Homeಮುಖಪುಟಛತ್ತೀಸ್‌ಗಢ | 'ಹಸ್‌ದೇವ್ ಅರಣ್ಯ'ದಲ್ಲಿ ಮರಗಳನ್ನು ಕಡಿಯಲು ಮುಂದಾದ ಸರ್ಕಾರ : ಪೊಲೀಸರು-ಆದಿವಾಸಿಗಳ ನಡುವೆ ಸಂಘರ್ಷ

ಛತ್ತೀಸ್‌ಗಢ | ‘ಹಸ್‌ದೇವ್ ಅರಣ್ಯ’ದಲ್ಲಿ ಮರಗಳನ್ನು ಕಡಿಯಲು ಮುಂದಾದ ಸರ್ಕಾರ : ಪೊಲೀಸರು-ಆದಿವಾಸಿಗಳ ನಡುವೆ ಸಂಘರ್ಷ

ಅದಾನಿ ಜೊತೆಗಿನ ಎರಡನೇ ಹಂತದ ಕಲ್ಲಿದ್ದಲು ಗಣಿಗಾರಿಕೆಗೆ ಅರಣ್ಯ ನಾಶ

- Advertisement -
- Advertisement -

ಛತ್ತೀಸ್‌ಗಢದ ‘ಹಸ್‌ದೇವ್ ಅರಣ್ಯ’ದಲ್ಲಿ ಗುರುವಾರ ಹಿಂಸಾಚಾರ ಭುಗಿಲೆದ್ದಿದ್ದು, ಕಲ್ಲಿದ್ದಲು ಗಣಿಗಾರಿಕೆಗೆ ಮರಗಳನ್ನು ಕಡಿಯುವ ವಿಚಾರದಲ್ಲಿ ಸ್ಥಳೀಯ ಆದಿವಾಸಿಗಳು ಮತ್ತು ಪೊಲೀಸರ ನಡುವೆ ಸಂಘರ್ಷ ಏರ್ಪಟ್ಟಿದೆ.

ಇಂಡಿಯನ್‌ ಎಕ್ಸ್‌ಪ್ರೆಸ್ ವರದಿಯ ಪ್ರಕಾರ, ಘಟನೆಯಲ್ಲಿ ಹಲವಾರು ಪ್ರತಿಭಟನಾಕಾರರು ಮತ್ತು 13 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಜಿಲ್ಲಾಧಿಕಾರಿ ಹಾಗೂ ಕಂದಾಯ ಸಿಬ್ಬಂದಿಯೊಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ರಾಜಸ್ಥಾನ ರಾಜ್ಯ ವಿದ್ಯುತ್ ಉತ್ಪಾದನಾ ನಿಗಮ ಲಿಮಿಟೆಡ್ (RRVUNL)ನ ಪಾರ್ಸಾ ಕಲ್ಲಿದ್ದಲು ಬ್ಲಾಕ್ ಗಣಿಗಾರಿಕೆ ಯೋಜನೆಯ ಭಾಗವಾಗಿ ಸುರ್ಗುಜಾ ಜಿಲ್ಲೆಯ ಫತೇಪುರ್ ಮತ್ತು ಸಾಲಿ ಗ್ರಾಮಗಳ ಬಳಿ ಮರಗಳನ್ನು ಕಡಿಯಲು ಸರ್ಕಾರ ಗುರುವಾರ ಮುಂದಾಗಿತ್ತು. ಇದಕ್ಕೆ ಸ್ಥಳೀಯ ಆದಿವಾಸಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಕಲ್ಲಿದ್ದಲು ಗಣಿಗಾರಿಕೆಗಾಗಿ ಹಸ್‌ದೇವ್ ಅರಣ್ಯ ವ್ಯಾಪ್ತಿಯ ಆರು ಗ್ರಾಮಗಳ ಸುತ್ತಮುತ್ತಲಿನ ಸುಮಾರು 5,000 ಮರಗಳನ್ನು ಕಡಿಯಲು ನಿರ್ಧರಿಸಲಾಗಿದೆ ಎಂದು ವರದಿಗಳು ಹೇಳಿವೆ.

