Homeಫ್ಯಾಕ್ಟ್‌ಚೆಕ್FACT CHECK : ವ್ಯಕ್ತಿಯೊಬ್ಬರು ಕೇಸರಿ ಬಟ್ಟೆ ಹೊದ್ದು ಮಲಗಿದ್ದಕ್ಕೆ ಮುಸ್ಲಿಮರು ಥಳಿಸಿದ್ದಾರೆ ಎಂಬುವುದು ಸುಳ್ಳು

FACT CHECK : ವ್ಯಕ್ತಿಯೊಬ್ಬರು ಕೇಸರಿ ಬಟ್ಟೆ ಹೊದ್ದು ಮಲಗಿದ್ದಕ್ಕೆ ಮುಸ್ಲಿಮರು ಥಳಿಸಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

“ಕೇಸರಿ ಬಟ್ಟೆ ಹೊದ್ದು ಮಲಗಿದ್ದ ವ್ಯಕ್ತಿಗೆ ಮುಸ್ಲಿಮರು ಹಲ್ಲೆ ನಡೆಸಿದ್ದಾರೆ” ಎಂದು ಪ್ರತಿಪಾದಿಸಿ ವಿಡಿಯೋವೊಂದನ್ನು ಹಂಚಿಕೊಳ್ಳಲಾಗುತ್ತಿದೆ.

ತ್ರೀನೇತ್ರ ಸೂತ್ರಧಾರ‘ ಎಂಬ ಫೇಸ್‌ಬುಕ್ ಬಳಕೆದಾರರೊಬ್ಬರು ಅಕ್ಟೋಬರ್ 7,2024 ರಂದು ಈ ವಿಡಿಯೋ ಹಂಚಿಕೊಂಡು, “ದೆಹಲಿಯ ಮಾಡೆಲ್ ಟೌನ್‌ನ ಕಾನೂನು ಮತ್ತು ಸುವ್ಯವಸ್ಥೆ ಇದು. ವ್ಯಕ್ತಿಯೊಬ್ಬ ಕೇಸರಿ ಬಟ್ಟೆಯನ್ನು ಹೊದ್ದುಕೊಂಡು ಆರಾಮವಾಗಿ ಮಲಗಿದ್ದಾನೆ… ಶಾಂತಿದೂತರು ಬೈಕ್‌ನಲ್ಲಿ ಬಂದು ವಿನಾಕಾರಣ ದೊಣ್ಣೆಯಿಂದ ಹೊಡೆಯಲಾರಂಭಿಸಿದ್ದಾರೆ” ಎಂದು ಬರೆದುಕೊಂಡಿದ್ದರು.

ಇದೇ ಬರಹದೊಂದಿಗೆ, ಸದಾ ಕೋಮು ದ್ವೇಷದ ಸುದ್ದಿಗಳನ್ನು ಹಬ್ಬುವ ಬಲಪಂಥೀಯ ಎಕ್ಸ್ ಖಾತೆ ಶ್ರೇಯಾ (@Shreya_Sanatani)ದಲ್ಲೂ ಅಕ್ಟೋಬರ್ 7, 2024ರಂದು ವಿಡಿಯೋ ಹಂಚಿಕೊಳ್ಳಲಾಗಿತ್ತು.

ಫ್ಯಾಕ್ಟ್‌ಚೆಕ್ : ಕೇಸರಿ ಬಟ್ಟೆ ಹೊದ್ದು ಮಲಗಿದ್ದ ವ್ಯಕ್ತಿಗೆ ಮುಸ್ಲಿಮರು ಹಲ್ಲೆ ನಡೆಸಿದ್ದಾರೆ ಎಂಬುವುದು ಶುದ್ದ ಸುಳ್ಳು.

