Homeಮುಖಪುಟಉತ್ತರಾಖಂಡ | ಮುಸ್ಲಿಂ ಕುಟುಂಬಗಳು ಡಿಸೆಂಬರ್ 31 ರೊಳಗೆ ಪಟ್ಟಣದಿಂದ ಹೊರಹೋಗುವಂತೆ ನಿರ್ಣಯ ಅಂಗೀಕರಿಸಿದ ವ್ಯಾಪಾರಿಗಳು!

ಉತ್ತರಾಖಂಡ | ಮುಸ್ಲಿಂ ಕುಟುಂಬಗಳು ಡಿಸೆಂಬರ್ 31 ರೊಳಗೆ ಪಟ್ಟಣದಿಂದ ಹೊರಹೋಗುವಂತೆ ನಿರ್ಣಯ ಅಂಗೀಕರಿಸಿದ ವ್ಯಾಪಾರಿಗಳು!

- Advertisement -
- Advertisement -

ಡಿಸೆಂಬರ್ 31 ರೊಳಗೆ ಮುಸ್ಲಿಂ ಕುಟುಂಬಗಳನ್ನು ಪಟ್ಟಣದಿಂದ ಹೊರಹೋಗುವಂತೆ ನಿರ್ಣಯ ಅಂಗೀಕರಿಸುವ ಆತಂಕಕಾರಿ ಬೆಳವಣಿಗೆ ಉತ್ತರಾಖಂಡದ ಚಮೋಲಿಯಲ್ಲಿ ನಡೆದಿದೆ. ಇತ್ತಿಚೆಗೆ ರಾಜ್ಯದ ಗುಡ್ಡಗಾಡು ಪ್ರದೇಶಗಳಲ್ಲಿ ಕೋಮು ಉದ್ವಿಗ್ನತೆ ಹೆಚ್ಚುತ್ತಿದ್ದು, ಕೆಲವು ದುಷ್ಕರ್ಮಿಗಳ ಗುಂಪುಗಳು ಸ್ಥಳೀಯ ಮುಸ್ಲಿಂ ಸಮುದಾಯವನ್ನು ಗುರಿ ಮಾಡುವುದನ್ನು ಪ್ರಾರಂಭಿಸಿವೆ. ಉತ್ತರಾಖಂಡ

ಚಮೋಲಿಯ ಖಾನಸರ್ ಪಟ್ಟಣದಲ್ಲಿ ವರ್ತಕರ ಮಂಡಳಿಯು ಡಿಸೆಂಬರ್ 31 ರೊಳಗೆ 15 ಮುಸ್ಲಿಂ ಕುಟುಂಬಗಳನ್ನು ಪಟ್ಟಣವನ್ನು ಖಾಲಿ ಮಾಡುವಂತೆ ನಿರ್ಣಯವನ್ನು ಅಂಗೀಕರಿಸಿದೆ ಎಂದು ವರದಿಯಾಗಿದೆ. ಕೋಮು ಸೌಹಾರ್ದತೆಯ ಬಗ್ಗೆ ಆತಂಕ ವ್ಯಕ್ತಪಡಿಸಿ ಪ್ರದೇಶದಲ್ಲಿನ ಎಲ್ಲಾ “ಹೊರಗಿನವರನ್ನು” ಪರಿಶೀಲಿಸುವಂತೆ ಗುಂಪುಗಳು ಒತ್ತಾಯಿಸಿದೆ.

