Homeಮುಖಪುಟಗುಜರಾತ್ | ಆಸ್ಪತ್ರೆಯ ರೋಗಿಗಳನ್ನು ರಾತ್ರಿ ಎಬ್ಬಿಸಿ ಅವರಿಗೆ ತಿಳಿಯದಂತೆ ಪಕ್ಷದ ಸದಸ್ಯರನ್ನಾಗಿಸಿದ ಬಿಜೆಪಿ!

ಗುಜರಾತ್ | ಆಸ್ಪತ್ರೆಯ ರೋಗಿಗಳನ್ನು ರಾತ್ರಿ ಎಬ್ಬಿಸಿ ಅವರಿಗೆ ತಿಳಿಯದಂತೆ ಪಕ್ಷದ ಸದಸ್ಯರನ್ನಾಗಿಸಿದ ಬಿಜೆಪಿ!

- Advertisement -
- Advertisement -

ಆಸ್ಪತ್ರೆಗೆ ದಾಖಲಾಗಿರುವ ರೋಗಿಗಳನ್ನು ಅವರಿಗೆ ಗೊತ್ತಿಲ್ಲತೆ ಅವರಿಂದ ಒಟಿಪಿ ಸಂಗ್ರಹಿಸಿ ಅವರನ್ನು ಬಿಜೆಪಿ ಸದಸ್ಯರನ್ನಾಗಿ ಮಾಡುವ ಅಭಿಯಾನ ಗುಜರಾತ್‌ನಲ್ಲಿ ಬೆಳಕಿಗೆ ಬಂದಿದೆ. ರಾಜ್‌ಕೋಟ್‌ನ ರಾಂಚೋದ್ದಾಸ್ ಬಾಪು ಚಾರಿಟೇಬಲ್ ಟ್ರಸ್ಟ್ ಕಣ್ಣಿನ ಆಸ್ಪತ್ರೆಯಲ್ಲಿ ಘಟನೆ ನಡೆದಿದೆ. ರೋಗಿಗಳನ್ನು ಮಧ್ಯರಾತ್ರಿಯಲ್ಲಿ ಎಬ್ಬಿಸಿ, ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯ ನಂತರ ಬಿಜೆಪಿ ಸದಸ್ಯರಾಗಿಸುತ್ತಿರುವ ವಿಡಿಯೊ ವೈರಲ್ ಆಗಿದೆ. ಗುಜರಾತ್

ಜುನಾಗಢ್‌ನ ತ್ರಿಮೂರ್ತಿ ಆಸ್ಪತ್ರೆಯಲ್ಲಿ ನೋಂದಾಯಿತ ರೋಗಿಗಳನ್ನು ಸೆಪ್ಟೆಂಬರ್ 16 ರಂದು ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗಾಗಿ ರಾಜ್‌ಕೋಟ್‌ಗೆ ಕರೆತರಲಾಯಿತು ಎಂದು ವರದಿಗಳು ಹೇಳಿವೆ. ರಾತ್ರಿಯಲ್ಲಿ ಒಬ್ಬ ವ್ಯಕ್ತಿ ಅವರನ್ನು ಎಬ್ಬಿಸಿ, ಅವರಿಂದ OTP ಗಳನ್ನು ಸಂಗ್ರಹಿಸಿ, ಅವರನ್ನು ಬಿಜೆಪಿ ಸದಸ್ಯರನ್ನಾಗಿ ಮಾಡಲಾಗಿದೆ ಎಂದು ವರದಿ ಉಲ್ಲೇಖಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಜುನಾಗಢದ ರೋಗಿಯಾದ ಕಮಲೇಶ್ ತುಮ್ಮರ್ ಈ ಘಟನೆಯನ್ನು ವಿಡಿಯೋದಲ್ಲಿ ಸೆರೆಹಿಡಿದು ಮಾಧ್ಯಮಗಳೊಂದಿಗೆ ಹಂಚಿಕೊಂಡಿದ್ದಾರೆ. ಅನೇಕ ರೋಗಿಗಳಿಗೆ ದೃಢೀಕರಣ ಸಂದೇಶಗಳು ಬಂದಾಗಲೇ ತಮ್ಮನ್ನು ಬಿಜೆಪಿ ಸದಸ್ಯರನ್ನಾಗಿ ಮಾಡಿರುವುದು ಅರಿವಾಗಿದೆ ಎಂದು ವರದಿಯಾಗಿದೆ.

