Homeಮುಖಪುಟವಕ್ಫ್ ಸಭೆಯಲ್ಲಿ ಅಧ್ಯಕ್ಷರತ್ತ ಎಸೆದು ಬಾಟಲಿ ಎಸೆದ ಕಲ್ಯಾಣ್ ಬ್ಯಾನರ್ಜಿ ಸಮಿತಿಯಿಂದ ಅಮಾನತು

ವಕ್ಫ್ ಸಭೆಯಲ್ಲಿ ಅಧ್ಯಕ್ಷರತ್ತ ಎಸೆದು ಬಾಟಲಿ ಎಸೆದ ಕಲ್ಯಾಣ್ ಬ್ಯಾನರ್ಜಿ ಸಮಿತಿಯಿಂದ ಅಮಾನತು

- Advertisement -
- Advertisement -

ವಕ್ಫ್ (ತಿದ್ದುಪಡಿ) ಮಸೂದೆಗೆ ಸಂಬಂಧಿಸಿದ ಸಂಸದೀಯ ಸಮಿತಿಯಿಂದ ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ಅವರನ್ನು ಒಂದು ದಿನದ ಮಟ್ಟಿಗೆ ಅಮಾನತುಗೊಳಿಸಲಾಗಿದೆ ಎಂದು ವರದಿಯಾಗಿದೆ. ಮಂಗಳವಾರ ನಡೆದ ಸಭೆಯಲ್ಲಿ ಬಿಜೆಪಿಯ ಅಭಿಜಿತ್ ಗಂಗೋಪಾಧ್ಯಾಯ ಅವರೊಂದಿಗೆ ನಡೆದ ವಾಕ್ಸಮರ ನಡೆಸಿದ್ದರು. ಈ ವೇಳೆ ಅವರು ಗಾಜಿನ ನೀರಿನ ಬಾಟಲಿಯನ್ನು ಒಡೆದು ಕುರ್ಚಿಯತ್ತ ಎಸೆದಿದ್ದರು. ಹಾಗಾಗಿ ಅವರ ಬೆರಳುಗಳಿಗೆ ಗಾಯವಾಗಿತ್ತು.

ಸಮಿತಿಯ ಅಧ್ಯಕ್ಷ ಮತ್ತು ಹಿರಿಯ ಬಿಜೆಪಿ ಸಂಸದ ಜಗದಾಂಬಿಕಾ ಪಾಲ್ ಅವರು ಸಂಸದ ಕಲ್ಯಾಣ್ ಬ್ಯಾನರ್ಜಿ ಅವರ ನಡವಳಿಕೆಯನ್ನು ಖಂಡಿಸಿದ್ದಾರೆ. ಅಂತಹ ಕ್ರಮಗಳು “ಗಂಭೀರವಾಗಿದ್ದು” ಎಲ್ಲಾ ಮಿತಿಗಳನ್ನು ದಾಟಿವೆ ಎಂದು ಅವರು ಹೇಳಿದ್ದಾರೆ. “ಸಂಸದರಾಗಿ ಎಲ್ಲರೂ ಸವಲತ್ತುಗಳನ್ನು ಅನುಭವಿಸುತ್ತಾರೆ, ನಾಳೆ ಯಾರಾದರೂ ರಿವಾಲ್ವರ್‌ನೊಂದಿಗೆ ಕಾಣಿಸಿಕೊಂಡರೆ ಏನರ್ಥ?, ನಾನು ಸ್ವಲ್ಪದರಲ್ಲೇ ಪಾರಾಗಿದೆ” ಎಂದು ಜಗದಾಂಬಿಕ ಪಾಲ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಮಿತಿಯ ಸಭೆಯಲ್ಲಿ, ಕಲ್ಯಾಣ್ ಬ್ಯಾನರ್ಜಿ ಅವರು ಬಿಜೆಪಿ ಸಂಸದ ಅಭಿಜಿತ್ ಗಂಗೋಪಾಧ್ಯಾಯ ಅವರೊಂದಿಗೆ ವಾಕ್ಸಮರ ನಡೆಸಿದ್ದು, ಇಬ್ಬರೂ ಬಂಗಾಳಿ ಭಾಷೆಯಲ್ಲಿ ಪರಸ್ಪರ ದಾಳಿ ಮಾಡಿದ್ದಾರೆ ಎಂದು ವರದಿಯಾಗಿದೆ. ವಿರೋಧ ಪಕ್ಷದ ಸದಸ್ಯರು ಘಟನೆಗೆ ಅಭಿಜಿತ್ ಅವರನ್ನು ಗುರಿಯಾಗಿಸಿದ್ದಾರೆ.

