Homeಮುಖಪುಟಛತ್ತೀಸ್‌ಗಢ | 'ಹಸ್‌ದೇವ್ ಅರಣ್ಯ'ದಲ್ಲಿ ಮರಗಳನ್ನು ಕಡಿಯಲು ಮುಂದಾದ ಸರ್ಕಾರ : ಪೊಲೀಸರು-ಆದಿವಾಸಿಗಳ ನಡುವೆ ಸಂಘರ್ಷ

ಛತ್ತೀಸ್‌ಗಢ | ‘ಹಸ್‌ದೇವ್ ಅರಣ್ಯ’ದಲ್ಲಿ ಮರಗಳನ್ನು ಕಡಿಯಲು ಮುಂದಾದ ಸರ್ಕಾರ : ಪೊಲೀಸರು-ಆದಿವಾಸಿಗಳ ನಡುವೆ ಸಂಘರ್ಷ

ಅದಾನಿ ಜೊತೆಗಿನ ಎರಡನೇ ಹಂತದ ಕಲ್ಲಿದ್ದಲು ಗಣಿಗಾರಿಕೆಗೆ ಅರಣ್ಯ ನಾಶ

- Advertisement -
- Advertisement -

ಛತ್ತೀಸ್‌ಗಢದ ‘ಹಸ್‌ದೇವ್ ಅರಣ್ಯ’ದಲ್ಲಿ ಗುರುವಾರ ಹಿಂಸಾಚಾರ ಭುಗಿಲೆದ್ದಿದ್ದು, ಕಲ್ಲಿದ್ದಲು ಗಣಿಗಾರಿಕೆಗೆ ಮರಗಳನ್ನು ಕಡಿಯುವ ವಿಚಾರದಲ್ಲಿ ಸ್ಥಳೀಯ ಆದಿವಾಸಿಗಳು ಮತ್ತು ಪೊಲೀಸರ ನಡುವೆ ಸಂಘರ್ಷ ಏರ್ಪಟ್ಟಿದೆ.

ಇಂಡಿಯನ್‌ ಎಕ್ಸ್‌ಪ್ರೆಸ್ ವರದಿಯ ಪ್ರಕಾರ, ಘಟನೆಯಲ್ಲಿ ಹಲವಾರು ಪ್ರತಿಭಟನಾಕಾರರು ಮತ್ತು 13 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಜಿಲ್ಲಾಧಿಕಾರಿ ಹಾಗೂ ಕಂದಾಯ ಸಿಬ್ಬಂದಿಯೊಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ರಾಜಸ್ಥಾನ ರಾಜ್ಯ ವಿದ್ಯುತ್ ಉತ್ಪಾದನಾ ನಿಗಮ ಲಿಮಿಟೆಡ್ (RRVUNL)ನ ಪಾರ್ಸಾ ಕಲ್ಲಿದ್ದಲು ಬ್ಲಾಕ್ ಗಣಿಗಾರಿಕೆ ಯೋಜನೆಯ ಭಾಗವಾಗಿ ಸುರ್ಗುಜಾ ಜಿಲ್ಲೆಯ ಫತೇಪುರ್ ಮತ್ತು ಸಾಲಿ ಗ್ರಾಮಗಳ ಬಳಿ ಮರಗಳನ್ನು ಕಡಿಯಲು ಸರ್ಕಾರ ಗುರುವಾರ ಮುಂದಾಗಿತ್ತು. ಇದಕ್ಕೆ ಸ್ಥಳೀಯ ಆದಿವಾಸಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಕಲ್ಲಿದ್ದಲು ಗಣಿಗಾರಿಕೆಗಾಗಿ ಹಸ್‌ದೇವ್ ಅರಣ್ಯ ವ್ಯಾಪ್ತಿಯ ಆರು ಗ್ರಾಮಗಳ ಸುತ್ತಮುತ್ತಲಿನ ಸುಮಾರು 5,000 ಮರಗಳನ್ನು ಕಡಿಯಲು ನಿರ್ಧರಿಸಲಾಗಿದೆ ಎಂದು ವರದಿಗಳು ಹೇಳಿವೆ.

