Homeಮುಖಪುಟಮಹಾರಾಷ್ಟ್ರ | ರಾಜಕೀಯ ವಿಶ್ಲೇಷಕ ಯೋಗೇಂದ್ರ ಯಾದವ್ ಮೇಲೆ ಹಲ್ಲೆ

ಮಹಾರಾಷ್ಟ್ರ | ರಾಜಕೀಯ ವಿಶ್ಲೇಷಕ ಯೋಗೇಂದ್ರ ಯಾದವ್ ಮೇಲೆ ಹಲ್ಲೆ

- Advertisement -
- Advertisement -

ಸೋಮವಾರ ಮಹಾರಾಷ್ಟ್ರದ ಅಕೋಲಾದಲ್ಲಿ ಸ್ವರಾಜ್ ಪಕ್ಷದ ನಾಯಕ ಮತ್ತು ರಾಜಕೀಯ ವಿಶ್ಲೇಷಕ ಯೋಗೇಂದ್ರ ಯಾದವ್ ಮೇಲೆ ಗುಂಪೊಂದು ಹಲ್ಲೆ ನಡೆಸಿದೆ.

ಸುಮಾರು 40-50 ಜನರ ಗುಂಪು ಅವರು ಮಾತನಾಡದಂತೆ ತಡೆಯಲು ವೇದಿಕೆಗೆ ನುಗ್ಗಿದೆ ಎಂದು ಯೋಗೇಂದ್ರ ಯಾದವ್ ಹೇಳಿದ್ದಾರೆ. ಈ ಘಟನೆ ನಡೆದ ಸ್ವಲ್ಪ ಸಮಯದ ನಂತರ ಪೊಲೀಸರು ಬಂದು ಕಾರ್ಯಕ್ರಮವನ್ನು ನಿಲ್ಲಿಸಲು ಸೂಚಿಸಿದರು ಎಂದಿದ್ದಾರೆ.

ತಮ್ಮ ಮೇಲಿನ ಹಲ್ಲೆಯ ವಿಡಿಯೋವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿರುವ ಯಾದವ್, “ಕಾರ್ಯಕ್ರಮದಲ್ಲಿ ‘ಸಂವಿಧಾನ ರಕ್ಷಣೆ ಮತ್ತು ನಮ್ಮ ಮತ’ ಎಂಬ ಚರ್ಚೆ ನಡೆಯುತ್ತಿತ್ತು. ಈ ವೇಳೆ ಭಾರತ್ ಜೋಡೋ ಅಭಿಯಾನದಲ್ಲಿ ಭಾಗವಹಿಸಿದ್ದ ಕಾರ್ಯಕರ್ತರು ಮತ್ತು ನನ್ನ ಮೇಲೆ ಹಲ್ಲೆ ನಡೆದಿದೆ. ಪ್ರಜಾಪ್ರಭುತ್ವವನ್ನು ಪ್ರೀತಿಸುವವರ ಮೇಲೆ ಇಂತಹ ಹಲ್ಲೆಗಳು ನಡೆಯುತ್ತಲೇ ಇವೆ. ಪೊಲೀಸರು ಮಧ್ಯಪ್ರವೇಶಿಸಿದರೂ, ದಾಳಿಕೋರರು ತಮ್ಮ ವಿಧ್ವಂಸಕತೆಯನ್ನು ಮುಂದುವರೆಸಿದರು. ಪರಿಣಾಮ ಕಾರ್ಯಕ್ರಮ ರದ್ದುಗೊಳಿಸಬೇಕಾಯಿತು” ಎಂದು ತಿಳಿಸಿದ್ದಾರೆ.

