Homeಫ್ಯಾಕ್ಟ್‌ಚೆಕ್FACT CHECK : ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ ವೇಳೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೊರಗಡೆ...

FACT CHECK : ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ ವೇಳೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೊರಗಡೆ ನಿಲ್ಲಿಸಿ ಅವಮಾನಿಸಲಾಗಿದೆಯಾ?

- Advertisement -
- Advertisement -

ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಯವರಿಂದ ತೆರವಾಗಿರುವ ಕೇರಳದ ವಯನಾಡ್ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಐಸಿಸಿ ಪ್ರಧಾನ ಕಾರ್ಯರ್ಶಿ ಪ್ರಿಯಾಂಕಾ ಗಾಂಧಿ ಬುಧವಾರ (ಅ.23) ನಾಮಪತ್ರ ಸಲ್ಲಿಸಿದ್ದಾರೆ.

ವಯನಾಡ್ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೊರಗಡೆ ನಿಲ್ಲಿಸಿ ಅವಮಾನಿಸಲಾಗಿದೆ ಎಂದು ಪ್ರತಿಪಾದಿಸಿ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಮಲ್ಲಿಕಾರ್ಜುನ ಖರ್ಗೆ ಅವರು ಹೊರಗಡೆ ನಿಂತು ಬಾಗಿಲಿನ ಸಂದಿಯಲ್ಲಿ ನೋಡುತ್ತಿರುವ ಸಣ್ಣ ವಿಡಿಯೋ ಕ್ಲಿಪ್ ಅನ್ನು ಎಕ್ಸ್‌ನಲ್ಲಿ ಹಂಚಿಕೊಂಡಿರುವ ಕರ್ನಾಟಕ ಬಿಜೆಪಿ “ಯಾವುದೇ ನಾಯಕನಿರಲಿ, ಎಷ್ಟೇ ಪ್ರಮುಖರಾಗಿರಲಿ, ಕಾಂಗ್ರೆಸ್‌ನ ನಕಲಿ ಗಾಂಧಿ ಕುಟುಂಬದ ಬಳಿ ತೆರಳಲು ಸಾಧ್ಯವಿಲ್ಲ. ವಯನಾಡ್‌ನಲ್ಲಿ ಪ್ರಿಯಾಂಕಾ ಗಾಂಧಿಯ ನಾಮಪತ್ರ ಸಲ್ಲಿಕೆ ವೇಳೆ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಡೆಗಣಿಸಿರುವುದು ನಿಜಕ್ಕೂ ಆಘಾತಕಾರಿ ವಿಷಯ. ಮಕ್ಕಳ ಬುದ್ದಿಯ ರಾಹುಲ್ ಗಾಂಧಿಯವರೇ, ನಿಮ್ಮ ಕುಟುಂಬದ ಹಿತಾಸಕ್ತಿ ಕಾಪಾಡಲು ದಲಿತ ನಾಯಕರನ್ನು ಕೀಳಾಗಿ ಕಾಣಬೇಡಿ!” ಎಂದು ಬರೆದುಕೊಂಡಿದೆ.

ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಅವರು ಕೂಡ ಎಕ್ಸ್‌ನಲ್ಲಿ ವಿಡಿಯೋ ಕ್ಲಿಪ್ ಹಂಚಿಕೊಂಡು ” ಸೋ ಕಾಲ್ಡ್ ಹೋಲಿ ಟ್ರಿನಿಟಿ, ಹಿರಿಯ ಸಂಸದೀಯ ಪಟು ಮತ್ತು ದಲಿತ ನಾಯಕರಾದ ಮಲ್ಲಿಕಾರ್ಜು ಖರ್ಗೆ ಮೇಲೆ ತೋರಿದ ಅಗೌರವವನ್ನು ಕಣ್ಣಾರೆ ನೋಡುವುದು ತುಂಬಾ ಬೇಸರ ತಂದಿದೆ. ಅದು ಎಐಸಿಸಿ ಅಥವಾ ಪಿಸಿಸಿ ಅಧ್ಯಕ್ಷರಾಗಿರಲಿ, ಅವರನ್ನು ಕೇವಲ ರಬ್ಬರ್ ಸ್ಟ್ಯಾಂಪ್‌ಗಳಂತೆ ಪರಿಗಣಿಸಿ ಅವಮಾನಿಸುವುದರಲ್ಲಿ ಈ ಕುಟುಂಬ ಹೆಮ್ಮೆಪಡುತ್ತದೆಯೇ?” ಎಂದು ಬರೆದುಕೊಂಡಿದ್ದಾರೆ.