ಘರ್ಷಣೆಯಲ್ಲಿ ಕಲ್ಯಾಣ್ ಬ್ಯಾನರ್ಜಿ ಅವರ ಹೆಬ್ಬೆರಳು ಮತ್ತು ತೋರುಬೆರಳಿಗೆ ಗಾಯವಾಗಿದ್ದು, ಅವರಿಗೆ ಪ್ರಥಮ ಚಿಕಿತ್ಸೆ ನೀಡಲಾಗಿದೆ. ನಂತರ ಅವರನ್ನು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಮತ್ತು ಎಎಪಿ ನಾಯಕ ಸಂಜಯ್ ಸಿಂಗ್ ಅವರು ಸಭೆಯ ಕೋಣೆಗೆ ಮರಳಿ ಕರೆದೊಯ್ದರು.

ಘಟನೆಯ ಕಾರಣಕ್ಕೆ ಅವರ ವಿರುದ್ಧ ಕ್ರಮಕೈಗೊಳ್ಳಲು, ಮುಂದಿನ ಸಭೆ ನಡೆಯುವಾಗ ಕಲ್ಯಾಣ್ ಬ್ಯಾನರ್ಜಿ ಅವರನ್ನು ಒಂದು ದಿನದ ಮಟ್ಟಿಗೆ ಅಮಾನತುಗೊಳಿಸುವಂತೆ ಬಿಜೆಪಿ ಸದಸ್ಯರೊಬ್ಬರು ಸೂಚಿಸಿದ್ದಾರೆ. ಇದಕ್ಕೆ ಆಡಳಿತಾರೂಢ ಮೈತ್ರಿಕೂಟ ಮತ್ತು ವಿರೋಧ ಪಕ್ಷದ ಸದಸ್ಯರು ಪಕ್ಷಾತೀತವಾಗಿ ಮತ ಚಲಾಯಿಸಿದ್ದು 10-8 ಮತಗಳು ಚಲಾವಣೆಯಾಗಿವೆ.

ಓದಿ: ಕಳೆದ 24 ಗಂಟೆಗಳಲ್ಲಿ 79 ವಿಮಾನಗಳಿಗೆ ಬಾಂಬ್ ಬೆದರಿಕೆ; ಕಳೆದ ವಾರದಿಂದ 160 ಬೆದರಿಕೆ ಕರೆಗಳು

ಈ ನಡುವೆ ಕಲ್ಯಾಣ್ ಬ್ಯಾನರ್ಜಿ ಅವರು ಬಾಟಲಿ ಒಡೆದಿದ್ದಕ್ಕಾಗಿ ವಿಷಾದ ವ್ಯಕ್ತಪಡಿಸಿದ್ದು, ತಾನು ಅದನ್ನು ಜಗದಾಂಬಿಕ ಪಾಲ್ ಕಡೆಗೆ ಎಸೆಯಲು ಎಂದಿಗೂ ಉದ್ದೇಶಿಸಿರಲಿಲ್ಲ ಎಂದು ಹೇಳಿಕೊಂಡಿದ್ದಾರೆ. ಆದರೆ ಅವರು “ಪಕ್ಷಪಾತ” ವರ್ತನೆ ತೋರುತ್ತಿದ್ದಾರೆ ಎಂದು ಅವರು  ಆರೋಪಿಸಿದ್ದಾರೆ.

ಕಲ್ಯಾಣ್ ಬ್ಯಾನರ್ಜಿ ಅವರಿಗೆ ಕೇವಲ ಒಂದು ದಿನದ ಅಮಾನತು ಶಿಕ್ಷೆಯನ್ನು ನೀಡಿದ್ದನ್ನು ಅಭಿಜಿತ್ ಗಂಗೋಪಾಧ್ಯಾಯ ಅವರು ಆಕ್ಷೇಪ ವ್ಯಕ್ತಪಡಿಸಿದ್ದು, ಕಲ್ಯಾಣ್ ಬ್ಯಾನರ್ಜಿ ಅವರು ತನ್ನ ಮೇಲೆ ನಡೆಸಿದ ಮೌಖಿಕ ದಾಳಿಯ ಬಗ್ಗೆ ಯಾವುದೆ ಪ್ರಸ್ತಾಪ ಮಾಡದಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಅವರು ಈ ಪ್ರಕಣವನ್ನು ಉನ್ನತ ಮಟ್ಟದಲ್ಲಿ ವ್ಯವಹರಿಸುವ ಆಗ್ರಹಿಸುವ ಸಾಧ್ಯತೆಯಿದೆ ಎಂದು ಮೂಲವೊಂದು ತಿಳಿಸಿದೆ.

