ್ಯಂತ ವಿಧಿಸಲಾಗಿದ್ದು, ಇದು ಶಾಂತಿಯನ್ನು ಕಾಪಾಡುವುದು ಮತ್ತು ಕಾನೂನುಬಾಹಿರ ಸಭೆಗಳನ್ನು ತಡೆಯುತ್ತದೆ.

ಪೊಲೀಸರು ಸಾಮಾಜಿಕ ಜಾಲತಾಣಗಳ ಮೇಲೂ ನಿಗಾ ಇರಿಸಿದ್ದು, ವದಂತಿಗಳನ್ನು ಹಬ್ಬಿಸದಂತೆ ಅಥವಾ ಅಶಾಂತಿಯನ್ನು ಹುಟ್ಟುಹಾಕಲು ಪ್ರಯತ್ನಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

“ಪ್ರಸ್ತುತ, ಸಮಾಜ ವಿರೋಧಿ ಶಕ್ತಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕೋಮು ಸೌಹಾರ್ದತೆಯನ್ನು ಕದಡುವ, ಅಶಾಂತಿಯನ್ನು ಪ್ರಚೋದಿಸುವ ಮತ್ತು ಕೆಲವು ಸಮುದಾಯಗಳ ನಂಬಿಕೆಗಳ ಮೇಲೆ ದಾಳಿ ಮಾಡುವ ಉದ್ದೇಶದಿಂದ ಸಂದೇಶಗಳನ್ನು ಹರಡುತ್ತಿದ್ದಾರೆ. ಇದರಿಂದ ಜನ ಸಾಮಾನ್ಯರಲ್ಲಿ ಅಭದ್ರತೆ, ಭಯದ ವಾತಾವರಣ ಬೆಳೆಯುತ್ತಿದೆ. ಸಮಾಜದೊಳಗೆ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡುವಲ್ಲಿ ತಮ್ಮ ಅಮೂಲ್ಯವಾದ ಬೆಂಬಲವನ್ನು ನೀಡುವಂತೆ ಚಮೋಲಿ ಪೊಲೀಸರು ಎಲ್ಲಾ ನಾಗರಿಕರನ್ನು ಕೋರುತ್ತಾರೆ ” ಎಂದು ಚಮೋಲಿ ಪೊಲೀಸರು ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಬರೆದಿದ್ದಾರೆ. ಉತ್ತರಾಖಂಡ

ಇದನ್ನೂ ಓದಿ: ಇಶಾ ಫೌಂಡೇಶನ್ ಸೇರಿದಂತೆ ಧಾರ್ಮಿಕ ಸ್ಥಳಗಳಲ್ಲಿ ಲೈಂಗಿಕ ಕಿರುಕುಳ ಕಾನೂನನ್ನು ಜಾರಿಗೊಳಿಸುವಂತೆ ಕೋರಿ ಸುಪ್ರೀಂಕೋಟ್‌ಗೆ ಅರ್ಜಿ

ಇಶಾ ಫೌಂಡೇಶನ್ ಸೇರಿದಂತೆ ಧಾರ್ಮಿಕ ಸ್ಥಳಗಳಲ್ಲಿ ಲೈಂಗಿಕ ಕಿರುಕುಳ ಕಾನೂನನ್ನು ಜಾರಿಗೊಳಿಸುವಂತೆ ಕೋರಿ ಸುಪ್ರೀಂಕೋಟ್‌ಗೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: ಸರ್ಕಾರಕ್ಕೆ ನಾಲ್ಕು ಪ್ರಮುಖ ಹಕ್ಕೊತ್ತಾಯ, ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ.

ಬಿಡದಿ ಸ್ಮಾರ್ಟ್ ಸಿಟಿ ಅಥವಾ ಟೌನ್‌ಶಿಪ್ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ಬಿಡದಿ ರೈತರು ಹಾಗೂ ಸಂಯುಕ್ತ ಹೋರಾಟದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಮತ್ತು ವಿಧಾನಸೌಧ ಚಲೋ ಹೋರಾಟ...

