Homeಮುಖಪುಟನಾಡಗೀತೆ ವಿವಾದ | ತಮಿಳುನಾಡು ರಾಜ್ಯಪಾಲರನ್ನು ವಾಪಸ್ ಕರೆಸಿಕೊಳ್ಳುವಂತೆ ಕೇಂದ್ರಕ್ಕೆ ಸ್ಟಾಲಿನ್ ಆಗ್ರಹ

ನಾಡಗೀತೆ ವಿವಾದ | ತಮಿಳುನಾಡು ರಾಜ್ಯಪಾಲರನ್ನು ವಾಪಸ್ ಕರೆಸಿಕೊಳ್ಳುವಂತೆ ಕೇಂದ್ರಕ್ಕೆ ಸ್ಟಾಲಿನ್ ಆಗ್ರಹ

- Advertisement -
- Advertisement -

ತಮಿಳುನಾಡು ರಾಜ್ಯಪಾಲ ಆರ್‌ಎನ್‌ ರವಿ ಮುಖ್ಯ ಅಥಿಯಾಗಿ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ನಾಡಗೀತೆ (ತಮಿಳ್‌ ತಾಯಿ ವಝುತ್ತು) ಹಾಡುವಾಗ, ಅದರಲ್ಲಿನ ‘ದ್ರಾವಿಡ’ ಪದವಿರುವ ವಾಕ್ಯವನ್ನು ಕೈ ಬಿಟ್ಟಿರುವುದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

ಶುಕ್ರವಾರ (ಅ.18) ಚೆನ್ನೈನ ದೂರದರ್ಶನ ಕೇಂದ್ರದಲ್ಲಿ ‘ಹಿಂದಿ ಮಾಸಾಚಾರಣೆಯ ಸಮಾರೋಪ ಕಾರ್ಯಕ್ರಮ’ದಲ್ಲಿ ತಮಿಳು ನಾಡಗೀತೆ ಹಾಡುವಾಗ, ಅದರಲ್ಲಿನ ದ್ರಾವಿಡ ನೆಲದ ಹಿರಿಮೆಯನ್ನು ಉಲ್ಲೇಖಿಸುವ ‘ತೆಕ್ಕನಮುಮುಂ ಅಧಿರ್‌ಸಿರಂಧ ದ್ರಾವಿಡ ನಾಲ್ ತಿರುನಾಡುಂ” ಎಂಬ ವಾಕ್ಯವನ್ನು ಉದ್ದೇಶಪೂರ್ವಕವಾಗಿ ಕೈಬಿಡಲಾಗಿದೆ ಎಂದು ಆರೋಪಿಸಲಾಗಿದೆ.

ತಮಿಳುನಾಡು ಸರ್ಕಾರ ಮತ್ತು ಅಲ್ಲಿನ ಜನರ ವಿರುದ್ದ ಭಾವನೆ ಹೊಂದಿರುವ ರಾಜ್ಯಪಾಲರು ಬೇಕಂತಲೇ ದ್ರಾವಿಡ ಪದ ತೆಗೆಸಿದ್ದಾರೆ ಎಂದು ಅನೇಕರು ಆರೋಪಿಸಿದ್ದಾರೆ. ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ರಾಜ್ಯಪಾಲರನ್ನು ವಾಪಸ್ ಕರೆಸಿಕೊಳ್ಳಿ ಎಂದು ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

