Homeಕರ್ನಾಟಕಉಪಚುನಾವಣೆ | ಚನ್ನಪಟ್ಟಣ, ಸಂಡೂರಿಗೆ ಅಭ್ಯರ್ಥಿ ಘೋಷಿಸಿದ ಕಾಂಗ್ರೆಸ್‌ : ಶಿಗ್ಗಾವಿಯಲ್ಲಿ ಹೊಸ ಲೆಕ್ಕಾಚಾರ

ಉಪಚುನಾವಣೆ | ಚನ್ನಪಟ್ಟಣ, ಸಂಡೂರಿಗೆ ಅಭ್ಯರ್ಥಿ ಘೋಷಿಸಿದ ಕಾಂಗ್ರೆಸ್‌ : ಶಿಗ್ಗಾವಿಯಲ್ಲಿ ಹೊಸ ಲೆಕ್ಕಾಚಾರ

- Advertisement -
- Advertisement -

ಉಪಚುನಾವಣೆ ನಡೆಯಲಿರುವ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಪೈಕಿ ಎರಡು ಕ್ಷೇತ್ರಗಳ ಅಭ್ಯರ್ಥಿಗಳನ್ನು ಕಾಂಗ್ರೆಸ್ ಬುಧವಾರ (ಅ.23) ಘೋಷಣೆ ಮಾಡಿದೆ. ಮತ್ತೊಂದು ಕ್ಷೇತ್ರದಲ್ಲಿ ಹೊಸ ಲೆಕ್ಕಾಚಾರದಲ್ಲಿದೆ.

ಚನ್ನಪಟ್ಟಣ ಮತ್ತು ಸಂಡೂರು ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಚನ್ನಪಟ್ಟಣದಲ್ಲಿ ನಿನ್ನೆಯಷ್ಟೆ ಪಕ್ಷ ಸೇರಿರುವ ಸಿ.ಪಿ ಯೋಗೇಶ್ವರ್‌ಗೆ ಮತ್ತು ಸಂಡೂರಿನಲ್ಲಿ ಸಂಸದ ಇ. ತುಕರಾಂ ಪತ್ನಿ ಅನ್ನಪೂರ್ಣ ಅವರಿಗೆ ಟಿಕೆಟ್ ನೀಡಲಾಗಿದೆ. ಶಿಗ್ಗಾವಿ ಕ್ಷೇತ್ರದಲ್ಲಿ ಇನ್ನೂ ಅಭ್ಯರ್ಥಿ ಘೋಷಣೆಯಾಗಿಲ್ಲ. ಹಾಗಾಗಿ, ನಿನ್ನೆಯವರೆಗೆ ಚನ್ನಪಟ್ಟಣದ ಮೇಲಿದ್ದ ಕುತೂಹಲ, ಈಗ ಶಿಗ್ಗಾವಿಗೆ ಶಿಫ್ಟ್‌ ಆಗಿದೆ.

ಶಿಗ್ಗಾವಿಯಲ್ಲಿ ಹೊಸ ಲೆಕ್ಕಾಚಾರ

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಸದರಾಗಿ ಆಯ್ಕೆಯಾಗಿರುವ ಕಾರಣ ತೆರವಾಗಿರುವ ಶಿಗ್ಗಾವಿ ಕ್ಷೇತ್ರದ ಟಿಕೆಟ್ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳು ಬಹಳ ತಲೆ ಕೆಡಿಸಿಕೊಂಡಂತಿದೆ.

ಶಿಗ್ಗಾವಿ ಟಿಕೆಟ್ ಲಿಂಗಾಯತರಿಗೆ ನೀಡಬೇಕೆ, ಅಲ್ಪಸಂಖ್ಯಾತರಿಗೆ (ಮುಸ್ಲಿಂ) ನೀಡಬೇಕೆ? ಎಂಬ ಗೊಂದಲ ಕಾಂಗ್ರೆಸ್‌ನಲ್ಲಿ ಮುಂದುವರೆದಿದೆ. ಈ ಕ್ಷೇತ್ರದಲ್ಲಿ ಕಳೆದ ನಾಲ್ಕು ಅವಧಿಯಲ್ಲಿ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಸೋಲನುಭವಿಸಿರುವ ಹಿನ್ನೆಲೆ, ಈ ಬಾರಿ ಲಿಂಗಾಯತ ಅಭ್ಯರ್ಥಿಗೆ ಮಣೆ ಹಾಕುವ ಹೊಸ ಲೆಕ್ಕಾಚಾರದಲ್ಲಿ ಕೈ ನಾಯಕರು ಇದ್ದಾರೆ ಎಂದು ಹೇಳಲಾಗ್ತಿದೆ.