“ಕಳೆದ ಭಾನುವಾರ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗಾಗಿ ನಾನು ರಾಜ್‌ಕೋಟ್‌ಗೆ ಹೋಗಿದ್ದೆ. ರಾತ್ರಿ 8 ಗಂಟೆ ಸುಮಾರಿಗೆ ನಿದ್ರೆಗೆ ಜಾರಿದ್ದೆ. ರಾತ್ರಿ 10:30-11 ಗಂಟೆಯ ಸುಮಾರಿಗೆ, ಯಾರೋ ನನ್ನನ್ನು ಎಬ್ಬಿಸಿದರು, ನನ್ನ ಮೊಬೈಲ್ ಸಂಖ್ಯೆಯನ್ನು ಕೇಳಿದರು. ಅವರು ಹೇಳಿದ್ದು ಆಸ್ಪತ್ರೆಗಾಗಿ ಇರಬೇಕು ಎಂದು ನಾನು ಭಾವಿಸಿದ್ದೆ. ಆದರೆ ನನಗೆ ತಿಳಿಯುವ ಮೊದಲು, ಅವರು ನನ್ನ ಫೋನ್ ತೆಗೆದುಕೊಂಡು, OTP ಯನ್ನು ಪಡೆದರು. ನಾನು ನನ್ನ ಫೋನ್ ಅನ್ನು ಮರಳಿ ಪಡೆದಾಗ, ನಾನು ಬಿಜೆಪಿ ಸದಸ್ಯನಾಗಿದ್ದೆ” ಎಂದು ಕಣ್ಣಿನ ಶಸ್ತ್ರಚಿಕಿತ್ಸೆಗಾಗಿ ಜುನಾಗಢದಿಂದ ತೆರಳಿದ್ದ ಕಮಲೇಶ್ ತುಮ್ಮರ್ ಆರೋಪಿಸಿದ್ದಾರೆ. ಗುಜರಾತ್

‘ನನ್ನನ್ನು ಬಿಜೆಪಿ ಸದಸ್ಯನನ್ನಾಗಿ ಮಾಡಿದ್ದೀಯಾ’ ಎಂದು ನಾನು ಅವರನ್ನು ಕೇಳಿದಾಗ, ಅವರು, ‘ಬೇರೆ ದಾರಿಯಿಲ್ಲ’ ಎಂದು ಉತ್ತರಿಸಿದ್ದರು. ಇದು ನಡೆಯಬಾರದು. ಆದರೆ ಅಲ್ಲಿದ್ದ  400 ಜನರಲ್ಲಿ, ಸುಮಾರು 200-250 ಜನರು ಬಿಜೆಪಿ ಸದಸ್ಯರಾಗಿದ್ದಾರೆ. ಅವರನ್ನು ಅವರಿಗೆ ತಿಳಿಯದಂತೆ ಬಲವಂತವಾಗಿ ಸದಸ್ಯತ್ವಕ್ಕೆ ಒಳಪಡಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ರಾಂಚೋದ್ದಾಸ್ ಚಾರಿಟೇಬಲ್ ಟ್ರಸ್ಟ್‌ನ ಶಾಂತಿ ವಡೋಲಿಯಾ ಹೇಳಿಕೆ ನೀಡಿದ್ದು, “ನಮ್ಮ ಟ್ರಸ್ಟ್ ಗುಜರಾತ್‌ನಾದ್ಯಂತ ಉಚಿತ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗಾಗಿ ರೋಗಿಗಳನ್ನು ಕರೆತರುತ್ತದೆ. ಅಕ್ಟೋಬರ್ 16 ರಂದು ನಾವು ಜುನಾಗಢ್‌ನಲ್ಲಿ ಶಿಬಿರವನ್ನು ನಡೆಸಿದ್ದೇವೆ, ಇದನ್ನು ಡಾ. ಚಿಖಾಲಿಯಾ ಅವರು ತ್ರಿಮೂರ್ತಿ ಆಸ್ಪತ್ರೆಯಲ್ಲಿ ಆಯೋಜಿಸಿದ್ದರು. ರೋಗಿಗಳನ್ನು ನಂತರ ರಾಜ್‌ಕೋಟ್‌ಗೆ ಕರೆತರಲಾಯಿತು” ಎಂದು ಹೇಳಿದ್ದಾರೆ.

