Homeಮುಖಪುಟಕಳೆದ 24 ಗಂಟೆಗಳಲ್ಲಿ 79 ವಿಮಾನಗಳಿಗೆ ಬಾಂಬ್ ಬೆದರಿಕೆ; ಕಳೆದ ವಾರದಿಂದ 160 ಬೆದರಿಕೆ ಕರೆಗಳು

ಕಳೆದ 24 ಗಂಟೆಗಳಲ್ಲಿ 79 ವಿಮಾನಗಳಿಗೆ ಬಾಂಬ್ ಬೆದರಿಕೆ; ಕಳೆದ ವಾರದಿಂದ 160 ಬೆದರಿಕೆ ಕರೆಗಳು

- Advertisement -
- Advertisement -

ಸೋಮವಾರ ರಾತ್ರಿಯಿಂದ ಮಂಗಳವಾರದವರೆಗೆ ಮುಖ್ಯವಾಗಿ ಅಂತಾರಾಷ್ಟ್ರೀಯ ಮಾರ್ಗಗಳಲ್ಲಿ ಪ್ರಯಾಣಿಸುವ ಕನಿಷ್ಠ 79 ವಿಮಾನಗಳಿಗೆ ಬಾಂಬ್ ಬೆದರಿಕೆಗಳು ಬಂದಿವೆ ಎಂದು ವರದಿಯಾಗಿದೆ. ಕಳೆದ ಒಂದು ವಾರದಿಂದ 160ಕ್ಕೂ ಹೆಚ್ಚು ವಿಮಾನಗಳಿಗೆ ಸರಣಿಯಾಗಿ ಬಾಂಬ್ ಬೆದರಿಕೆಗಳು ಬಂದಿವೆ. ಕಳೆದ 24 ಗಂಟೆಗಳಲ್ಲಿ

ಕಳೆದ ಒಂದು ದಿನದಲ್ಲಿ ಇಂಡಿಗೋದ 23 ವಿಮಾನಗಳು, ವಿಸ್ತಾರಾದ 21, ಅಕಾಸಾದಿಂದ 12 ಮತ್ತು ಏರ್ ಇಂಡಿಯಾದಿಂದ 23 ವಿಮಾನಗಳನ್ನು ಗುರಿಯಾಗಿಸಿ ಬಾಂಬ್ ಬೆದರಿಕೆ ಕರೆಗಳು ಬಂದಿವೆ. ಈ ವಾರ ವಿಮಾನಯಾನ ಸಂಸ್ಥೆಗಳಿಗೆ ಬಂದ ಒಟ್ಟು ಬೆದರಿಕೆ ಕರೆಗಳ ಸಂಖ್ಯೆ ಸುಮಾರು 169 ಕ್ಕೆ ಏರಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಇತ್ತೀಚಿಗೆ ಬಂದ ಬಾಂಬ್ ಬೆದರಿಕೆಗಳು ಜಿದ್ದಾ, ಇಸ್ತಾಂಬುಲ್ ಮತ್ತು ರಿಯಾದ್‌ನಂತಹ ಪ್ರಮುಖ ಸ್ಥಳಗಳಿಗೆ ತೆರಳುತ್ತಿದ್ದ ವಿಮಾನಗಳನ್ನು ಗುರಿಯಾಗಿಸಿಕೊಂಡಿವೆ. ಮಂಗಳೂರಿನಿಂದ ಮುಂಬೈಗೆ ತೆರಳುತ್ತಿದ್ದ ಇಂಡಿಗೋ ಫ್ಲೈಟ್ 6E 164 ಬಾಂಬ್ ಬೆದರಿಕೆ ತೀರಾ ಇತ್ತಿಚೆಗೆ ಪಡೆದಿದೆ. ಈ ವೇಳೆ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಗಿದ್ದು, ಸಂಪೂರ್ಣ ಭದ್ರತಾ ತಪಾಸಣೆ ನಡೆಸಲಾಯಿತು ಎಂದು ವರದಿಯಾಗಿದೆ. ಕಳೆದ 24 ಗಂಟೆಗಳಲ್ಲಿ