ದುಷ್ಕರ್ಮಿಗಳ ಈ ನಿರ್ಧಾರದಿಂದ ಪಟ್ಟಣದಲ್ಲಿ ದೀರ್ಘಕಾಲದಿಂದಲೂ ವಾಸಿಸುತ್ತಿರುವ ಮುಸ್ಲಿಂ ನಿವಾಸಿಗಳನ್ನು ಕೂಡಾ ಆಘಾತ ಮತ್ತು ದಿಗ್ಭ್ರಮೆಗೊಳಿಸಿದೆ. ಉತ್ತರಾಖಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ಇತ್ತಿಚಿನ ವಿಡಿಯೊದಲ್ಲಿ ವ್ಯಾಪಾರಿಗಳ ರ‍್ಯಾಲಿಯ ವೇಳೆ ಮೆರವಣಿಗೆಯಲ್ಲಿ ಹೆಚ್ಚಾಗಿ ಸ್ಥಳೀಯ ಉದ್ಯಮಿಗಳು ಭಾಗವಹಿಸಿದ್ದರು. ಇದರಲ್ಲಿ ಪ್ರಚೋದನಕಾರಿ ಘೋಷಣೆಗಳನ್ನು ಕೂಗುತ್ತಿರುವುದು ದಾಖಲಾಗಿದೆ. ಎತ್ತುತ್ತಿರುವುದನ್ನು ತೋರಿಸುತ್ತದೆ. ಮುಸ್ಲಿಮರಿಗೆ ನಿಷೇಧ ಹೇರುವ ಸಾಮಾಜಿಕ ಮಾಧ್ಯಮದಲ್ಲಿ ಆಕ್ರೋಶ ವ್ಯಕ್ತಪವಾಗಿದ್ದು, ಈ ಕ್ರಮವನ್ನು ಮುಸ್ಲಿಂ ಸಮುದಾಯದ ವಿರುದ್ಧ ತಾರತಮ್ಯದ ಘೋರ ಕೃತ್ಯ ಎಂದು ಬಣ್ಣಿಸಿದ್ದಾರೆ.

ಹೆಸರು ಹೇಳಲು ಇಚ್ಛಿಸದ ಸ್ಥಳೀಯ ಹೋರಾಟಗಾರರೊಬ್ಬರು, “ಈ ನಿರ್ಧಾರವು ಸ್ವೀಕಾರಾರ್ಹವಲ್ಲ. ಇದು ಸಮಾನತೆ ಮತ್ತು ನ್ಯಾಯದ ತತ್ವಗಳಿಗೆ ವಿರುದ್ಧವಾಗಿದೆ. ನಾವು ಈ ಪ್ರಸ್ತಾಪದ ವಿರುದ್ಧ ಹೋರಾಡುತ್ತೇವೆ ಮತ್ತು ಎಲ್ಲಾ ನಾಗರಿಕರ ಹಕ್ಕುಗಳನ್ನು ರಕ್ಷಿಸಲಾಗಿದೆ ಎಂದು ಖಚಿತಪಡಿಸಿಕೊಳ್ಳುತ್ತೇವೆ” ಎಂದು ಹೇಳಿದ್ದಾರೆ.

ಮತ್ತೊಬ್ಬ ಸ್ಥಳೀಯ ನಿವಾಸಿ, “ಇದು ಕೇವಲ 15 ಕುಟುಂಬಗಳ ವಿಚಾರವಲ್ಲ. ಇದು ನಮ್ಮ ಸಮಾಜದ ರಚನೆಗೆ ಸಂಬಂಧಿಸಿದ ವಿಚಾರವಾಗಿದೆ. ಇಂತಹ ವಿಭಜಕ ಕ್ರಮಗಳ ವಿರುದ್ಧ ನಾವು ಒಟ್ಟಾಗಿ ನಿಲ್ಲಬೇಕು.” ಎಂದು ಹೇಳಿದ್ದಾರೆ. ಅದಾಗ್ಯೂ, ಹತ್ತಾರು ವರ್ಷಗಳಿಂದ ಪಟ್ಟಣದಲ್ಲಿ ನೆಲೆಸಿರುವ ಸಂತ್ರಸ್ತ ಕುಟುಂಬಗಳು ತಮ್ಮ ಭವಿಷ್ಯದ ಬಗ್ಗೆ ಆತಂಕದಲ್ಲಿದ್ದಾರೆ.

