Homeಮುಖಪುಟಇಶಾ ಫೌಂಡೇಶನ್ ಆಶ್ರಮದೊಳಗೆ ಅನೇಕ ಜನರು ಕಾಣೆಯಾಗಿದ್ದಾರೆ: ತಮಿಳುನಾಡು ಪೊಲೀಸರು

ಇಶಾ ಫೌಂಡೇಶನ್ ಆಶ್ರಮದೊಳಗೆ ಅನೇಕ ಜನರು ಕಾಣೆಯಾಗಿದ್ದಾರೆ: ತಮಿಳುನಾಡು ಪೊಲೀಸರು

- Advertisement -
- Advertisement -

ಸ್ವಯಂಘೋಷಿತ ಸದ್ಗುರು ಜಗ್ಗಿ ವಾಸುದೇವ್ ಅವರ ಇಶಾ ಫೌಂಡೇಶನ್ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ತಮಿಳುನಾಡು ಪೊಲೀಸರು ಸಲ್ಲಿಸಿದ ‘ಕೌಂಟರ್’ ಅರ್ಜಿಯಲ್ಲಿ, “ಪ್ರತಿಷ್ಠಾನಕ್ಕೆ ಹೋದ ಅನೇಕ ಜನರು ನಾಪತ್ತೆಯಾಗಿದ್ದಾರೆ, ಅವರನ್ನು ಪತ್ತೆಹಚ್ಚಲು ಪೊಲೀಸರಿಗೆ ಸಾಧ್ಯವಾಗುತ್ತಿಲ್ಲ” ಎಂದು ಹೇಳಿದ್ದಾರೆ.

ಇಶಾ ಫೌಂಡೇಶನ್ ಕ್ಯಾಂಪಸ್ ತನ್ನ ಆವರಣದಲ್ಲಿ ಸ್ಮಶಾನವನ್ನು ಹೊಂದಿದೆ ಎಂದು ಅರ್ಜಿಯಲ್ಲಿ ಪೊಲೀಸರು ತಿಳಿಸಿದ್ದಾರೆ. ಇಶಾ ಫೌಂಡೇಶನ್‌ನೊಳಗಿರುವ ಆಸ್ಪತ್ರೆಯುಲ್ಲಿ ಅವಧಿ ಮೀರಿದ ಔಷಧಿಗಳನ್ನು ನೀಡಲಾಗುತ್ತಿದೆ ಎಂದು ‘ಕೌಂಟರ್ ಅಫಿಡವಿಟ್’ ಹೇಳಿದೆ.

ಜಗ್ಗಿ ವಾಸುದೇವ್ ಸ್ಥಾಪಿಸಿದ ಇಶಾ ಫೌಂಡೇಶನ್‌ಗೆ ಸಂಬಂಧಿಸಿದಂತೆ ಕೊಯಮತ್ತೂರು ಪೊಲೀಸರು ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣಗಳನ್ನು ದಾಖಲಿಸಿದ್ದಾರೆ. ವಿವರಗಳು 23 ಪುಟಗಳ ವರದಿಯ ಪ್ರಕಾರ, “ಕೋರ್ಸ್‌ಗಾಗಿ ಅಲ್ಲಿಗೆ ಬಂದವರು ಮತ್ತು ಕಾಣೆಯಾದವರು ಇತ್ಯಾದಿ” ಕುರಿತು ದೂರುಗಳನ್ನು ಒಳಗೊಂಡಿದೆ.

ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಕೆ.ಕಾರ್ತಿಕೇಯನ್ ಅವರು ಸಲ್ಲಿಸಿದ ವರದಿಯಲ್ಲಿ, ಇಶಾ ಫೌಂಡೇಶನ್‌ಗೆ ಸಂಬಂಧಿಸಿದಂತೆ 15 ವರ್ಷಗಳಲ್ಲಿ ಒಟ್ಟು ಆರು ನಾಪತ್ತೆ ಪ್ರಕರಣಗಳು ನ್ಯಾಯವ್ಯಾಪ್ತಿಯ ಆಲಂದೂರೈ ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ. ಆರರಲ್ಲಿ ಐದು ಪ್ರಕರಣಗಳನ್ನು, “ಕಾಣೆಯಾದ ವ್ಯಕ್ತಿ ಇನ್ನೂ ಪತ್ತೆಯಾಗದ ಕಾರಣ, ಕೈಬಿಡಲಾಗಿದೆ ಎಂದು ಮುಚ್ಚಲಾಯಿತು. ಒಂದು ಪ್ರಕರಣವು ಇನ್ನೂ ತನಿಖೆಯಲ್ಲಿದೆ” ಎಂದು ಹೇಳಿದ್ದಾರೆ.

