Homeಚಳವಳಿಆರೋಗ್ಯ ಕಾರ್ಯದರ್ಶಿ ವಜಾಗೊಳಿಸುವ ಬೇಡಿಕೆಯನ್ನು ತಿರಸ್ಕರಿಸಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ಆರೋಗ್ಯ ಕಾರ್ಯದರ್ಶಿ ವಜಾಗೊಳಿಸುವ ಬೇಡಿಕೆಯನ್ನು ತಿರಸ್ಕರಿಸಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

- Advertisement -
- Advertisement -

ಪಶ್ಚಿಮ ಬಂಗಾಳದ ಆರ್‌.ಜಿ. ಕರ್ ಆಸ್ಪತ್ರೆಯಲ್ಲಿ ತಮ್ಮ ಸಹೋದ್ಯೋಗಿಯ ಅತ್ಯಾಚಾರ ಮತ್ತು ಹತ್ಯೆಯನ್ನು ಪ್ರತಿಭಟಿಸಿ ಆಮರಣಾಂತ ಉಪವಾಸ ನಡೆಸುತ್ತಿರುವ ವೈದ್ಯರ ಸತ್ಯಾಗ್ರಹ 15ನೇ ದಿನಕ್ಕೆ ಕಾಲಿಟ್ಟಿದೆ. ಆದರೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ಒತ್ತಾಯಿಸಿದ್ದು, ಅವರ ಹೆಚ್ಚಿನ ಬೇಡಿಕೆಗಳನ್ನು ಪರಿಹರಿಸಲಾಗಿದೆ ಎಂದು ಹೇಳಿದ್ದಾರೆ. ಅದಾಗ್ಯೂ, ರಾಜ್ಯದ ಆರೋಗ್ಯ ಕಾರ್ಯದರ್ಶಿಯನ್ನು ತೆಗೆದುಹಾಕುಂವಂತೆ ಒತ್ತಾಯಿಸಿದ್ದ ವೈದ್ಯರ ಬೇಡಿಕೆಯನ್ನು ತಿರಸ್ಕರಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಮುಖ್ಯ ಕಾರ್ಯದರ್ಶಿ ಮನೋಜ್ ಪಂತ್ ಮತ್ತು ಗೃಹ ಕಾರ್ಯದರ್ಶಿ ನಂದಿನಿ ಚಕ್ರವರ್ತಿ ಅವರು ಎಸ್‌ಪ್ಲಾನೇಡ್‌ನಲ್ಲಿರುವ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಸಂದರ್ಭ ಫೋನ್‌ನಲ್ಲಿ ವೈದ್ಯರೊಂದಿಗೆ ಮಾತನಾಡಿದ ಬ್ಯಾನರ್ಜಿ, “ಪ್ರತಿಭಟನೆ ಮಾಡುವ ಹಕ್ಕು ಪ್ರತಿಯೊಬ್ಬರಿಗೂ ಇದೆ, ಆದರೆ ಇದು ಆರೋಗ್ಯ ಸೇವೆಗಳ ಮೇಲೆ ಪರಿಣಾಮ ಬೀರಬಾರದು. ನಿಮ್ಮೆಲ್ಲರ ಉಪವಾಸ ಹಿಂಪಡೆಯಲು ನಾನು ವಿನಂತಿಸುತ್ತೇನೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ರಾಜ್ಯ ಆರೋಗ್ಯ ಕಾರ್ಯದರ್ಶಿ ನಾರಾಯಣ ಸ್ವರೂಪ್ ನಿಗಮ್ ಅವರನ್ನು ವಜಾಗೊಳಿಸುವಂತೆ ಮತ್ತು ಜೊತೆಗೆ ಇತರ ಸಮಸ್ಯೆಗಳನ್ನು ಪರಿಹರಿಸುವಂತೆ ಒತ್ತಾಯಿಸಿ ಕಿರಿಯ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ನಾನು ಆರೋಗ್ಯ ಕಾರ್ಯದರ್ಶಿಯನ್ನು ಏಕೆ ತೆಗೆದುಹಾಕಲಿಲ್ಲ ಎಂದು ನಿಮಗೆ ತಿಳಿದಿದೆ. ಇಲಾಖೆಯಲ್ಲಿರುವ ಎಲ್ಲರನ್ನೂ ಒಂದೇ ಬಾರಿಗೆ ತೆಗೆಯಲು ಸಾಧ್ಯವಿಲ್ಲ. ನಾವು ಈ ಹಿಂದೆ DHS ಮತ್ತು DME ಅನ್ನು ತೆಗೆದುಹಾಕಿದ್ದೇವೆ. ದಯವಿಟ್ಟು ರಾಜಕೀಯ ಬಿಟ್ಟು ಮತ್ತೆ ಕೆಲಸಕ್ಕೆ ಸೇರಿಕೊಳ್ಳಿ” ಎಂದು ಸಿಎಂ ಹೇಳಿದ್ದಾರೆ.