ವಕ್ಫ್ (ತಿದ್ದುಪಡಿ) ಮಸೂದೆಗೆ ಸಂಬಂಧಿಸಿದ ಸಂಸದೀಯ ಸಮಿತಿಯ ಸಭೆಯಲ್ಲಿ ಆಗಾಗ್ಗೆ ವಿರೋಧ ಪಕ್ಷದ ಸದಸ್ಯರೊಂದಿಗೆ ವಾಕ್ಸಮರ ನಡೆಯುತ್ತಲೆ ಇವೆ. ಸಮಿತಿಯ ಅಧ್ಯಕ್ಷರು, ವಕ್ಫ್ ಸಮಸ್ಯೆಗಳಲ್ಲಿ ಯಾವುದೇ ಪಾಲು ಇಲ್ಲದ ಹಿಂದೂಗಳ ಪರವಾಗಿ ಕೆಲಸ ಮಾಡುವವರು ಸೇರಿದಂತೆ ವಿವಿಧ ಸಂಘಟನೆಗಳನ್ನು ಸಭೆಗೆ ಆಹ್ವಾನಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ಓದಿ: ಬಾಂಗ್ಲಾ ಲೇಖಕಿ ತಸ್ಲೀಮಾ ನಸ್ರೀನ್ ‘ವಾಸದ ಪರವಾನಗಿ’ ನವೀಕರಿಸಿದ ಕೇಂದ್ರ ಸರ್ಕಾರ?

ಮಂಗಳವಾರ ಸಮಿತಿಯು ಒಡಿಶಾ ಮೂಲದ ಎರಡು ಸಂಸ್ಥೆಗಳಾದ ಜಸ್ಟೀಸ್ ಇನ್ ರಿಯಾಲಿಟಿ ಮತ್ತು ಪಂಚಸಖ ಬನಿ ಪ್ರಚಾರ್ ಅವರ ಅಭಿಪ್ರಾಯಗಳನ್ನು ಆಲಿಸುತ್ತಿತ್ತು. ಇವೆರಡೂ ಸಂಘಟನೆಗಳು ನಿವೃತ್ತ ನ್ಯಾಯಾಧೀಶರು ಮತ್ತು ವಕೀಲರನ್ನು ಒಳಗೊಂಡಿವೆ. ಈ ಎರಡೂ ಸಂಸ್ಥೆಗಳು ತಿದ್ದುಪಡಿಗಳನ್ನು ಬೆಂಬಲಿಸಿದ್ದು, ಹೆಚ್ಚಿನ ಸಲಹೆಗಳನ್ನು ನೀಡಿವೆ.

ಮುಂಗಾರು ಅಧಿವೇಶನದಲ್ಲಿ ಲೋಕಸಭೆಯಲ್ಲಿ ಮಂಡಿಸಲಾದ ಕೂಡಲೇ ವಕ್ಫ್ (ತಿದ್ದುಪಡಿ) ಮಸೂದೆಯನ್ನು ಪರಿಶೀಲನೆಗಾಗಿ ಸದನಗಳ ಜಂಟಿ ಸಮಿತಿಗೆ ನೀಡಲಾಗಿತ್ತು.

ವಕ್ಫ್ ಮಂಡಳಿಗಳನ್ನು ನಿಯಂತ್ರಿಸುವ ಕಾನೂನನ್ನು ಈ ಮಸೂದೆ ತಿದ್ದುಪಡಿ ಮಾಡುತ್ತಿದೆ. ವಕ್ಪ್ ಆಡಳಿತದಲ್ಲಿ ಮುಸ್ಲಿಂ ಮಹಿಳೆಯರು ಮತ್ತು ಮುಸ್ಲಿಮೇತರರ ಪ್ರಾತಿನಿಧ್ಯವನ್ನು ತಿದ್ದುಪಡಿಯಲ್ಲಿ ಸೇರಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರು | ನಿರ್ಮಾಣ ಹಂತದ ಕಟ್ಟಡ ಕುಸಿದು ಮೂವರು ಸಾವು; 17 ಕಾರ್ಮಿಕರು ಅಪಾಯದಲ್ಲಿ

ಬೆಂಗಳೂರು | ನಿರ್ಮಾಣ ಹಂತದ ಕಟ್ಟಡ ಕುಸಿದು ಮೂವರು ಸಾವು; 17 ಕಾರ್ಮಿಕರು ಅಪಾಯದಲ್ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...