ಇದಲ್ಲದೆ, ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 174 (ಆತ್ಮಹತ್ಯೆಯ ಕುರಿತು ವಿಚಾರಣೆ ಮತ್ತು ವರದಿ ಮಾಡಲು) ಅಡಿಯಲ್ಲಿ ಪೊಲೀಸರು ಏಳು ಪ್ರಕರಣಗಳನ್ನು ದಾಖಲಿಸಿದ್ದಾರೆ. ಈ ಪೈಕಿ ಎರಡು ಪ್ರಕರಣಗಳು ವಿಧಿವಿಜ್ಞಾನ ಪ್ರಯೋಗಾಲಯದ ವರದಿಯ ಕೊರತೆಯಿಂದಾಗಿ ತನಿಖೆಯಲ್ಲಿವೆ ಎಂದು ಸ್ಥಿತಿ ವರದಿ ಹೇಳಿದೆ.

ಇಶಾ ಫೌಂಡೇಶನ್ ನಿರ್ಮಿಸುತ್ತಿರುವ ಸ್ಮಶಾನವನ್ನು ತೆಗೆಯುವಂತೆ ನೆರೆಹೊರೆಯವರು ಮದ್ರಾಸ್ ಹೈಕೋರ್ಟ್‌ಗೆ ಮೊರೆ ಹೋಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೂ, ಪ್ರಕರಣವು ಬಾಕಿ ಉಳಿದಿದ್ದು, ಪ್ರಸ್ತುತ ಸ್ಮಶಾನವು ಕಾರ್ಯನಿರ್ವಹಿಸುತ್ತಿಲ್ಲ ಎಂದು ಸೇರಿಸಲಾಗಿದೆ.

ಇಶಾ ಔಟ್‌ರೀಚ್‌ನಲ್ಲಿ ಉದ್ಯೋಗಿಯಾಗಿದ್ದ ವೈದ್ಯರ ವಿರುದ್ಧ ಸ್ಥಳೀಯ ಶಾಲೆಯ ಪ್ರಾಂಶುಪಾಲರು ಪೋಕ್ಸೊ ಪ್ರಕರಣ ದಾಖಲಿಸಿರುವ ಕುರಿತು ವರದಿಯಲ್ಲಿ ವಿವರ ನೀಡಲಾಗಿದೆ. ವೈದ್ಯರನ್ನು ಬಂಧಿಸಲಾಗಿದ್ದು, ಜಾಮೀನು ನಿರಾಕರಿಸಲಾಗಿದೆ. ದೆಹಲಿಯ ಸಾಕೇತ್ ಪೊಲೀಸ್ ಠಾಣೆಯಲ್ಲಿ ಮಹಿಳೆಯೊಬ್ಬರು ನೀಡಿದ ಲೈಂಗಿಕ ದೌರ್ಜನ್ಯದ ದೂರನ್ನೂ ಅದರಲ್ಲಿ ಉಲ್ಲೇಖಿಸಲಾಗಿದೆ.

ಅವರು 2021 ರಲ್ಲಿ ಇಶಾ ಯೋಗ ಕೇಂದ್ರದಲ್ಲಿ ಯೋಗ ಕೋರ್ಸ್‌ಗೆ ಹಾಜರಾಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಸ್ಥಿತಿ ವರದಿಯ ಪ್ರಕಾರ, ಮಹಿಳೆ ತನ್ನ ಮೇಲೆ ಒಬ್ಬ ಪುರುಷನಿಂದ ಹಲ್ಲೆ ನಡೆಸಲಾಗಿದೆ ಎಂದು ಹೇಳಿಕೊಂಡಿದ್ದಾಳೆ. ಶೂನ್ಯ ಎಫ್‌ಐಆರ್ ಅನ್ನು ಕೊಯಮತ್ತೂರು ಪೊಲೀಸರಿಗೆ ವರ್ಗಾಯಿಸಲಾಗಿದೆ.

ಮಹಿಳೆ ನಂತರ ದೂರನ್ನು ಹಿಂಪಡೆದಿದ್ದರೂ, ಸೆಕ್ಷನ್ 164 ಸಿಆರ್‌ಪಿಸಿ ಹೇಳಿಕೆಯನ್ನು ದಾಖಲಿಸಿಲ್ಲ ಮತ್ತು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿಲ್ಲವಾದ್ದರಿಂದ ಹೆಚ್ಚಿನ ತನಿಖೆಗೆ ಅನುಮತಿ ಕೋರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಬುಡಕಟ್ಟು ಜನರಿಗೆ ನೀಡಿರುವ ಭೂಮಿಯನ್ನು ಅತಿಕ್ರಮಣ ಮಾಡಿರುವ ಇಶಾ ಯೋಗ ಕೇಂದ್ರದ ವಿರುದ್ಧದ ಎಫ್‌ಐಆರ್ ಕೂಡ ತನಿಖೆಯಲ್ಲಿದೆ ಎಂದು ವರದಿ ತಿಳಿಸಿದೆ.