“ರಾಜ್ಯಪಾಲ ರವಿ ಅವರು ರಾಷ್ಟ್ರಗೀತೆಯಿಂದ ಒಂದು ವಾಕ್ಯ ಅಥವಾ ಪದವನ್ನು ಬಿಟ್ಟು ಬಿಡುವ ಧೈರ್ಯ ಮಾಡುತ್ತಾರೆಯೇ? ಎಂದು ಪ್ರಶ್ನಿಸಿರುವ ಸಿಎಂ ಸ್ಟಾಲಿನ್, ನಾಡ ಗೀತೆಯಿಂದ ‘ದ್ರಾವಿಡ’ ಪದವಿರುವ ಸಾಲನ್ನು ಕೈ ಬಿಟ್ಟಿರುವುದು ತಮಿಳುನಾಡು ಮತ್ತು ತಮಿಳು ಭಾಷೆಗೆ ಮಾಡಿದ ಅವಮಾನ. ರಾಜ್ಯಪಾಲ ರವಿ ಅವರಿಗೆ ‘ದ್ರಾವಿಡ ಅಲರ್ಜಿ’ ಇದೆ” ಎಂದಿದ್ದಾರೆ.

“ದ್ರಾವಿಡ’ ಪದವನ್ನು ಕೈ ಬಿಟ್ಟು ತಮಿಳು ನಾಡಗೀತೆ ಹಾಡುವುದು ತಮಿಳುನಾಡಿನ ಕಾನೂನಿಗೆ ವಿರುದ್ಧವಾಗಿದೆ. ಕಾನೂನಿನ ಪ್ರಕಾರ ನಡೆಯದೆ, ತನ್ನ ಇಚ್ಛೆಗೆ ತಕ್ಕಂತೆ ವರ್ತಿಸುವ ವ್ಯಕ್ತಿಯು ರಾಜ್ಯಪಾಲ ಹುದ್ದೆಯನ್ನು ಅಲಂಕರಿಸಲು ಯೋಗ್ಯನಲ್ಲ. ಭಾರತವನ್ನು ಆಚರಿಸುವ ನೆಪದಲ್ಲಿ, ರಾಜ್ಯಪಾಲರು ದೇಶದ ಏಕತೆ ಮತ್ತು ಈ ನೆಲದಲ್ಲಿ ವಾಸಿಸುವ ವಿವಿಧ ಜನಾಂಗದ ಜನರನ್ನು ಅವಮಾನಿಸುತ್ತಿದ್ದಾರೆ” ಎಂದು ಸ್ಟಾಲಿನ್ ಕಿಡಿಕಾರಿದ್ದಾರೆ.

ಎಲ್ಲೆಡೆಯಿಂದ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಪ್ರಕಟಣೆ ಹೊರಡಿಸಿರುವ ರಾಜ್ಯಪಾಲ ಕಚೇರಿ “ರಾಜ್ಯಪಾಲರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರಷ್ಟೆ, ನಾಡಗೀತೆಯಿಂದ ಒಂದು ಸಾಲು ಕೈಬಿಟ್ಟಿರುವ ವಿಷಯದಲ್ಲಿ ಅವರ ಪಾತ್ರವೇನು ಇಲ್ಲ. ರಾಜ್ಯಪಾಲರು ತಮಿಳುನಾಡು ಮತ್ತು ಇಲ್ಲಿನ ಜನರ ಮೇಲೆ ಉನ್ನತ ಗೌರವನ್ನು ಹೊಂದಿದ್ದಾರೆ. ಅದನ್ನು ಉಳಿಸಿಕೊಳ್ಳಲಿದ್ದಾರೆ” ಎಂದಿದೆ.

ಸಿಎಂ ಸ್ಟಾಲಿನ್ ವಿರುದ್ದ ರಾಜ್ಯಪಾಲ ರವಿ ಕಿಡಿಕಾರಿದ್ದು, ಅವರನ್ನು ‘ಜನಾಂಗೀಯ ವಾದಿ’ ಎಂದು ಕರೆದಿದ್ದಾರೆ. “ನಾನು ಪ್ರತಿ ಕಾರ್ಯಕ್ರಮಗಳಲ್ಲಿ ತಮಿಳು ನಾಡಗೀತೆಯನ್ನು ಸಂಪೂರ್ಣವಾಗಿ ಹಾಡಿಸುತ್ತೇನೆ. ದೂರದರ್ಶನದ ಕಾರ್ಯಕ್ರಮದಲ್ಲಿ ‘ದ್ರಾವಿಡ’ ಪದ ಕೈ ಬಿಡಲಾಗಿದೆ ಎಂದು ಸಿಎಂ ಸುಳ್ಳಾರೋಪ ಮಾಡಿದ್ದಾರೆ. ನನಗೆ ತಮಿಳು ನಾಡಗೀತೆಯ ಬಗ್ಗೆ ಗೌರವ ಇದೆ” ಎಂದಿದ್ದಾರೆ.

