Homeಮುಖಪುಟವೈವಾಹಿಕ ಅತ್ಯಾಚಾರ ಪ್ರಕರಣದ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್!

ವೈವಾಹಿಕ ಅತ್ಯಾಚಾರ ಪ್ರಕರಣದ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್!

- Advertisement -
- Advertisement -

ವೈವಾಹಿಕ ಅತ್ಯಾಚಾರ ಪ್ರಕರಣಗಳಲ್ಲಿ ಪತಿಗೆ ನೀಡಿರುವ ವಿನಾಯಿತಿಯನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರು ನಾಲ್ಕು ವಾರಗಳ ಕಾಲ ಮುಂದೂಡಿದಿದ್ದಾರೆ. ಆದರೆ, ಈ ವೇಳೆ ಚಂದ್ರಚೂಡ್ ಅವರು ನಿವೃತ್ತಿಯಾಗಲಿದ್ದು, ಅವರ ಅಧಿಕಾರಾವಧಿ ನವೆಂಬರ್ 10ರಂದು ಮುಗಿಯಲಿದೆ.

ದೀಪಾವಳಿ ರಜೆಗಿಂತ ಮೊದಲು ವಿಚಾರಣೆ ಮುಕ್ತಾಯಗೊಳ್ಳದಿದ್ದರೆ ವಿಚಾರಣೆಯನ್ನು ಪೂರ್ಣಗೊಳಿಸಲು ಮತ್ತು ತೀರ್ಪು ನೀಡಲು ಸಾಧ್ಯವಾಗುವುದಿಲ್ಲ ಎಂದು ಸಿಜೆಐ ಈ ವೇಳೆ ಹೇಳಿದ್ದಾರೆ. ಈ ವಿಚಾರದಲ್ಲಿ ವಾದಿಸಲು ಸಂಬಂಧಪಟ್ಟ ಎಲ್ಲ ವಕೀಲರಿಗೆ ಕಾಲಾವಕಾಶ ನೀಡಬೇಕು ಎಂದು ನ್ಯಾಯಮೂರ್ತಿ ಚಂದ್ರಚೂಡ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ನಾಲ್ಕು ವಾರಗಳ ನಂತರ ಮತ್ತೊಂದು ಪೀಠದಿಂದ ವಿಚಾರಣೆಗೆ ಅರ್ಜಿಗಳನ್ನು ನಿಗದಿಪಡಿಸಿತು. ಪ್ರಕರಣದ ವಿಚಾರಣೆಯನ್ನು ಅಕ್ಟೋಬರ್ 17 ರಂದು ಪ್ರಾರಂಭಿಸಲಾಗಿತ್ತು.

ಭಾರತೀಯ ದಂಡ ಸಂಹಿತೆ (IPC) ಮತ್ತು ಭಾರತೀಯ ನ್ಯಾಯ ಸಂಹಿತೆ (BNS)ಯು ಪತಿ ತನ್ನ ಅಪ್ರಾಪ್ತ ವಯಸ್ಕಳಲ್ಲದ ಪತ್ನಿ ವಿರುದ್ಧ ನಡೆಸುವ ಅತ್ಯಾಚಾರಕ್ಕೆ ವಿನಾಯಿತಿ ನೀಡುತ್ತದೆ. ಇಂತಹ ಪ್ರಕಣದಲ್ಲಿ ಪತಿಯ ವಿರುದ್ಧ ಪತ್ನಿ ನೀಡುವ ದೂರಿಗೆ ಯಾವುದೆ ಕಾನೂನು ಮಾನ್ಯತೆ ಇರುವುದಿಲ್ಲ. ಅದನ್ನು ಪ್ರಸ್ತುತ ಇರುವ ಕಾನೂನು ಅಪರಾಧ ಎಂದು ಪರಿಗಣಿಸುವುದಿಲ್ಲ.

IPC ಯ ಸೆಕ್ಷನ್ 375 ರ ವಿನಾಯಿತಿ ಷರತ್ತಿನ ಅಡಿಯಲ್ಲಿ, ಪತಿಯು ತನ್ನ ಹೆಂಡತಿಯೊಂದಿಗೆ ನಡೆಸುವ ಲೈಂಗಿಕ ಸಂಭೋಗ ಅಥವಾ ಲೈಂಗಿಕ ಕ್ರಿಯೆ ಹೆಂಡತಿ ಅಪ್ರಾಪ್ತಳಾಗಿಲ್ಲದೆ ಇದ್ದರೆ ಅದು ಅತ್ಯಾಚಾರವಲ್ಲ.

ಹೊಸ ಬಿಎನ್‌ಎಸ್ ಕಾನೂನಿನ ಅಡಿಯಲ್ಲಿಯೂ ಕೂಡಾ, ಸೆಕ್ಷನ್ 63 (ಅತ್ಯಾಚಾರ) ಗೆ ವಿನಾಯಿತಿ 2, “ಪತಿ ತನ್ನ ಸ್ವಂತ ಹೆಂಡತಿಯೊಂದಿಗೆ ನಡೆಸುವ ಲೈಂಗಿಕ ಸಂಭೋಗ ಅಥವಾ ಲೈಂಗಿಕ ಕ್ರಿಯೆ, ಹೆಂಡತಿಯು ಹದಿನೆಂಟು ವರ್ಷಕ್ಕಿಂತ ಕಡಿಮೆ ವಯಸ್ಸಿನವಳಾಗಿ ಇರದಿದ್ದರೆ ಅದು ಅತ್ಯಾಚಾರವಲ್ಲ.” ಎಂದು ಹೇಳುತ್ತದೆ.