“ವರ್ತಕರ ಸಂಘದ ಈ ಹಠಾತ್ ನಿರ್ಧಾರದಿಂದ ನಾವು ತೀವ್ರವಾಗಿ ವಿಚಲಿತರಾಗಿದ್ದೇವೆ. ನಾವು ದಶಕಗಳಿಂದ ಇಲ್ಲಿ ವಾಸಿಸುತ್ತಿದ್ದೇವೆ ಮತ್ತು ನಮ್ಮ ಕುಟುಂಬಗಳು ಈ ಸಮುದಾಯದ ಅವಿಭಾಜ್ಯ ಅಂಗವಾಗಿದೆ. ನಮ್ಮನ್ನು ಏಕೆ ಇಲ್ಲಿಂದ ಹೊರಹೋಗುವಂತೆ ಒತ್ತಾಯಿಸುತ್ತಿದ್ದಾರೆ?” ಎಂದು ಹೆಸರು ಹೇಳಲು ಇಚ್ಛಿಸದ ಪಟ್ಟಣದಲ್ಲೆ ಉಳಿಯಲು ಬಯಸುವ ಸ್ಥಳೀಯ ಮುಸ್ಲಿಂ ನಿವಾಸಿಯೊಬ್ಬರು ಹೇಳಿದ್ದಾರೆ.

ಹಿಂದೂ ಮಹಿಳೆಯರು ಮತ್ತು ಅಲ್ಪಸಂಖ್ಯಾತ ಸಮುದಾಯದ ಸದಸ್ಯರ ನಡುವೆ ನಡೆಯುವ ಅಪರಾಧ ಘಟನೆಗಳನ್ನು ತಡೆಯುವ ಉದ್ದೇಶದಿಂದ ಈ ನಿರ್ಧಾನ ಕೈಗೊಳ್ಳಲಾಗಿದೆ ಎಂದು ಮೈಥಾನ್ ಸೇವಾ ಸಮಿತಿಯ ಅಧ್ಯಕ್ಷ ವೀರೇಂದ್ರ ಸಿಂಗ್ ಹೇಳಿದ್ದಾರೆ. ಮೈಥಾನ್ ಮಾರುಕಟ್ಟೆಯಲ್ಲಿ ನಡೆದ ‘ಜಾಗೃತ’ ರ‍್ಯಾಲಿಯ ನಂತರ ವರ್ತಕರ ಸಂಘದ ಸಭೆಯಲ್ಲಿ ಈ ಪ್ರಸ್ತಾಪವನ್ನು ಸರ್ವಾನುಮತದಿಂದ ಅಂಗೀಕರಿಸಲಾಯಿತು ಎಂದು ಅವರು ಹೇಳಿದ್ದಾರೆ.

ಅಷ್ಟೆ ಅಲ್ಲದೆ, ಈ ಸಭೆಯಲ್ಲಿ ಖಾನ್ಸರ್ ಕಣಿವೆಯ ಗ್ರಾಮದ ಪ್ರದೇಶಗಳಿಗೆ ಎಲ್ಲಾ ಮಾರಾಟಗಾರರನ್ನು ಪ್ರವೇಶಿಸುವುದನ್ನು ನಿಷೇಧಿಸಲು ನಿರ್ಧರಿಸಲಾಯಿತು ಎಂದು ಸಿಂಗ್ ಹೇಳಿದ್ದಾರೆ. ಒಂದು ವೇಳೆ ವ್ಯಾಪಾರಿಗಳು ಸಿಕ್ಕಿಬಿದ್ದರೆ ಅವರು 10,000 ರೂಪಾಯಿ ದಂಡ ಮತ್ತು ಕಾನೂನು ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ.

