Homeಮುಖಪುಟಜಾರ್ಖಂಡ್ ಚುನಾವಣೆ | ಮೊದಲ 35 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಜೆಎಂಎಂ

ಜಾರ್ಖಂಡ್ ಚುನಾವಣೆ | ಮೊದಲ 35 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಜೆಎಂಎಂ

- Advertisement -
- Advertisement -

ಮುಂಬರುವ ವಿಧಾನಸಭಾ ಚುನಾವಣೆಗೆ ಜಾರ್ಖಂಡ್ ಮುಕ್ತಿ ಮೋರ್ಚಾ ತನ್ನ 35 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ. ಬರ್ಹೈತ್‌ ಕ್ಷೇತ್ರದಿಂದ ಮುಖ್ಯಮಂತ್ರಿ ಹೇಮಂತ್ ಸೊರೆನ್ ಮತ್ತು ಗಂಡೇ ಕ್ಷೇತ್ರದಿಂದ ಅವರ ಪತ್ನಿ ಕಲ್ಪನಾ ಸೊರೆನ್ ಅವರನ್ನು ಕಣಕ್ಕಿಳಿಸಿದೆ. ನವೆಂಬರ್ 13 ಮತ್ತು 20 ರಂದು ಎರಡು ಹಂತಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ನವೆಂಬರ್ 23 ರಂದು ಫಲಿತಾಂಶ ಪ್ರಕಟವಾಗಲಿದೆ.

ಸಾಹಿಬ್‌ಗಂಜ್ ಜಿಲ್ಲೆಯ ಬರ್ಹೈತ್ (ಎಸ್‌ಟಿ) ಕ್ಷೇತ್ರದ ಹಾಲಿ ಶಾಸಕರಾಗಿರುವ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು 2019 ರ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಹತ್ತಿರದ ಬಿಜೆಪಿ ಪ್ರತಿಸ್ಪರ್ಧಿ ಸೈಮನ್ ಮಾಲ್ಟೊ ಅವರಿಗಿಂತ 25,740 ಮತಗಳಿಂದ ಗೆದ್ದಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅವರ ಪತ್ನಿ ಕಲ್ಪನಾ ಸೊರೆನ್ ಅವರು ತಮ್ಮ ಸಮೀಪದ ಬಿಜೆಪಿ ಪ್ರತಿಸ್ಪರ್ಧಿ ದಿಲೀಪ್ ಕುಮಾರ್ ವರ್ಮಾ ವಿರುದ್ಧ 27,149 ಮತಗಳಿಂದ ಗಂಡೇ ಉಪಚುನಾವಣೆಯಲ್ಲಿ ಜಯಗಳಿಸಿದ್ದರು. ಜೆಎಂಎಂ ಶಾಸಕ ಸರ್ಫರಾಜ್ ಅಹ್ಮದ್ ರಾಜೀನಾಮೆ ನೀಡಿದ ನಂತರ ಈ ಸ್ಥಾನ ತೆರವಾಗಿತ್ತು.  ಜಾರ್ಖಂಡ್

ಜೆಎಂಎಂ ಬಿಡುಗಡೆ ಮಾಡಿರುವ 35 ಕ್ಷೇತ್ರಗಳಲ್ಲಿ ಮುಖ್ಯಮಂತ್ರಿ ಅವರ ಸಹೋದರ ಬಸಂತ್ ಸೊರೆನ್, ರಾಜ್ಯದ ಸ್ಪೀಕರ್ ರವೀಂದ್ರನಾಥ್ ಮಹತೋ, ಸಚಿವರಾದ ಮಿಥಿಲೇಶ್ ಠಾಕೂರ್, ಸೋನು ಸುದಿವ್ಯಾ ಗಿರಿದಿಹ್ ಮತ್ತು ಬೇಬಿ ದೇವಿ ಅವರ ಹೆಸರಿದೆ. ಬಸಂತ್ ಸೊರೆನ್ ಈ ಹಿಂದೆ ಜೆಎಂಎಂ ಭದ್ರಕೋಟೆಯಾದ ದುಮ್ಕಾದಲ್ಲಿ ಬಿಜೆಪಿಯ ಮಾಜಿ ಸಚಿವ ಲೋಯಿಸ್ ಮರಾಂಡಿ ಅವರನ್ನು 6,842 ಮತಗಳಿಂದ ಸೋಲಿಸಿದ್ದರು.