ವಿಡಿಯೋ ಕುರಿತು ನಾವು ಮಾಹಿತಿ ಹುಡುಕಿದಾಗ ನಮಗೆ ಅನೇಕ ವರದಿಗಳು ಲಭ್ಯವಾಗಿದೆ. ವರದಿಗಳ ಪ್ರಕಾರ, “ಸಾರ್ವಜನಿಕ ಪಾರ್ಕ್ ಒಂದರಲ್ಲಿ ಮೂತ್ರ ಮಾಡದಂತೆ ವ್ಯಕ್ತಿಯೊಬ್ಬ ಹೇಳಿದ್ದು, ಈ ಕಾರಣಕ್ಕೆ ಮರುದಿನ ಆತನನ್ನು ಅಮಾನುಷವಾಗಿ ಥಳಿಸಲಾಗಿದೆ. ಈ ಪ್ರರಕಣದಲ್ಲಿ ಭಾಗಿಯಾದವರೆಲ್ಲರೂ ಹಿಂದೂಗಳಾಗಿದ್ದಾರೆ.

ಈ ಘಟನೆಯ ಕುರಿತು ಅಕ್ಟೋಬರ್ 6, 2024 ರಂದು ರಿಪಬ್ಲಿಕ್ ವರ್ಲ್ಡ್ ಪ್ರಕಟಿಸಿದ ವರದಿ ನಮಗೆ ಲಭ್ಯವಾಗಿದೆ. ಅದರ ಪ್ರಕಾರ, ದೆಹಲಿಯ ಮಾಡೆಲ್ ಟೌನ್ ಪ್ರದೇಶದಲ್ಲಿ ಸಾರ್ವಜನಿಕವಾಗಿ ಮೂತ್ರ ವಿಸರ್ಜನೆ ಮಾಡಬೇಡಿ ಎಂದು ಹೇಳಿದ್ದಕ್ಕೆ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದವರನ್ನು ಬಂಧಿಸಲಾಗಿದೆ. ಉತ್ತರ ದೆಹಲಿಯ ಮಾಡೆಲ್ ಟೌನ್ ಪ್ರದೇಶದಲ್ಲಿ ಶುಕ್ರವಾರ ನಡೆದ ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಅಕ್ಟೋಬರ್ 6, 2024 ರಂದು ಇಂಡಿಯಾ ಟಿವಿ ಪ್ರಕಟಿಸಿದ್ದ ವರದಿಯಲ್ಲೂ, “ಪಾರ್ಕ್‌ನಲ್ಲಿ ಮೂತ್ರ ವಿಸರ್ಜನೆ ಮಾಡಿದ ಆರೋಪಿಯನ್ನು ತಡೆದ ವ್ಯಕ್ತಿಯೊಬ್ಬನಿಗೆ ಮಾರನೇ ದಿನ ದೊಣ್ಣೆಯಿಂದ ಥಳಿಸಲಾಗಿದೆ. ಆರ್ಯನ್ ಎಂದು ಗುರುತಿಸಲಾದ ಆರೋಪಿ ಮರುದಿನ ತನ್ನ ಸ್ನೇಹಿತರೊಂದಿಗೆ ಸೇರಿಕೊಂಡು ತನ್ನನ್ನು ಮೂತ್ರ ಮಾಡದಂತೆ ತಡೆದ ವ್ಯಕ್ತಿಯನ್ನು ಥಳಿಸಿದ್ದಾನೆ. ಇದಾದ ಬಳಿಕ ಅವರು ಬೈಕ್ ನಲ್ಲಿ ತೆರಳಿದ್ದಾರೆ ಎಂದಿದೆ.

ಮುಂದುವರಿದು, “ಈ ಘಟನೆ ಸಮೀಪದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಪೊಲೀಸರು ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಂತರ ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ. ವಾಯುವ್ಯ ದೆಹಲಿಯ ಮಾಡೆಲ್ ಟೌನ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಶುಕ್ರವಾರ ಮಧ್ಯಾಹ್ನ ಫುಟ್‌ಪಾತ್‌ನಲ್ಲಿ ಕೇಸರಿ ಬಣ್ಣದ ಬೆಡ್ ಶೀಟ್ ಹಾಕಿ ಮಲಗಿದ್ದ ರಾಮ್‌ಪಾಲ್‌ಗೆ ಆರ್ಯನ್ ಥಳಿಸಲು ಆರಂಭಿಸಿದ್ದ. ಸಂತ್ರಸ್ತ ಎದ್ದು ಕುಳಿತ ನಂತರವೂ ಆರೋಪಿ ದೊಣ್ಣೆಯಿಂದ ಹಲ್ಲೆ ಮುಂದುವರಿಸಿದ್ದಾನೆ, ನಂತರ ಸ್ಥಳದಿಂದ ಪರಾರಿಯಾಗಿದ್ದಾನೆ” ಎಂದು ಹೇಳಲಾಗಿದೆ.