ಖಾನ್ಸರ್ ಪಟ್ಟಣದಲ್ಲಿರುವ ಮೈಥಾನ್ ಮಾರುಕಟ್ಟೆ ಗೈರ್‌ಸೈನ್‌ನ ಪ್ರಮುಖ ಭಾಗವಾಗಿದ್ದು, 21 ಗ್ರಾಮ ಪಂಚಾಯತ್‌ಗಳೊಂದಿಗೆ ಸುಮಾರು 40,000 ಜನಸಂಖ್ಯೆಯನ್ನು ಹೊಂದಿದೆ. ಮೈಥಾನ್ ಟ್ರೇಡ್ ಅಸೋಸಿಯೇಷನ್ ​​ಅಧ್ಯಕ್ಷ ಬಲದೇವ್ ಸಿಂಗ್ ನೇಗಿ ಮಾತನಾಡಿ, “ನಾವು ಯಾವುದೇ ಸಂದರ್ಭದಲ್ಲೂ ದೇವಭೂಮಿಯ ವಾತಾವರಣವನ್ನು ಹದಗೆಡಲು ಬಿಡುವುದಿಲ್ಲ. ಅನುಮಾನಾಸ್ಪದ ವ್ಯಕ್ತಿಗಳು ಈ ಪ್ರದೇಶದಲ್ಲಿ ವ್ಯಾಪಾರ ಮಾಡಲು ಅನುಮತಿಸುವುದಿಲ್ಲ” ಎಂದು ಹೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಚಮೋಲಿ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಸರ್ವೇಶ್ ಪನ್ವಾರ್, “ನಾವು ಶನಿವಾರ ವರ್ತಕರ ಸಂಘದ ಸದಸ್ಯರು ಮತ್ತು ಸ್ಥಳೀಯ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಿದ್ದೇವೆ. ಈ ಸಭೆಯಲ್ಲಿ ಪ್ರದೇಶದಲ್ಲಿ ವ್ಯಾಪಾರ ಮಾಡುವ ಹೊರಗಿನವರ ಪರಿಶೀಲನೆ ಮತ್ತು ಕಣ್ಗಾವಲು ನಿರ್ಣಾಯಕವಾಗಿದೆ ಎಂದು ನಾವು ತೀರ್ಮಾನಕ್ಕೆ ಬಂದಿದ್ದೇವೆ. ತನಿಖೆಯು ನಿರ್ಣಾಯಕವಾಗಿದ್ದು ಪ್ರಸ್ತುತ ನಡೆಯುತ್ತಿದೆ.” ಎಂದು ಹೇಳಿದ್ದಾರೆ.

ಗೈರ್‌ಸೈನ್ ಎಸ್‌ಎಚ್‌ಒ ಜೈಪಾಲ್ ಸಿಂಗ್ ನೇಗಿ ಮಾತನಾಡಿ, “ಪೊಲೀಸರು ಸ್ಥಳೀಯ ಗುಪ್ತಚರ ಘಟಕದ ಸಹಾಯದಿಂದ ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಈ ಬಗ್ಗೆ ಇದುವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ.” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಗುಜರಾತ್: ಹೈಕೋರ್ಟ್ ನಿರ್ದೇಶನದ ನಂತರ ಬಿಜೆಪಿ ಶಾಸಕನ ಮೇಲೆ ಅತ್ಯಾಚಾರ ಪ್ರಕರಣ ದಾಖಲು

ಗುಜರಾತ್: ಹೈಕೋರ್ಟ್ ನಿರ್ದೇಶನದ ನಂತರ ಬಿಜೆಪಿ ಶಾಸಕನ ಮೇಲೆ ಅತ್ಯಾಚಾರ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದೊಂದಿಗಿನ ಯುದ್ಧಕ್ಕೆ ಇರಾನ್ 40 ವರ್ಷಗಳಿಂದ ಸಿದ್ಧವಾಗಿತ್ತು: ನಿವೃತ್ತ ಲೆಫ್ಟಿನೆಂಟ್ ಜನರಲ್ ಧಿಲ್ಲೋನ್

