Homeಮುಖಪುಟ'ಕಾಂಗ್ರೆಸ್‌ಗೆ ಸಮಸ್ಯೆ ಬಗೆಹರಿಸುವ ಇಚ್ಛೆಯಿಲ್ಲ' | ಶಿವಸೇನೆ (ಯುಬಿಟಿ) ವಾಗ್ದಾಳಿ

‘ಕಾಂಗ್ರೆಸ್‌ಗೆ ಸಮಸ್ಯೆ ಬಗೆಹರಿಸುವ ಇಚ್ಛೆಯಿಲ್ಲ’ | ಶಿವಸೇನೆ (ಯುಬಿಟಿ) ವಾಗ್ದಾಳಿ

- Advertisement -
- Advertisement -

ತಮ್ಮ ಪಕ್ಷ ಮತ್ತು ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ನಡುವಿನ ಸೀಟು ಹಂಚಿಕೆ ಮಾತುಕತೆ ಮುಕ್ತಾಯಗೊಂಡಿದೆ ಎಂದು ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವತ್ ಶನಿವಾರ ಹೇಳಿದ್ದಾರೆ. ಈ ಎರಡು ಪಕ್ಷಗಳಿಗೆ ಸಮಸ್ಯೆಗಳನ್ನು ಪರಿಹರಿಸುವ ಬಯಕೆಯಿದ್ದು, ಒಂದೇ ಮನಸ್ಥಿತಿಯಿಂದ ನಡೆಸಲ್ಪಡುತ್ತವೆ ಎಂದು ಅವರು ಹೇಳಿದ್ದು, ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಹಾರಾಷ್ಟ್ರ

ಮೈತ್ರಿಯಲ್ಲಿನ ಸೀಟು ಹಂಚಿಕೆಯ ಮಾತುಕತೆಯ ವಿಳಂಬದ ಬಗ್ಗೆ ನಿರಾಶೆ ವ್ಯಕ್ತಪಡಿಸಿದ್ದ ಅವರು, ಮಹಾರಾಷ್ಟ್ರ ಕಾಂಗ್ರೆಸ್ ನಾಯಕರು ನಿರ್ಧಾರಗಳನ್ನು ತೆಗೆದುಕೊಳ್ಳಲು ಅಸಮರ್ಥರಾಗಿದ್ದಾರೆ ಎಂದು ಶುಕ್ರವಾರ ಆರೋಪಿಸಿದ್ದರು. ಅದಾಗಿ ಮರು ದಿನ ಕೂಡಾ ಅವರು ಕಾಂಗ್ರೆಸ್ ಅನ್ನು ಮತ್ತೊಮ್ಮೆ ಗುರಿಯಾಗಿರಿಸಿಕೊಂಡರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸುದ್ದಿಗಾರರೊಂದಿಗೆ ಮಾತನಾಡಿದ ರಾವತ್, ಪ್ರಸ್ತುತ ರಾಷ್ಟ್ರ ರಾಜಕೀಯವನ್ನು ಪ್ರಾದೇಶಿಕ ಪಕ್ಷಗಳು ನಡೆಸುತ್ತಿವೆ. ಅದ್ದರಿಂದ ಆಯಾ ರಾಜ್ಯಗಳಲ್ಲಿ ಅವರು ಜಾಗವನ್ನು ಪಡೆಯಬೇಕು ಎಂಬುದು ತಮ್ಮ ಪಕ್ಷದ ನಿಲುವಾಗಿದೆ ಎಂದು ಹೇಳಿದ್ದಾರೆ.