“ಯಾವ ಅಧಿಕಾರಿಯನ್ನು ತೆಗೆದುಹಾಕಬೇಕು ಅಥವಾ ಬೇಡ ಎಂಬುದನ್ನು ನೀವು ನಿರ್ಧರಿಸಲು ಸಾಧ್ಯವಿಲ್ಲ? ಇದು ತಾರ್ಕಿಕವೇ?” ಎಂದು ಅವರು ಪ್ರಶ್ನಿಸಿದ್ದಾರೆ. ಆರ್‌ಜಿ ಕರ್ ಆಸ್ಪತ್ರೆಯಲ್ಲಿ ಅತ್ಯಚಾರಕ್ಕೆ ಒಳಗಾಗಿ ಮೃತಪಟ್ಟ ತಮ್ಮ ಸಹೋದ್ಯೋಗಿ ನ್ಯಾಯ ಸಿಗುವಂತೆ ಮತ್ತು ರಾಜ್ಯದ ಆರೋಗ್ಯ ಮೂಲಸೌಕರ್ಯದಲ್ಲಿ ವ್ಯವಸ್ಥಿತ ಬದಲಾವಣೆಗೆ ಒತ್ತಾಯಿಸಿ ಕಿರಿಯ ವೈದ್ಯರು ಎರಡು ವಾರಗಳಿಂದ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.

ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಎಂಟು ಮಂದಿಯಲ್ಲಿ, ಇದುವರೆಗೆ ಆರು ವೈದ್ಯರ ಆರೋಗ್ಯ ಹದಗೆಟ್ಟ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಕ್ಟೋಬರ್ 21ರೊಳಗೆ ರಾಜ್ಯ ಸರ್ಕಾರ ರಚನಾತ್ಮಕ ಕ್ರಮ ಕೈಗೊಂಡು ಬಿಕ್ಕಟ್ಟು ಪರಿಹರಿಸಬೇಕು ಎಂದು ಅವರು ಒತ್ತಾಯಿಸುತ್ತಿದ್ದಾರೆ.

ವೈದ್ಯರು ಮುಷ್ಕರ ಹಿಂಪಡೆದು ಸೋಮವಾರ ರಾಜ್ಯ ಕಾರ್ಯದರ್ಶಿಯನ್ನು ಭೇಟಿ ಮಾಡಿ ತಮ್ಮ ಬೇಡಿಕೆಗಳ ಕುರಿತು ಹೆಚ್ಚಿನ ಚರ್ಚೆ ನಡೆಸಬೇಕು ಎಂದು ಸಿಎಂ ಒತ್ತಾಯಿಸಿದ್ದಾರೆ. “ನಾನು ಪೊಲೀಸ್ ಕಮಿಷನರ್ (ಸಿಪಿ), ವೈದ್ಯಕೀಯ ಶಿಕ್ಷಣ ನಿರ್ದೇಶಕ (ಡಿಎಂಇ) ಮತ್ತು ಆರೋಗ್ಯ ಸೇವೆಗಳ ನಿರ್ದೇಶಕರನ್ನು (ಡಿಎಚ್‌ಎಸ್) ತೆಗೆದುಹಾಕಿದ್ದೇನೆ. ಆದರೆ ಇಲಾಖೆಯಲ್ಲಿರುವ ಎಲ್ಲರನ್ನೂ ನಾನು ತೆಗೆದುಹಾಕಲು ಸಾಧ್ಯವಿಲ್ಲ” ಎಂದು ಮಮತಾ ಬ್ಯಾನರ್ಜಿ ವಿವರಿಸಿದ್ದಾರೆ.

ಇದನ್ನೂ ಓದಿ: ಸುಲಿಗೆ ಪ್ರಕರಣ | ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಹೋದರ ಗೋಪಾಲ್ ಜೋಶಿ ಬಂಧನ

ಸುಲಿಗೆ ಪ್ರಕರಣ | ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಹೋದರ ಗೋಪಾಲ್ ಜೋಶಿ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...