ಹಾಗಾದರೆ, ಪ್ರಿಯಾಂಕಾ ಗಾಂಧಿಯವರ ನಾಮಪತ್ರ ಸಲ್ಲಿಕೆ ವೇಳೆ ಮಲ್ಲಿಕಾರ್ಜು ಖರ್ಗೆ ಅವರನ್ನು ಬಾಗಿಲ ಹೊರಗೆ ನಿಲ್ಲಿಸಿದ್ದು ನಿಜಾನಾ? ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ಈ ವಿಷಯದ ಬಗ್ಗೆ ಖಚಿತಪಡಿಸಿಕೊಳ್ಳಲು ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ ಮಾಡಿರುವ ಸಂದರ್ಭದ ಹಲವು ವಿಡಿಯೋಗಳನ್ನು ಮಾಧ್ಯಮಗಳ ಯೂಟ್ಯೂಬ್‌ ಚಾನೆಲ್‌ಗಳಲ್ಲಿ ನಾವು ಪರಿಶೀಲಿಸಿದ್ದೇವೆ.

ಬಹುತೇಕ ವಿಡಿಯೋಗಳಲ್ಲಿ ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ ವೇಳೆ, ಆರಂಭದಲ್ಲಿ ಅವರ ಹಿಂದೆ, ಬಳಿಕ ಪಕ್ಕದಲ್ಲಿ ಮಲ್ಲಿಕಾರ್ಜುನ ಖರ್ಗೆಯವರು ಕುಳಿತಿರುವುದು ಕಂಡು ಬಂದಿದೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಕೂಡ ಜೊತೆಗಿರುವುದನ್ನು ನೋಡಬಹುದು.

ಹಾಗಾದರೆ, ಮಲ್ಲಿಕಾರ್ಜುನ ಖರ್ಗೆಯವರು ಹೊರಗಡೆ ನಿಂತು ಬಾಗಿಲ ಸಂದಿಯಲ್ಲಿ ಇಣುಕಿದ್ದು ಯಾವಾಗ? ಎಂಬುವುದರ ಬಗ್ಗೆ ನಾವು ಮಾಹಿತಿ ಹುಡುಕಿದ್ದೇವೆ. ಈ ವೇಳೆ ಇಂಡಿಯಾ ಟುಡೇ ವೆಬ್‌ಸೈಟ್‌ ಸ್ಥಳದಲ್ಲಿದ್ದ ತಮ್ಮ ವರದಿಗಾರ ನೀಡಿದ ಮಾಹಿತಿ ಆಧರಿಸಿ ಮಾಡಿರುವ ವಿಸ್ಕೃತ ವರದಿ ಲಭ್ಯವಾಗಿದೆ.

ವರದಿಯ ಪ್ರಕಾರ, “ರ್‍ಯಾಲಿಯ ಬಳಿಕ ನಾಮಪತ್ರ ಸಲ್ಲಿಸಲು ಪ್ರಿಯಾಂಕಾ ಗಾಂಧಿಯವರು ವಯನಾಡ್ ಜಿಲ್ಲಾ ಕೇಂದ್ರ ಕಲ್ಪೆಟ್ಟಾದಲ್ಲಿರುವ ಜಿಲ್ಲಾಧಿಕಾರಿ (ಕಲೆಕ್ಟರ್‌) ಕಚೇರಿಗೆ ಮಧ್ಯಾಹ್ನ 1 ಗಂಟೆಗೆ ಆಗಮಿಸಬೇಕಿತ್ತು. ಆದರೆ, ಈ ಹೊತ್ತಿಗೆ ರ್‍ಯಾಲಿ ಕೊನೆಗೊಂಡಿರಲಿಲ್ಲ.