“ಮಹಾರಾಷ್ಟ್ರಕ್ಕೆ ಕಳೆದ 25 ವರ್ಷಗಳಿಂದ ಆಗಾಗ್ಗೆ ಭೇಟಿ ನೀಡುತ್ತಿದ್ದೇವೆ. ಹಲವು ಕಾರ್ಯಕ್ರಮಗಳಲ್ಲಿ ಮಾತನಾಡಿದ್ದೇನೆ. ಇಂತಹ ಘಟನೆಯನ್ನು ಎಂದಿಗೂ ಎದುರಿಸಿರಲಿಲ್ಲ. ಈ ಘಟನೆಯು ಪ್ರಜಾಪ್ರಭುತ್ವಕ್ಕೆ ಕಳಂಕವಾಗಿದೆ. ಇಂತಹ ಘಟನೆಗಳು ನಮ್ಮ ಸಂಕಲ್ಪವನ್ನು ಬಲಪಡಿಸುತ್ತದೆ” ಎಂದಿದ್ದಾರೆ.

‘ವಂಚಿತ್ ಬಹುಜನ್ ಅಘಾಡಿ (ವಿಬಿಎ)’ ಗುಂಪಿನಿಂದ ಹಲ್ಲೆ?

ಹಲ್ಲೆಯ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಯೋಗೇಂದ್ರ ಯಾದವ್ “ಹಲ್ಲೆ ನಡೆಸಿದವರು ವಂಚಿತ್ ಬಹುಜನ್ ಅಘಾಡಿ ಪಕ್ಷ (ಎಬಿವಿ)ದ ಕಾರ್ಯಕರ್ತರು ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ ಮತ್ತು ಕಾರ್ಯಕರ್ತರು ಹೇಳಿದ್ದಾರೆ. ಆದರೆ, ನನಗೆ ಆ ಬಗ್ಗೆ ಮಾಹಿತಿಯಿಲ್ಲ” ಎಂದಿದ್ದಾರೆ.

“ನನಗೆ ದಾಳಿ ನಡೆಸಿದ ಯಾರೊಬ್ಬರೂ ತಿಳಿದಿಲ್ಲ, ಆದರೆ ಸ್ಥಳೀಯ ಸಹೋದ್ಯೋಗಿಗಳು 24 ಹೆಸರುಗಳನ್ನು ಹೇಳಿದ್ದಾರೆ. ಅವರು ವಂಚಿತ್ ಬಹುಜನ್ ಅಘಾಡಿಯ ಕಾರ್ಯಕರ್ತರು ಎಂದಿದ್ದಾರೆ. ಕಾರ್ಯಕ್ರಮಕ್ಕೆ ದಾಳಿ ನಡೆಸಿದಾಗ ನಮ್ಮ ಸಹೋದ್ಯೋಗಿಯೊಬ್ಬರು ಏಕೆ ದಾಳಿ ಮಾಡಿದ್ದೀರಿ? ಎಂದು ಕೇಳಿದ್ದಾರೆ. ಆಗ ದಾಳಿಗೆ ಬಂದ ವ್ಯಕ್ತಿಯೊಬ್ಬರು “ಸಾಬ್ ಆದೇಶ, ನಮಗೆ ಏನೂ ಗೊತ್ತಿಲ್ಲ” ಎಂದಿದ್ದಾರೆ ಎಂದು ಯಾದವ್ ಘಟನೆ ಕುರಿತು ವಿವರಿಸಿದ್ದಾರೆ.

ದಾಳಿಯ ಬಗ್ಗೆ ದಿಗ್ಭ್ರಮೆ ವ್ಯಕ್ತಪಡಿಸಿರುವ ಯಾದವ್, “ವಂಚಿತ್ ಬಹುಜನ್ ಅಘಾಡಿಯ ಕಾರ್ಯಕರ್ತರು ಒಂದು ವೇಳೆ ದಾಳಿ ನಡೆಸಿದ್ದರೆ ತುಂಬಾ ಆಶ್ಚರ್ಯದ ವಿಷಯ. ಯೋಗೇಂದ್ರ ಯಾದವ್ ಬಹಳ ಸಣ್ಣ ಮನುಷ್ಯ; ನೀವು ಅವರ ಮೇಲೆ ದಾಳಿ ಮಾಡಿಲ್ಲ, ಬಾಬಾ ಸಾಹೇಬರ ಸಂವಿಧಾನದ ಮೇಲೆ ದಾಳಿ ಮಾಡಿದ್ದೀರಿ. ಹಗಲಿರುಳು ಮಾತನಾಡುವ ಪ್ರಜಾಪ್ರಭುತ್ವದ ಮೇಲೆ ದಾಳಿ ಮಾಡಿದ್ದೀರಿ ಮತ್ತು ನಿಮ್ಮ ನಾಯಕ ಪ್ರಕಾಶ್ ಅಂಬೇಡ್ಕರ್ ಅವರು ನಾಚಿಕೆ ಪಡುವಂತೆ ಮಾಡಿದ್ದೀರಿ” ಎಂದಿದ್ದಾರೆ.