ಅಂತೆಯೇ, ಅಹಮದಾಬಾದ್‌ನಿಂದ ಜಿದ್ದಾಗೆ ಪ್ರಯಾಣಿಸುತ್ತಿದ್ದ ಇಂಡಿಗೋದ 6E 75 ವಿಮಾನಕ್ಕೆ ಕೂಡಾ ಬಾಂಬ್ ಬೆದರಿಕೆ ಕರೆ ಮಾಡಲಾಗಿದ್ದು, ಲ್ಯಾಂಡಿಂಗ್ ನಂತರ ವಿಮಾನವನ್ನು ಐಸೋಲೇಶನ್ ಕರೆದೊಯ್ಯಲಾಯಿತು. ಅಲ್ಲಿ ಪ್ರಯಾಣಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಿ, ಪ್ರಮಾಣಿತ ಕಾರ್ಯಾಚರಣೆಯ ಕಾರ್ಯವಿಧಾನಗಳನ್ನು ಅನುಸರಿಸಿ ಪರಿಶೀಲನೆ ನಡೆಸಲಾಗಿದೆ ಎಂದು ವರದಿಯಾಗಿದೆ.

ಇದೇ ರೀತಿಯ ಬೆದರಿಕೆ ಕರೆಗಳನ್ನು ಇತರೆ ಇಂಡಿಗೋ ವಿಮಾನಗಳಿಗೂ ನೀಡಲಾಗಿದೆ ಎಂದು ವರದಿಯಾಗಿದೆ. ಲಕ್ನೋದಿಂದ ಪುಣೆ ಪ್ರಯಾಣಿಸುವ ಫ್ಲೈಟ್ 6E 118, ಹೈದರಾಬಾದ್‌ನಿಂದ ಜಿದ್ದಾಗೆ ಪ್ರಯಾಣಿಸುವ 6E 67, ಇಸ್ತಾನ್‌ಬುಲ್‌ನಿಂದ ಮುಂಬೈಗೆ ಪ್ರಯಾಣಿಸುವ 6E 18, ದೆಹಲಿಯಿಂದ ದಮ್ಮಾಮ್‌ಗೆ ಪ್ರಯಾಣಿಸುವ 6E 83, ಬೆಂಗಳೂರಿನಿಂದ ಜಿದ್ದಾಗೆ ಪ್ರಯಾಣಿಸುವ 6E 77, ಇಸ್ತಾನ್‌ಬುಲ್‌ನಿಂದ ದೆಹಲಿಗೆ ಪ್ರಯಾಣಿಸುವ 6E 12, ಕೋಝಿಕ್ಕೋಡ್‌ನಿಂದ ಜಿದ್ದಾಗೆ ಪ್ರಯಾಣಿಸುವ 6E 65 ವಿಮಾನ ಮತ್ತು ದೆಹಲಿಯಿಂದ ಜಿದ್ದಾಗೆ ಪ್ರಯಾಣಿಸುವ 6E 63 ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿವೆ.

ಸರಣಿ ಬಾಂಬ್ ಬೆದರಿಕೆ ಬಂದ ಹಿನ್ನಲೆ, ವಿಮಾನಯಾನ ಸಂಸ್ಥೆಗಳಿಗೆ ಬಾಂಬ್ ಬೆದರಿಕೆ ಕರೆಗಳನ್ನು ಮಾಡುವುದನ್ನು ಗಂಭೀರ ಅಪರಾಧವನ್ನಾಗಿ ಮಾಡಲಾಗುವುದು ಎಂದು ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಹೇಳಿದ್ದರು. ಅವರ ಈ ಹೇಳಿಕೆಯ ನಂತರ ಕೂಡಾ ಬಾಂಬ್ ಬೆದರಿಕೆಯ ಸರಣಿ ಮುಂದುವರೆದಿದೆ.

ಕಳೆದ ಕೆಲವು ದಿನಗಳಲ್ಲಿ ಹಲವಾರು ವಿಮಾನಗಳು ಇಂತಹ ಹಲವಾರು ಕರೆಗಳನ್ನು ಸ್ವೀಕರಿಸಿವೆ. ಹಾಗಾಗಿ ದೇಶಾದ್ಯಂತ ವಿಮಾನ ಕಾರ್ಯಾಚರಣೆಗಳಿಗೆ ಗಂಭೀರವಾಗಿ ಅಡ್ಡಿಯಾಗಿವೆ.