ಆದರೆ, ಸಮಯವಾದ್ದರಿಂದ ಮಲ್ಲಿಕಾರ್ಜುನ ಖರ್ಗೆ ಮಾತನಾಡುತ್ತಿದ್ದಾಗಲೇ ಮಧ್ಯದಲ್ಲಿ ಪ್ರಿಯಾಂಕಾ ಗಾಂಧಿ ರ್‍ಯಾಲಿಯಿಂದ ಎದ್ದು ಬಂದಿದ್ದರು. ಅವರು ಮಧ್ಯಾಹ್ನ 1.24ಕ್ಕೆ ಗಂಡ ರಾಬರ್ಟ್ ವಾದ್ರಾ ಮತ್ತು ಮಗನ ಜೊತೆ ಜಿಲ್ಲಾಧಿಕಾರಿ ಕಚೇರಿಗೆ ತಲುಪಿದ್ದರು.

ಮಾನ್ಯತೆ ಪಡೆದ ರಾಷ್ಟ್ರೀಯ ಅಥವಾ ರಾಜ್ಯ ಪಕ್ಷದ ಅಭ್ಯರ್ಥಿ ನಾಮಪತ್ರ ಸಲ್ಲಿಸುವ ವೇಳೆ ಅದನ್ನು ಅನುಮೋದಿಸಲು ಒಬ್ಬರು ಸ್ಥಳದಲ್ಲಿರಬೇಕು. ನಾಯಕರೆಲ್ಲ ರ್‍ಯಾಲಿಯಲ್ಲಿ ಇದ್ದಿದ್ದರಿಂದ ಪ್ರಿಯಾಂಕಾ ಗಾಂಧಿ ಗಂಡ ಮತ್ತು ಮಗನನ್ನು ಕರೆದುಕೊಂಡು ಬಂದಿದ್ದರು.

ಜಿಲ್ಲಾಧಿಕಾರಿ ಕಚೇರಿಗೆ ತಲುಪಿದ ಬಳಿಕ, ಮಲ್ಲಿಕಾರ್ಜುನ ಖರ್ಗೆ, ತಾಯಿ ಸೋನಿಯಾ ಗಾಂಧಿ ಮತ್ತು ಸಹೋದರ ರಾಹುಲ್ ಗಾಂಧಿ ರ್‍ಯಾಲಿಯಲ್ಲಿ ಇದ್ದು, ಶೀಘ್ರದಲ್ಲೇ ಬರಲಿದ್ದಾರೆ. ಅವರು ಬಂದ ಬಳಿಕ ಇವರು (ಗಂಡ, ಮಗ) ಹೊರಗಡೆ ಹೋಗಲಿದ್ದಾರೆ ಎಂದು ಪ್ರಿಯಾಂಕಾ ಗಾಂಧಿ ಚುನಾವಣಾಧಿಕಾರಿಗೆ ತಿಳಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಚುನಾವಣಾಧಿಕಾರಿ, ಅವರು (ಸೋನಿಯಾ, ರಾಹುಲ್, ಖರ್ಗೆ) ಎರಡನೇ ಸೆಟ್ ನಾಮಪತ್ರ ಸಲ್ಲಿಕೆ ವೇಳೆ ಬರಬಹುದು ಎಂದಿದ್ದಾರೆ. ಹಾಗಾಗಿ, ಪ್ರಿಯಾಂಕಾ ಗಾಂಧಿ 1.25ಕ್ಕೆ ಮೊದಲ ಸೆಟ್ ನಾಮಪತ್ರ ಸಲ್ಲಿಸಿದ್ದಾರೆ.