“ಈ ವಿಷಯ ಈಗಷ್ಟೇ ನಮ್ಮ ಗಮನಕ್ಕೆ ಬಂದಿದ್ದು, ತನಿಖೆ ನಡೆಯುತ್ತಿದೆ. ಟ್ರಸ್ಟ್‌ನ ಯಾವುದೇ ಸದಸ್ಯರು ಭಾಗಿಯಾಗಿರುವುದು ಕಂಡುಬಂದರೆ, ನಿಯಮಗಳ ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ವಡೋಲಿಯಾ ಭರವಸೆ ನೀಡಿದ್ದಾರೆ.

ರಾಜ್‌ಕೋಟ್ ನಗರ ಬಿಜೆಪಿ ಅಧ್ಯಕ್ಷ ಮುಖೇಶ್ ದೋಷಿ ಮಾತನಾಡಿ, “ವೀಡಿಯೊದಲ್ಲಿ ಕಂಡುಬರುವ ವ್ಯಕ್ತಿಯನ್ನು ಗುರುತಿಸುವುದು ಸೇರಿದಂತೆ ಸಂಪೂರ್ಣ ವಿಷಯದ ಬಗ್ಗೆ ತನಿಖೆ ನಡೆಸುವಂತೆ ನಾನು ನನ್ನ ವಲಯ ಕಾರ್ಯದರ್ಶಿಗೆ ಆದೇಶಿಸಿದ್ದೇನೆ. ಮಲಗಿರುವ ರೋಗಿಗಳನ್ನು ಎಬ್ಬಿಸಲು ಮತ್ತು ಅವರನ್ನು ಸದಸ್ಯರನ್ನಾಗಿ ಮಾಡಲು ಯಾರಿಗೂ ಸೂಚನೆಗಳನ್ನು ನೀಡಲಾಗಿಲ್ಲ. ಇಂತಹ ಅತಿರೇಕದ ಕ್ರಮಗಳು ಸಹಿಸುವುದಿಲ್ಲ” ಎಂದು ಹೇಳಿದ್ದಾರೆ.

“ಎಲ್ಲಾ ನಗರ ಬಿಜೆಪಿ ಕಾರ್ಯಕರ್ತರು ಕಳೆದ 50 ದಿನಗಳ ಮಿತಿಯೊಳಗೆ ಇರುವಾಗ ತಮ್ಮ ಸದಸ್ಯತ್ವದ ಗುರಿಯನ್ನು ಮೀರಿದ್ದಾರೆ. ನಾನು ಈ ಘಟನೆಯನ್ನು ಬಲವಾಗಿ ಖಂಡಿಸುತ್ತೇನೆ ಮತ್ತು ಸಂಪೂರ್ಣ ತನಿಖೆಗೆ ಭರವಸೆ ನೀಡುತ್ತೇನೆ. ಇದು ಬಿಜೆಪಿ ಮಾನಹಾನಿ ಮಾಡುವ ಪಿತೂರಿ ಎಂದು ಪರಿಗಣಿಸಿದ್ದೇವೆ” ದೋಷಿ ಹೇಳಿದ್ದಾರೆ.

ಇದನ್ನೂ ಓದಿ: ‘ಕಾಂಗ್ರೆಸ್‌ಗೆ ಸಮಸ್ಯೆ ಬಗೆಹರಿಸುವ ಇಚ್ಛೆಯಿಲ್ಲ’ | ಶಿವಸೇನೆ (ಯುಬಿಟಿ) ವಾಗ್ದಾಳಿ

‘ಕಾಂಗ್ರೆಸ್‌ಗೆ ಸಮಸ್ಯೆ ಬಗೆಹರಿಸುವ ಇಚ್ಛೆಯಿಲ್ಲ’ | ಶಿವಸೇನೆ (ಯುಬಿಟಿ) ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...