Homeಮುಖಪುಟದಲಿತ ಯುವಕನ ಹತ್ಯೆ ಪ್ರಕರಣ: ಆಂಧ್ರದ ಮಾಜಿ ಸಚಿವರ ಪುತ್ರ ಪಿನಿಪೆ ಶ್ರೀಕಾಂತ್ ಬಂಧನ

ದಲಿತ ಯುವಕನ ಹತ್ಯೆ ಪ್ರಕರಣ: ಆಂಧ್ರದ ಮಾಜಿ ಸಚಿವರ ಪುತ್ರ ಪಿನಿಪೆ ಶ್ರೀಕಾಂತ್ ಬಂಧನ

- Advertisement -
- Advertisement -

ಎರಡು ವರ್ಷಗಳ ಹಿಂದೆ ದಲಿತ ಯುವಕನ ಹತ್ಯೆಗೆ ಸಂಬಂಧಿಸಿದಂತೆ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ನಾಯಕ ಮತ್ತು ಮಾಜಿ ಸಚಿವ ಪಿನಿಪೆ ವಿಶ್ವರುಪ್ ಅವರ ಪುತ್ರ ಪಿನಿಪೆ ಶ್ರೀಕಾಂತ್ ನನ್ನು ಆಂಧ್ರಪ್ರದೇಶ ಪೊಲೀಸರು ಬಂಧಿಸಿದ್ದಾರೆ.

ತಮಿಳುನಾಡಿನ ಮಧುರೈನಲ್ಲಿ ಆಂಧ್ರಪ್ರದೇಶ ಪೊಲೀಸರ ತಂಡ ಶ್ರೀಕಾಂತ್‌ನನ್ನು ವಶಕ್ಕೆ ತೆಗೆದುಕೊಂಡಿದೆ. ಅವರನ್ನು ‘ಟ್ರಾನ್ಸಿಟ್ ವಾರಂಟ್’ ಮೇಲೆ ರಾಜ್ಯಕ್ಕೆ ಕರೆತರಲಾಗುತ್ತಿತ್ತು. ಈತ ದಲಿತ ಯುವಕ ಹಾಗೂ ಗ್ರಾಮದ ಸ್ವಯಂಸೇವಕ ಜೆ.ದುರ್ಗಾ ಪ್ರಸಾದ್ ಹತ್ಯೆಯ ಆರೋಪಿ ಎಂದು ಹೇಳಲಾಗುತ್ತಿದೆ.

ಕಳೆದ ಕೆಲವು ದಿನಗಳಿಂದ ಆಂಧ್ರ ಪೊಲೀಸರು ಶ್ರೀಕಾಂತ್‌ಗಾಗಿ ಹುಡುಕಾಟ ನಡೆಸಿದ್ದರು, ಅವರನ್ನು ಮಧುರೈನಲ್ಲಿ ಬಂಧಿಸಿ ಟ್ರಾನ್ಸಿಟ್ ವಾರಂಟ್ ಪಡೆಯಲು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಅವರನ್ನು ರಸ್ತೆ ಮಾರ್ಗವಾಗಿ ಕೋನಸೀಮಾ ಜಿಲ್ಲೆಗೆ ಕರೆತರಲಾಗುತ್ತಿತ್ತು.

ಆದರೆ, ಶ್ರೀಕಾಂತ್ ತಮ್ಮ ಮೇಲಿನ ಆರೋಪಗಳನ್ನು ಅಲ್ಲಗಳೆದಿದ್ದಾರೆ. ಆಸ್ಪತ್ರೆಗೆ ವೈದ್ಯಕೀಯ ಪರೀಕ್ಷೆಗೆ ಪೊಲೀಸರು ಕರೆದುಕೊಂಡು ಹೋಗುತ್ತಿದ್ದಾಗ ಮಧುರೈನಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿ, “ನಾನು ವೈದ್ಯ, ಜೀವ ಉಳಿಸುವುದು ಮಾತ್ರ ನನಗೆ ಗೊತ್ತು. ಈ ಪ್ರಕರಣದಲ್ಲಿ ಅಕ್ರಮವಾಗಿ ಬಂಧಿಸಲಾಗಿದೆ” ಎಂದು ಆರೋಪಿಸಿದರು.

