Homeಕರ್ನಾಟಕಪ್ರವಾಹದ ಭೀತಿ | ಭಾರೀ ಮಳೆಗೆ ಬೆಂಗಳೂರಿನ 100 ಕೆರೆಗಳು ಭರ್ತಿ!

ಪ್ರವಾಹದ ಭೀತಿ | ಭಾರೀ ಮಳೆಗೆ ಬೆಂಗಳೂರಿನ 100 ಕೆರೆಗಳು ಭರ್ತಿ!

- Advertisement -
- Advertisement -

ಕಳೆದ ಕೆಲವು ದಿನಗಳಿಂದ ಬೆಂಗಳೂರಿನಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನಗರದ 100 ಕೆರೆಗಳು ಭರ್ತಿಯಾಗಿವೆ ಎಂದು ವರದಿಯಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳು ಮತ್ತು ನಿವಾಸಿ ಕ್ಷೇಮಾಭಿವೃದ್ಧಿ ಸಂಘಗಳ ಸದಸ್ಯರು ಮಾತನಾಡಿ, ಕೆರೆಗಳು ಅಪಾಯದ ಅಂಚಿನಲ್ಲಿದ್ದು, ಇನ್ನೂ ಕೂಡಾ ಮಳೆಯಾದರೆ ಪ್ರವಾಹ ಉಂಟಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಪ್ರವಾಹದ ಭೀತಿ

”ಸದ್ಯ ನಗರದಲ್ಲಿ ನರೆಯಾಗಿದ್ದು ಕೆರೆಗಳು ತುಂಬಿದ ಕಾರಣಕ್ಕೆ ಅಲ್ಲ, ಬದಲಾಗಿ ಮುಚ್ಚಿರು ಚರಂಡಿ ಮತ್ತು ಒತ್ತುವರಿಯ ಕಾರಣಕ್ಕೆ ಆಗಿದೆ. ನಗರದ ಬಹುತೇಕ ಕೆರೆಗಳು ಭರ್ತಿಯಾಗಿದ್ದು ಇದೇ ಮೊದಲಲ್ಲ. ಆದರೆ ಮಳೆಯ ತೀವ್ರತೆ ಇದೇ ರೀತಿ ಮುಂದುವರಿದರೆ ತೊಂದರೆಯಾಗಲಿದೆ” ಎಂದು ಬಿಬಿಎಂಪಿಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮಂಗಳವಾರದವರೆಗೆ ಸುಮಾರು 80-85 ಕೆರೆಗಳು ತುಂಬಿದ್ದವು, ಆದರೆ ಈಗ ಬುಧವಾರದಂದು ಇದರ ಸಂಖ್ಯೆ 100 ಕ್ಕೆ ತಲುಪಿದೆ. ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ನೋಡಿಕೊಳ್ಳಲು ಕ್ಷೇತ್ರ ಎಂಜಿನಿಯರ್‌ಗಳಿಂದ ನಿಯಮಿತವಾಗಿ ಗ್ರೌಂಡ್ ರಿಪೋರ್ಟ್ ತೆಗೆದುಕೊಳ್ಳಲಾಗುತ್ತಿದೆ ಎಂದು ಅಧಿಕಾರಿ ಹೇಳಿದ್ದಾರೆ.

ಕಲ್ಕೆರೆ, ರಾಮಾಪುರ ಸೇರಿದಂತೆ ಯಲಹಂಕ ಮತ್ತು ಮಹದೇವಪುರದ ಎಲ್ಲ ಸಣ್ಣ ಮತ್ತು ಮಧ್ಯಮ ಗಾತ್ರದ ಕೆರೆಗಳು ತುಂಬಿವೆ. ನಗರದ ಇತರ ಭಾಗಗಳಾದ ಮಡಿವಾಳ, ಬನ್ನೇರುಘಟ್ಟದ ಕೆರೆಗಳೂ ತುಂಬಿವೆ ಎಂದು ಅವರು ಹೇಳಿದ್ದಾರೆ.

ಬೊಮ್ಮನಹಳ್ಳಿಯಂತೆ ಸುಮಾರು 10-15 ಕೆರೆಗಳು ಇನ್ನೂ ತುಂಬಿಲ್ಲ. ಅದರ ಮೇಲೂ ತೀವ್ರ ನಿಗಾ ಇರಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. 80 ರಷ್ಟು ಕೆರೆಗಳ ಹೂಳು ತೆಗೆದು ಸ್ವಚ್ಛಗೊಳಿಸಲಾಗಿದೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ. ಉಳಿದವುಗಳು ಭರ್ತಿಯಾಗಿರುವುದರಿಂದ ಈಗ ಕೆಲಸ ಕಷ್ಟಕರವಾಗಿದೆ ಅವರು ತಿಳಿಸಿದ್ದಾರೆ.