ಗುರುವಾರ ಮರಗಳನ್ನು ಕಡಿಯಲು ಅಧಿಕಾರಿಗಳು ಮತ್ತು ಸಿಬ್ಬಂದಿ ಆಗಮಿಸುತ್ತಾರೆ ಎಂದು ತಿಳಿದ ಸ್ಥಳೀಯರು, ಬುಧವಾರ ರಾತ್ರಿಯಿಂದಲೇ ಉದ್ದೇಶಿತ ಮರ ಕಡಿಯುವ ಸ್ಥಳದಲ್ಲಿ ಜಮಾಯಿಸಿದ್ದರು. ಅವರನ್ನು ತಡೆಯಲು ಸುಮಾರು 400 ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಯನ್ನು ಸ್ಥಳದಲ್ಲಿ ನಿಯೋಜಿಸಲಾಗಿತ್ತು. ಸ್ಥಳೀಯರು ದೊಣ್ಣೆ, ಕತ್ತಿ, ಬಾಣ ಮತ್ತು ಕೊಡಲಿಗಳೊಂದಿಗೆ ಶಸ್ತ್ರಸಜ್ಜಿತರಾಗಿ ಬಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ಮಾಡಿದ ನಂತರ ಹಿಂಸಾಚಾರ ಪ್ರಾರಂಭವಾಯಿತು ಎಂಬ ಆರೋಪವನ್ನು ಸುರ್ಗುಜಾ ಪೊಲೀಸ್ ವರಿಷ್ಠಾಧಿಕಾರಿ ಯೋಗೇಶ್ ಪಟೇಲ್ ನಿರಾಕರಿಸಿದ್ದಾರೆ. “ಗ್ರಾಮಸ್ಥರು ಹಿಂಸಾತ್ಮಕವಾಗಿ ನಮ್ಮ ಮೇಲೆ ಹಲ್ಲೆ ನಡೆಸಿದರು. ಅವರನ್ನು ಎದುರಿಸಲು ಮತ್ತು ಸ್ಥಳದಿಂದ ಚದುರಿಸಲು ನಾವು ಪ್ರತಿಕ್ರಿಯಿಸಿದ್ದೇವೆ” ಎಂದಿದ್ದಾರೆ.

ಪೊಲೀಸ್ ಕಾನ್‌ಸ್ಟೇಬಲ್ ಭೋಲಾರಾಮ್ ರಾಜ್‌ವಾಡೆ ಅವರ ಕಾಲಿಗೆ ಸ್ಥಳೀಯರು ಬಾಣ ಬಿಟ್ಟಿದ್ದು, ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಚಿಕಿತ್ಸೆಗಾಗಿ ರಾಯಪುರಕ್ಕೆ ಕರೆದೊಯ್ಯಲಾಗಿದೆ ಎಂದು ತಿಳಿಸಿದ್ದಾರೆ.

ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಛತ್ತೀಸ್‌ಗಢದ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. “ಹಸ್‌ದೇವ್ ಅರಣ್ಯದಲ್ಲಿ ಪೊಲೀಸ್ ಬಲವನ್ನು ಹಿಂಸಾತ್ಮಕವಾಗಿ ಬಳಸಿಕೊಳ್ಳುವ ಮೂಲಕ ಆದಿವಾಸಿಗಳ ಅರಣ್ಯ ಮತ್ತು ಭೂಮಿಯನ್ನು ಬಲವಂತವಾಗಿ ಕಬಳಿಸುವ ಪ್ರಯತ್ನವು ಆದಿವಾಸಿಗಳ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ. ಛತ್ತೀಸ್‌ಗಢದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ, ಹಸ್‌ದೇವ್ ಅರಣ್ಯದಲ್ಲಿ ಮರಗಳನ್ನು ಕಡಿಯದಂತೆ ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ ಅಂಗೀಕರಿಸಲಾಗಿತ್ತು. ಸರ್ವಾನುಮತ ಎಂದರೆ ಅದಕ್ಕೆ ಬಿಜೆಪಿ ಕೂಡ ಒಪ್ಪಿಗೆ ಸೂಚಿಸಿತ್ತು. ಆದರೆ, ಈಗ ಅಧಿಕಾರಕ್ಕೆ ಬಂದ ತಕ್ಷಣ ಬಿಜೆಪಿ ನಿರ್ಣಯವನ್ನು ಮರೆತಿದೆ. ಹಸ್‌ದೇವ್‌ನ ಮೂಲ ನಿವಾಸಿಗಳ ಮೇಲೆ ದೌರ್ಜನ್ಯ ನಡೆಸುತ್ತಿದೆ” ಎಂದಿದ್ದಾರೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಪ್ರತಿಭಟನಾನಿರತ ಸ್ಥಳೀಯ ನಿವಾಸಿಗಳಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. “ಶತಮಾನಗಳಿಂದ ಅರಣ್ಯಗಳ ಮಾಲೀಕರಾಗಿರುವ ಆದಿವಾಸಿಗಳನ್ನು ಅದಾನಿಯ ಗಣಿಗಾಗಿ ಹೊರಹಾಕಲಾಗುತ್ತಿದೆ” ಎಂದು ಹೇಳಿದ್ದಾರೆ.

