Homeಮುಖಪುಟಬಹ್ರೈಚ್ ಹಿಂಸಾಚಾರ | ಮತ್ತೇ ಬುಲ್ಡೋಜರ್ ದಾಳಿ ಮುಂದುವರೆಸಿದ ಆದಿತ್ಯನಾಥ್ ಸರ್ಕಾರ

ಬಹ್ರೈಚ್ ಹಿಂಸಾಚಾರ | ಮತ್ತೇ ಬುಲ್ಡೋಜರ್ ದಾಳಿ ಮುಂದುವರೆಸಿದ ಆದಿತ್ಯನಾಥ್ ಸರ್ಕಾರ

- Advertisement -
- Advertisement -

ಉತ್ತರ ಪ್ರದೇಶದ ಬಿಜೆಪಿಯ ಆದಿತ್ಯನಾಥ್ ಆಡಳಿತರ ಬುಲ್ಡೋಜರ್ ದಾಳಿ ಮುಂದುವರೆದಿದ್ದು, ಬಹ್ರೈಚ್‌ನ ಜಿಲ್ಲಾ ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯೂಡಿ) ಅಧಿಕಾರಿಗಳು ಅಕ್ಟೋಬರ್ 13 ರಂದು ಬಹ್ರೈಚ್‌ನಲ್ಲಿ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ 23 ಜನರ ಮನೆಗಳಿಗೆ ಶುಕ್ರವಾರ ನೋಟಿಸ್ ಅಂಟಿಸಿದ್ದಾರೆ. ಮೂರು ದಿನಗಳಲ್ಲಿ ಅಕ್ರಮ ನಿರ್ಮಾಣವನ್ನು ತೆಗೆದುಹಾಕಬೇಕು ಇಲ್ಲದಿದ್ದರೆ ಜಿಲ್ಲಾಡಳಿತ ಕ್ರಮ ತೆಗೆದುಕೊಳ್ಳುತ್ತದೆ ಎಂದು ನೋಟೀಸ್ ಎಚ್ಚರಿಸಿದೆ. ಬಹ್ರೈಚ್ ಹಿಂಸಾಚಾರ

24 ವರ್ಷದ ರಾಮ್ ಗೋಪಾಲ್ ಮಿಶ್ರಾ ಅವರ ಹತ್ಯೆಯ ನಂತರ ಬಹ್ರೈಚ್‌ನಲ್ಲಿ ಕೋಮು ಹಿಂಸಾಚಾರ ಭುಗಿಲೆದ್ದಿತ್ತು. ಈ ಹಿಂಸಾಚಾರಕ್ಕೆ ಕಾರಣ ಎಂದು ಆರೋಪಿಸಲಾಗಿದ್ದ ಐದು ಜನರಲ್ಲಿ ಒಬ್ಬರಾದ ಅಬ್ದುಲ್ ಹಮೀದ್ ಸೇರಿದಂತೆ 23 ಜನರ ವಿರುದ್ಧ ಬುಲ್ಡೋಜರ್ ಕ್ರಮವನ್ನು ಪ್ರಾರಂಭಿಸುವ ಮೊದಲ ಹೆಜ್ಜೆ ಇದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಇಲಾಖಾ ಮಾನದಂಡಗಳ ಪ್ರಕಾರ, ಗ್ರಾಮೀಣ ಪ್ರದೇಶದ ಮುಖ್ಯ ಜಿಲ್ಲಾ ರಸ್ತೆಯಲ್ಲಿ ಇಲಾಖೆಯ ಅನುಮತಿಯಿಲ್ಲದೆ, ರಸ್ತೆಯ ಮಧ್ಯಭಾಗದಿಂದ 60 ಅಡಿ ಅಂತರದಲ್ಲಿ ಯಾವುದೇ ನಿರ್ಮಾಣ ಕಾಮಗಾರಿ ಅಕ್ರಮ ನಿರ್ಮಾಣದ ವರ್ಗಕ್ಕೆ ಸೇರುತ್ತದೆ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