ಹಿಂದಿ ಮಾಸಾಚರಣೆಗೆ ಸ್ಟಾಲಿನ್ ಖಂಡನೆ 

ಚೆನ್ನೈ ದೂರದರ್ಶನದ ಸುವರ್ಣ ಮಹೋತ್ಸವದ ಜೊತೆ ಹಿಂದಿ ಮಾಸಾಚರಣೆ ಸಮಾರೋಪ ಸಮಾರಂಭ ಆಯೋಜಿಸಿದ್ದನ್ನು ಕೂಡ ಸಿಎಂ ಎಂ.ಕೆ ಸ್ಟಾಲಿನ್ ತೀವ್ರವಾಗಿ ಖಂಡಿಸಿದ್ದಾರೆ.

ಈ ಕುರಿತು ಪ್ರಧಾನಿ ಮೋದಿಯವರಿಗೆ ಟ್ಯಾಗ್‌ ಮಾಡಿ ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಸ್ಟಾಲಿನ್ “ಚೆನ್ನೈ ದೂರದರ್ಶನದ ಸುವರ್ಣ ಮಹೋತ್ಸವದ ಸಂಭ್ರಮಾಚರಣೆಯ ಜೊತೆಗೆ ಹಿಂದಿ ತಿಂಗಳ ಸಮಾರೋಪ ಸಮಾರಂಭ ಆಯೋಜಿಸಿದ್ದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ.

ಮಾನ್ಯ ಪ್ರಧಾನಿಯವರೇ..ಭಾರತದ ಸಂವಿಧಾನವು ಯಾವುದೇ ಭಾಷೆಗೆ ರಾಷ್ಟ್ರೀಯ ಭಾಷಾ ಸ್ಥಾನಮಾನವನ್ನು ನೀಡಿಲ್ಲ. ಬಹುಭಾಷಾ ರಾಷ್ಟ್ರದಲ್ಲಿ, ಹಿಂದಿಯೇತರ ರಾಜ್ಯಗಳಲ್ಲಿ ಹಿಂದಿ ಮಾಸವನ್ನು ಆಚರಿಸುವುದು ಇತರ ಭಾಷೆಗಳನ್ನು ಕೀಳಾಗಿ ಕಾಣುವ ಪ್ರಯತ್ನವಾಗಿದೆ.

ಆದ್ದರಿಂದ, ಹಿಂದಿಯೇತರ ರಾಜ್ಯಗಳಲ್ಲಿ ಇಂತಹ ಹಿಂದಿ ಆಧಾರಿತ ಕಾರ್ಯಕ್ರಮಗಳನ್ನು ನಡೆಸುವುದನ್ನು ನಿಲ್ಲಿಸಿ, ಬದಲಿಗೆ ಆಯಾ ರಾಜ್ಯಗಳಲ್ಲಿ ಸ್ಥಳೀಯ ಭಾಷಾ ತಿಂಗಳ ಆಚರಣೆಯನ್ನು ಪ್ರೋತ್ಸಾಹಿಸಬೇಕು ಎಂದು ನಾನು ಸಲಹೆ ನೀಡುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ : ಮಹಿಳೆಯರ ಅಕ್ರಮ ಬಂಧನ ಆರೋಪ : ಇಶಾ ಫೌಂಡೇಶನ್ ವಿರುದ್ದದ ಪ್ರಕರಣ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...