Homeಕರ್ನಾಟಕಪ್ರವಾಹದ ಭೀತಿ | ಭಾರೀ ಮಳೆಗೆ ಬೆಂಗಳೂರಿನ 100 ಕೆರೆಗಳು ಭರ್ತಿ!

ಪ್ರವಾಹದ ಭೀತಿ | ಭಾರೀ ಮಳೆಗೆ ಬೆಂಗಳೂರಿನ 100 ಕೆರೆಗಳು ಭರ್ತಿ!

- Advertisement -
- Advertisement -

ಕಳೆದ ಕೆಲವು ದಿನಗಳಿಂದ ಬೆಂಗಳೂರಿನಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನಗರದ 100 ಕೆರೆಗಳು ಭರ್ತಿಯಾಗಿವೆ ಎಂದು ವರದಿಯಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳು ಮತ್ತು ನಿವಾಸಿ ಕ್ಷೇಮಾಭಿವೃದ್ಧಿ ಸಂಘಗಳ ಸದಸ್ಯರು ಮಾತನಾಡಿ, ಕೆರೆಗಳು ಅಪಾಯದ ಅಂಚಿನಲ್ಲಿದ್ದು, ಇನ್ನೂ ಕೂಡಾ ಮಳೆಯಾದರೆ ಪ್ರವಾಹ ಉಂಟಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಪ್ರವಾಹದ ಭೀತಿ

”ಸದ್ಯ ನಗರದಲ್ಲಿ ನರೆಯಾಗಿದ್ದು ಕೆರೆಗಳು ತುಂಬಿದ ಕಾರಣಕ್ಕೆ ಅಲ್ಲ, ಬದಲಾಗಿ ಮುಚ್ಚಿರು ಚರಂಡಿ ಮತ್ತು ಒತ್ತುವರಿಯ ಕಾರಣಕ್ಕೆ ಆಗಿದೆ. ನಗರದ ಬಹುತೇಕ ಕೆರೆಗಳು ಭರ್ತಿಯಾಗಿದ್ದು ಇದೇ ಮೊದಲಲ್ಲ. ಆದರೆ ಮಳೆಯ ತೀವ್ರತೆ ಇದೇ ರೀತಿ ಮುಂದುವರಿದರೆ ತೊಂದರೆಯಾಗಲಿದೆ” ಎಂದು ಬಿಬಿಎಂಪಿಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮಂಗಳವಾರದವರೆಗೆ ಸುಮಾರು 80-85 ಕೆರೆಗಳು ತುಂಬಿದ್ದವು, ಆದರೆ ಈಗ ಬುಧವಾರದಂದು ಇದರ ಸಂಖ್ಯೆ 100 ಕ್ಕೆ ತಲುಪಿದೆ. ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ನೋಡಿಕೊಳ್ಳಲು ಕ್ಷೇತ್ರ ಎಂಜಿನಿಯರ್‌ಗಳಿಂದ ನಿಯಮಿತವಾಗಿ ಗ್ರೌಂಡ್ ರಿಪೋರ್ಟ್ ತೆಗೆದುಕೊಳ್ಳಲಾಗುತ್ತಿದೆ ಎಂದು ಅಧಿಕಾರಿ ಹೇಳಿದ್ದಾರೆ.

ಕಲ್ಕೆರೆ, ರಾಮಾಪುರ ಸೇರಿದಂತೆ ಯಲಹಂಕ ಮತ್ತು ಮಹದೇವಪುರದ ಎಲ್ಲ ಸಣ್ಣ ಮತ್ತು ಮಧ್ಯಮ ಗಾತ್ರದ ಕೆರೆಗಳು ತುಂಬಿವೆ. ನಗರದ ಇತರ ಭಾಗಗಳಾದ ಮಡಿವಾಳ, ಬನ್ನೇರುಘಟ್ಟದ ಕೆರೆಗಳೂ ತುಂಬಿವೆ ಎಂದು ಅವರು ಹೇಳಿದ್ದಾರೆ.

ಬೊಮ್ಮನಹಳ್ಳಿಯಂತೆ ಸುಮಾರು 10-15 ಕೆರೆಗಳು ಇನ್ನೂ ತುಂಬಿಲ್ಲ. ಅದರ ಮೇಲೂ ತೀವ್ರ ನಿಗಾ ಇರಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. 80 ರಷ್ಟು ಕೆರೆಗಳ ಹೂಳು ತೆಗೆದು ಸ್ವಚ್ಛಗೊಳಿಸಲಾಗಿದೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ. ಉಳಿದವುಗಳು ಭರ್ತಿಯಾಗಿರುವುದರಿಂದ ಈಗ ಕೆಲಸ ಕಷ್ಟಕರವಾಗಿದೆ ಅವರು ತಿಳಿಸಿದ್ದಾರೆ.

