Homeಮುಖಪುಟಪ್ರವಾದಿ ಮುಹಮ್ಮದ್ ಬಗ್ಗೆ ಅವಹೇಳನಕಾರಿ ಹೇಳಿಕೆ: ಇಬ್ಬರು ಬಜರಂಗದಳ ನಾಯಕರ ಮೇಲೆ ಪ್ರಕರಣ ದಾಖಲು

ಪ್ರವಾದಿ ಮುಹಮ್ಮದ್ ಬಗ್ಗೆ ಅವಹೇಳನಕಾರಿ ಹೇಳಿಕೆ: ಇಬ್ಬರು ಬಜರಂಗದಳ ನಾಯಕರ ಮೇಲೆ ಪ್ರಕರಣ ದಾಖಲು

- Advertisement -
- Advertisement -

ಸಾರ್ವಜನಿಕ ಸಭೆಯೊಂದರಲ್ಲಿ ಪ್ರವಾದಿ ಮುಹಮ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಲಪಂಥೀಯ ಸಂಘಟನೆ ಬಜರಂಗದಳದ ಇಬ್ಬರು ನಾಯಕರ ವಿರುದ್ಧ ಪ್ರಕರಣ ದಾಖಲಿಸಿರುವ ಘಟನೆ ಪಿಲಿಭಿತ್‌ನಲ್ಲಿ ಎಂದು ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ. ಆರೋಪಿಗಳನ್ನು ಸಂಜಯ್ ಮಿಶ್ರಾ ಮತ್ತು ವಿವೇಕ್ ಮಿಶ್ರಾ ಎಂದು ಗುರುತಿಸಲಾಗಿದೆ.

ಅಫ್ಜಲ್ ಖಾನ್ ಎಂಬುವವರು ಸಲ್ಲಿಸಿದ ದೂರಿನ ಪ್ರಕಾರ, ಅಕ್ಟೋಬರ್ 13 ರಂದು ಇಲ್ಲಿನ ಮಾಧೋತಂಡ ಪಟ್ಟಣದಲ್ಲಿ ಘಟನೆ ಸಂಭವಿಸಿದೆ.

ಸಭೆಯಲ್ಲಿ ಬಜರಂಗದಳದ ಮುಖಂಡರಾದ ಸಂಜಯ್ ಮಿಶ್ರಾ ಮತ್ತು ವಿವೇಕ್ ಮಿಶ್ರಾ ಅವರು ಮುಸ್ಲಿಂ ಸಮುದಾಯಕ್ಕೆ ಪ್ರಚೋದನಕಾರಿ, ಆಕ್ರಮಣಕಾರಿ ಭಾಷಣ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ ಎಂದು ಸರ್ಕಲ್ ಇನ್ಸ್‌ಪೆಕ್ಟರ್ಪು ರನ್‌ಪುರ್ ವಿಶಾಲ್ ಚೌಧರಿ ತಿಳಿಸಿದ್ದಾರೆ.

ಅವಹೇಳನಕಾರಿ ಹೇಳಿಕೆಗಳಿಂದ ಕೋಪಗೊಂಡ ಮುಸ್ಲಿಂ ಸಮುದಾಯದ ಕೆಲವು ಜನರು ಘಟನೆಯನ್ನು ಖಂಡಿಸಲು ಕಾರ್ಯಕ್ರಮದ ಸ್ಥಳದ ಹೊರಗೆ ಜಮಾಯಿಸಿದರು. ಆದರೆ, ಸ್ಥಳೀಯ ಅಧಿಕಾರಿಗಳು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ಶಾಂತಗೊಳಿಸಿದರು ಮತ್ತು ಸೂಕ್ತ ಕ್ರಮದ ಭರವಸೆ ನೀಡಿದರು. ಇವರಿಬ್ಬರ ಭಾಷಣದ ವಿಡಿಯೋವೊಂದು ಅಂತರ್ಜಾಲದಲ್ಲಿ ವೈರಲ್ ಆಗಿದೆ.

ಖಾನ್ ಅವರ ಲಿಖಿತ ದೂರು ಮತ್ತು ಘಟನೆಯ ವೈರಲ್ ವೀಡಿಯೊವನ್ನು ಆಧರಿಸಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ, ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ; ಮದ್ರಸಾಗಳನ್ನು ಮುಚ್ಚುವಂತೆ ನಾನು ಯಾವತ್ತೂ ಹೇಳಿಲ್ಲ : ಎನ್‌ಸಿಪಿಸಿಆರ್ ಅಧ್ಯಕ್ಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಡಿಶಾ ಬುಡಕಟ್ಟು ಶಾಲೆಯಲ್ಲಿ ಊಟ ಸೇವಿಸಿ 5ನೇ ತರಗತಿ ವಿದ್ಯಾರ್ಥಿನಿ ಸಾವು, 100 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಒಡಿಶಾದ ಮಯೂರ್‌ಭಂಜ್ ಜಿಲ್ಲೆಯ ಸರ್ಕಾರಿ ಬುಡಕಟ್ಟು ವಸತಿ ಶಾಲೆಯಲ್ಲಿ ಊಟ ಸೇವಿಸಿದ ನಂತರ 5 ನೇ ತರಗತಿಯ ವಿದ್ಯಾರ್ಥಿನಿ ಸಾವನ್ನಪ್ಪಿದ್ದು, 100 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿದ್ದಾರೆ. ಕಾಕಬಂಧ ​​ಆಶ್ರಮ ಶಾಲೆಯಲ್ಲಿ ಭಾನುವಾರ ಬೆಳಿಗ್ಗೆ...

