Homeಕರ್ನಾಟಕಮುಡಾ ಕಚೇರಿ ಮೇಲೆ ಇಡಿ ದಾಳಿ | ಸಿಎಂ ಸಿದ್ದರಾಮಯ್ಯ ವಿರುದ್ಧ ಹಣ ಅಕ್ರಮ ವರ್ಗಾವಣೆ...

ಮುಡಾ ಕಚೇರಿ ಮೇಲೆ ಇಡಿ ದಾಳಿ | ಸಿಎಂ ಸಿದ್ದರಾಮಯ್ಯ ವಿರುದ್ಧ ಹಣ ಅಕ್ರಮ ವರ್ಗಾವಣೆ ಪ್ರಕರಣ

- Advertisement -
- Advertisement -

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಶುಕ್ರವಾರ ಶೋಧ ನಡೆಸಿದೆ ಎಂದು ವರದಿಯಾಗಿದೆ. ಈ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬ ಸದಸ್ಯರು ಮತ್ತು ಇತರ ವ್ಯಕ್ತಿಗಳು ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.ಮುಡಾ ಕಚೇರಿ

20 ಕ್ಕೂ ಹೆಚ್ಚು ಇಡಿ ಅಧಿಕಾರಿಗಳ ತಂಡ, ಕೇಂದ್ರ ಅರೆಸೇನಾ ಪಡೆಗಳೊಂದಿಗೆ ಮೈಸೂರಿನ ಮುಡಾ ಕಚೇರಿ ಮತ್ತು ಇತರ ಸ್ಥಳಗಳಲ್ಲಿ ದಾಳಿ ನಡೆಸಿ, ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸುತ್ತಿದೆ. ಮುಡಾ ವ್ಯಾಪ್ತಿಯಲ್ಲಿ ನಡೆದ ₹5,000 ಕೋಟಿ ಅವ್ಯವಹಾರ ಸೇರಿದಂತೆ ದೊಡ್ಡ ಪ್ರಮಾಣದ ಅವ್ಯವಹಾರ ನಡೆದಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮುಖ್ಯಮಂತ್ರಿ ಸೇರಿದಂತೆ ಹಿರಿಯ ಅಧಿಕಾರಿಗಳು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ ದೂರಿನಂತೆ ಇಡಿ ಈ ತನಿಖೆ ನಡೆಸುತ್ತಿದೆ ಎಂದು ಮೂಲಗಳನ್ನು ಉಲ್ಲೇಖಿಸಿ TNIE ವರದಿ ಮಾಡಿದೆ. ಮುಡಾ ಕಚೇರಿ

ಈ ದಾಳಿಯು ಸಿಎಂ ಸಿದ್ದರಾಮಯ್ಯ ಅಥವಾ ಅವರ ಕುಟುಂಬಕ್ಕೆ ಸೇರಿದ ಯಾವುದೇ ನಿವೇಶನಗಳನ್ನು ಒಳಗೊಂಡಿಲ್ಲವಾದರೂ, ಮುಖ್ಯಮಂತ್ರಿ ಮತ್ತು ಇತರರನ್ನು ಈ ಹಿಂದೆ ಇಡಿ ಸಲ್ಲಿಸಿದ ಎಫ್‌ಐಆರ್‌ಗೆ ಸಮಾನವಾದ ಜಾರಿ ಪ್ರಕರಣ ಮಾಹಿತಿ ವರದಿಯಲ್ಲಿ (ಇಸಿಐಆರ್) ಹೆಸರಿಸಲಾಗಿತ್ತು. ಸಿದ್ದರಾಮಯ್ಯ ಮತ್ತು ಇತರರ ವಿರುದ್ಧ ಇತ್ತೀಚೆಗೆ ಲೋಕಾಯುಕ್ತ ಎಫ್‌ಐಆರ್‌ ದಾಖಲಿಸಿದ ನಂತರ ಇಡಿ ಇಸಿಐಆರ್‌ ದಾಖಲಿಸಿತ್ತು.

ಸೆಪ್ಟೆಂಬರ್ 27ರಂದು ದಾಖಲಾಗಿರುವ ಲೋಕಾಯುಕ್ತ ಎಫ್‌ಐಆರ್‌ನಲ್ಲಿ ಸಿದ್ದರಾಮಯ್ಯ ಅವರ ಪತ್ನಿ ಬಿಎಂ ಪಾರ್ವತಿ ಅವರಿಗೆ ನೀಡಿದ್ದ 14 ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಲಾಗಿದೆ. ಎಫ್‌ಐಆರ್‌ನಲ್ಲಿ ಸಿದ್ದರಾಮಯ್ಯ ಅವರ ಭಾಮೈದ ಮಲ್ಲಿಕಾರ್ಜುನ ಸ್ವಾಮಿ ಮತ್ತು ದೇವರಾಜು ಅವರ ಹೆಸರನ್ನೂ ಹೆಸರಿಸಲಾಗಿದೆ. ಮಲ್ಲಿಕಾರ್ಜುನ ಸ್ವಾಮಿ ಅವರು ಭೂಮಿ ಖರೀದಿಸಿ ನಂತರ ಅದನ್ನು ಪಾರ್ವತಿ ಅವರಿಗೆ ಉಡುಗೊರೆಯಾಗಿ ನೀಡಿದ್ದರು.

ಆರೋಪಗಳಿಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು ತಾನು ಯಾವುದೇ ತಪ್ಪೆಸಗಿಲ್ಲ ಎಂದು ಪ್ರತಿಪಾದಿಸಿದ್ದು, ಪ್ರತಿಪಕ್ಷಗಳು ನನ್ನನ್ನು ಕಂಡು ಹೆದರಿದ್ದಾರೆ ಎಂದು ಆರೋಪಿಸಿದ್ದಾರೆ. ಇದು ನನ್ನ ವಿರುದ್ಧ ಇದೇ ಮೊದಲ ರಾಜಕೀಯ ಪ್ರಕರಣವಾಗಿದೆ ಎಂದು ಅವರು ಹೇಳಿದ್ದಾರೆ. ಇಡಿ ತನ್ನ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಯ ನಿಬಂಧನೆಗಳನ್ನು ಸಹ ಸೇರಿಸಿದ್ದು, ಲೋಕಾಯುಕ್ತದಿಂದ ಸಮಾನಾಂತರ ತನಿಖೆಯೊಂದಿಗೆ ತನಿಖೆಗಳು ಮುಂದುವರಿಯುತ್ತವೆ.

ಇದನ್ನೂ ಓದಿ: ಹಣ ಅಕ್ರಮ ವರ್ಗಾವಣೆ ಪ್ರಕರಣ | 2 ವರ್ಷಗಳ ನಂತರ ಎಎಪಿ ನಾಯಕ ಸತ್ಯೇಂದ್ರ ಜೈನ್‌ಗೆ ಜಾಮೀನು

ಹಣ ಅಕ್ರಮ ವರ್ಗಾವಣೆ ಪ್ರಕರಣ | 2 ವರ್ಷಗಳ ನಂತರ ಎಎಪಿ ನಾಯಕ ಸತ್ಯೇಂದ್ರ ಜೈನ್‌ಗೆ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...