ಅಕ್ಟೋಬರ್ 7, 2024 ಟೈಮ್ಸ್ ಆಫ್ ಇಂಡಿಯಾ ಪ್ರಕಟಿಸಿದ ವರದಿಯಲ್ಲೂ “ವಾಯವ್ಯ ದೆಹಲಿಯ ಮಾಡೆಲ್ ಟೌನ್​ನಲ್ಲಿ ಇಬ್ಬರು ಪುರುಷರು ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡುವುದನ್ನು ಆಕ್ಷೇಪಿಸಿದ್ದಕ್ಕಾಗಿ 28 ವರ್ಷದ ವ್ಯಕ್ತಿಯನ್ನು ದೊಣ್ಣೆಯಿಂದ ಥಳಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಸಂತ್ರಸ್ತನನ್ನು ಮಾಡೆಲ್ ಟೌನ್ ನಿವಾಸಿ ರಾಮ್ ಪಾಲ್ ಎಂದು ಗುರುತಿಸಲಾಗಿದ್ದು, ಟೆಂಟ್ ಹೌಸ್ ನಲ್ಲಿ ಕೆಲಸ ಮಾಡುತ್ತಿದ್ದಾನೆ. ಬೆಳಿಗ್ಗೆ 7 ಗಂಟೆ ಸುಮಾರಿಗೆ ಆತನ ಅಂಗಡಿಯ ಮುಂದೆ ಮಲಗಿದ್ದಾಗ ಈ ಘಟನೆ ನಡೆದಿದೆ” ಎಂದಿದೆ.

ಒಟ್ಟಿನಲ್ಲಿ, ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡುದನ್ನು ಆಕ್ಷೇಪಿಸಿದ ರಾಮ್‌ಪಾಲ್ ಎಂಬ ವ್ಯಕ್ತಿಗೆ ಆರ್ಯನ್ ಎಂಬಾತ ಹಲ್ಲೆ ನಡೆಸಿರುವ ವಿಡಿಯೋ ಆಗಿದೆ ವೈರಲ್ ಆಗಿರುವುದು. ಅಲ್ಲದೆ, ಅದರಲ್ಲಿ ಯಾವುದೇ ಕೋಮು ಆಯಾಮ ಇಲ್ಲ. ಕೇಸರಿ ಬಟ್ಟೆ ಹೊದ್ದು ಮಲಗಿದ್ದ ವ್ಯಕ್ತಿಗೆ ಶಾಂತಿದೂತರು (ಮುಸ್ಲಿಮರು) ಥಳಿಸಿದ್ದಾರೆ ಎಂಬುವುದು ಶುದ್ದ ಸುಳ್ಳು ಮತ್ತು ಕೋಮು ದ್ವೇಷದ ಪ್ರತಿಪಾದನೆಯಾಗಿದೆ.

ಇದನ್ನೂ ಓದಿ : FACT CHECK : ಹಿಂದೂ ಮಹಿಳೆ ಮುಂದೆ ಶರ್ಟ್ ಬಿಚ್ಚಿದ ಮುಸ್ಲಿಂ ಯುವಕನಿಗೆ ಥಳಿತ..ವೈರಲ್ ವಿಡಿಯೋದ ಅಸಲಿಯತ್ತೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

PTCL ಕಾಯ್ದೆ ಅನುಷ್ಠಾನ ವೈಫಲ್ಯ: ನ್ಯಾಯಾಂಗ ಹಾಗೂ ಸರ್ಕಾರದ ಧೋರಣೆ ಖಂಡಿಸಿ ಜ್ಯೂರಿ ವರದಿ ಬಿಡುಗಡೆ