"ತನ್ನ ಅತ್ಯುನ್ನತ ನಾಯಕತ್ವವನ್ನು ಕಳೆದುಕೊಳ್ಳುವಂತಹ ತುರ್ತು ಪರಿಸ್ಥಿತಿಗಳು ಸೇರಿದಂತೆ, ಅಮೆರಿಕದೊಂದಿಗಿನ ಸಂಭಾವ್ಯ ಯುದ್ಧಕ್ಕಾಗಿ ಇರಾನ್ ನಾಲ್ಕು ದಶಕಗಳಿಂದ ಸಿದ್ಧತೆ ನಡೆಸಿದೆ. ಹೀಗಾಗಿ ಎದುರಾಳಿಗಳಿಗೆ ಆ ದೇಶವನ್ನು ಸಂಪೂರ್ಣವಾಗಿ ನಾಶಪಡಿಸುವುದು ಕಷ್ಟಕರವಾಗಿದೆ" ಎಂದು ಭಾರತೀಯ...

ಸಚಿವ ಬಿ. ನಾಗೇಂದ್ರ ವಜಾಗೆ ಆಗ್ರಹಿಸಿ ಆಗಸ್ಟ್ 24ರಂದು ವಿಧಾನಸೌಧ ಮುತ್ತಿಗೆಗೆ ಕರೆ ನೀಡಿದ ಬಿಜೆಪಿ: ಉಲ್ಬಣಗೊಂಡ ರಾಜಕೀಯ ಸಂಘರ್ಷ

ಕರ್ನಾಟಕದ ರಾಜಕೀಯ ವಲಯದಲ್ಲಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣಕಾಸು ಅಕ್ರಮ ಪ್ರಕರಣವು ಭಾರಿ ಸಂಚಲನ ಮೂಡಿಸಿದ್ದು, ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಮತ್ತು ವಿರೋಧ ಪಕ್ಷಗಳ ನಡುವಿನ ಸಮರ...

ಕೇರಳ ವಿಶ್ವವಿದ್ಯಾಲಯದಲ್ಲಿ ಜಾತಿ ತಾರತಮ್ಯ; ದಲಿತ ಪಿಎಚ್‌ಡಿ ಸಂಶೋಧಕಿಯಿಂದ ಆರೋಪ

ತುಂಚತ್ ಎಝುತ್ತಚ್ಚನ್ ಮಲಯಾಳಂ ವಿಶ್ವವಿದ್ಯಾಲಯದ (ಟಿಇಎಂಯು) ದಲಿತ ಸಂಶೋಧಕಿಯೊಬ್ಬರು, "ಸಹಾಯಕ ಪ್ರಾಧ್ಯಾಪಕರೊಬ್ಬರು ತಮ್ಮ ವಿರುದ್ಧ ಜಾತಿ ಆಧಾರಿತ ತಾರತಮ್ಯ, ಕಿರುಕುಳ ಮತ್ತು ಪಿಎಚ್‌ಡಿ ಸಂಶೋಧನೆಗೆ ಅಡ್ಡಿಪಡಿಸುತ್ತಿದ್ದಾರೆ" ಎಂದು ಆರೋಪಿಸಿದ್ದಾರೆ. ಆಗಸ್ಟ್ 15 ರಿಂದ ತಿರೂರಿನ...

ಉತ್ತರ ಪ್ರದೇಶ| ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ; ತನ್ನದೇ ಅಂಗಡಿಯ ಸಿಹಿತಿಂಡಿ ತಿನ್ನಲು ನಿರಾಕರಿಸಿದ ಮಾಲೀಕ

ಆಹಾರ ಸುರಕ್ಷತಾ ದಾಳಿಯ ವೇಳೆ ಸಿಹಿ ತಿಂಡಿ ಅಂಗಡಿಯ ಮಾಲೀಕನೊಬ್ಬ ತನ್ನದೇ ಅಂಗಡಿಯಲ್ಲಿ ಮಾರಾಟಕ್ಕಿಟ್ಟಿದ್ದ ಸಿಹಿತಿಂಡಿಯನ್ನು ತಿನ್ನಲು ನಿರಾಕರಿಸಿ ಸುದ್ದಿಯಾಗಿರುವ ಘಟನೆ ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ ನಡೆದಿದೆ. ಕಲಬೆರಕೆ ಹಾಗೂ ನಕಲಿ ಸಿಹಿತಿಂಡಿಗಳನ್ನು ಮಾರಾಟ...