ಅಕ್ಟೋಬರ್ 1, 2024 ರಂತೆ ಫೌಂಡೇಶನ್‌ನಿಂದ ಪಡೆದ ಮಾಹಿತಿಯ ಪ್ರಕಾರ, 217 ಬ್ರಹ್ಮಚಾರಿಗಳು, 2455 ಸ್ವಯಂಸೇವಕರು, 891 ವೇತನದಾರರ ಸಿಬ್ಬಂದಿ, 1475 ವೇತನದಾರರು, 342 ಇಶಾ ಹೋಮ್ ಸ್ಕೂಲ್ ವಿದ್ಯಾರ್ಥಿಗಳು, 175 ಇಶಾ ಸಂಸ್ಕೃತಿ ವಿದ್ಯಾರ್ಥಿಗಳು, 704 ಅತಿಥಿಗಳು/ಸ್ವಯಂಸೇವಕರು ಮತ್ತು 912 ಅತಿಥಿಗಳು ಕೊಯಮತ್ತೂರಿನ ಇಶಾ ಯೋಗ ಕೇಂದ್ರದ ಕಾಟೇಜ್‌ಗಳಲ್ಲಿ ವಾಸಿಸುತ್ತಿದ್ದಾರೆ.

42 ಮತ್ತು 39 ವರ್ಷ ವಯಸ್ಸಿನ ತನ್ನ ಪುತ್ರಿಯರನ್ನು ಬಂಧಿಸಲಾಗಿದೆ ಎಂದು ಆರೋಪಿಸಿ ಮದ್ರಾಸ್ ಹೈಕೋರ್ಟ್‌ನಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ ಇಬ್ಬರು ಮಹಿಳೆಯರನ್ನು ಹೊರತುಪಡಿಸಿ 558 ವ್ಯಕ್ತಿಗಳಿಂದ ಪೊಲೀಸರು ಆಹಾರ, ಸುರಕ್ಷತೆ ಮತ್ತು ಇತರ ಅಂಶಗಳ ಬಗ್ಗೆ ಕೂಲಂಕುಶವಾಗಿ ವಿಚಾರಿಸಿದ್ದಾರೆ ಎಂದು ವರದಿ ಹೇಳಿದೆ.

ಇಶಾ ಫೌಂಡೇಶನ್‌ನಲ್ಲಿ ಮಕ್ಕಳ ಸಹಾಯವಾಣಿ, ಮಕ್ಕಳ ಹಕ್ಕುಗಳು ಮತ್ತು ಪೋಕ್ಸೊ ಕಾಯ್ದೆ ಕುರಿತು ಜಾಗೃತಿ ಕಾರ್ಯಕ್ರಮಗಳ ಅಗತ್ಯವಿದೆ ಎಂದು ವಿಚಾರಣಾ ತಂಡದಲ್ಲಿರುವ ಮಕ್ಕಳ ತಜ್ಞರು ಹೇಳಿದ್ದಾರೆ.

ಕೊಯಮತ್ತೂರಿನ ಆರೋಗ್ಯ ಸೇವೆಗಳ ಜಂಟಿ ನಿರ್ದೇಶಕರು ಮಾರ್ಚ್ 2027 ರವರೆಗೆ ಮಾನ್ಯ ಪರವಾನಗಿಯನ್ನು ಹೊಂದಿರುವ ಇಶಾ ಕ್ಲಿನಿಕ್ ಬಗ್ಗೆ ವಿವರವಾದ ವರದಿಯನ್ನು ನೀಡಿದರು. ಆದರೂ ಅಲ್ಲಿ ಅವಧಿ ಮೀರಿದ ವೈದ್ಯಕೀಯ ಉಪಕರಣಗಳು ಮತ್ತು ಅರ್ಹರಲ್ಲದ ವ್ಯಕ್ತಿ ಎಕ್ಸ್-ರೇ ತೆಗೆದುಕೊಳ್ಳುವ ಬಗ್ಗೆ ವರದಿಯು ಕಳವಳ ವ್ಯಕ್ತಪಡಿಸಿದೆ.

ವಿಚಾರಣೆ ನಡೆಸಿದ ಮಹಿಳೆಯರು ಸ್ವಯಂಪ್ರೇರಣೆಯಿಂದ ಅಲ್ಲಿ ವಾಸಿಸುತ್ತಿದ್ದಾರೆಂದು ಹೇಳಿದ್ದರೂ, ಪಾಶ್‌ (POSH) ಕಾಯಿದೆಯಡಿ ಕಡ್ಡಾಯವಾಗಿರುವ ಆಂತರಿಕ ದೂರುಗಳ ಸಮಿತಿಯು “ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ” ಎಂದು ತಂಡ ಹೇಳಿದೆ.

ಅಕ್ಟೋಬರ್ 18 ರಂದು ಸುಪ್ರೀಂ ಕೋರ್ಟ್ ಪ್ರಕರಣದ ವಿಚಾರಣೆಯನ್ನು ನಿಗದಿಪಡಿಸಿದೆ.

ಇದನ್ನೂ ಓದಿ; ಕೆನಡಾ ಆರೋಪಕ್ಕೆ ಯಾವುದೇ ಪುರಾವೆಯಿಲ್ಲ: ನಿಜ್ಜರ್ ಹತ್ಯೆಯ ಕುರಿತು ಭಾರತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...