“ಮಹಾರಾಷ್ಟ್ರದಲ್ಲಿ ಬಿಜೆಪಿ ರೈತರ ದೊಡ್ಡ ಶತ್ರು, ಡಬಲ್ ಇಂಜಿನ್ ಸರ್ಕಾರವನ್ನು ಅಧಿಕಾರದಿಂದ ತೆಗೆದುಹಾಕುವುದರಿಂದ ಮಾತ್ರ ರೈತರಿಗೆ ಲಾಭವಾಗುತ್ತದೆ” ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ ಪ್ರತಿಪಾದಿಸಿದರು.
ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಮಹಾರಾಷ್ಟ್ರದಲ್ಲಿ ರೈತರ ಆತ್ಮಹತ್ಯೆಗಳ ಬಗ್ಗೆ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. “ರಾಜ್ಯವನ್ನು ಬರ ಮುಕ್ತಗೊಳಿಸುವ ಭರವಸೆ ಜುಮ್ಲಾ (ವಾಕ್ಚಾತುರ್ಯ), ಬಿಜೆಪಿಯು ಮಹಾರಾಷ್ಟ್ರದ ರೈತರ ದೊಡ್ಡ ಶತ್ರುವಾಗಿದೆ. 20,000 ರೈತರು 20,000 ಕೋಟಿ ವಾಟರ್ ಗ್ರಿಡ್ ಭರವಸೆ ಸುಳ್ಳಾಗಿದೆ” ಎಂದು ಅವರು ಹೇಳಿದರು.
ವಿಮಾ ಕಂಪನಿಗಳಿಗೆ 8000 ಕೋಟಿ ರೂ.ಗಳ ಸುರಿಮಳೆಯಾಗುತ್ತಿರುವಾಗ ರೈತರಿಗೆ ಪರಿಹಾರ ನೀಡಲು ನಿರಾಕರಿಸಿರುವ ಬಿಜೆಪಿ ವಿರುದ್ಧ ಖರ್ಗೆ ವಾಗ್ದಾಳಿ ನಡೆಸಿದರು.
ರಫ್ತು ನಿಷೇಧ, ಈರುಳ್ಳಿ ಮತ್ತು ಸೋಯಾಬೀನ್ ರೈತರ ಮೇಲೆ ಹೆಚ್ಚಿನ ರಫ್ತು ಸುಂಕದ ಹೊರೆ; ಹತ್ತಿ ಮತ್ತು ಕಬ್ಬು ಉತ್ಪಾದನೆಯಲ್ಲಿ ಭಾರಿ ಕುಸಿತ, ರೈತರನ್ನು ಸಂಕಷ್ಟಕ್ಕೆ ತಳ್ಳುವ ಬಗ್ಗೆ ಅವರು ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು.
ರಾಜ್ಯದ ಹಾಲು ಸಹಕಾರಿ ಸಂಘಗಳು ಬಿಕ್ಕಟ್ಟಿಗೆ ಸಿಲುಕಿದ್ದು, ಸರ್ಕಾರವೇ ಒಪ್ಪಿಕೊಂಡಿದೆ ಎಂದು ಖರ್ಗೆ ಕಿಡಿಕಾರಿದರು.
भाजपा, महाराष्ट्र के किसानों की सबसे बड़ी दुश्मन है।
🌾20,000 किसानों ने की आत्महत्या
🌾खेती में फंडिंग की भारी कटौती
🌾₹20,000 Cr के जल ग्रिड का वादा निकला झूठा
🌾महाराष्ट्र को सूखा मुक्त बनाने का वादा है जुमला
🌾अन्नदाता को मुआवजा देने से इंकार
🌾बीमा कंपनियों पर ₹8000… pic.twitter.com/bO51mvCRse— Mallikarjun Kharge (@kharge) October 21, 2024
ಆಡಳಿತಾರೂಢ ಮಹಾಯುತಿ ಮೈತ್ರಿಕೂಟವು ಏಕನಾಥ್ ಶಿಂಧೆ ಅವರ ಶಿವಸೇನೆ, ಬಿಜೆಪಿ ಮತ್ತು ಅಜಿತ್ ಪವಾರ್ ನೇತೃತ್ವದ ಎನ್ಸಿಪಿಯನ್ನು ಒಳಗೊಂಡಿದೆ.
ಆದರೆ, ವಿರೋಧ ಪಕ್ಷದ ಎಂವಿಎ ಕಾಂಗ್ರೆಸ್, ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಮತ್ತು ಶರದ್ ಪವಾರ್ ನೇತೃತ್ವದ ಎನ್ಸಿಪಿ (ಎಸ್ಪಿ) ಒಳಗೊಂಡಿದೆ.
ಮಹಾರಾಷ್ಟ್ರ ತನ್ನ 288 ಸದಸ್ಯರ ವಿಧಾನಸಭೆಯನ್ನು ಆಯ್ಕೆ ಮಾಡಲು ನವೆಂಬರ್ 20 ರಂದು ಒಂದು ಹಂತದಲ್ಲಿ ಮತದಾನ ನಡೆಯಲಿದೆ ಎಂದು ಚುನಾವಣಾ ಆಯೋಗವು ಕಳೆದ ಮಂಗಳವಾರ ಘೋಷಿಸಿತು.
ಪ್ರಸ್ತುತ ಮಹಾರಾಷ್ಟ್ರ ವಿಧಾನಸಭೆಯು ತನ್ನ ಅವಧಿಯನ್ನು ಪೂರ್ಣಗೊಳಿಸುವ ಒಂದು ದಿನ ಮೊದಲು ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದೆ.
ಇದನ್ನೂ ಓದಿ; ತಮಿಳುನಾಡಿನಲ್ಲಿ ಹೇಗಾದರೂ ಹಿಂದಿ ಹೇರಲು ಅನೇಕರು ಪ್ರಯತ್ನಿಸುತ್ತಿದ್ದಾರೆ: ಉದಯನಿಧಿ ಸ್ಟಾಲಿನ್