ಅಸೆಂಬ್ಲಿ ಸ್ಪೀಕರ್ ಮಹ್ತೋ ಅವರು ಕಳೆದ ಚುನಾವಣೆಯಲ್ಲಿ ಬಿಜೆಪಿಯ ಸತ್ಯಾನಂದ್ ಝಾ ಅವರನ್ನು ಸೋಲಿಸಿ 3,520 ಮತಗಳ ಅಂತರದಿಂದ ಜಮ್ತಾರಾದ ನಾಲಾ ಕ್ಷೇತ್ರವನ್ನು ಗೆದ್ದಿದ್ದರು. ಮಹತೋ ಈ ಹಿಂದೆ 2005 ಮತ್ತು 2014ರಲ್ಲಿ ಕೂಡಾ ಈ ಕ್ಷೇತ್ರವನ್ನು ಗೆದ್ದಿದ್ದರು.

ಜೆಎಂಎಂ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ಇತ್ತೀಚೆಗಷ್ಟೆ ಬಿಜೆಪಿ ತೊರೆದು ಪಕ್ಷ ಸೇರಿದ ಶಾಸಕ ಕೇದರ್ ಹಜಾರಾ ಅವರ ಹೆಸರು ಕೂಡಾ ಇವೆ.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟದ ಪಕ್ಷಗಳು ಒಟ್ಟಾಗಿ ಸ್ಪರ್ಧಿಸಲಿದ್ದು, ಕಾಂಗ್ರೆಸ್ ಮತ್ತು ಜೆಎಂಎಂ 81 ಸ್ಥಾನಗಳಲ್ಲಿ 70 ಸ್ಥಾನಗಳಿಗೆ ಸ್ಪರ್ಧಿಸಲಿದ್ದು, ಉಳಿದ 11 ಸ್ಥಾನಗಳಲ್ಲಿ ಆರ್‌ಜೆಡಿ ಮತ್ತು ಎಡ ಪಕ್ಷಗಳು ಸ್ಪರ್ಧಿಸಲಿವೆ. ಆರ್‌ಜೆಡಿ ಮಂಗಳವಾರ ಆರು ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ.

ವಿರೋಧ ಪಕ್ಷದಲ್ಲಿ ಬಿಜೆಪಿ 68 ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದು, ಎಜೆಎಸ್‌ಯು ಪಕ್ಷ 10, ಜೆಡಿಯು 2 ಮತ್ತು ಎಲ್‌ಜೆಪಿ (ರಾಮ್ ವಿಲಾಸ್) 1 ರಲ್ಲಿ ಸ್ಪರ್ಧಿಸಲಿದೆ.

ಮೊದಲ ಹಂತದ ಮತದಾನ ನವೆಂಬರ್ 13 ರಂದು ನಡೆಯಲಿದೆ. ರಾಜ್ಯದ 43 ವಿಧಾನಸಭಾ ಕ್ಷೇತ್ರಗಳಿಗೆ ಶುಕ್ರವಾರ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ಅಕ್ಟೋಬರ್ 25 ಸಲ್ಲಿಕೆಗೆ ಕೊನೆಯ ದಿನವಾಗಿದೆ. ರಾಜ್ಯದಲ್ಲಿ ಒಟ್ಟು 2.60 ಕೋಟಿ ಮತದಾರರಿದ್ದು, 11.84 ಲಕ್ಷ ಮತದಾರರು ಮೊದಲ ಬಾರಿ ಮತ ಚಲಾವಣೆ ಮಾಡಲಿದ್ದಾರೆ.

ಇದನ್ನೂ ಓದಿ: ಸಾರ್ವಜನಿಕ ಸಾರಿಗೆ ವ್ಯವಸ್ಥೆ ’ಜನಸ್ನೇಹಿ’ಯಾಗುವುದು ಯಾವಾಗ?

ಸಾರ್ವಜನಿಕ ಸಾರಿಗೆ ವ್ಯವಸ್ಥೆ ’ಜನಸ್ನೇಹಿ’ಯಾಗುವುದು ಯಾವಾಗ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...