ದೇಶದ ಅಭಿವೃದ್ಧಿಗೆ ಕೌಶಲ್ಯದ ಕೊರತೆ ಸವಾಲು: 8.7 ಕೋಟಿ ಯುವಜನರು ಶಿಕ್ಷಣ, ಉದ್ಯೋಗದಿಂದ ವಂಚಿತರಾಗಿದ್ದಾರೆ ಎಂದ ನೀತಿ ಆಯೋಗ

ಭಾರತದ ಆರ್ಥಿಕ ಪ್ರಗತಿ ಹಾಗೂ ಭವಿಷ್ಯದ ಅಭಿವೃದ್ಧಿಯ ಹಾದಿಯಲ್ಲಿ ದೇಶದ ಯುವಶಕ್ತಿಯನ್ನು ಬಳಸಿಕೊಳ್ಳುವುದು ಅತ್ಯಂತ ನಿರ್ಣಾಯಕವಾಗಿದೆ. ಆದರೆ ಪ್ರಸ್ತುತ ದೇಶದಲ್ಲಿ ಕೋಟ್ಯಂತರ ಯುವಜನರು ಯಾವುದೇ ರೀತಿಯ ಶಿಕ್ಷಣ, ಉದ್ಯೋಗ ಅಥವಾ ಕೌಶಲ್ಯ ತರಬೇತಿಯಲ್ಲಿ...

ಮೀಸಲಾತಿ ಭಿಕ್ಷೆಯಲ್ಲ, ಸಾಂವಿಧಾನಿಕ ಹಕ್ಕು: ಕೇಂದ್ರ ಸಚಿವ ಚಿರಾಗ್ ಪಾಸ್ವಾನ್

"ಯಾರದ್ದೋ ಬೇಡಿಕೆಗೆ ಮೀಸಲಾತಿಯನ್ನು ರದ್ದುಗೊಳಿಸಲು ಸಾಧ್ಯವಿಲ್ಲ. ಇದು ತಲೆಮಾರುಗಳಿಂದ ಸಾಮಾಜಿಕ ತಾರತಮ್ಯವನ್ನು ಎದುರಿಸಿದ ಸಮುದಾಯಗಳನ್ನು ಬೆಂಬಲಿಸಲು ಇರುವ ಸಾಂವಿಧಾನಿಕ ಹಕ್ಕು" ಎಂದು ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಶುಕ್ರವಾರ ಹೇಳಿದ್ದಾರೆ. ದೆಹಲಿಗೆ ತೆರಳುವ...

ಸರ್ಕಾರಿ ಶಾಲೆಗೆ ಅತಿಕ್ರಮಣ ಮತ್ತು ಶಿಕ್ಷಕರಿಗೆ ಬೆದರಿಕೆ ಆರೋಪ: ಲಾತೂರ್‌ನಲ್ಲಿ ಸಿಜೆಪಿ ನಾಯಕ ಅಭಿಜೀತ್ ದೀಪ್ಕೆ ವಿರುದ್ಧ ಎಫ್‌ಐಆರ್ ದಾಖಲು

ಅನುಮತಿಯಿಲ್ಲದೆ ಸರ್ಕಾರಿ ಶಾಲೆಯ ತರಗತಿ ಕೊಠಡಿಗೆ ಪ್ರವೇಶಿಸಿ, ಶೈಕ್ಷಣಿಕ ಕಾರ್ಯಗಳಿಗೆ ಅಡ್ಡಿಪಡಿಸಿದ ಹಾಗೂ ಕರ್ತವ್ಯದಲ್ಲಿದ್ದ ಶಿಕ್ಷಕರಿಗೆ ಬೆದರಿಕೆಯೊಡ್ಡಿದ ಆರೋಪದ ಮೇಲೆ ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಚಾಲಕ ಅಭಿಜೀತ್ ದೀಪ್ಕೆ ಮತ್ತು ಅವರ...