ಈ ನಡುವೆ, ಭಾರಿ ಮಳೆಗೆ ಜಲಾವೃತಗೊಂಡಿರುವ ನಗರದ ಕೇಂದ್ರೀಯ ವಿಹಾರ್ ಅಪಾರ್ಟ್‌ಮೆಂಟ್‌ ಪ್ರದೇಶಕ್ಕೆ ಬುಧವಾರ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ ನೀಡಿದ್ದಾರೆ. ಭಾರಿ ಮಳೆಯ ಕಾರಣಕ್ಕೆ ಪ್ರವಾಹ ಇದ್ದರೂ ಅಪಾರ್ಟ್‌ಮೆಂಟ್‌ನಲ್ಲಿ ಸುಮಾರು 20 ಫ್ಲ್ಯಾಟ್‌ಗಳ ಮಾಲೀಕರು ಒಳಗೆ ಬೀಗ ಜಡಿದು ತೆರವಿಗೆ ನಿರಾಕರಿಸಿದ್ದರಿಂದ ಬಾಗಿಲು ಒಡೆದು ಒಳನುಗ್ಗುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಡಿಸಿಎಂ ಸೂಚಿಸಿದ್ದಾರೆ. ಪ್ರವಾಹದ ಭೀತಿ

ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅವರು, “95%ದಷ್ಟು ತೆರವು ಕಾರ್ಯ ಪೂರ್ಣಗೊಂಡಿದ್ದು, 5%ದಷ್ಟು ಮಾತ್ರ ಬಾಕಿ ಇದೆ. 603 ಫ್ಲಾಟ್‌ಗಳಲ್ಲಿ ಸಾವಿರಾರು ಜನರು ವಾಸಿಸುತ್ತಿದ್ದಾರೆ. ಅವರಲ್ಲಿ ಹೆಚ್ಚಿನವರು ಕೇಂದ್ರ ಸರ್ಕಾರಿ ನೌಕರರು ಮತ್ತು ಅವರ ಕುಟುಂಬಗಳಾಗಿವೆ. ಹೆಚ್ಚಿನವರನ್ನು ಸ್ಥಳಾಂತರಿಸಲಾಗಿದೆ” ಎಂದು ಅವರು ಹೇಳಿದ್ದಾರೆ. ಸ್ಥಳಾಂತರಕ್ಕೆ ನಿರಾಕರಿಸಿದ

ಅಪಾರ್ಟ್‌ಮೆಂಟ್‌ನ ಆಡಳಿತದೊಂದಿಗೆ ಮಾತುಕತೆ ನಡೆಸಿ ತುರ್ತು ಕಾರ್ಯಾಚರಣೆಗಾಗಿ ಬಿಬಿಎಂಪಿ ಅಪಾರ್ಟ್ಮೆಂಟ್ ಅನ್ನು ಸ್ವಾಧೀನಪಡಿಸಿಕೊಂಡಿದೆ ಎಂದು ಅವರು ಹೇಳಿದ್ದಾರೆ.

“ನೀರು, ವಿದ್ಯುತ್ ಮತ್ತು ಆಹಾರ ಇಲ್ಲದೆ, ಮನೆಯೊಳಗೆ ಬೀಗ ಹಾಕಿಕೊಂಡಿರುವ ಸುಮಾರು 20 ಫ್ಲ್ಯಾಟ್ ಇವೆ. ಅದರಲ್ಲಿರುವ ಜನರ ಆರೋಗ್ಯಕ್ಕೆ ಅಪಾಯ ಇರುವುದರಿಂದ ಒಕ್ಕಲಿಗರ ಸಂಘ ಮತ್ತು ಪೊಲೀಸರ ನೆರವು ಪಡೆದು ಬಾಗಿಲು ಒಡೆದು ಅವರನ್ನು ರಕ್ಷಿಸಲು ಬಿಬಿಎಂಪಿಗೆ ಆದೇಶ ನೀಡಲಾಗಿದೆ’’ ಎಂದು ಶಿವಕುಮಾರ್ ಹೇಳಿದ್ದಾರೆ.

ನಿವಾಸಿಗಳು ತಮ್ಮ ಮನೆಗಳೊಂದಿಗೆ ಇರುವ ಭಾವನಾತ್ಮಕ ಸಂಬಂಧದ ಕಾರಣಕ್ಕೆ ಅದರಿಂದ ಹೊರಗೆ ಬರಲು ನಿರಾಕರಿಸಿರಬಹುದು, ಆದರೆ ಅವರ ಸುರಕ್ಷತೆಯೂ ನಮಗೆ ಮುಖ್ಯ ಎಂದು ಅವರು ಹೇಳಿದ್ದಾರೆ. ಅವರನ್ನು ಒಂದು ವಾರದವರೆಗೆ ಹತ್ತಿರದ ಹೋಟೆಲ್‌ಗಳಲ್ಲಿ ಇರಿಸಲಾಗುವುದು ಮತ್ತು ಪರಿಸ್ಥಿತಿ ಸಹಜವಾದ ನಂತರ ಅವರನ್ನು ತಮ್ಮ ಮನೆಗಳಿಗೆ ಹಿಂತಿರುಗುವಂತೆ ಕೇಳಲಾಗುವುದು ಎಂದು ಡಿಸಿಎಂ ಹೇಳಿದ್ದಾರೆ.

ಇದನ್ನೂ ಓದಿ: ವಾಡಿಕೆಗಿಂತ ಎರಡು ಪಟ್ಟು ಹೆಚ್ಚು ಮಳೆ : ಸಂಕಷ್ಟಕ್ಕೆ ಸಿಲುಕಿದ ಬೆಂಗಳೂರು ಜನತೆ

ವಾಡಿಕೆಗಿಂತ ಎರಡು ಪಟ್ಟು ಹೆಚ್ಚು ಮಳೆ : ಸಂಕಷ್ಟಕ್ಕೆ ಸಿಲುಕಿದ ಬೆಂಗಳೂರು ಜನತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...