ಆದರೆ, ಸಚಿವ ಝಮೀರ್ ಅಹ್ಮದ್ ಸೇರಿದಂತೆ ಕಾಂಗ್ರೆಸ್‌ನ ಮುಸ್ಲಿಂ ನಾಯಕರು ಮತ್ತೊಮ್ಮೆ ಮುಸ್ಲಿಂ ಅಭ್ಯರ್ಥಿಯನ್ನೇ ಕಣಕ್ಕಿಳಿಸುವಂತೆ ಪಟ್ಟು ಹಿಡಿದಿದ್ದಾರೆ ಎನ್ನಲಾಗ್ತಿದೆ. ಇದರಿಂದ ಕೈ ನಾಯಕರು ಅಂತಿಮ ನಿರ್ಧಾರಕ್ಕೆ ಬರಲಾಗದೆ ಅಭ್ಯರ್ಥಿ ಘೋಷಣೆ ವಿಳಂಬವಾಗಿದೆ ಎಂದು ವರದಿಯಾಗಿದೆ.

ಶಿಗ್ಗಾವಿ ಟಿಕೆಟ್‌ಗಾಗಿ ಮುಸ್ಲಿಂ ಮುಖಂಡರಾದ ಯಾಸಿರ್ ಅಹ್ಮದ್ ಖಾನ್ ಪಠಾಣ ಮತ್ತು ಸೈಯ್ಯದ್ ಅಜ್ಜಂಪೀರ್ ಖಾದ್ರಿ ಕಸರತ್ತು ನಡೆಸುತ್ತಿದ್ದಾರೆ. ಆದರೆ, ಬಿಜೆಪಿ ಅಭ್ಯರ್ಥಿಯಾಗಿರುವ ಲಿಂಗಾಯತ ಸಮುದಾಯದ ಸಾದರ ಉಪ ಪಂಗಡಕ್ಕೆ ಸೇರಿದ ಭರತ್ ಬೊಮ್ಮಾಯಿ ಅವರನ್ನು ಎದುರಿಸಲು, ಅದೇ ಸಮುದಾಯದ ಪಂಚಮಸಾಲಿ ಉಪ ಪಂಗಡದ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಲೆಕ್ಕಾಚಾರದಲ್ಲಿ ಕೈ ನಾಯಕರಿದ್ದಾರೆ. ಇದಕ್ಕೆ ಪೂರಕವಾಗಿ ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ ಅವರು ತಮ್ಮ ಪತ್ನಿ ಶಿವಲೀಲಾ ಅಥವಾ ಮಗಳು ವೈಶಾಲಿಗೆ ಟಿಕೆಟ್ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.

ಎರಡು ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಿಸಿರುವ ಬಿಜೆಪಿ

ಕಾಂಗ್ರೆಸ್‌ನಂತೆಯೇ ಎರಡು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿರುವ ಬಿಜೆಪಿ, ಇನ್ನೊಂದು ಕ್ಷೇತ್ರದ ಬಗ್ಗೆ ಇನ್ನೂ ಅಂತಿಮ ನಿರ್ಧಾರಕ್ಕೆ ಬಂದಿಲ್ಲ. ಸಂಡೂರಿನಿಂದ ಬಂಗಾರು ಹನುಮಂತು ಮತ್ತು ಶಿಗ್ಗಾವಿಯಿಂದ ಭರತ್ ಬೊಮ್ಮಾಯಿಯನ್ನು ಬಿಜೆಪಿ ಕಣಕ್ಕಿಳಿಸಿದೆ. ಆದರೆ, ಚನ್ನಪಟ್ಟಣದಲ್ಲಿ ಮೈತ್ರಿ ಅಭ್ಯರ್ಥಿ ಯಾವ ಪಕ್ಷದಿಂದ ಕಣಕ್ಕಿಳಿಯಬೇಕು ಎಂಬ ಗೊಂದಲದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಾಯಕರಿದ್ದಾರೆ.

ಇದನ್ನೂ ಓದಿ : ಮೂರು ಕ್ಷೇತ್ರಗಳ ಉಪ ಚುನಾವಣೆ: ‘ಕೈ-ಕಮಲ’ ಪಕ್ಷಗಳ ಕುಟುಂಬ ರಾಜಕಾರಣಕ್ಕೆ ಕಾರ್ಯಕರ್ತರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...