ಏನಿದು ಕಲ್ಲಿದ್ದಲು ಗಣಿಗಾರಿಕೆ? 

ದಶಕದ ಹಿಂದೆ ಹಸ್‌ದೇವ್ ಅರಣ್ಯದಲ್ಲಿ ಸುಮಾರು 5 ಬಿಲಿಯನ್ ಟನ್ ಕಲ್ಲಿದ್ದಲು ನಿಕ್ಷೇಪವಿದೆ ಎಂಬ ಮಾಹಿತಿ ಬಯಲಾಗಿತ್ತು. ಆಗಲೇ ಅದಾನಿಯಂತಹ ಕಂಪನಿಗಳ ಕಣ್ಣು ದಟ್ಟ ಅರಣ್ಯದ ಮೇಲೆ ಬಿದ್ದಿತ್ತು. ಅಂದುಕೊಂಡಂತೆ ಅರಣ್ಯ ಪ್ರದೇಶದಲ್ಲಿ ಸುಮಾರು 23 ಕಲ್ಲಿದ್ದಲು ಗಣಿಗಳು ಪ್ರಾರಂಭಿಸಲು ಕೇಂದ್ರ ಸರ್ಕಾರ ನಿರ್ಧರಿಸಿತು. ಈ ಪೈಕಿ ಐದು ಗಣಿಗಳು ಈಗಾಗಲೇ ಕಾರ್ಯ ನಿರ್ವಹಣೆಯ ವಿವಿಧ ಹಂತಗಳಲ್ಲಿವೆ.

2023ರಲ್ಲಿ ಹಸ್‌ದೇವ್ ಅರಣ್ಯದ ಮಧ್ಯದಲ್ಲಿ ಒಂದು ಗಣಿಯು ಕಾರ್ಯಾರಂಭ ಮಾಡಿದೆ. ಅದಕ್ಕೆ ಪಾರ್ಸಾ ಈಸ್ಟ್ ಕೇಟೆ ಬಸನ್ (ಪಿಇಕೆಬಿ) ಎಂದು ಹೆಸರಿಸಲಾಗಿದೆ. ರಾಜಸ್ಥಾನ ರಾಜ್ಯ ಸರ್ಕಾರದ ವಿದ್ಯುತ್ ಉತ್ಪಾದನಾ ಕಂಪನಿಯಾದ ರಾಜಸ್ಥಾನ ರಾಜ್ಯ ವಿದ್ಯುತ್ ಉತ್ಪಾದನಾ ನಿಗಮ ಲಿಮಿಟೆಡ್ (RVUNL) ಒಡೆತನ ಈ ಗಣಿಯಿಂದ ಕಲ್ಲಿದ್ದಲು ತೆಗೆಯುವ ಪ್ರಕ್ರಿಯೆಯನ್ನು ಅದಾನಿ ಕಂಪನಿಗೆ ಕೊಡಲಾಗಿದೆ. ಹೆಸರಿಗೆ ರಾಜಸ್ತಾನ ವಿದ್ಯುತ್ ನಿಗಮದ ಒಡೆತನ ಮಾಲೀಕತ್ವ ಇದ್ದರೂ, ಗಣಿಗಾರಿಕೆಯ ಎಲ್ಲಾ ಪ್ರಕ್ರಿಯೆಗಳನ್ನು ಅದಾನಿ ಕಂಪನಿ ಮಾಡುತ್ತಿದೆ. 2026ರ ಹೊತ್ತಿಗೆ ಈ ಗಣಿಯ ಕಲ್ಲಿದ್ದಲು ಮುಗಿಯುವ ಸಾಧ್ಯತೆ ಇದೆ.