“ಬಹ್ರೈಚ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಥವಾ ಪೂರ್ವ ಇಲಾಖಾ ಅನುಮತಿಯೊಂದಿಗೆ ನಿರ್ಮಾಣ ಕಾರ್ಯವನ್ನು ಮಾಡಿದ್ದರೆ, ಅದರ ಮೂಲ ಪ್ರತಿಯನ್ನು ತಕ್ಷಣವೇ ಒದಗಿಸಿ, ಇಲ್ಲದಿದ್ದರೆ ಮೂರು ದಿನಗಳಲ್ಲಿ ಅಕ್ರಮ ನಿರ್ಮಾಣವನ್ನು ನೀವೇ ತೆಗೆದುಹಾಕಿ. ಇಲ್ಲವಾದಲ್ಲಿ ಪೊಲೀಸರು ಹಾಗೂ ಜಿಲ್ಲಾಡಳಿತದ ನೆರವಿನೊಂದಿಗೆ ಅಕ್ರಮ ಕಟ್ಟಡವನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುವುದು” ಎಂದು ನೋಟಿಸ್‌ನಲ್ಲಿ ಹೇಳಲಾಗಿದೆ.

ಐವರು ಆರೋಪಿಗಳಾದ ಅಬ್ದುಲ್ ಹಮೀದ್, ಮೊಹಮ್ಮದ್ ಅಫ್ಜಲ್, ಮೊಹಮ್ಮದ್ ಫಹೀಮ್, ಮೊಹಮ್ಮದ್ ಸರ್ಫರಾಜ್ ಮತ್ತು ಮೊಹಮ್ಮದ್ ತಾಲೀಮ್ ಅವರನ್ನು ಗುರುವಾರ ಬಂಧಿಸಲಾಯಿತು. ಆರಂಭದಲ್ಲಿ ಮೂವರನ್ನು ಬಂಧಿಸಲಾಗಿದ್ದರೆ, ಸರ್ಫರಾಜ್ ಮತ್ತು ತಾಲೀಮ್ ಅವರನ್ನು ಎನ್‌ಕೌಂಟರ್ ನಂತರ ಬಂಧಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲೆಯ ನನ್‌ಪಾರಾ ಪ್ರದೇಶದಲ್ಲಿ ಅವರ ಕಾಲಿಗೆ ಗುಂಡುಗಳನ್ನು ಹಾರಿಸಲಾಗಿತ್ತು. ಪೊಲೀಸರು ಪ್ರತಿಪಾದನೆಯನ್ನು ಅವರ ಕುಟುಂಬಿಕರು ನಿರಾಕರಿಸಿದ್ದು, ಅವರನ್ನು ಮನೆಯಿಂದ ವಶಕ್ಕೆ ಪಡೆದು ಕರೆದುಕೊಂಡು ಹೋಗಲಾಗಿತ್ತು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸುಲಿಗೆ ಪ್ರಕರಣ | ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಹೋದರ ಗೋಪಾಲ್ ಜೋಶಿ ಬಂಧನ

23 ಮನೆಗಳಿಗೆ ನೋಟಿಸ್ ಅಂಟಿಸಲಾಗಿದೆ ಎಂದು ಮಹಸಿ ಬ್ಲಾಕ್ ಅಭಿವೃದ್ಧಿ ಅಧಿಕಾರಿ (ಬಿಡಿಒ) ಹೇಮಂತ್ ಕುಮಾರ್ ಯಾದವ್ ಅವರು ಖಚಿತಪಡಿಸಿದ್ದು, ಪ್ರದೇಶದಲ್ಲಿ ಭಾರಿ ಪೊಲೀಸ್ ಪಡೆ ನಿಯೋಜಿಸಲಾಗಿದೆ ಮತ್ತು ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿದೆ ಎಂದು ಹೇಳಿದ್ದಾರೆ. ಅಕ್ರಮ ಕಟ್ಟಡಗಳಲ್ಲಿ ವಾಸ ಮಾಡುತ್ತಿರುವ ಅಕ್ರಮ ನಿವಾಸಿಗಳ ವಿರುದ್ಧ ಕ್ರಮ ಕೈಗೊಳ್ಳಲು ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಅತಿಕ್ರಮಣದಾರರಿಗೆ ಮೂರು ದಿನಗಳ ಕಾಲಾವಕಾಶ ನೀಡಲಾಗಿದ್ದು, ಸೂಚನೆ ಮೇರೆಗೆ ಭಾನುವಾರ ಅಥವಾ ಸೋಮವಾರ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಹ್ರೈಚ್‌ನ ಲೋಕೋಪಯೋಗಿ ಇಲಾಖೆಯ (ಪಿಡಬ್ಲ್ಯುಡಿ) ಕಾರ್ಯನಿರ್ವಾಹಕ ಇಂಜಿನಿಯರ್‌ರ ಕಚೇರಿಯಿಂದ ನೋಟಿಸ್ ಅಕ್ಟೋಬರ್ 17, 2024 ರಂದು ನೀಡಲಾಗಿತ್ತು.