ಶನಿವಾರ (ಅಕ್ಟೋಬರ್ 19)ದಂದು ಏರ್ ಇಂಡಿಯಾ, ಇಂಡಿಗೋ, ಆಕಾಶ ಏರ್, ವಿಸ್ತಾರಾ, ಸ್ಪೈಸ್ ಜೆಟ್, ಸ್ಟಾರ್ ಏರ್ ಮತ್ತು ಅಲಯನ್ಸ್ ಏರ್ ಸಂಸ್ಥೆಯ 30ಕ್ಕೂ ಹೆಚ್ಚು ವಿಮಾನಗಳಿಗೆ ಇಂತಹ ಸಂದೇಶಗಳು ಬಂದಿವೆ. ಈ ಪರಿಸ್ಥಿತಿಗೆ ಪ್ರತಿಕ್ರಿಯೆಯಾಗಿ, ಬ್ಯೂರೋ ಆಫ್ ಸಿವಿಲ್ ಏವಿಯೇಷನ್ ​​​​ಸೆಕ್ಯುರಿಟಿ (ಬಿಸಿಎಎಸ್) ಅಕ್ಟೋಬರ್ 19 ರಂದು ನವದೆಹಲಿಯಲ್ಲಿ ವಿಮಾನಯಾನ ಸಂಸ್ಥೆಗಳ ಸಿಇಒಗಳು ಮತ್ತು ಪ್ರತಿನಿಧಿಗಳೊಂದಿಗೆ ಸಭೆ ನಡೆಸಿತ್ತು.

ಇದನ್ನೂ ಓದಿ: ಮುರುಕುಂಬಿ ಅಸ್ಪೃಶ್ಯತೆ ಪ್ರಕರಣ | 101 ಮಂದಿ ವಿರುದ್ಧದ ಆರೋಪ ಸಾಬೀತು : ಅ.24ರಂದು ಶಿಕ್ಷೆ ಪ್ರಕಟ

ಮುರುಕುಂಬಿ ಅಸ್ಪೃಶ್ಯತೆ ಪ್ರಕರಣ | 101 ಮಂದಿ ವಿರುದ್ಧದ ಆರೋಪ ಸಾಬೀತು : ಅ.24ರಂದು ಶಿಕ್ಷೆ ಪ್ರಕಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಬಂಧನ

ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ದೆಹಲಿ ಪೊಲೀಸರು ಮಂಗಳವಾರ (ಫೆ. 24) ಮುಂಜಾನೆ ಸುಮಾರು 4:30ಕ್ಕೆ ಬಂಧಿಸಿದ್ದಾರೆ. ಕಳೆದ ವಾರ ದೆಹಲಿಯ ಭಾರತ್ ಮಂಟಪದಲ್ಲಿ ನಡೆದ...

ಭೂ ವಿವಾದದಲ್ಲಿ ಸಹೋದರರ ಹತ್ಯೆ; ಒಂದೇ ಕುಟುಂಬದ 13 ಮಂದಿಗೆ ಜೀವಾವಧಿ ಶಿಕ್ಷೆ

ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಮಾರು 10 ವರ್ಷಗಳ ಹಿಂದೆ ಇಬ್ಬರು ಸಹೋದರರನ್ನು ಹತ್ಯೆಗೈದ ಪ್ರಕರಣದಲ್ಲಿ ಒಂದೇ ಕುಟುಂಬದ 13 ಮಂದಿಗೆ ಉತ್ತರ ಪ್ರದೇಶದ ಸಹರಾನ್‌ಪುರದ ಸ್ಥಳೀಯ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು...

ಉತ್ತರ ಪ್ರದೇಶ: ಬಜರಂಗದಳ ದೂರಿನ ಮೇರೆಗೆ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಕೇರಳ ಮೂಲದ ಪಾದ್ರಿಯ ಬಂಧನ

ಬಜರಂಗದಳ ಸದಸ್ಯರು ನೀಡಿದ ದೂರಿನ ಮೇರೆಗೆ ಧಾರ್ಮಿಕ ಮತಾಂತರದ ಆರೋಪದ ಮೇಲೆ ಕೇರಳದ ಪಾದ್ರಿಯೊಬ್ಬರನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ತಿರುವನಂತಪುರಂ ಮೂಲದ ಪಾದ್ರಿ ಜೋಸ್ ಥಾಮಸ್,...