Homeಮುಖಪುಟಗುಜರಾತ್ | ನಕಲಿ ಟೋಲ್‌ ಪ್ಲಾಝಾ, ಆಸ್ಪತ್ರೆ ಬಳಿಕ ನಕಲಿ ಕೋರ್ಟ್ ಪತ್ತೆ

ಗುಜರಾತ್ | ನಕಲಿ ಟೋಲ್‌ ಪ್ಲಾಝಾ, ಆಸ್ಪತ್ರೆ ಬಳಿಕ ನಕಲಿ ಕೋರ್ಟ್ ಪತ್ತೆ

- Advertisement -
- Advertisement -

ತನ್ನ ಕಚೇರಿಯಲ್ಲೇ ನಕಲಿ ನ್ಯಾಯಾಲಯ ಸ್ಥಾಪಿಸಿ, ಅದರಲ್ಲಿ ನ್ಯಾಯಾಧೀಶನಂತೆ ನಟಿಸಿ ನೈಜ ನ್ಯಾಯಾಲಯದಂತೆ ಆದೇಶವನ್ನೂ ಹೊರಡಿಸಿದ ವ್ಯಕ್ತಿಯೊಬ್ಬನನ್ನು ಗುಜರಾತ್‌ನ ಗಾಂಧಿನಗರದಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಮೋರಿಸ್ ಸ್ಯಾಮ್ಯುಯೆಲ್ ಕ್ರಿಶ್ಚಿಯನ್ ಬಂಧಿತ ಆರೋಪಿ. ಈತ 2019ರಲ್ಲಿ ಸರ್ಕಾರಿ ಭೂಮಿಗೆ ಸಂಬಂಧಿಸಿದ ಪ್ರಕರಣದಲ್ಲಿ ತನ್ನ ಕಕ್ಷಿದಾರನ ಪರವಾಗಿ ಆದೇಶ ನೀಡಿದ ಆರೋಪವಿದೆ. ಕಳೆದ ಐದು ವರ್ಷಗಳಿಂದ ನಕಲಿ ನ್ಯಾಯಾಲಯ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿದು ಬಂದಿದೆ.

ಸ್ಯಾಮ್ಯುಯೆಲ್ ಸಿಟಿ ಸಿವಿಲ್ ಕೋರ್ಟ್‌ನಲ್ಲಿ ಭೂ ವಿವಾದದ ಪ್ರಕರಣಗಳು ಬಾಕಿ ಇರುವ ಜನರನ್ನು ಬಲೆಗೆ ಬೀಳಿಸುತ್ತಿದ್ದ. ತನ್ನ ಕಕ್ಷಿದಾರರಿಂದ ಅವರ ಪ್ರಕರಣವನ್ನು ಪರಿಹರಿಸಲು ಶುಲ್ಕವಾಗಿ ನಿರ್ದಿಷ್ಟ ಮೊತ್ತವನ್ನು ತೆಗೆದುಕೊಳ್ಳುತ್ತಿದ್ದ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಸ್ಯಾಮ್ಯುಯೆಲ್ ಮೊದಲು ನ್ಯಾಯಾಲಯದಿಂದ ನೇಮಕಗೊಂಡ ಅಧಿಕೃತ ಮಧ್ಯಸ್ಥಗಾರನಾಗಿ ತನ್ನನ್ನು ತಾನು ಗುರುತಿಸಿಕೊಳ್ಳುತ್ತಿದ್ದ. ನ್ಯಾಯಾಲಯದಂತೆ ವಿನ್ಯಾಸಗೊಳಿಸಲಾಗಿರುವ ಗಾಂಧಿನಗರದ ತನ್ನ ಕಚೇರಿಗೆ ಗ್ರಾಹಕರನ್ನು ಕರೆಸಿಕೊಳ್ಳುತ್ತಿದ್ದ. ನ್ಯಾಯಮಂಡಳಿಯ ಮುಖ್ಯಸ್ಥರಂತೆ ಅನುಕೂಲಕರ ಆದೇಶಗಳನ್ನು ನೀಡುತ್ತಿದ್ದ ಎಂದು ವರದಿಯಾಗಿದೆ.

ಆರ್ಬಿಟ್ರಲ್ ಟ್ರಿಬ್ಯೂನಲ್ ನ್ಯಾಯಾಲಯದ ನ್ಯಾಯಾಧೀಶನಂತೆ ನಟಿಸುವ ಮೂಲಕ ಜನರನ್ನು ವಂಚಿಸಿದ ಆರೋಪದ ಮೇಲೆ ಅಹ್ಮದಾಬಾದ್ ನಗರ ಪೊಲೀಸರು ಸ್ಯಾಮ್ಯುಯೆಲ್‌ನನ್ನು ಬಂಧಿಸಿದ್ದಾರೆ.