ಸರ್ಕಾರಿ ಶಾಲೆಗೆ ಅತಿಕ್ರಮಣ ಮತ್ತು ಶಿಕ್ಷಕರಿಗೆ ಬೆದರಿಕೆ ಆರೋಪ: ಲಾತೂರ್‌ನಲ್ಲಿ ಸಿಜೆಪಿ ನಾಯಕ ಅಭಿಜೀತ್ ದೀಪ್ಕೆ ವಿರುದ್ಧ ಎಫ್‌ಐಆರ್ ದಾಖಲು

ಅನುಮತಿಯಿಲ್ಲದೆ ಸರ್ಕಾರಿ ಶಾಲೆಯ ತರಗತಿ ಕೊಠಡಿಗೆ ಪ್ರವೇಶಿಸಿ, ಶೈಕ್ಷಣಿಕ ಕಾರ್ಯಗಳಿಗೆ ಅಡ್ಡಿಪಡಿಸಿದ ಹಾಗೂ ಕರ್ತವ್ಯದಲ್ಲಿದ್ದ ಶಿಕ್ಷಕರಿಗೆ ಬೆದರಿಕೆಯೊಡ್ಡಿದ ಆರೋಪದ ಮೇಲೆ ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಚಾಲಕ ಅಭಿಜೀತ್ ದೀಪ್ಕೆ ಮತ್ತು ಅವರ...

ಶೇ.80 ರಷ್ಟು ಮಹಿಳೆಯರು ಕಿರುಕುಳ ಎದುರಿಸುತ್ತಿದ್ದಾರೆ; ಹಿಂಸಾಚಾರವು ಅವರ ಪ್ರಗತಿಗೆ ಅಡ್ಡಿಯಾಗಿದೆ: ರಾಹುಲ್ ಗಾಂಧಿ

ದೇಶದ ಅತಿದೊಡ್ಡ ಆಸ್ತಿಯಾಗಿರುವ ಮಹಿಳೆಯರು ಪ್ರಗತಿ ಸಾಧಿಸುವುದನ್ನು ತಡೆಯಲು ಸಮಾಜದಲ್ಲಿ ಹಿಂಸಾಚಾರವನ್ನು ಬಳಸಲಾಗುತ್ತಿದೆ. ಶೇಕಡಾ 80 ರಷ್ಟು ಜನರು ಕಿರುಕುಳ ಎದುರಿಸುತ್ತಿದ್ದಾರೆ ಎಂದು ಕಾಂಗ್ರೆಸ್‌ ನಾಯಕ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ...

‘ಅಕ್ರಮ ವಲಸಿಗರ ಪರಿಶೀಲನೆ’ ನೆಪದಲ್ಲಿ ಬಂಗಾಳಿ ವಲಸೆ ಕಾರ್ಮಿಕರ ಮೇಲೆ ಬೆಂಗಳೂರು ಪೊಲೀಸರಿಂದ ದೌರ್ಜನ್ಯ: ಜಂಟಿ ಸತ್ಯಶೋಧನಾ ವರದಿ

ಬೆಂಗಳೂರು ನಗರದಲ್ಲಿ ನಡೆದ "ಅಕ್ರಮ ವಲಸಿಗರ ಪರಿಶೀಲನೆ" ಕಾರ್ಯಾಚರಣೆಯ ಹೆಸರಿನಲ್ಲಿ ಬಂಗಾಳಿ ಮಾತನಾಡುವ ವಲಸೆ ಕಾರ್ಮಿಕರನ್ನು ಭಾಷೆ ಮತ್ತು ವರ್ಗದ ಆಧಾರದ ಮೇಲೆ ಪ್ರೊಫೈಲಿಂಗ್ ಮಾಡಿ, ಅವರ ಮೇಲೆ ಅನಿಯಂತ್ರಿತ ಬಂಧನ, ಹಲ್ಲೆ...