Homeಮುಖಪುಟಸಿಎಎ ವಿರೋಧಿ ಪ್ರತಿಭಟನೆ ವೇಳೆ ಹಿಂಸಾಚಾರ | ಅಸ್ಸಾಂ ಶಾಸಕ ಅಖಿಲ್ ಗೊಗೋಯ್ ವಿರುದ್ಧ ಯುಎಪಿಎ...

ಸಿಎಎ ವಿರೋಧಿ ಪ್ರತಿಭಟನೆ ವೇಳೆ ಹಿಂಸಾಚಾರ | ಅಸ್ಸಾಂ ಶಾಸಕ ಅಖಿಲ್ ಗೊಗೋಯ್ ವಿರುದ್ಧ ಯುಎಪಿಎ ಅಡಿಯಲ್ಲಿ ಆರೋಪ

- Advertisement -
- Advertisement -

ಸಿಎಎ ವಿರೋಧಿ ಆಂದೋಲನದ ವೇಳೆ ನಡೆದ ಹಿಂಸಾಚಾರದಲ್ಲಿ ಅಸ್ಸಾಂನ ರೈಜೋರ್ ದಳ ಪಕ್ಷದ ಶಾಸಕ ಅಖಿಲ್ ಗೊಗೊಯ್ ಮತ್ತು ಅವರ ಮೂವರು ಸಹಚರರ ಕೈವಾಡವಿದೆ ಎಂದು ಅವರ ವಿರುದ್ಧ ಎನ್‌ಐಎ ವಿಶೇಷ ನ್ಯಾಯಾಲಯವು ಕಠಿಣ ಯುಎಪಿಎ ಮತ್ತು ಐಪಿಸಿಯ ಸೆಕ್ಷನ್‌ಗಳ ಅಡಿಯಲ್ಲಿ ಮಂಗಳವಾರ ಆರೋಪಗಳನ್ನು ದಾಖಲಿಸಿದೆ. ಸಿಎಎ ವಿರೋಧಿ ಪ್ರತಿಭಟನೆ 

NIA ವಿಶೇಷ ನ್ಯಾಯಾಧೀಶ ಎಸ್‌.ಕೆ. ಶರ್ಮಾ ಅವರು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆಯ ಸೆಕ್ಷನ್ 18 (ಪಿತೂರಿ) ಮತ್ತು IPC ಸೆಕ್ಷನ್‌ಗಳಾದ 120B (ಅಪರಾಧದ ಪಿತೂರಿ), 153A (ಹಗೆತನದ ಪ್ರಚಾರ), ಮತ್ತು 153B (ರಾಷ್ಟ್ರೀಯ ಏಕೀಕರಣಕ್ಕೆ ಅಪಾಯ) ಅಡಿಯಲ್ಲಿ ಗೊಗೋಯ್ ವಿರುದ್ಧ ಆರೋಪಗಳನ್ನು ದಾಖಲಿಸಿದ್ದಾರೆ ಎಂದು ಅವರ ವಕೀಲ ಸಾಂತನು ಬೋರ್ತಕೂರ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮತ್ತೊಂದೆಡೆ, ಅಖಿಲ್ ಅವರ ಸಹಚರರಾದ ಧೈಜ್ಯಾ ಕೊನ್ವರ್, ಬಿಟ್ಟು ಸೋನೊವಾಲ್ ಮತ್ತು ಮನಶ್ ಕೊನ್ವರ್ ವಿರುದ್ಧ ಯುಎಪಿಎ ಸೆಕ್ಷನ್ 18 ಮತ್ತು ಐಪಿಸಿಯ 120 ಬಿ ಅಡಿಯಲ್ಲಿ ಆರೋಪಗಳನ್ನು ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