ಇದಾದ ಕೆಲವೇ ನಿಮಿಷಗಳಲ್ಲಿ ರ್‍ಯಾಲಿ ಮುಗಿಸಿ ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಕೆ.ಸಿ ವೇಣುಗೋಪಾಲ್ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ್ದಾರೆ. ಆದರೆ, ಈ ವೇಳೆ ಪ್ರಿಯಾಂಕಾ ಗಾಂಧಿ ಸಲ್ಲಿಸಿದ್ದ ಮೊದಲ ಸೆಟ್ ನಾಮಪತ್ರವನ್ನು ಚುನಾವಣಾಧಿಕಾರಿ ಪರಿಶೀಲಿಸುತ್ತಿದ್ದರಿಂದ ನಿಯಮದಂತೆ ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿ ಅವರನ್ನು ಒಳಗೆ ಬಿಟ್ಟಿರಲಿಲ್ಲ.

ಇಲ್ಲಿ ಗಮನಾರ್ಹ ಅಂಶವೆಂದರೆ, ಕೇವಲ ಮಲ್ಲಿಕಾರ್ಜುನ ಖರ್ಗೆ ಮಾತ್ರವಲ್ಲ, ಸೋನಿಯಾ ಗಾಂಧಿ, ಕೆ.ಸಿ ವೇಣುಗೋಪಾಲ್ ಅವರನ್ನೂ ಒಳಗೆ ಬಿಟ್ಟಿರಲಿಲ್ಲ.

ಚುನಾವಣಾಧಿಕಾರಿ ಮೊದಲ ಸೆಟ್ ನಾಮಪತ್ರ ಪರಿಶೀಲನೆ ನಡೆಸಿದ ಬಳಿಕ, ಪ್ರಿಯಾಂಕಾ ಅವರ ಪತಿ ರಾಬರ್ಟ್ ವಾದ್ರಾ ಮತ್ತು ಮಗ ಹೊರಗೆ ಹೋದರು. ಎರಡನೇ ಸೆಟ್ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಮತ್ತು ವೇಣುಗೋಪಾಲ್ ಒಳಗೆ ಬಂದರು. ನಂತರ ರಾಹುಲ್ ಗಾಂಧಿ ಕೂಡ ಒಳಗೆ ಬಂದಿದ್ದಾರೆ. ಅವರೂ ಹೊರಗಡೆ ಕಾಯುತ್ತಿದ್ದರು ಎಂದು ವರದಿಯಾಗಿದೆ.

ಈ ಕುರಿತ ವಿಡಿಯೋವನ್ನು ಕೆಳಗೆ ನೋಡಬಹುದು

ಒಟ್ಟಿನಲ್ಲಿ, ತಡವಾಗಿ ಬಂದ ಕಾರಣ ಪ್ರಿಯಾಂಕಾ ಗಾಂಧಿ ಸಲ್ಲಿಸಿದ್ದ ಮೊದಲ ಸೆಟ್ ನಾಮಪತ್ರ ಪರಿಶೀಲನೆ ವೇಳೆ ನಿಯಮದ ಪ್ರಕಾರ, ಸೋನಿಯಾ ಗಾಂಧಿ, ಮಲ್ಲಿಕಾರ್ಜು ಖರ್ಗೆ, ರಾಹುಲ್ ಗಾಂಧಿ ಮತ್ತು ಕೆ.ಸಿ ವೇಣುಗೋಪಾಲ್ ಹೊರಗಡೆ ನಿಂತಿದ್ದರು. ಬಳಿಕ ಅವರೆಲ್ಲರೂ ಒಳಗಡೆ ಬಂದಿದ್ದಾರೆ. ಆದರೆ, ಬಿಜೆಪಿ ಮತ್ತು ಅದರ ನಾಯಕರು ಖರ್ಗೆ ಅವರು ಹೊರಗಡೆ ನಿಂತಿದ್ದ ಸಣ್ಣ ಕ್ಲಿಪ್ ಅನ್ನು ಮಾತ್ರ ಹಂಚಿಕೊಂಡು ಖರ್ಗೆ ಅವರನ್ನು ಅವಮಾನಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ : FACT CHECK : ವ್ಯಕ್ತಿಯೊಬ್ಬರು ಕೇಸರಿ ಬಟ್ಟೆ ಹೊದ್ದು ಮಲಗಿದ್ದಕ್ಕೆ ಮುಸ್ಲಿಮರು ಥಳಿಸಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...