ತಮಿಳುನಾಡು| ಮರ್ಯಾದೆಗೇಡು ಹತ್ಯೆ ಶಂಕೆ; 25 ವರ್ಷದ ದಲಿತ ಯುವಕನ ಭೀಕರ ಕೊಲೆ

ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನೊಬ್ಬನನ್ನು ಕೊಚ್ಚಿ ಕೊಲೆ ಮಾಡಲಾಗಿದ್ದು, ಮರ್ಯಾದೆಗೇಡು ಕೊಲೆಯ ಶಂಕೆ ವ್ಯಕ್ತವಾಗಿದೆ. ಆಗಸ್ಟ್ 16 ರಂದು ರಾತ್ರಿ ಚೆಂಗಲ್ಪಟ್ಟುವಿನ ಕೇಳಂಬಾಕ್ಕಂ ನಿವಾಸಿ ಪ್ರವೀಣ್ ಅವರ ಮೇಲೆ ದಾಳಿಕೋರರಾದ...

44 ಲಕ್ಷ ಮತದಾರರಿಗೆ ನೋಟಿಸ್: BLA ಗಳಿಗೆ ಪಟ್ಟಿ ನೀಡಿ, ಪಾರದರ್ಶಕತೆ ಕಾಯ್ದುಕೊಳ್ಳಲು ‘ಜಾಗೃತ ಕರ್ನಾಟಕ’ ಒತ್ತಾಯ

ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಪ್ರಕಟಗೊಳ್ಳುತ್ತಿರುವ ಕರಡು ಮತದಾರರ ಪಟ್ಟಿಯಿಂದ ಯಾವುದೇ ಅರ್ಹ ಮತದಾರರ ಹೆಸರು ಕೈಬಿಟ್ಟು ಹೋಗದಂತೆ ಎಚ್ಚರವಹಿಸಬೇಕು ಹಾಗೂ ನೋಟಿಸ್ ಪ್ರಕ್ರಿಯೆಗೆ ಕಾಲಾವಕಾಶ ವಿಸ್ತರಿಸಬೇಕು ಎಂದು ಆಗ್ರಹಿಸಿ ‘ಜಾಗೃತ...

ಕೇರಳ ಬಿಜೆಪಿಗೆ ಹಿರಿಯ ನಟ ಎಸ್. ದೇವನ್ ಗುಡ್‌ಬೈ: ‘ದಳಪತಿ’ ವಿಜಯ್ ಟಿವಿಕೆ ಪಕ್ಷ ಸೇರಲು ಒಲವು!

ಮಲಯಾಳಂ ನಟ ಹಾಗೂ ರಾಜಕಾರಣಿ ಎಸ್. ದೇವನ್ ಅವರು ತಮಿಳುನಾಡಿನ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಪಕ್ಷವನ್ನು ಸೇರಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ಕೇರಳ...

ಮತ್ತೆ ಜೈಲಿನಿಂದ ಹೊರಬಂದ ಅತ್ಯಾಚಾರಿ ರಾಮ್ ರಹೀಮ್! 6 ವರ್ಷದಲ್ಲಿ 17ನೇ ಬಾರಿ ಪೆರೋಲ್

ನವದೆಹಲಿ/ರೋಹ್ಟಕ್: ಇಬ್ಬರು ಮಹಿಳಾ ಶಿಷ್ಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್‌ಗೆ ಹರಿಯಾಣ ಸರ್ಕಾರ ಪುನಃ...