ಇದನ್ನೂ ಓದಿ: “ನಿಮಗೆ ಮದ್ರಸಾ ಮೇಲೆ ಮಾತ್ರ ಏಕೆ ಕಣ್ಣು”? ಮಕ್ಕಳ ಹಕ್ಕುಗಳ ಆಯೋಗಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

ವೈವಾಹಿಕ ಅತ್ಯಾಚಾರ ಅಪರಾಧೀಕರಣ ಮಾಡುವಂತೆ ಕೇಳಿದ್ದ ಅರ್ಜಿಗಳನ್ನು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಈ ಹಿಂದೆ ವಿರೋಧಿಸಿತ್ತು. ಪ್ರಸ್ತುತ ಗಂಡ ಮತ್ತು ಹೆಂಡತಿಯ ನಡುವಿನ ಲೈಂಗಿಕ ಸಂಬಂಧಗಳಿಗೆ ವಿನಾಯಿತಿ ನೀಡುವ ಅತ್ಯಾಚಾರದ ವಿರುದ್ಧದ ಕಾನೂನುಗಳ ಪರವಾಗಿ ಕೇಂದ್ರ ಸರ್ಕಾರ ಬ್ಯಾಟಿಂಗ್ ಮಾಡಿತ್ತು.

ವೈವಾಹಿಕ ಅತ್ಯಾಚಾರ ಅಪರಾಧೀಕರಣ ಮಾಡುವಂತೆ ಕೇಳಿ ಸಲ್ಲಿಸಲಾಗಿದ್ದ ಅರ್ಜಿಗಳ ಬಗ್ಗೆ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಪ್ರತಿಕ್ರಿಯೆಯಲ್ಲಿ, ವೈವಾಹಿಕ ಅತ್ಯಾಚಾರದ ವಿಷಯವು ಕಾನೂನು ಸಮಸ್ಯೆಗಿಂತ ಹೆಚ್ಚು ಸಾಮಾಜಿಕ ವಿಚಾರವಾಗಿದ್ದು, ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳುವ ಮೊದಲು ವಿವಿಧ ಮಧ್ಯಸ್ಥಗಾರರೊಂದಿಗೆ ವ್ಯಾಪಕವಾದ ಸಮಾಲೋಚನೆಯ ಅಗತ್ಯವಿದೆ ಎಂದು ಕೇಂದ್ರ ಸರ್ಕಾರ ವಾದಿಸಿತ್ತು.

“ಭಾರತದಲ್ಲಿ ಮದುವೆಯನ್ನು ಪರಸ್ಪರ ಬಾಧ್ಯತೆಗಳ ಸಂಸ್ಥೆ ಎಂದು ಪರಿಗಣಿಸಲಾಗಿದೆ. ಮದುವೆ ಎಂಬ ಸಂಸ್ಥೆಯಲ್ಲಿ ಪ್ರತಿಜ್ಞೆಗಳನ್ನು ಉಲ್ಲಂಘಿಸಬಾರದು ಎಂದು ಪರಿಗಣಿಸಲಾಗುತ್ತದೆ. ಮದುವೆಯಲ್ಲಿ ಮಹಿಳೆಯರ ಒಪ್ಪಿಗೆ ಶಾಸನಬದ್ಧವಾಗಿ ರಕ್ಷಿಸಲ್ಪಟ್ಟಿದ್ದರೂ, ಇದನ್ನು ನಿಯಂತ್ರಿಸುವ ದಂಡದ ನಿಬಂಧನೆಗಳು ವಿಭಿನ್ನವಾಗಿವೆ” ಎಂದು ಕೇಂದ್ರ ಸರ್ಕಾರ ಹೇಳಿತ್ತು.

ವೈವಾಹಿಕ ಸಂಬಂಧದ ದುರುಪಯೋಗದ ಸಂತ್ರಸ್ತರಿಗೆ ಪ್ರಸ್ತುತ ಕಾನೂನುಗಳ ಅಡಿಯಲ್ಲಿ ಸಾಕಷ್ಟು ಕಾನೂನು ಪರಿಹಾರಗಳು ಈಗಾಗಲೇ ಅಸ್ತಿತ್ವದಲ್ಲಿವೆ. ಈ ವಿನಾಯಿತಿಯನ್ನು ತೆಗೆದುಹಾಕಿದರೆ ಮದುವೆ ಎಂಬ ಸಂಸ್ಥೆಯನ್ನು ಅಸ್ಥಿರಗೊಳಿಸುವ ಸಾಧ್ಯತೆಯಿದೆ ಎಂದು ಕೇಂದ್ರ ಸರ್ಕಾರವು ವಾದಿಸಿತ್ತು.

ಇದನ್ನೂ ಓದಿ: ವಯನಾಡ್ ಲೋಕಸಭಾ ಕ್ಷೇತ್ರದ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಪ್ರಿಯಾಂಕಾ ಗಾಂಧಿ, ರಾಹುಲ್ ಬೆಂಬಲ

ವಯನಾಡ್ ಲೋಕಸಭಾ ಕ್ಷೇತ್ರದ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಪ್ರಿಯಾಂಕಾ ಗಾಂಧಿ, ರಾಹುಲ್ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....