“ಪ್ರಕಾಶ್ ಅಂಬೇಡ್ಕರ್ ಅವರ ಚಿಂತನೆ ಮತ್ತು ನಮ್ಮ ಆಲೋಚನೆಗಳು ವಿಭಿನ್ನವಾಗಿವೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ. ಆದರೆ, ಭಿನ್ನಾಭಿಪ್ರಾಯಗಳಿಂದಾಗಿ ಇಂತಹ ದಾಳಿ ನಡೆಸಲಾಗದು. ಇದು ನನ್ನ ಕಲ್ಪನೆಗೂ ಮೀರಿದ್ದು. ಪ್ರಕಾಶ್ ಅಂಬೇಡ್ಕರ್ ಅವರು ಇಂತಹ ಕೃತ್ಯವೆಸಗುವ ವ್ಯಕ್ತಿ ಎಂದು ನಂಬುವುದಿಲ್ಲ” ಎಂದು ಹೇಳಿದ್ದಾರೆ.

ಈ ಗೂಂಡಾಗಿರಿಗೆ ಬಾಬಾಸಾಹೇಬರು ಏನು ಹೇಳುತ್ತಿದ್ದರು?

ಘಟನೆಯ ವಿಡಿಯೋವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿರುವ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ “ಫುಲೆ, ಶಾಹು, ಅಂಬೇಡ್ಕರ್, ಗೋಖಲೆ, ತಿಲಕ್, ರಾನಡೆ, ಅಗರ್ಕರ್ ಅವರ ನಾಡಿನಲ್ಲಿ ಇದು ಸಂಭವಿಸಿದೆ. ಅಕೋಲಾದಲ್ಲಿ ವಿಬಿಎ ಕಾರ್ಯಕರ್ತರು ಯೋಗೇಂದ್ರ ಯಾದವ್ ಸಭೆಗೆ ಅಡ್ಡಿಪಡಿಸಿದ್ದಾರೆ. ಅವರಿಂದ ಮೈಕ್ ಕಿತ್ತುಕೊಂಡಿದ್ದಾರೆ. ಕುರ್ಚಿಗಳನ್ನು ಎಸೆದಿದ್ದಾರೆ. ಯಾದವ್ ಭಾಷಣ ಮಾಡಲು ಬಂದಾಗ ಅವರನ್ನು ತಳ್ಳಿದ್ದಾರೆ. ಇದನ್ನು ಪ್ರಶ್ನಿಸುವ ಹಕ್ಕು ಅವರಿಗೆ ಇಲ್ಲವೇ? ನಿಮಗೆ ಇಷ್ಟವಿಲ್ಲದಿದ್ದರೆ ಅವರ ಮಾತನ್ನು ಕೇಳಬೇಡಿ. ಆದರೆ, ಈ ಹಿಂಸೆ ಏಕೆ? ಈ ಗೂಂಡಾಗಿರಿಗೆ ಬಾಬಾಸಾಹೇಬರು ಏನು ಹೇಳುತ್ತಿದ್ದರು ಎಂದು ಆಶ್ಚರ್ಯವಾಗುತ್ತಿದೆ. ಇದು ನಮ್ಮ ಮಹಾರಾಷ್ಟ್ರ ಧರ್ಮವೇ? ಎಂದು ಪ್ರಶ್ನಿಸಿದ್ದಾರೆ.