2020ರಲ್ಲಿ, ರಾಜಸ್ಥಾನ ವಿದ್ಯುತ್ ನಿಗಮ ಕೇಂದ್ರ ಪರಿಸರ ಸಚಿವಾಲಯಕ್ಕೆ ಪತ್ರ ಬರೆದು ಪಿಇಕೆಬಿಯಲ್ಲಿ ಕಲ್ಲಿದ್ದಲು ವೇಗವಾಗಿ ಕ್ಷೀಣಿಸುತ್ತಿದೆ. ಹಾಗಾಗಿ, ಎರಡನೇ ಹಂತದ ಗಣಿಗಾರಿಕೆ ಆರಂಭಕ್ಕೆ ಅನುಮೋದನೆ ಕೋರಿತ್ತು. ಸ್ಥಳೀಯರ ತೀವ್ರ ವಿರೋಧದ ನಡುವೆಯೂ 2022ರಲ್ಲಿ ಎರಡನೇ ಹಂತದ ಗಣಿಗಾರಿಕೆಗೆ ಅನುಮೋದನೆ ನೀಡಲಾಗಿದೆ. ಈಗ ಗಣಿಗಾರಿಕೆ ಪ್ರಾರಂಭಿಸಲು ಮರಗಳನ್ನು ಕಡಿಯಲು ಅಧಿಕಾರಿಗಳು ಮುಂದಾಗಿದ್ದಾರೆ.

ದಕ್ಷಿಣ ಭಾರತದಲ್ಲಿ ಪಶ್ಚಿಮ ಘಟ್ಟಗಳಿದ್ದಂತೆ ಉತ್ತರ ಭಾರತದಲ್ಲಿ ಹಸ್‌ದೇವ್ ಅರಣ್ಯವಿದೆ. ಅದನ್ನು ಉತ್ತರದ ‘ಶ್ವಾಸಕೋಸ’ ಎಂದು ಕರೆಯಲಾಗುತ್ತದೆ. ಶತಮಾನಗಳಿಂದ ಆದಿವಾಸಿಗಳು ಮತ್ತು ಸಾವಿರಾರು ವನ್ಯ ಜೀವಿಗಳ ನೆಲೆಯಾಗಿರುವ ಈ ಅರಣ್ಯವನ್ನು ಆದಿವಾಸಿಗಳು ‘ಪೂಜ್ಯನೀಯವಾಗಿ’ ಕಾಣುತ್ತಾರೆ. ಅಂತಹ ಅರಣ್ಯದ ನಾಶಕ್ಕೆ ಸರ್ಕಾರವೇ ಮುಂದಾಗಿರುವುದು ಆತಂಕದ ವಿಚಾರ.

ಇದನ್ನೂ ಓದಿ : ಜಾರ್ಖಂಡ್ ಚುನಾವಣೆ | ಎನ್‌ಡಿಎ ಸೀಟು ಹಂಚಿಕೆ ಪೂರ್ಣ – ಬಿಜೆಪಿ ಪ್ರತಿಪಾದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು: ಕ್ಷೇತ್ರ ಪುನರ್ವಿಂಗಡೆ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ: ಕೇಂದ್ರ ಸರ್ಕಾರಕ್ಕೆ ಎಂ.ಕೆ. ಸ್ಟಾಲಿನ್ ಎಚ್ಚರಿಕೆ

ಚೆನ್ನೈ: ಏಪ್ರಿಲ್ 16 ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆಯಲಾಗಿರುವ ಪ್ರಸ್ತಾವಿತ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗಳ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷರು ಮಂಗಳವಾರ ಬಿಜೆಪಿ...