ಬಹ್ರೈಚ್ ಜಿಲ್ಲೆಯಲ್ಲಿ ಭಾನುವಾರ ಉದ್ವಿಗ್ನತೆ ಉಂಟಾಗಿದ್ದು, ಹಿಂಸಾಚಾರ ಭುಗಿಲೆದ್ದಿತ್ತು. ಈ ಹಿಂಸಾಚಾರ ಸೋಮವಾರ ರಾತ್ರಿಯವರೆಗೆ ಮುಂದುವರೆದಿತ್ತು. ಒಂದು ದಿನದ ನಂತರ ದುರ್ಗಾಪೂಜೆ ವಿಗ್ರಹ ವಿಸರ್ಜನೆಯ ಸಮಯದಲ್ಲಿ ಗುಂಡು ಹಾರಾಟ ನಡೆದು ರಾಮ್‌ ಮಿಶ್ರಾ ಅವರ ಹತ್ಯೆಯಾಗಿತ್ತು ಹಾಗೂ ನಾಲ್ಕು ಜನರು ಗಾಯಗೊಂಡಿದ್ದರು. ಮುಸ್ಲಿಂ ಪ್ರಾಬಲ್ಯದ ಪ್ರದೇಶಗಳಲ್ಲಿ ನಡೆಸಲಾಗಿದ್ದ ಮೆರವಣಿಗೆಯ ವೇಳೆ ಉದ್ರೇಕಕಾರಿ ಹಾಡುಗಳನ್ನು ನುಡಿಸುವ ಮೂಲಕ ಹಿಂಸಾಚಾರವನ್ನು ಪ್ರಚೋದಿಸಲಾಗಿತ್ತು. ಇದರ ಪರಿಣಾಮ ಹಿಂಸಾಚಾರ ಪ್ರಾರಂಭವಾಗಿತ್ತು ಎಂದು ವರದಿಯಾಗಿದೆ.

ಎಲ್ಲಾ ಐವರು ಆರೋಪಿಗಳನ್ನು 14 ದಿನಗಳ ನ್ಯಾಯಾಂಗ ಬಂಧನದ ಮೇಲೆ ಜೈಲಿಗೆ ಕಳುಹಿಸಲಾಗಿದೆ. ಈ ನಡುವೆ ನೋಟೀಸ್‌ಗಳು ಆ ಪ್ರದೇಶದ ಜನರಲ್ಲಿ ಆತಂಕ ಮೂಡಿಸಿದೆ. ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ಈ ಬೆಳವಣಿಗೆಯನ್ನು ಖಂಡಿಸಿವೆ.

ಇದನ್ನೂ ಓದಿ: ಜಾರ್ಖಂಡ್ | ಜೆಎಂಎಂ-ಕಾಂಗ್ರೆಸ್ 70 ಸ್ಥಾನಗಳಲ್ಲಿ ಸ್ಪರ್ಧೆ; ‘ಏಕಪಕ್ಷೀಯ’ ನಿರ್ಧಾರ ಎಂದ ಆರ್‌ಜೆಡಿ!

ಜಾರ್ಖಂಡ್ | ಜೆಎಂಎಂ-ಕಾಂಗ್ರೆಸ್ 70 ಸ್ಥಾನಗಳಲ್ಲಿ ಸ್ಪರ್ಧೆ; ‘ಏಕಪಕ್ಷೀಯ’ ನಿರ್ಧಾರ ಎಂದ ಆರ್‌ಜೆಡಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...