ಸಿಟಿ ಸಿವಿಲ್ ನ್ಯಾಯಾಲಯದ ರಿಜಿಸ್ಟ್ರಾರ್ ಹಾರ್ದಿಕ್ ದೇಸಾಯಿ ದೂರಿನಂತೆ ಕಾರಂಜ್ ಪೊಲೀಸ್ ಠಾಣೆಯಲ್ಲಿ ಸ್ಯಾಮ್ಯುಯೆಲ್ ಕ್ರಿಶ್ಚಿಯನ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 170 ಮತ್ತು 419ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

2019ರಲ್ಲಿ ಸ್ಯಾಮ್ಯುಯೆಲ್ ನಕಲಿ ನ್ಯಾಯಾಲಯ ಸೃಷ್ಟಿಸಿ ತನ್ನ ಗ್ರಾಹಕರ ಪರವಾಗಿ ಆದೇಶ ಹೊರಡಿಸಿದ್ದ. ಈ ಪ್ರಕರಣವು ಜಿಲ್ಲಾಧಿಕಾರಿಗಳ ಅಧೀನದಲ್ಲಿರುವ ಸರ್ಕಾರಿ ಜಮೀನಿಗೆ ಸಂಬಂಧಿಸಿತ್ತು. ಪಾಲ್ಡಿ ಪ್ರದೇಶದಲ್ಲಿನ ಈ ಜಮೀನನ್ನು ತನ್ನ ಕಕ್ಷಿದಾರನಿಗೆ ಆರೋಪಿ ನೀಡಿದ್ದ. ಸ್ಯಾಮ್ಯುಯೆಲ್ ಸರ್ಕಾರದಿಂದ ನೇಮಿತ ‘ಅಧಿಕೃತ ಮಧ್ಯಸ್ಥಗಾರ’ ಎಂದು ಹೇಳಿಕೊಂಡು ನ್ಯಾಯಾಲಯದ ಕಲಾಪ ಆರಂಭಿಸಿ ತನ್ನ ಕಕ್ಷಿದಾರನ ಪರವಾಗಿ ಆದೇಶವನ್ನು ಹೊರಡಿಸಿದ್ದ.

ತನ್ನ ಆದೇಶವನ್ನು ಜಾರಿಗೆ ತರಲು ಸ್ಯಾಮ್ಯುಯೆಲ್ ಮತ್ತೋರ್ವ ವಕೀಲನ ಮೂಲಕ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದಾನೆ ಮತ್ತು ಆದೇಶದ ಪ್ರತಿಯನ್ನೂ ಈ ವೇಳೆ ಲಗತ್ತಿಸಿದ್ದಾನೆ. ಆದರೆ, ನ್ಯಾಯಾಲಯದ ರಿಜಿಸ್ಟ್ರಾರ್ ಹಾರ್ದಿಕ್ ದೇಸಾಯಿ ಇದು ನಕಲಿ ಆದೇಶ ಎಂದು ಪತ್ತೆ ಹಚ್ಚಿ ಕಾರಂಜ್ ಪೊಲೀಸರಿಗೆ ದೂರು ನೀಡಿದ್ದಾರೆ.

ಸ್ಯಾಮ್ಯುಯೆಲ್ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 170 (ಸಾರ್ವಜನಿಕ ಸೇವಕನಾಗಿ ಯಾವುದೇ ಕಚೇರಿಯನ್ನು ಹೊಂದಿರುವಂತೆ ನಟಿಸುವುದು) ಮತ್ತು 419 (ವ್ಯಕ್ತಿಯಿಂದ ವಂಚನೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಡಿಸೆಂಬರ್ 2023ರಲ್ಲಿ ಗುಜರಾತ್‌ನ ಮೊರ್ಬಿ ಜಿಲ್ಲೆಯಲ್ಲಿ ನಕಲಿ ಟೋಲ್ ಫ್ಲಾಝಾ ಸ್ಥಾಪಿಸಿ ವಾಹನ ಚಾಲಕರಿಂದ ಹಣ ಪಡೆಯುತ್ತಿದ್ದ ಪ್ರಕರಣವೊಂದು ಬೆಳಕಿಗೆ ಬಂದಿತ್ತು. ಆ ಬಳಿಕ ನಕಲಿ ಸರ್ಕಾರಿ ಕಚೇರಿ ಪತ್ತೆಯಾದ ಬಗ್ಗೆ ವರದಿಯಾಗಿತ್ತು. ಕಳೆದ ಜುಲೈನಲ್ಲಿ ಅಹಮದಾಬಾದ್‌ ಜಿಲ್ಲೆಯ ಭವ್ಲಾ ತಾಲೂಕಿನ ಕೇರಳ ಎಂಬ ಗ್ರಾಮದಲ್ಲಿ ನಕಲಿ ಆಸ್ಪತ್ರೆಯೂ ಪತ್ತೆಯಾಗಿತ್ತು.

ಇದನ್ನೂ ಓದಿ : ಸಿಎಎ ವಿರೋಧಿ ಪ್ರತಿಭಟನೆ ವೇಳೆ ಹಿಂಸಾಚಾರ | ಅಸ್ಸಾಂ ಶಾಸಕ ಅಖಿಲ್ ಗೊಗೋಯ್ ವಿರುದ್ಧ ಯುಎಪಿಎ ಅಡಿಯಲ್ಲಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...