ಈ ನಡುವೆ, ಭಾರಿ ಮಳೆಗೆ ಜಲಾವೃತಗೊಂಡಿರುವ ನಗರದ ಕೇಂದ್ರೀಯ ವಿಹಾರ್ ಅಪಾರ್ಟ್‌ಮೆಂಟ್‌ ಪ್ರದೇಶಕ್ಕೆ ಬುಧವಾರ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ ನೀಡಿದ್ದಾರೆ. ಭಾರಿ ಮಳೆಯ ಕಾರಣಕ್ಕೆ ಪ್ರವಾಹ ಇದ್ದರೂ ಅಪಾರ್ಟ್‌ಮೆಂಟ್‌ನಲ್ಲಿ ಸುಮಾರು 20 ಫ್ಲ್ಯಾಟ್‌ಗಳ ಮಾಲೀಕರು ಒಳಗೆ ಬೀಗ ಜಡಿದು ತೆರವಿಗೆ ನಿರಾಕರಿಸಿದ್ದರಿಂದ ಬಾಗಿಲು ಒಡೆದು ಒಳನುಗ್ಗುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಡಿಸಿಎಂ ಸೂಚಿಸಿದ್ದಾರೆ. ಪ್ರವಾಹದ ಭೀತಿ

ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅವರು, “95%ದಷ್ಟು ತೆರವು ಕಾರ್ಯ ಪೂರ್ಣಗೊಂಡಿದ್ದು, 5%ದಷ್ಟು ಮಾತ್ರ ಬಾಕಿ ಇದೆ. 603 ಫ್ಲಾಟ್‌ಗಳಲ್ಲಿ ಸಾವಿರಾರು ಜನರು ವಾಸಿಸುತ್ತಿದ್ದಾರೆ. ಅವರಲ್ಲಿ ಹೆಚ್ಚಿನವರು ಕೇಂದ್ರ ಸರ್ಕಾರಿ ನೌಕರರು ಮತ್ತು ಅವರ ಕುಟುಂಬಗಳಾಗಿವೆ. ಹೆಚ್ಚಿನವರನ್ನು ಸ್ಥಳಾಂತರಿಸಲಾಗಿದೆ” ಎಂದು ಅವರು ಹೇಳಿದ್ದಾರೆ. ಸ್ಥಳಾಂತರಕ್ಕೆ ನಿರಾಕರಿಸಿದ

ಅಪಾರ್ಟ್‌ಮೆಂಟ್‌ನ ಆಡಳಿತದೊಂದಿಗೆ ಮಾತುಕತೆ ನಡೆಸಿ ತುರ್ತು ಕಾರ್ಯಾಚರಣೆಗಾಗಿ ಬಿಬಿಎಂಪಿ ಅಪಾರ್ಟ್ಮೆಂಟ್ ಅನ್ನು ಸ್ವಾಧೀನಪಡಿಸಿಕೊಂಡಿದೆ ಎಂದು ಅವರು ಹೇಳಿದ್ದಾರೆ.

“ನೀರು, ವಿದ್ಯುತ್ ಮತ್ತು ಆಹಾರ ಇಲ್ಲದೆ, ಮನೆಯೊಳಗೆ ಬೀಗ ಹಾಕಿಕೊಂಡಿರುವ ಸುಮಾರು 20 ಫ್ಲ್ಯಾಟ್ ಇವೆ. ಅದರಲ್ಲಿರುವ ಜನರ ಆರೋಗ್ಯಕ್ಕೆ ಅಪಾಯ ಇರುವುದರಿಂದ ಒಕ್ಕಲಿಗರ ಸಂಘ ಮತ್ತು ಪೊಲೀಸರ ನೆರವು ಪಡೆದು ಬಾಗಿಲು ಒಡೆದು ಅವರನ್ನು ರಕ್ಷಿಸಲು ಬಿಬಿಎಂಪಿಗೆ ಆದೇಶ ನೀಡಲಾಗಿದೆ’’ ಎಂದು ಶಿವಕುಮಾರ್ ಹೇಳಿದ್ದಾರೆ.

ನಿವಾಸಿಗಳು ತಮ್ಮ ಮನೆಗಳೊಂದಿಗೆ ಇರುವ ಭಾವನಾತ್ಮಕ ಸಂಬಂಧದ ಕಾರಣಕ್ಕೆ ಅದರಿಂದ ಹೊರಗೆ ಬರಲು ನಿರಾಕರಿಸಿರಬಹುದು, ಆದರೆ ಅವರ ಸುರಕ್ಷತೆಯೂ ನಮಗೆ ಮುಖ್ಯ ಎಂದು ಅವರು ಹೇಳಿದ್ದಾರೆ. ಅವರನ್ನು ಒಂದು ವಾರದವರೆಗೆ ಹತ್ತಿರದ ಹೋಟೆಲ್‌ಗಳಲ್ಲಿ ಇರಿಸಲಾಗುವುದು ಮತ್ತು ಪರಿಸ್ಥಿತಿ ಸಹಜವಾದ ನಂತರ ಅವರನ್ನು ತಮ್ಮ ಮನೆಗಳಿಗೆ ಹಿಂತಿರುಗುವಂತೆ ಕೇಳಲಾಗುವುದು ಎಂದು ಡಿಸಿಎಂ ಹೇಳಿದ್ದಾರೆ.

ಇದನ್ನೂ ಓದಿ: ವಾಡಿಕೆಗಿಂತ ಎರಡು ಪಟ್ಟು ಹೆಚ್ಚು ಮಳೆ : ಸಂಕಷ್ಟಕ್ಕೆ ಸಿಲುಕಿದ ಬೆಂಗಳೂರು ಜನತೆ

ವಾಡಿಕೆಗಿಂತ ಎರಡು ಪಟ್ಟು ಹೆಚ್ಚು ಮಳೆ : ಸಂಕಷ್ಟಕ್ಕೆ ಸಿಲುಕಿದ ಬೆಂಗಳೂರು ಜನತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...