“ನಾವು (ಶಿವಸೇನೆ-ಯುಬಿಟಿ) ಶುಕ್ರವಾರ ಇಡೀ ದಿನ ಎನ್‌ಸಿಪಿ (ಎಸ್‌ಪಿ) ಜೊತೆ ಮಾತುಕತೆ ನಡೆಸಿದ್ದೇವೆ. ಎನ್‌ಸಿಪಿ (ಎಸ್‌ಪಿ) ಯ ರಾಜ್ಯಾಧ್ಯಕ್ಷ ಜಯಂತ್ ಪಾಟೀಲ್ ಮತ್ತು ನಾವು ಮಾತುಕತೆ ನಡೆಸಿದ್ದೇವೆ. ನಮ್ಮ ನಡುವಿನ ಬಹುತೇಕ ಸಮಸ್ಯೆಗಳು ಬಗೆಹರಿಯುತ್ತಿವೆ. ಅಂತಿಮವಾಗಿ ಸಮಸ್ಯೆಯನ್ನು ಪರಿಹರಿಸುವ ಬಗ್ಗೆ ನಿಮಗೆ ಮನಸ್ಸು ಮತ್ತು ಇಚ್ಛೆ ಬೇಕಾಗುತ್ತದೆ, ಅದು ನಮ್ಮಿಬ್ಬರಿಗೂ ಇವೆ” ಎಂದು ರಾವತ್ ಹೇಳಿದ್ದಾರೆ.

“ಶಿವಸೇನೆ (ಯುಬಿಟಿ) ಮತ್ತು ಎನ್‌ಸಿಪಿ (ಎಸ್‌ಪಿ) ನಡುವಿನ ಸೀಟು ಹಂಚಿಕೆ ಮಾತುಕತೆ ಮುಕ್ತಾಯಗೊಂಡಿದೆ. ನಮ್ಮ ಹೈಕಮಾಂಡ್ ಮುಂಬೈನಲ್ಲಿ ಇರುವುದರಿಂದ ಶರದ್ ಪವಾರ್ ಮತ್ತು ಉದ್ಧವ್ ಠಾಕ್ರೆ ವೈಯಕ್ತಿಕವಾಗಿ ಪರಿಶೀಲಿಸುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

ತೆಲುಗು ದೇಶಂ ಪಕ್ಷ (ಟಿಡಿಪಿ) ಮತ್ತು ಜನತಾ ದಳ (ಯುನೈಟೆಡ್) (ಜೆಡಿ-ಯು) ನಂತಹ ಪ್ರಾದೇಶಿಕ ಪಕ್ಷಗಳ ನೆರವಿನಿಂದ ನರೇಂದ್ರ ಮೋದಿ ದೇಶದ ಪ್ರಧಾನಿಯಾದರು. ಇಂಡಿಯಾ ಮೈತ್ರಿಯಲ್ಲಿ ಬಹುಪಾಲು ಪ್ರಾದೇಶಿಕ ಪಕ್ಷಗಳಿವೆ ಎಂದು ಅವರು ಹೇಳಿದ್ದಾರೆ.

ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರೊಂದಿಗೆ ಮಾತನಾಡಿದ್ದಾರೆ. ಉಭಯ ನಾಯಕರ ನಡುವಿನ ಮಾತುಕತೆ ಉತ್ತಮವಾಗಿದೆ ಎಂದು ಸಂಜತ್ ರಾವತ್ ಹೇಳಿದ್ದಾರೆ.

ಕಾಂಗ್ರೆಸ್ ಮತ್ತು ಮೈತ್ರಿಯ ಇತರ ಪಕ್ಷಗಳ ನಡುವಿನ ಭಿನ್ನಾಭಿಪ್ರಾಯದ ಹಿನ್ನಲೆ, ಕಾಂಗ್ರೆಸ್ ನಾಯಕ ರಮೇಶ್ ಚೆನ್ನಿತ್ತಲ ಅವರು ಶನಿವಾರ ಠಾಕ್ರೆ ಅವರನ್ನು ಭೇಟಿಯಾಗಿದ್ದಾರೆ. ಮಹಾರಾಷ್ಟ್ರ ಕಾಂಗ್ರೆಸ್ ಉಸ್ತುವಾರಿಯಾಗಿರುವ ಅವರು ಭೇಟಿಯು ಉದ್ಧವ್ ಠಾಕ್ರೆ ಅವರ ಆರೋಗ್ಯದ ಬಗ್ಗೆ ವಿಚಾರಿಸಲು ನಡೆದಿದೆ ಎಂದು ಹೇಳಿದ್ದಾರೆ.

