Homeಕರ್ನಾಟಕ'ಜಾತಿ ಗಣತಿ ವರದಿ ಸಧ್ಯಕ್ಕಿಲ್ಲ' | ಸಂಪುಟ ಸಭೆಯನ್ನು ಅಕ್ಟೋಬರ್ 25ಕ್ಕೆ ಮುಂದೂಡಿಕೆ!

‘ಜಾತಿ ಗಣತಿ ವರದಿ ಸಧ್ಯಕ್ಕಿಲ್ಲ’ | ಸಂಪುಟ ಸಭೆಯನ್ನು ಅಕ್ಟೋಬರ್ 25ಕ್ಕೆ ಮುಂದೂಡಿಕೆ!

- Advertisement -
- Advertisement -

ಜಾಮಿ ಗಣತಿ ವರದಿ ಸೇರಿದಂತೆ ಹಲವು ವಿಚಾರಗಳು ತೀರ್ಮಾನವಾಗಬೇಕಿದ್ದ ಶುಕ್ರವಾರದ ಸಚಿವ ಸಂಪುಟ ಸಭೆಯನ್ನು ಅಕ್ಟೋಬರ್ 25ಕ್ಕೆ ಮುಂದೂಡಲಾಗಿದೆ ಎಂದು ವರದಿಯಾಗಿದೆ. ಈ ಮೂಲಕ ರಾಜ್ಯದಾದ್ಯಂತ ತೀವ್ರ ಚರ್ಚೆ ಹುಟ್ಟು ಹಾಕಿದ್ದ ಜಾತಿ ಗಣತಿ ಚರ್ಚೆಯ ವಿಚಾರವನ್ನು ಸಿಎಂ ಸಿದ್ದರಾಮಯ್ಯ ಅವರು ಮತ್ತಷ್ಟು ಮುಂದೂಡಿದ್ದಾರೆ.

ಜಾತಿ ಗಣತಿಯನ್ನು ವಿರೋಧಿಸುತ್ತಿರುವ ವೀರಶೈವ ಲಿಂಗಾಯತರು ಮತ್ತು ಒಕ್ಕಲಿಗರನ್ನು ಸಮಾಧಾನ ಮಾಡುವವರೆಗೆ ವರದಿಯ ಬಿಡುಗಡೆಯನ್ನು ತಡೆಹಿಡಿಯಲಾಗುತ್ತದೆ ಎಂದು ತಿಳಿದುಬಂದಿದೆ. “ಆದ್ದರಿಂದ ಅಕ್ಟೋಬರ್ 25 ರ ಕ್ಯಾಬಿನೆಟ್ ಸಭೆಯಲ್ಲಿ ಜಾತಿ ಗಣತಿ ವರದಿ ಕಾಣಿಸಿಕೊಳ್ಳುವ ಸಾಧ್ಯತೆಯಿಲ್ಲ” ಎಂದು ಮೂಲವೊಂದು ತಿಳಿಸಿದೆ ಎಂದು TNIE ವರದಿ ಹೇಳಿದೆ. ಅದಾಗ್ಯೂ, ಮತ್ತೊಂದೆಡೆ ವರದಿ ಬಿಡುಗಡೆಗಾಗಿ ಅಹಿಂದ ಸಮುದಾಯಗಳು ಒತ್ತಾಯಿಸುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈ ನಡುವೆ, ಎಸ್‌ಸಿ ಒಳ ಮೀಸಲಾತಿ ಮತ್ತು ಪಂಚಮಸಾಲಿ ಲಿಂಗಾಯತರನ್ನು 2ಎಗೆ ಸೇರಿಸುವ ವಿಚಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದಿದೆ. ಅಷ್ಟೆಅಲ್ಲದೆ, ಚನ್ನಪಟ್ಟಣ, ಸಂಡೂರು, ಶಿಗ್ಗಾಂವ ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್‌ 13ರಂದು ಉಪಚುನಾವಣೆ ನಡೆಯಲಿದ್ದು, ಹಾಗಾಗಿ ಸಿದ್ದರಾಮಯ್ಯ ಅವರು ಜಾತಿ ಗಣತಿ ವರದಿಯನ್ನು ತಡೆ ಹಿಡಿಯುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಆಗಸ್ಟ್ 1 ರಂದು ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ನಂತರ ಎಸ್‌ಸಿ ಒಳ ಮೀಸಲಾತಿ ವರ್ಗೀಕರಣ ಜಾರಿಗೆ ಒತ್ತಾಯಿಸಿ ಎಸ್‌ಸಿ ಎಡ ಸಮುದಾಯ ಈಗಾಗಲೇ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದೆ. 2ಎ ವಿಚಾರವಾಗಿ ಶುಕ್ರವಾರ ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದ ಪಂಚಮಸಾಲಿ ಲಿಂಗಾಯತ ಸಮುದಾಯದ ನಿಯೋಗ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲು ನಿರ್ಧರಿಸಿದೆ.