ಡೆಹ್ರಾಡೂನ್‌| ಮುಸ್ಲಿಂ ಯುವಕನ ಮೇಲೆ ಕಾಳಿ ಸೇನಾ ನಾಯಕನಿಂದ ಹಲ್ಲೆ; ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟ ಆರೋಪಿ

ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ ಮುಸ್ಲಿಂ ಯುವಕನ ಮೇಲೆ ಹಿಂದುತ್ವ ನಾಯಕನೊಬ್ಬ ಹಲ್ಲೆ ನಡೆಸಿದ್ದಾನೆ ಎಂಬ ಆತಂಕಕಾರಿ ಘಟನೆ ವರದಿಯಾಗಿದೆ. ಕಾನೂನು ಮತ್ತು ಸುವ್ಯವಸ್ಥೆ, ಅಲ್ಪಸಂಖ್ಯಾತರ ಸುರಕ್ಷತೆಯ ಬಗ್ಗೆ ಗಂಭೀರ ಕಳವಳ ವ್ಯಕ್ತವಾಗಿದೆ. ಮಾಹಿತಿಯ ಪ್ರಕಾರ, ಕಾಳಿ...

ಎಎಪಿ ಸಂಸದ ಅಶೋಕ್ ಮಿತ್ತಲ್‌ಗೆ ಸೇರಿದ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿ, ಲವ್ಲಿ ಸಮೂಹ ಸಂಸ್ಥೆಗಳ ಮೇಲೆ ಇಡಿ ದಾಳಿ

ಜಾರಿ ನಿರ್ದೇಶನಾಲಯ (ಇಡಿ) ಆಮ್ ಆದ್ಮಿ ಪಕ್ಷದ (ಎಎಪಿ) ರಾಜ್ಯಸಭಾ ಸಂಸದ ಮತ್ತು ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿ (ಎಲ್‌ಪಿಯು) ಸಂಸ್ಥಾಪಕ-ಚಾನ್ಸಲರ್ ಅಶೋಕ್ ಮಿತ್ತಲ್ ಅವರಿಗೆ ಸೇರಿದ ವಿವಿಧ ಆಸ್ತಿಗಳ ಮೇಲೆ ಬುಧವಾರ (ಏ.15) ದಾಳಿ ನಡೆಸಿದೆ ಎಂದು ವರದಿಯಾಗಿದೆ. ವಿದೇಶಿ...

ಅಂಡಮಾನ್ ಸಮುದ್ರದಲ್ಲಿ ದೋಣಿ ಮುಳುಗಡೆ : 200ಕ್ಕೂ ಹೆಚ್ಚು ರೋಹಿಂಗ್ಯಾ ನಿರಾಶ್ರಿತರು ಕಣ್ಮರೆ

ಬಾಂಗ್ಲಾದೇಶದಿಂದ ಮಲೇಷ್ಯಾಗೆ ಹೊರಟಿದ್ದ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶದ ಪ್ರಜೆಗಳನ್ನು ಹೊತ್ತಿದ್ದ ದೋಣಿಯೊಂದು ಅಂಡಮಾನ್ ಸಮುದ್ರದಲ್ಲಿ ಮುಳುಗಡೆಯಾಗಿದೆ ಎಂದು ವರದಿಯಾಗಿದೆ. ದೋಣಿಯಲ್ಲಿ ಸುಮಾರು 250ಕ್ಕೂ ಹೆಚ್ಚು ಜನರು ಇದ್ದರು ಎಂದು ವಿಶ್ವಸಂಸ್ಥೆಯ ನಿರಾಶ್ರಿತರ ಸಂಸ್ಥೆ (ಯುಎನ್‌ಹೆಚ್‌ಸಿಆರ್‌)...

ಬಿಹಾರ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಪ್ರಮಾಣ ವಚನ ಸ್ವೀಕಾರ: ರಾಜಕೀಯ ವೃತ್ತಿಜೀವನದ ಕಾಲಾನುಕ್ರಮ

ಪಾಟ್ನಾ: ಭಾರತೀಯ ಜನತಾ ಪಕ್ಷದ ನಾಯಕ ಸಾಮ್ರಾಟ್ ಚೌಧರಿ ಬುಧವಾರ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಕೇಸರಿ ಪಕ್ಷದಿಂದ ರಾಜ್ಯದಲ್ಲಿ ಅತ್ಯುನ್ನತ ಹುದ್ದೆಯನ್ನು ಅಲಂಕರಿಸಿದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.  ರಾಜಭವನದಲ್ಲಿ...