ದಲಿತ ಸಮುದಾಯಗಳಿಗೆ ಮಂಜೂರಾದ ಭೂಮಿ ಅನ್ಯಯವಾಗುವುದನ್ನು ತಡೆಯುವಲ್ಲಿ ಹಾಗೂ ಪಿಟಿಸಿಎಲ್ (PTCL) ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಲ್ಲಿ ನ್ಯಾಯಾಂಗ ಮತ್ತು ಸರ್ಕಾರ ಸಂಪೂರ್ಣವಾಗಿ ವಿಫಲವಾಗಿವೆ ಎಂದು ಜ್ಯೂರಿ ವರದಿಯು ತೀವ್ರವಾಗಿ ಅತೃಪ್ತಿ ವ್ಯಕ್ತಪಡಿಸಿದೆ. ಪಿಟಿಸಿಎಲ್...

SIR ಪ್ರಕ್ರಿಯೆಗೆ 6 ತಿಂಗಳ ಕಾಲಾವಕಾಶ ನೀಡಿ: ಸೆಪ್ಟೆಂಬರ್ 1 ರಂದು ‘ಎಲೆಕ್ಷನ್ ಕಮಿಷನ್ ಚಲೋ’ ಗೆ ಒಕ್ಕೂಟ ಕರೆ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿನ ಅವೈಜ್ಞಾನಿಕ ಧೋರಣೆ ಹಾಗೂ ಗೊಂದಲಮಯ ಕ್ರಮಗಳನ್ನು ತೀವ್ರವಾಗಿ ಖಂಡಿಸಿರುವ 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ', ಮತದಾರರ ಹಕ್ಕುಗಳನ್ನು...

ನೇಪಾಳದಲ್ಲಿ ದಿಢೀರ್ ಪ್ರವಾಹ : 105 ಭಾರತೀಯರು ಸೇರಿದಂತೆ 384 ಮಂದಿ ನಾಪತ್ತೆ

ನೇಪಾಳ ಪ್ರವಾಸೋದ್ಯಮ ಮಂಡಳಿಯ ಮಾಹಿತಿ ಪ್ರಕಾರ, ಬುಧವಾರ (ಆ.26) ಬೆಳಿಗ್ಗೆ ನೇಪಾಳದ ರಸುವಾ ಜಿಲ್ಲೆಯ ಭೋಟೆ ಕೋಶಿ ನದಿಯಲ್ಲಿ ಸಂಭವಿಸಿದ ಹಠಾತ್ ಪ್ರವಾಹದ ನಂತರ 105 ಭಾರತೀಯ ಪ್ರಜೆಗಳು ಸೇರಿದಂತೆ ಕನಿಷ್ಠ 384...

ರಾಜ್ಯದಲ್ಲಿ 102 ತಾಲೂಕುಗಳಲ್ಲಿ ಬರ: ಡಿಸಿಎಂ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿ ತಲೆದೋರಿದ್ದು, 102 ತಾಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದೆ. ಕೇಂದ್ರ ಸರ್ಕಾರದ ಮಾನದಂಡಗಳನ್ವಯ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಧಿಕೃತವಾಗಿ ಬರ ಘೋಷಿಸಲಾಗುವುದು ಹಾಗೂ ಪ್ರತಿ ವಾರವೂ...

ಪ. ಬಂಗಾಳ SIR : ನ್ಯಾಯಮಂಡಳಿಗಳಿಂದ ಇದುವರೆಗೆ ಕೇವಲ 2.17% ಮೇಲ್ಮನವಿಗಳ ಇತ್ಯರ್ಥ; ಇನ್ನು 37 ಲಕ್ಷಕ್ಕೂ ಹೆಚ್ಚು ಬಾಕಿ!

ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ಭಗವಾಂಗೋಲಾದ ನಿವಾಸಿಯಾದ ಮೊಹಮ್ಮದ್ ದುವಾಲ್ ಅಲಿ ಅವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾಗ, ಕರ್ತವ್ಯದ ಅವಧಿಯಲ್ಲಿ ಗುಂಡೇಟಿಗೆ ಒಳಗಾಗಿದ್ದರು. ಪ್ರಾಣಾಪಾಯದಿಂದ ಬದುಕುಳಿದ ಅವರು ನಂತರ ಭಾರತೀಯ ರೈಲ್ವೆಯಲ್ಲಿ ಕೆಲಸ...

ಬಂಡಾಯ ಸಂಸದರಿಗೆ ಸಂಕಷ್ಟ: 7 ದಿನಗಳಲ್ಲಿ ಉತ್ತರಿಸಲು ಲೋಕಸಭೆ ಸಚಿವಾಲಯ ತಾಕೀತು

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ 20 ಬಂಡಾಯ ಸಂಸದರಿಗೆ ಲೋಕಸಭಾ ಸಚಿವಾಲಯವು ನೋಟಿಸ್ ಜಾರಿ ಮಾಡಿದ್ದು, ಏಳು ದಿನಗಳ ಒಳಗಾಗಿ ಸೂಕ್ತ ಉತ್ತರ ನೀಡುವಂತೆ ಸೂಚಿಸಿದೆ. ಪಕ್ಷಾಂತರ ಕಾಯ್ದೆಯಡಿ ಸಂಸದರ ಅನರ್ಹತೆ ಪ್ರಕ್ರಿಯೆಗಳನ್ನು...

ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ನ್ಯೂಯಾರ್ಕ್ ಮೇಯರ್ ವಿರೋಧ: ಸಂಘದ ‘ಹೊರಗಿಡುವ ದೃಷ್ಟಿಕೋನ’ ಖಂಡಿಸಿದ ಮಮ್ದಾನಿ

ಅಮೆರಿಕದ ನ್ಯೂಯಾರ್ಕ್ ನಗರದ ಅತ್ಯಂತ ಪ್ರಸಿದ್ಧ ಹಾಗೂ ಐತಿಹಾಸಿಕ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಉಪಸ್ಥಿತಿಯಲ್ಲಿ ಆಯೋಜಿಸಲಾಗಿರುವ ಬೃಹತ್ ಭಾರತೀಯ ಮೂಲದವರ ಸಮಾವೇಶವು...

ಕರ್ನಾಟಕದಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಕರ್ನಾಟಕದಲ್ಲಿ ಇನ್ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಇಂಡಿಯಾ ಟುಡೇ ರೌಂಡ್‌ಟೇಬಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ...

ಬೀದಿ ಬದಿ ವ್ಯಾಪಾರಿಗಳ ತೆರವು ಅಕ್ರಮ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ

ಮಂಗಳೂರಿನ ಟೌನ್ ಹಾಲ್ ಸಮೀಪ ನಡೆಯುವ ಸಂಡೇ ಬಜಾರ್‌ನಲ್ಲಿ ಪಾದಚಾರಿ ಮಾರ್ಗದ ಬಳಿ ಇದ್ದ ಬೀದಿ ವ್ಯಾಪಾರಿಗಳನ್ನು ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಏಕಾಏಕಿ ತೆರವುಗೊಳಿಸಲು ಮುಂದಾಗಿದ್ದರು. ಇದನ್ನು ದಕ್ಷಿಣ ಕನ್ನಡ ಜಿಲ್ಲಾ...

ತೆಲಂಗಾಂಣ | ಹೈದರಾಬಾದ್‌-ವಿಜಯವಾಡ ಹೆದ್ದಾರಿಯಲ್ಲಿ ಭೀಕರ ಅಪಘಾತ: 6 ಮಂದಿ ಸಾವು; ಹಲವರಿಗೆ ಗಾಯ

ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯಲ್ಲಿ ಬುಧವಾರ (ಆ.26) ಮುಂಜಾನೆ ಖಾಸಗಿ ಎಲೆಕ್ಟ್ರಿಕ್ ಬಸ್‌ವೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 12 ಜನರು ಗಾಯಗೊಂಡಿದ್ದಾರೆ...