Homeಕರ್ನಾಟಕಬಿಜೆಪಿ ಟಿಕೆಟ್ ಕೊಡಿಸುವುದಾಗಿ ₹ 2 ಕೋಟಿ ಸುಲಿಗೆ ಪ್ರಕರಣ : ಇಬ್ಬರ ಬಂಧನ

ಬಿಜೆಪಿ ಟಿಕೆಟ್ ಕೊಡಿಸುವುದಾಗಿ ₹ 2 ಕೋಟಿ ಸುಲಿಗೆ ಪ್ರಕರಣ : ಇಬ್ಬರ ಬಂಧನ

ನನಗೂ ಪ್ರಕರಣಕ್ಕೂ ಸಂಬಂಧವಿಲ್ಲ ಎಂದ ಪ್ರಲ್ಹಾದ್ ಜೋಶಿ

- Advertisement -
- Advertisement -

ಲೋಕಸಭೆ ಚುನಾವಣೆಗೆ ಬಿಜೆಪಿ ಟಿಕೆಟ್ ಕೊಡಿಸುವ ಆಮಿಷವೊಡ್ಡಿ ವಿಜಯಪುರ ಜಿಲ್ಲೆಯ ನಾಗಾಠಾಣ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ದೇವಾನಂದ್ ಫೂಲ್ ಸಿಂಗ್ ಚವ್ಹಾಣ್ ಅವರಿಂದ 2 ಕೋಟಿ ರೂಪಾಯಿ ಸುಲಿಗೆ ಮಾಡಿದ ಆರೋಪ ಪ್ರಕರಣದಲ್ಲಿ ಇಬ್ಬರನ್ನು ಬೆಂಗಳೂರಿನ ಬಸವೇಶ್ವರನಗರ ಠಾಣೆ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಅಥಣಿಯ ಇಂಜಿನಿಯರ್ ಸೋಮಶೇಖರ್ ನಾಯಕ್ ಹಾಗೂ ಬೆಂಗಳೂರಿನ ಬಸವೇಶ್ವರನಗರದ ನಿವಾಸಿ ವಿಜಯಕುಮಾರಿ ಬಂಧಿತರು. ಇನ್ನಿಬ್ಬರು ಆರೋಪಿಗಳಾದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರ ಅಣ್ಣ ಗೋಪಾಲ ಜೋಶಿ ಹಾಗೂ ಅಜಯ್‌ ಜೋಶಿ ತಲೆಮರೆಸಿಕೊಂಡಿದ್ದು, ಅವರ ಪತ್ತೆಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಗೋಪಾಲ ಜೋಶಿಯವರ ಕುಟುಂಬದ ಸ್ನೇಹಿತೆ ವಿಜಯಕುಮಾರಿ ಅವರ ಮನೆಯಲ್ಲಿ ಪರಿಶೀಲನೆ ನಡೆಸಿರುವ ಪೊಲೀಸರು ಕೆಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಗೋಪಾಲ ಜೋಶಿಗೆ ಸೇರಿದ ಸ್ಥಳಗಳಲ್ಲೂ ಶೋಧ ನಡೆಸಿದ್ದಾರೆ.

ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ : ಪ್ರಲ್ಹಾದ್ ಜೋಶಿ

ಸುಲಿಗೆ ಪ್ರಕರಣ ಸಂಬಂಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರ ಸಹೋದರರ ವಿರುದ್ದ ಎಫ್‌ಐಆರ್ ದಾಖಲಾಗಿದೆ ಎಂದು ನಿನ್ನೆ (ಅ.18) ವರದಿಯಾಗಿತ್ತು. ಈ ಬಗ್ಗೆ ಸ್ಪಷ್ಟನೆ ಕೊಟ್ಟಿರುವ ಪ್ರಲ್ಹಾದ್ ಜೋಶಿ, “ನನಗೂ ಆ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ. ನನ್ನ ಹೆಸರು ತಳುಕು ಹಾಕಬೇಡಿ. ನನಗೆ ವಿಜಯಲಕ್ಷಿ ಜೋಶಿ ಎಂಬ ಸಹೋದರಿಯೇ ಇಲ್ಲ” ಎಂದಿದ್ದಾರೆ.

ನವದೆಹಲಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು “ಮೊದಲನೆಯದಾಗಿ ನನಗೆ ಯಾರೂ ಸಹೋದರಿಯರು ಇಲ್ಲ. ನನ್ನ ತಾಯಿಗೆ ಗೋಪಾಲ ಜೋಶಿ ಸೇರಿ ನಾಲ್ವರು ಮಕ್ಕಳು. ಈ ಪೈಕಿ ಒಬ್ಬರು ಈ ಹಿಂದೆಯೇ ಮೃತಪಟ್ಟಿದ್ದಾರೆ. ಸದ್ಯಕ್ಕೆ ಮೂವರು ಇದ್ದೇವೆ. ಆದರೆ, ನನ್ನ ಸಹೋದರ ಗೋಪಾಲ ಜೋಶಿ ಅವರೊಂದಿಗೆ ಕಳೆದ 32 ವರ್ಷಗಳಿಂದ ಸಂಪರ್ಕವಿಲ್ಲ” ಎಂದು ಹೇಳಿದ್ದಾರೆ.

“ಗೋಪಾಲ ಜೋಶಿ ಮಾತ್ರವಲ್ಲದೆ ಯಾರೇ ತಮ್ಮ ಕೆಲಸ ಕಾರ್ಯಗಳಿಗೆ ನನ್ನ ಹೆಸರು ದುರುಪಯೋಗಪಡಿಸಿಕೊಳ್ಳುತ್ತಿದ್ದರೆ, ಅದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಯಾರೊಂದಿಗೂ ನನ್ನ ಹೆಸರು ಉಲ್ಲೇಖಿಸದಂತೆ 2013ರಲ್ಲೇ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ತಡೆಯಾಜ್ಞೆ ನೀಡಿದೆ. ನ್ಯಾಯಾಲಯದ ಅಫಿಡವಿಟ್‌ನಲ್ಲಿ ಆ ವಿವರ ಇದೆ” ಎಂದು ದಾಖಲೆ ತೋರಿಸಿದ್ದಾರೆ.

“ಬೆಂಗಳೂರಿನಲ್ಲಿ ದಾಖಲಾಗಿರುವ ಎಫ್‌ಐಆರ್‌ನಲ್ಲಿ ವಿಜಯಲಕ್ಷಿ ನನ್ನ ಸಹೋದರಿ ಎಂದು ಉಲ್ಲೇಖಿಸಿದ್ದಾರೆ. ವಾಸ್ತವವಾಗಿ ನನಗೆ ಸಹೋದರಿಯರೇ ಇಲ್ಲ. ಗೋಪಾಲ್ ಜೋಶಿ ತಪ್ಪು ಮಾಡಿದ್ದರೆ ಶಿಕ್ಷೆಯಾಗಲಿ. ಈ ಪ್ರಕರಣದಲ್ಲಿ ನನಗೂ, ನನ್ನ ಕುಟುಂಬಕ್ಕೂ ಹಾಗೂ ಬಿಜೆಪಿ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ” ಎಂದಿದ್ದಾರೆ.

ಇದನ್ನೂ ಓದಿ : ‘ಜಾತಿ ಗಣತಿ ವರದಿ ಸಧ್ಯಕ್ಕಿಲ್ಲ’ | ಸಂಪುಟ ಸಭೆಯನ್ನು ಅಕ್ಟೋಬರ್ 25ಕ್ಕೆ ಮುಂದೂಡಿಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...