ಛತ್ತೀಸ್‌ಗಢ | ವೇದಾಂತ ವಿದ್ಯುತ್ ಸ್ಥಾವರದಲ್ಲಿ ಬಾಯ್ಲರ್ ಸ್ಫೋಟ: ಮೃತರ ಸಂಖ್ಯೆ 14ಕ್ಕೆ ಏರಿಕೆ

ಛತ್ತೀಸ್‌ಗಢದ ವೇದಾಂತ ವಿದ್ಯುತ್ ಸ್ಥಾವರದಲ್ಲಿ ಸಂಭವಿಸಿದ ಬಾಯ್ಲರ್ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ ಮತ್ತು 40ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದಾರೆ. ಮಂಗಳವಾರ (ಏ.14) ಮಧ್ಯಾಹ್ನ ಸುಮಾರು 2:30ರ ವೇಳೆ ಕಾರ್ಮಿಕರು ಊಟ ಮಾಡುತ್ತಿದ್ದ ಸಮಯದಲ್ಲಿ ಈ...

ಕ್ಷೇತ್ರ ಮರುವಿಂಗಡಣೆ ವಿವಾದ : ಡಿಎಂಕೆ ಸಂಸದರ ತುರ್ತು ಸಭೆ ಕರೆದ ಸಿಎಂ ಸ್ಟಾಲಿನ್

ಕೇಂದ್ರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಯಿಂದ ರಾಜ್ಯದ ಮೇಲೆ ಉಂಟಾಗುವ ಸಂಭಾವ್ಯ ಪರಿಣಾಮಗಳ ಕುರಿತು ಚರ್ಚಿಸಲು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಬುಧವಾರ (ಏ.15) ಡಿಎಂಕೆ ಸಂಸದರ ತುರ್ತು ಸಭೆ ಕರೆದಿದ್ದಾರೆ. ಸ್ಟಾಲಿನ್ ಚುನಾವಣೆ...

ತಮಿಳುನಾಡು: ಕ್ಷೇತ್ರ ಪುನರ್ವಿಂಗಡೆ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ: ಕೇಂದ್ರ ಸರ್ಕಾರಕ್ಕೆ ಎಂ.ಕೆ. ಸ್ಟಾಲಿನ್ ಎಚ್ಚರಿಕೆ

ಚೆನ್ನೈ: ಏಪ್ರಿಲ್ 16 ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆಯಲಾಗಿರುವ ಪ್ರಸ್ತಾವಿತ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗಳ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷರು ಮಂಗಳವಾರ ಬಿಜೆಪಿ...

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನಕ್ಕೆ ತಳ್ಳುವ ಅಪಾಯವಿದೆ : ವಿಶ್ವಸಂಸ್ಥೆ ವರದಿ

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನದ ಕೂಪಕ್ಕೆ ತಳ್ಳಬಹುದು ಮತ್ತು ದೇಶದ ಮಾನವ ಅಭಿವೃದ್ಧಿ ಪ್ರಗತಿಯಲ್ಲಿ ಸ್ವಲ್ಪ ಮಟ್ಟಿನ ಹಿನ್ನಡೆಯನ್ನುಂಟು ಮಾಡಬಹುದು ಎಂದು ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮದ (ಯುಎನ್‌ಡಿಪಿ) ಹೊಸ...

ಗೋ-ರಕ್ಷಕರ ದಾಳಿಯ ನಂತರ ವ್ಯಕ್ತಿ ನಾಪತ್ತೆ: ಜಮ್ಮುವಿನ ರಾಂಬನ್‌ನಲ್ಲಿ ತೀವ್ರ ಪ್ರತಿಭಟನೆ; ಸಾಮಾಜಿಕ ಮಾಧ್ಯಮಗಳಲ್ಲೂ ಆಕ್ರೋಶ

ಗೋರಕ್ಷಕರ ದಾಳಿಗೆ ಸಂಬಂಧಿಸಿ ಸ್ಥಳೀಯ ನಿವಾಸಿ ತನ್ವೀರ್ ಅಹ್ಮದ್ ಚೋಪನ್ ನಾಪತ್ತೆಯಾದ ನಂತರ ಸೋಮವಾರ ರಾಂಬನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಸಾವಿರಾರು ಜನರು ಸಂಚಾರ ತಡೆದು ಪ್ರತಿಭಟಿಸಿದ್ದಾರೆ. ಪೊಲೀಸರ ಪ್ರಕಾರ,...