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನಕ್ಕೆ ತಳ್ಳುವ ಅಪಾಯವಿದೆ : ವಿಶ್ವಸಂಸ್ಥೆ ವರದಿ

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನದ ಕೂಪಕ್ಕೆ ತಳ್ಳಬಹುದು ಮತ್ತು ದೇಶದ ಮಾನವ ಅಭಿವೃದ್ಧಿ ಪ್ರಗತಿಯಲ್ಲಿ ಸ್ವಲ್ಪ ಮಟ್ಟಿನ ಹಿನ್ನಡೆಯನ್ನುಂಟು ಮಾಡಬಹುದು ಎಂದು ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮದ (ಯುಎನ್‌ಡಿಪಿ) ಹೊಸ...

ಗೋ-ರಕ್ಷಕರ ದಾಳಿಯ ನಂತರ ವ್ಯಕ್ತಿ ನಾಪತ್ತೆ: ಜಮ್ಮುವಿನ ರಾಂಬನ್‌ನಲ್ಲಿ ತೀವ್ರ ಪ್ರತಿಭಟನೆ; ಸಾಮಾಜಿಕ ಮಾಧ್ಯಮಗಳಲ್ಲೂ ಆಕ್ರೋಶ

ಗೋರಕ್ಷಕರ ದಾಳಿಗೆ ಸಂಬಂಧಿಸಿ ಸ್ಥಳೀಯ ನಿವಾಸಿ ತನ್ವೀರ್ ಅಹ್ಮದ್ ಚೋಪನ್ ನಾಪತ್ತೆಯಾದ ನಂತರ ಸೋಮವಾರ ರಾಂಬನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಸಾವಿರಾರು ಜನರು ಸಂಚಾರ ತಡೆದು ಪ್ರತಿಭಟಿಸಿದ್ದಾರೆ. ಪೊಲೀಸರ ಪ್ರಕಾರ,...

ನಿತೀಶ್ ಕುಮಾರ್ ರಾಜೀನಾಮೆ : ಬಿಹಾರದ ಹೊಸ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದು, ಹೊಸ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಅವರನ್ನು ಆಯ್ಕೆ ಮಾಡಲಾಗಿದೆ. ಪಾಟ್ನಾದ ಲೋಕ ಭವನದಲ್ಲಿ ಮಂಗಳವಾರ (ಏ.14) ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ)...

ಮುಂಬೈ ಸಂಗೀತ ಕಾರ್ಯಕ್ರಮದಲ್ಲಿ ಮಾದಕ ದ್ರವ್ಯ ಸೇವನೆಯಿಂದ ಇಬ್ಬರು ವಿದ್ಯಾರ್ಥಿಗಳು ಸಾವು, ಐವರ ಬಂಧನ; ತನಿಖೆ

ಮಂಗಳವಾರ ಮುಂಬೈನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಮಾದಕ ದ್ರವ್ಯ ಸೇವಿಸಿದ ಆರೋಪದ ಮೇಲೆ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ದಕ್ಷಿಣ ಮುಂಬೈನ ಪ್ರತಿಷ್ಠಿತ ಸಂಸ್ಥೆಯ ವಿದ್ಯಾರ್ಥಿಗಳು ಎಂಬಿಎ ಓದುತ್ತಿದ್ದರು ಎಂದು...

ನಸೀರ್ ಅಹ್ಮದ್‌ರನ್ನು ವಜಾಗೊಳಿಸಿದ್ದೇಕೆ… ಡಿಕೆಶಿ ಹೇಳಿದ್ದೇನು?  

ಮುಖ್ಯಮಂತ್ರಿಗಳು ತಮ್ಮದೇ ಆದ ವಿವಿಧ ಮೂಲಗಳಿಂದ ಮಾಹಿತಿ ಪಡೆದು, ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್ ವಿಚಾರದಲ್ಲಿ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮಂಗಳವಾರ (ಏ.14)...