ಎಸ್‌ಐಆರ್‌ ಕರಡು ತಿರಸ್ಕರಿಸಿದ ನಾಗರಿಕ ಸಂಘಟನೆಗಳು; ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ

ಆಗಸ್ಟ್ 24 ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಮತದಾರರ ಎಸ್‌ಐಆರ್‌ ಕರಡು ಪಟ್ಟಿಯನ್ನು ಕರ್ನಾಟಕದ ನಾಗರಿಕ ಸಂಘಟನೆಗಳು ತಿರಸ್ಕರಿಸಿದ್ದು, ಲಕ್ಷಾಂತರ ಮತದಾರರಿಗೆ ನೋಟಿಸ್‌ ಕೊಡಲು ಸಿದ್ಧತೆ ನಡೆಸಿರುವ ಕೇಂದ್ರ ಚುನಾವಣಾ...

‘ಕೇಂದ್ರ ಸರ್ಕಾರ ಜಾತಿ ಗಣತಿಗೆ ರೂಪಿಸಿರುವ ಪ್ರಶ್ನಾವಳಿ ವಿಧಾನ ದಾರಿತಪ್ಪಿಸುವಂತಿವೆ’: ಹೊಸ ಪ್ರಶ್ನಾವಳಿ ರಚಿಸಲು ಪ್ರಧಾನಿ ಮೋದಿಗೆ ಖರ್ಗೆ-ರಾಹುಲ್ ಪತ್ರ

ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ದತ್ತಾಂಶ ಸಂಗ್ರಹಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ರೂಪಿಸಿರುವ ಪ್ರಶ್ನಾವಳಿಯ ವಿಧಾನವು ಅತ್ಯಂತ ದಾರಿತಪ್ಪಿಸುವಂತಿದೆ ಎಂದು ಗಂಭೀರ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭಾ ವಿರೋಧ ಪಕ್ಷದ ನಾಯಕ...

ಪತ್ರಕರ್ತ ಅಭಿಷೇಕ್ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸದಂತೆ ಸುಪ್ರೀಂ ಕೋರ್ಟ್ ಆದೇಶ

ರಾಮ ಮಂದಿರ ದೇಣಿಗೆ ಅಕ್ರಮದ ಕುರಿತು ವರದಿ ಮಾಡಿದ್ದ ಪತ್ರಕರ್ತ ಅಭಿಷೇಕ್ ಉಪಾಧ್ಯಾಯ ಅವರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಂತರ ಆದೇಶ ನೀಡಿದ್ದು,...

2027ರ ಜನಗಣತಿಯಲ್ಲಿ ಪೋಷಕರ ಧರ್ಮ, ಜನ್ಮಸ್ಥಳದ ವಿವರ ಏಕೆ? ಕೇಂದ್ರದ ವಿರುದ್ಧ ಸಿಪಿಐ(ಎಂ) ಆಕ್ರೋಶ

2027ರ ಜನಗಣತಿ ಪ್ರಶ್ನಾವಳಿಯಲ್ಲಿ ಪೋಷಕರ ಧರ್ಮ ಹಾಗೂ ಜನ್ಮಸ್ಥಳದ ಕುರಿತಾದ ವಿವರಗಳನ್ನು ಸಂಗ್ರಹಿಸಲು ಉದ್ದೇಶಿಸಿರುವುದರ ವಿರುದ್ಧ ಸಿಪಿಐ(ಎಂ) ತೀವ್ರ ಆತಂಕ ವ್ಯಕ್ತಪಡಿಸಿದ್ದು, ಈ ಕ್ರಮವು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಜಾರಿಗೆ ತರುವ...

ಟಿಎಂಸಿ ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಶಾಕ್: 20 ಎಂಪಿಗಳಿಗೆ ನೋಟಿಸ್ ಜಾರಿ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೊರೆದು, ಎನ್‌ಸಿಪಿಐ (NCPI) ಎಂಬ ಅಷ್ಟಾಗಿ ಜನಪ್ರಿಯವಲ್ಲದ ಪಕ್ಷದೊಂದಿಗೆ ವಿಲೀನಗೊಂಡು ಎನ್‌ಡಿಎ ಒಕ್ಕೂಟವನ್ನು ಸೇರಿಕೊಂಡಿರುವ 20 ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದೆ. ಟಿಎಂಸಿ ಪ್ರಧಾನ...