ಆರೋಪ ತಳ್ಳಿ ಹಾಕಿದ ವಿಬಿಎ :

ಘಟನೆಯ ಕುರಿತು ಪ್ರತಿಕ್ರಿಯಿಸಿರುವ ವಿಬಿಎ “ಭೀಮರಾವ್ ಅಂಬೇಡ್ಕರ್ ಮತ್ತು ಮೀಸಲಾತಿ ನೀತಿಗಳ ಬಗ್ಗೆ ನೀಡಿದ ಹೇಳಿಕೆಗೆ ಅತೃಪ್ತಿ ವ್ಯಕ್ತಪಡಿಸಿ, ವಂಚಿತ್ ಬಹುಜನ್ ಅಘಾಡಿಯ ಬೆಂಬಲಿಗರು ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದ್ದಾರೆ ಎಂದು ವರದಿಯಾಗಿದೆ”.

“ಹಿಂದುಳಿದ ಸಮುದಾಯಗಳಿಂದ ಬೆಂಬಲವನ್ನು ಪಡೆದಿದ್ದರೂ, ಚುನಾವಣೆಯ ನಂತರ ಕಾಂಗ್ರೆಸ್‌ನ ಆಪಾದಿತ ಮೀಸಲಾತಿ ವಿರೋಧಿ ಕ್ರಮಗಳ ಕುರಿತು ಯಾದವ್ ಮತ್ತು ಹೋರಾಟಗಾರ್ತಿ ಉಲ್ಕಾ ಮಹಾಜನ್‌ಗೆ ಪ್ರೇಕ್ಷಕರು  ಪ್ರಶ್ನೆಗಳನ್ನು ಹಾಕಿದ್ದಾರೆ ಎಂದು ವಿಬಿಎ ತಿಳಿಸಿದೆ. ಈ ಮೂಲಕ ಹಲ್ಲೆ ಆರೋಪವನ್ನು ತಳ್ಳಿ ಹಾಕಿದೆ.

ವಿಬಿಎಗೆ ಸಂಬಂಧಿಸಿದ ಪತ್ರಿಕೆಯಾದ ಪ್ರಬುದ್ಧ್ ಭಾರತ್‌ನಲ್ಲಿ “ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್ ಬೌದ್ಧರು, ದಲಿತರು, ಬುಡಕಟ್ಟುಗಳು, ಮುಸ್ಲಿಮರು, ಒಬಿಸಿಗಳ ಮತಗಳನ್ನು ತೆಗೆದುಕೊಂಡಿತು. ಆದರೆ, ಕಾಂಗ್ರೆಸ್ ಬಿಜೆಪಿಯ ಕೆಲಸವನ್ನು ಮಾಡುತ್ತಿದೆ. ಯಾವುದೇ ಪ್ರಶ್ನೆಗಳಿಗೆ ಸರಿಯಾದ ಉತ್ತರವನ್ನು ನೀಡಲು ಸಾಧ್ಯವಾಗದೆ, ಮಹಾರಾಷ್ಟ್ರ ಡೆಮಾಕ್ರಟಿಕ್ ಫ್ರಂಟ್ ಮತ್ತು ಭಾರತ್ ಜೋಡೋ ಅಭಿಯಾನದ ಜನರು ಪ್ರಶ್ನೆಗಳನ್ನು ಕೇಳುವ ಜನರನ್ನು ಮೌನಗೊಳಿಸಲು ಪ್ರಯತ್ನಿಸಿದರು. ಯೋಗೇಂದ್ರ ಯಾದವ್ ಮತ್ತು ಉಲ್ಕಾ ಮಹಾಜನ್ ಯಾವುದೇ ಪ್ರಶ್ನೆಗೆ ಉತ್ತರವಿಲ್ಲದ ಕಾರಣ ಕಾರ್ಯಕ್ರಮದಿಂದ ಹಿಂದೆ ಸರಿದರು” ಎಂದು ವಿಬಿಎ ಬರೆದುಕೊಂಡಿದೆ.

ಇದನ್ನೂ ಓದಿ : ವಕ್ಫ್ ಸಭೆಯಲ್ಲಿ ಅಧ್ಯಕ್ಷರತ್ತ ಬಾಟಲಿ ಎಸೆದ ಕಲ್ಯಾಣ್ ಬ್ಯಾನರ್ಜಿ ಸಮಿತಿಯಿಂದ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...