ಗುರುವಾರ ಮರಗಳನ್ನು ಕಡಿಯಲು ಅಧಿಕಾರಿಗಳು ಮತ್ತು ಸಿಬ್ಬಂದಿ ಆಗಮಿಸುತ್ತಾರೆ ಎಂದು ತಿಳಿದ ಸ್ಥಳೀಯರು, ಬುಧವಾರ ರಾತ್ರಿಯಿಂದಲೇ ಉದ್ದೇಶಿತ ಮರ ಕಡಿಯುವ ಸ್ಥಳದಲ್ಲಿ ಜಮಾಯಿಸಿದ್ದರು. ಅವರನ್ನು ತಡೆಯಲು ಸುಮಾರು 400 ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಯನ್ನು ಸ್ಥಳದಲ್ಲಿ ನಿಯೋಜಿಸಲಾಗಿತ್ತು. ಸ್ಥಳೀಯರು ದೊಣ್ಣೆ, ಕತ್ತಿ, ಬಾಣ ಮತ್ತು ಕೊಡಲಿಗಳೊಂದಿಗೆ ಶಸ್ತ್ರಸಜ್ಜಿತರಾಗಿ ಬಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ಮಾಡಿದ ನಂತರ ಹಿಂಸಾಚಾರ ಪ್ರಾರಂಭವಾಯಿತು ಎಂಬ ಆರೋಪವನ್ನು ಸುರ್ಗುಜಾ ಪೊಲೀಸ್ ವರಿಷ್ಠಾಧಿಕಾರಿ ಯೋಗೇಶ್ ಪಟೇಲ್ ನಿರಾಕರಿಸಿದ್ದಾರೆ. “ಗ್ರಾಮಸ್ಥರು ಹಿಂಸಾತ್ಮಕವಾಗಿ ನಮ್ಮ ಮೇಲೆ ಹಲ್ಲೆ ನಡೆಸಿದರು. ಅವರನ್ನು ಎದುರಿಸಲು ಮತ್ತು ಸ್ಥಳದಿಂದ ಚದುರಿಸಲು ನಾವು ಪ್ರತಿಕ್ರಿಯಿಸಿದ್ದೇವೆ” ಎಂದಿದ್ದಾರೆ.

ಪೊಲೀಸ್ ಕಾನ್‌ಸ್ಟೇಬಲ್ ಭೋಲಾರಾಮ್ ರಾಜ್‌ವಾಡೆ ಅವರ ಕಾಲಿಗೆ ಸ್ಥಳೀಯರು ಬಾಣ ಬಿಟ್ಟಿದ್ದು, ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಚಿಕಿತ್ಸೆಗಾಗಿ ರಾಯಪುರಕ್ಕೆ ಕರೆದೊಯ್ಯಲಾಗಿದೆ ಎಂದು ತಿಳಿಸಿದ್ದಾರೆ.

ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಛತ್ತೀಸ್‌ಗಢದ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. “ಹಸ್‌ದೇವ್ ಅರಣ್ಯದಲ್ಲಿ ಪೊಲೀಸ್ ಬಲವನ್ನು ಹಿಂಸಾತ್ಮಕವಾಗಿ ಬಳಸಿಕೊಳ್ಳುವ ಮೂಲಕ ಆದಿವಾಸಿಗಳ ಅರಣ್ಯ ಮತ್ತು ಭೂಮಿಯನ್ನು ಬಲವಂತವಾಗಿ ಕಬಳಿಸುವ ಪ್ರಯತ್ನವು ಆದಿವಾಸಿಗಳ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ. ಛತ್ತೀಸ್‌ಗಢದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ, ಹಸ್‌ದೇವ್ ಅರಣ್ಯದಲ್ಲಿ ಮರಗಳನ್ನು ಕಡಿಯದಂತೆ ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ ಅಂಗೀಕರಿಸಲಾಗಿತ್ತು. ಸರ್ವಾನುಮತ ಎಂದರೆ ಅದಕ್ಕೆ ಬಿಜೆಪಿ ಕೂಡ ಒಪ್ಪಿಗೆ ಸೂಚಿಸಿತ್ತು. ಆದರೆ, ಈಗ ಅಧಿಕಾರಕ್ಕೆ ಬಂದ ತಕ್ಷಣ ಬಿಜೆಪಿ ನಿರ್ಣಯವನ್ನು ಮರೆತಿದೆ. ಹಸ್‌ದೇವ್‌ನ ಮೂಲ ನಿವಾಸಿಗಳ ಮೇಲೆ ದೌರ್ಜನ್ಯ ನಡೆಸುತ್ತಿದೆ” ಎಂದಿದ್ದಾರೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಪ್ರತಿಭಟನಾನಿರತ ಸ್ಥಳೀಯ ನಿವಾಸಿಗಳಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. “ಶತಮಾನಗಳಿಂದ ಅರಣ್ಯಗಳ ಮಾಲೀಕರಾಗಿರುವ ಆದಿವಾಸಿಗಳನ್ನು ಅದಾನಿಯ ಗಣಿಗಾಗಿ ಹೊರಹಾಕಲಾಗುತ್ತಿದೆ” ಎಂದು ಹೇಳಿದ್ದಾರೆ.

ಏನಿದು ಕಲ್ಲಿದ್ದಲು ಗಣಿಗಾರಿಕೆ? 

ದಶಕದ ಹಿಂದೆ ಹಸ್‌ದೇವ್ ಅರಣ್ಯದಲ್ಲಿ ಸುಮಾರು 5 ಬಿಲಿಯನ್ ಟನ್ ಕಲ್ಲಿದ್ದಲು ನಿಕ್ಷೇಪವಿದೆ ಎಂಬ ಮಾಹಿತಿ ಬಯಲಾಗಿತ್ತು. ಆಗಲೇ ಅದಾನಿಯಂತಹ ಕಂಪನಿಗಳ ಕಣ್ಣು ದಟ್ಟ ಅರಣ್ಯದ ಮೇಲೆ ಬಿದ್ದಿತ್ತು. ಅಂದುಕೊಂಡಂತೆ ಅರಣ್ಯ ಪ್ರದೇಶದಲ್ಲಿ ಸುಮಾರು 23 ಕಲ್ಲಿದ್ದಲು ಗಣಿಗಳು ಪ್ರಾರಂಭಿಸಲು ಕೇಂದ್ರ ಸರ್ಕಾರ ನಿರ್ಧರಿಸಿತು. ಈ ಪೈಕಿ ಐದು ಗಣಿಗಳು ಈಗಾಗಲೇ ಕಾರ್ಯ ನಿರ್ವಹಣೆಯ ವಿವಿಧ ಹಂತಗಳಲ್ಲಿವೆ.

2023ರಲ್ಲಿ ಹಸ್‌ದೇವ್ ಅರಣ್ಯದ ಮಧ್ಯದಲ್ಲಿ ಒಂದು ಗಣಿಯು ಕಾರ್ಯಾರಂಭ ಮಾಡಿದೆ. ಅದಕ್ಕೆ ಪಾರ್ಸಾ ಈಸ್ಟ್ ಕೇಟೆ ಬಸನ್ (ಪಿಇಕೆಬಿ) ಎಂದು ಹೆಸರಿಸಲಾಗಿದೆ. ರಾಜಸ್ಥಾನ ರಾಜ್ಯ ಸರ್ಕಾರದ ವಿದ್ಯುತ್ ಉತ್ಪಾದನಾ ಕಂಪನಿಯಾದ ರಾಜಸ್ಥಾನ ರಾಜ್ಯ ವಿದ್ಯುತ್ ಉತ್ಪಾದನಾ ನಿಗಮ ಲಿಮಿಟೆಡ್ (RVUNL) ಒಡೆತನ ಈ ಗಣಿಯಿಂದ ಕಲ್ಲಿದ್ದಲು ತೆಗೆಯುವ ಪ್ರಕ್ರಿಯೆಯನ್ನು ಅದಾನಿ ಕಂಪನಿಗೆ ಕೊಡಲಾಗಿದೆ. ಹೆಸರಿಗೆ ರಾಜಸ್ತಾನ ವಿದ್ಯುತ್ ನಿಗಮದ ಒಡೆತನ ಮಾಲೀಕತ್ವ ಇದ್ದರೂ, ಗಣಿಗಾರಿಕೆಯ ಎಲ್ಲಾ ಪ್ರಕ್ರಿಯೆಗಳನ್ನು ಅದಾನಿ ಕಂಪನಿ ಮಾಡುತ್ತಿದೆ. 2026ರ ಹೊತ್ತಿಗೆ ಈ ಗಣಿಯ ಕಲ್ಲಿದ್ದಲು ಮುಗಿಯುವ ಸಾಧ್ಯತೆ ಇದೆ.