ವೀರಶೈವ ಲಿಂಗಾಯತ ಸಮುದಾಯದ ಎಚ್.ಕೆ.ಪಾಟೀಲ್, ಎಂ.ಬಿ.ಪಾಟೀಲ್, ಈಶ್ವರ ಖಂಡ್ರೆ, ಶರಣಬಸಪ್ಪ ದರ್ಶನಾಪುರ, ಶಿವಾನಂದ ಪಾಟೀಲ, ಎಸ್.ಎಸ್.ಮಲ್ಲಿಕಾರ್ಜುನ್, ಶರಣಪ್ರಕಾಶ ಪಾಟೀಲ, ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಒಕ್ಕಲಿಗರ ಸಮುದಾಯದ ರಾಮಲಿಂಗಾ ರೆಡ್ಡಿ, ಎನ್.ಚಲುವರಾಯಸ್ವಾಮಿ, ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ಡಾ.ಎಂ.ಸಿ.ಸುಧಾಕರ್ ಅವರನ್ನು ಒಳಗೊಂಡು ಜಾತಿ ಗಣತಿ ಬಿಡುಗಡೆಯ ಪರಿಣಾಮಗಳ ಬಗ್ಗೆ ಚರ್ಚಿಸಲು ಸಭೆ ನಡೆಸಲು ಸಿದ್ದರಾಮಯ್ಯ ಮುಂದಾಗಿದ್ದರು.

ವರದಿಗೆ ಸಂಬಂಧಿಸಿದಂತೆ ಸಂಪುಟದ ಇತ್ತೀಚಿನ ಚರ್ಚೆಗಳ ನಂತರ, ಪ್ರಬಲ ಲಿಂಗಾಯತ ಸಮುದಾಯವು ಅತೃಪ್ತಿ ವ್ಯಕ್ತಪಡಿಸಿದ್ದು, ವರದಿಯನ್ನು “ಅವೈಜ್ಞಾನಿಕ” ಎಂದು ಬಣ್ಣಿಸಿದೆ. ಶಾಮನೂರು ಶಿವಶಂಕರಪ್ಪ ನೇತೃತ್ವದಲ್ಲಿ ಸಮುದಾಯದ ಪ್ರಮುಖರು ಅಕ್ಟೋಬರ್ 22 ರಂದು ವರದಿಯ ಶಿಫಾರಸುಗಳ ಅನುಷ್ಠಾನದ ಕಾನೂನು ಮತ್ತು ಸಾಮಾಜಿಕ ಪರಿಣಾಮಗಳನ್ನು ಪರಿಶೀಲಿಸುವ ಸಭೆಯನ್ನು ಘೋಷಿಸಿದ್ದಾರೆ.

ವೀರಶೈವ ಲಿಂಗಾಯತ ಮಹಾಸಭಾದ ಕಾರ್ಯದರ್ಶಿ ರೇಣುಕಾ ಪ್ರಸನ್ನ ಮಾತನಾಡಿ, ವರದಿಯಲ್ಲಿನ ಅಂಶಗಳನ್ನು ಅನುಷ್ಠಾನಕ್ಕೆ ತಂದರೆ ಸಮುದಾಯವು ಗಮನಾರ್ಹ ಅನನುಕೂಲಗಳನ್ನು ಎದುರಿಸಬೇಕಾಗುತ್ತದೆ. “ಈ ವರದಿಯನ್ನು ಜಾರಿಗೆ ತಂದರೆ ಸಮುದಾಯವು ಕಳೆದುಕೊಳ್ಳುತ್ತದೆ” ಎಂದು ಪ್ರಸನ್ನ ಹೇಳಿದ್ದಾರೆ.

ಇದನ್ನೂ ಓದಿ: ಮಹಿಳೆಯರ ಅಕ್ರಮ ಬಂಧನ ಆರೋಪ : ಇಶಾ ಫೌಂಡೇಶನ್ ವಿರುದ್ದದ ಪ್ರಕರಣ ವಜಾ

ಮಹಿಳೆಯರ ಅಕ್ರಮ ಬಂಧನ ಆರೋಪ : ಇಶಾ ಫೌಂಡೇಶನ್ ವಿರುದ್ದದ ಪ್ರಕರಣ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಂದೆಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...