ಬಾಂದ್ರಾದಲ್ಲಿರುವ ಠಾಕ್ರೆ ಅವರ ನಿವಾಸ ‘ಮಾತೋಶ್ರೀ’ಯಲ್ಲಿ ನಡೆದ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ನಾಯಕ ಚೆನ್ನಿತಲ, ಶಿವಸೇನೆ (ಯುಬಿಟಿ) ನಾಯಕ ಉದ್ಧವ್ ಠಾಕ್ರೆ ಕೆಲವು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರಿಂದ ಅವರ ಆರೋಗ್ಯದ ಬಗ್ಗೆ ವಿಚಾರಿಸಲು ಭೇಟಿಯಾಗಲು ಬಂದಿದ್ದೇನೆ ಎಂದು ತಮ್ಮ ಭೇಟಿಯನ್ನು ರಾಜಕಿಯೇತರ ಎಂದು ಬಿಂಬಿಸಲು ನೋಡಿದ್ದಾರೆ.

ಮಿತ್ರಪಕ್ಷಗಳ ನಡುವಿನ ಮಾತುಕತೆ ಅದರಲ್ಲೂ ವಿಶೇಷವಾಗಿ ಕಾಂಗ್ರೆಸ್ ನಡುವಿನ ಸೀಟು ಹಂಚಿಕೆಯ ಚೌಕಾಶಿ ಮುರಿಯುವ ಹಂತವನ್ನು ತಲುಪಲು ಬಿಡಬಾರದು ಎಂದು ಶುಕ್ರವಾರ ಠಾಕ್ರೆ ಎಚ್ಚರಿಸಿದ್ದಾರೆ. ಆದರೆ ರಾಜ್ಯ ಕಾಂಗ್ರೆಸ್ ನಾಯಕರು ವಿಧಾನಸಭಾ ಕ್ಷೇತ್ರಗಳ ಹಂಚಿಕೆಯ ಬಗ್ಗೆ ನಿರ್ಧಾರಗಳನ್ನು ತೆಗೆದುಕೊಳ್ಳಲು ಅಸಮರ್ಥರಾಗಿದ್ದಾರೆ ಎಂದು ರಾವತ್ ಹೇಳಿದ್ದಾರೆ.

ಇದಕ್ಕೂ ಮುನ್ನ ಶುಕ್ರವಾರ ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ಪಟೋಲೆ ಅವರು ಮೈತ್ರಿಯಲ್ಲಿ 25 ರಿಂದ 30 ವಿಧಾನಸಭಾ ಸ್ಥಾನಗಳಲ್ಲಿ ಅಸ್ಥಿರತೆ ಇದೆ. ಪಕ್ಷದ ರಾಜ್ಯ ಘಟಕವು ಅದರ ಹೈಕಮಾಂಡ್ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ಬದ್ಧವಾಗಿರುತ್ತದೆ ಎಂದು ಹೇಳಿದ್ದಾರೆ.

ಎಂವಿಎ ಮತ್ತು ಆಡಳಿತಾರೂಢ ಮಹಾಯುತಿ ತಮ್ಮ ಬಹು ನಿರೀಕ್ಷಿತ ಸೀಟು ಹಂಚಿಕೆ ಒಪ್ಪಂದವನ್ನು ಇನ್ನೂ ಘೋಷಿಸಿಲ್ಲ. 288 ಸದಸ್ಯ ಬಲದ ರಾಜ್ಯ ವಿಧಾನಸಭೆಗೆ ನವೆಂಬರ್ 20 ರಂದು ಚುನಾವಣೆ ನಡೆಯಲಿದ್ದು, ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದೆ.

ಇದನ್ನೂ ಓದಿ: ಆರೋಗ್ಯ ಕಾರ್ಯದರ್ಶಿ ವಜಾಗೊಳಿಸುವ ಬೇಡಿಕೆಯನ್ನು ತಿರಸ್ಕರಿಸಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ಆರೋಗ್ಯ ಕಾರ್ಯದರ್ಶಿ ವಜಾಗೊಳಿಸುವ ಬೇಡಿಕೆಯನ್ನು ತಿರಸ್ಕರಿಸಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...