2020ರಲ್ಲಿ, ರಾಜಸ್ಥಾನ ವಿದ್ಯುತ್ ನಿಗಮ ಕೇಂದ್ರ ಪರಿಸರ ಸಚಿವಾಲಯಕ್ಕೆ ಪತ್ರ ಬರೆದು ಪಿಇಕೆಬಿಯಲ್ಲಿ ಕಲ್ಲಿದ್ದಲು ವೇಗವಾಗಿ ಕ್ಷೀಣಿಸುತ್ತಿದೆ. ಹಾಗಾಗಿ, ಎರಡನೇ ಹಂತದ ಗಣಿಗಾರಿಕೆ ಆರಂಭಕ್ಕೆ ಅನುಮೋದನೆ ಕೋರಿತ್ತು. ಸ್ಥಳೀಯರ ತೀವ್ರ ವಿರೋಧದ ನಡುವೆಯೂ 2022ರಲ್ಲಿ ಎರಡನೇ ಹಂತದ ಗಣಿಗಾರಿಕೆಗೆ ಅನುಮೋದನೆ ನೀಡಲಾಗಿದೆ. ಈಗ ಗಣಿಗಾರಿಕೆ ಪ್ರಾರಂಭಿಸಲು ಮರಗಳನ್ನು ಕಡಿಯಲು ಅಧಿಕಾರಿಗಳು ಮುಂದಾಗಿದ್ದಾರೆ.

ದಕ್ಷಿಣ ಭಾರತದಲ್ಲಿ ಪಶ್ಚಿಮ ಘಟ್ಟಗಳಿದ್ದಂತೆ ಉತ್ತರ ಭಾರತದಲ್ಲಿ ಹಸ್‌ದೇವ್ ಅರಣ್ಯವಿದೆ. ಅದನ್ನು ಉತ್ತರದ ‘ಶ್ವಾಸಕೋಸ’ ಎಂದು ಕರೆಯಲಾಗುತ್ತದೆ. ಶತಮಾನಗಳಿಂದ ಆದಿವಾಸಿಗಳು ಮತ್ತು ಸಾವಿರಾರು ವನ್ಯ ಜೀವಿಗಳ ನೆಲೆಯಾಗಿರುವ ಈ ಅರಣ್ಯವನ್ನು ಆದಿವಾಸಿಗಳು ‘ಪೂಜ್ಯನೀಯವಾಗಿ’ ಕಾಣುತ್ತಾರೆ. ಅಂತಹ ಅರಣ್ಯದ ನಾಶಕ್ಕೆ ಸರ್ಕಾರವೇ ಮುಂದಾಗಿರುವುದು ಆತಂಕದ ವಿಚಾರ.

ಇದನ್ನೂ ಓದಿ : ಜಾರ್ಖಂಡ್ ಚುನಾವಣೆ | ಎನ್‌ಡಿಎ ಸೀಟು ಹಂಚಿಕೆ ಪೂರ್ಣ – ಬಿಜೆಪಿ ಪ್ರತಿಪಾದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಂದೆಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...