ಆಟೋ ಪರ್ಮಿಟ್‌ಗಳಿಗೆ ಮರಾಠಿ ಭಾಷೆ ಕಡ್ಡಾಯ ನಿಯಮ; ಆರ್‌ಟಿಒ ಅಧಿಕಾರಿಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ

ಕಳವಳಕಾರಿ ಬೆಳವಣಿಗೆಯಲ್ಲಿ, ಆಟೋ-ರಿಕ್ಷಾ ಪರ್ಮಿಟ್ ಪರಿಶೀಲನೆಗೆ ಮರಾಠಿ ಜ್ಞಾನವನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರದ ಆದೇಶಕ್ಕೆ ವಿರೋಧ ವ್ಯಕ್ತವಾಗಿದ್ದು, ಇದರಲ್ಲಿ ಬಿಷ್ಣೋಯ್ ಗ್ಯಾಂಗ್ ಭಾಗಿಯಾಗಿದೆ ಎಂದು ಆರೋಪಿಸಲಾಗಿದೆ. ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ) ಅಧಿಕಾರಿ...

‘ನಾನು ಪ್ರೀತಿಯಲ್ಲಿ ನಂಬಿಕೆ ಇಡುತ್ತೇನೆ, ಬುಲ್ಡೋಜರ್‌ ರಾಜಕೀಯದಲ್ಲಿ ಅಲ್ಲ’: ಯುಪಿ ಮಾದರಿ ವಿವಾದದ ನಡುವೆ ಯೋಗಿ ವಿರುದ್ಧ ಮಮತಾ ದಾಳಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ದಾಳಿ ನಡೆಸಿದ್ದಾರೆ. ಅವರು ಬುಲ್ಡೋಜರ್ ರಾಜಕೀಯದಲ್ಲಿ ನಂಬಿಕೆ ಇಡುವುದಿಲ್ಲ ಎಂದು ಹೇಳಿದ್ದಾರೆ ಮತ್ತು ಉತ್ತರ ಪ್ರದೇಶದಲ್ಲಿ...

ಬಿಹಾರ| ಸಿಎಂ ಹುದ್ದೆಗೆ ರಾಜೀನಾಮೆ ನೀಡಲು ಅಣಿಯಾದ ನಿತೀಶ್ ಕುಮಾರ್ : ಸಂಪುಟ ವಿಸರ್ಜನೆಗೆ ಶಿಫಾರಸು

ಬಿಹಾರದಲ್ಲಿ ಹೊಸ ಸರ್ಕಾರ ರಚನೆ ಕಸರತ್ತು ತೀವ್ರಗೊಂಡಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಪಾಲರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಅಣಿಯಾಗಿದ್ದು, ಅದಕ್ಕೂ ಮೊದಲು ಸಚಿವ ಸಂಪುಟ ವಿಸರ್ಜಿಸಲು ಅವರು ಶಿಫಾರಸು ಮಾಡಿದ್ದಾರೆ....

‘ರಾತ್ರೋರಾತ್ರಿ ಒಪ್ಪಂದ ಸಾಧ್ಯವಿಲ್ಲ’: ಪಶ್ಚಿಮ ಏಷ್ಯಾ ಯುದ್ಧದ ಕುರಿತು ನಿರಂತರ ಮಾತುಕತೆಗೆ ವಿಶ್ವಸಂಸ್ಥೆ ಒತ್ತಾಯ

ವಿಶ್ವಸಂಸ್ಥೆಯ ಮುಖ್ಯಸ್ಥ ಆಂಟೋನಿಯೊ ಗುಟೆರೆಸ್ ಅವರು ಅಮೆರಿಕ ಮತ್ತು ಇರಾನ್ ನಡುವೆ ನಿರಂತರ ರಾಜತಾಂತ್ರಿಕ ಮಾತುಕತೆಗೆ ಕರೆ ನೀಡಿದ್ದಾರೆ. "ಒಂದು ಒಪ್ಪಂದವನ್ನು ರಾತ್ರೋರಾತ್ರಿ ತಲುಪಲು ಸಾಧ್ಯವಿಲ್ಲ" ಎಂದು ಒತ್ತಿ ಹೇಳಿದ ಅವರು ಪಶ್ಚಿಮ...