ಕೋನಸೀಮಾ ಜಿಲ್ಲೆಯಲ್ಲಿ ನಡೆದ ಗಲಭೆಗಳ ನಂತರ 2022ರ ಜೂನ್ 6 ರಂದು ದುರ್ಗಾ ಪ್ರಸಾದ್ ಅವರನ್ನು ಕೊಲ್ಲಲಾಯಿತು. ಪೊಲೀಸರು ಈ ಹಿಂದೆ ಸಂತ್ರಸ್ತನ ಸ್ನೇಹಿತ ಮತ್ತು ವೈಎಸ್‌ಆರ್‌ಸಿಪಿ ಸಾಮಾಜಿಕ ಮಾಧ್ಯಮ ಸಂಚಾಲಕ ವಿ.ಧರ್ಮೇಶ್ ಅವರನ್ನು ವಿಚಾರಣೆಗೆ ಒಳಪಡಿಸಿದ್ದರು. ಅಕ್ಟೋಬರ್ 18ರಂದು ಆತನನ್ನು ಬಂಧಿಸಲಾಗಿತ್ತು. ಪೊಲೀಸರು ಶ್ರೀಕಾಂತ್ ಮತ್ತು ಇತರ ನಾಲ್ವರು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದರು.  ಮೃತನು ಧರ್ಮೇಶ್ ಮತ್ತು ಶ್ರೀಕಾಂತ್ ಇಬ್ಬರಿಗೂ ಸ್ನೇಹಿತನಾಗಿದ್ದು, ಪಕ್ಷದ ಚಟುವಟಿಕೆಯಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದರು ಎನ್ನಲಾಗಿದೆ.

ದಲಿತ ಯುವಕನ ಹತ್ಯೆಯ ಹಿಂದಿನ ಉದ್ದೇಶ ತಿಳಿದಿಲ್ಲ. ಯೋಜಿತ ಸಂಚು ರೂಪಿಸಿ ಹತ್ಯೆಗೈದಿರುವುದಾಗಿ ಪೊಲೀಸರು ಶಂಕಿಸಿದ್ದಾರೆ. ಧರ್ಮೇಶ್ ಅವರು ದುರ್ಗಾ ಪ್ರಸಾದ್ ಅವರನ್ನು ದ್ವಿಚಕ್ರ ವಾಹನದಲ್ಲಿ ಕೋಟಿಪಲ್ಲಿ ದಕ್ಕೆಗೆ ಕರೆದುಕೊಂಡು ಹೋಗಿದ್ದರು. ಅವರನ್ನು ಕಾರಿನಲ್ಲಿ ನಾಲ್ವರು ಹಿಂಬಾಲಿಸಿದರು. ನಂತರ ಸಂತ್ರಸ್ತನನ್ನು ದೋಣಿಗೆ ಕರೆದೊಯ್ದ ನಂತರ ಆರೋಪಿಗಳು ದುರ್ಗಾ ಪ್ರಸಾದ್ ಅವರನ್ನು ಕತ್ತು ಹಿಸುಕಿ ಸಾಯಿಸಿದ್ದಾರೆ ಎನ್ನಲಾಗಿದೆ.

ಮೃತನ ಕುಟುಂಬದ ದೂರಿನ ಮೇರೆಗೆ ಪೊಲೀಸರು ನಾಪತ್ತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಂತರ ಪೊಲೀಸರು ಆತನ ಶವವನ್ನು ಪತ್ತೆ ಹಚ್ಚಿದ್ದು, ಶವಪರೀಕ್ಷೆಯಲ್ಲಿ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ. ವಿಶ್ವರೂಪ್ ಅವರು ವೈಎಸ್ಆರ್ ಕಾಂಗ್ರೆಸ್ ಪಕ್ಷದ ಹಿಂದಿನ ಸರ್ಕಾರದಲ್ಲಿ ಸಾರಿಗೆ ಸಚಿವರಾಗಿದ್ದರು. ಮೇ 2022 ರಲ್ಲಿ ಕೋನಸೀಮಾ ಜಿಲ್ಲೆಯ ಮರುನಾಮಕರಣದ ಹಿಂಸಾಚಾರದ ಸಂದರ್ಭದಲ್ಲಿ ಅಮಲಾಪುರಂನಲ್ಲಿರುವ ಅವರ ಮನೆಗೆ ಗುಂಪೊಂದು ಬೆಂಕಿ ಹಚ್ಚಿತು. ಆದರೆ, ವೈಎಸ್‌ಆರ್‌ಸಿಪಿ ನಾಯಕ ಮತ್ತು ಅವರ ಕುಟುಂಬ ಸದಸ್ಯರು ಮನೆಯಲ್ಲಿ ಇರಲಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ; ಉತ್ತರ ಪ್ರದೇಶ: ‘ಜೈ ಶ್ರೀ ರಾಮ್’ ಘೋಷಣೆ ಕೂಗುವಂತೆ ಒತ್ತಾಯಿಸಿ ದಲಿತ ಬಾಲಕನಿಗೆ ಥಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...