NIA ತನ್ನ ಚಾರ್ಜ್ ಶೀಟ್‌ನಲ್ಲಿ ಅಖಿಲ್ ವಿರುದ್ಧ ಭಯೋತ್ಪಾದಕ ಸಂಘಟನೆಗೆ ಬೆಂಬಲ ನೀಡಿದ್ದಾರೆ ಮತ್ತು ದೇಶದ್ರೋಹ ಮಾಡಿದ್ದಾರೆ ಎಂದು UAPA ಸೆಕ್ಷನ್ 39 ಮತ್ತು  IPC ಸೆಕ್ಷನ್ 124A (ದೇಶದ್ರೋಹ) ಆರೋಪವನ್ನು ಮಾಡಿತ್ತು. ಆದರೆ ಈ ಆರೋಪವನ್ನು ನ್ಯಾಯಾಲಯ ತಿರಸ್ಕರಿಸಿದೆ. ಸಿಎಎ ವಿರೋಧಿ ಪ್ರತಿಭಟನೆ

ಇದಕ್ಕೆ ಪ್ರತಿಕ್ರಿಯಿಸಿದ ಗೊಗೊಯ್, “ನಾವು ಜನರೊಂದಿಗೆ ಇದ್ದೇವೆ ಎಂಬುದನ್ನು ಇದು ಮತ್ತೊಮ್ಮೆ ಸಾಬೀತುಪಡಿಸುತ್ತದೆ. ಈ ಸರ್ಕಾರವು ನಮ್ಮನ್ನು ಜೈಲಿನೊಳಗೆ ಇರಿಸಲು ಬಯಸುತ್ತದೆ. ಫ್ಯಾಸಿಸ್ಟ್ ಮತ್ತು ಕೋಮುವಾದಿ ಸರ್ಕಾರದ ವಿರುದ್ಧದ ಹೋರಾಟವು ತುಂಬಾ ಕಷ್ಟಕರವಾಗಿದ್ದು, ದುಬಾರಿ ವ್ಯವಹಾರವಾಗಿದೆ.” ಎಂದು ಹೇಳಿದ್ದಾರೆ.

ನಾವು ನಾಲ್ವರೂ ನಮ್ಮ ವಿರುದ್ಧ ಆರೋಪಗಳನ್ನು ರೂಪಿಸುವುದರ ವಿರುದ್ಧ ಗುವಾಹಟಿ ಹೈಕೋರ್ಟ್‌ಗೆ ಮೊರೆ ಹೋಗಲಿದ್ದೇವೆ ಎಂದು ಅಖಿಲ್ ಗೊಗೋಯ್ ಅವರು ಹೇಳಿದ್ದಾರೆ.

ಡಿಸೆಂಬರ್ 2019 ರಲ್ಲಿ ಪೌರತ್ವ ವಿರೋಧಿ (ತಿದ್ದುಪಡಿ) ಕಾಯ್ದೆಯ ವಿರುದ್ಧ ರಾಜ್ಯದಲ್ಲಿ ನಡೆದ ಹಿಂಸಾಚಾರದಲ್ಲಿ ಅಖಿಲ್ ಗೊಗೊಯ್ ಮತ್ತು ಅವರ ಮೂವರು ಸಹಚರರ ಪಾತ್ರ ಇದೆ ಎಂದು ಎನ್‌ಐಎ 2 ಪ್ರಕರಣಗಳನ್ನು ದಾಖಲಿಸಿದ್ದು, ಅವರ ವಿರುದ್ಧ ತನಿಖೆ ನಡೆಸುತ್ತಿದೆ.

ಇದನ್ನೂ ಓದಿ: ಬಹ್ರೈಚ್‌ ಪ್ರಕರಣ: ಬುಲ್ಡೋಜರ್ ಕ್ರಮದ ವಿರುದ್ಧ ಯೋಗಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಪರೋಕ್ಷ ಎಚ್ಚರಿಕೆ

ಬಹ್ರೈಚ್‌ ಪ್ರಕರಣ: ಬುಲ್ಡೋಜರ್ ಕ್ರಮದ ವಿರುದ್ಧ ಯೋಗಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಪರೋಕ್ಷ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...