Homeಮುಖಪುಟಚನ್ನಪಟ್ಟಣ ಉಪ ಚುನಾವಣೆ: ಕಾಂಗ್ರೆಸ್‌ನಿಂದ ನಾಮಪತ್ರ ಸಲ್ಲಿಸಿದ ಯೋಗೇಶ್ವರ್, ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್

ಚನ್ನಪಟ್ಟಣ ಉಪ ಚುನಾವಣೆ: ಕಾಂಗ್ರೆಸ್‌ನಿಂದ ನಾಮಪತ್ರ ಸಲ್ಲಿಸಿದ ಯೋಗೇಶ್ವರ್, ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್

- Advertisement -
- Advertisement -

ಬಿಜೆಪಿಯಲ್ಲಿದ್ದ ಸಿ.ಪಿ. ಯೋಗೇಶ್ವರ್ ಕಾಂಗ್ರೆಸ್ ಸೇರಿದ ಬಳಿಕ ಎನ್‌ಡಿಎ ಮಿತ್ರಪಕ್ಷವಾದ ಜೆಡಿಎಸ್ ನಾಯಕರು ಚನ್ನಪಟ್ಟಣ ಅಭ್ಯರ್ಥಿಯ ಘೋಷಣೆ ಬಗ್ಗೆ ಕಾದು ನೋಡುವ ತಂತ್ರ ಅನುಭವಿಸಿದ್ದರು. ಯೋಗೇಶ್ವರ್ ಇಂದು ಕಾಂಗ್ರೆಸ್‌ನಿಂದ ನಾಮಪತ್ರ ಸಲ್ಲಿಸಿದ್ದು, ಜೆಡಿಎಸ್ ಸಹ ತನ್ನ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಹೆಸರನ್ನು ಘೋಚಿಸಿದೆ.

ಉಪ ಚುನಾವಣೆ ಎದುರಿಸುತ್ತಿರುವ ಮೂರು ಕ್ಷೇತ್ರಗಳ ಪೈಕಿ ಚನ್ನಪಟ್ಟಣ ರಾಜಕೀಯ ಹಾಟ್‌ಸ್ಪಾಟ್ ಆಗಿದೆ.

ಚನ್ನಪಟ್ಟಣದಲ್ಲಿ ನಾಮಪತ್ರ ಸಲ್ಲಿಕೆ ಮಾಡಲು ಅಕ್ಟೋಬರ್ 25 ಕೊನೆಯ ದಿನವಾಗಿದ್ದು, ಇಂದು ಯೋಗೇಶ್ವರ್ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ. ಎಚ್‌ಡಿ ಕುಮಾರಸ್ವಾಮಿ, ನಿಖಿಲ fಸೇರಿದಂತೆ ಹಲವು ಜೆಡಿಎಸ್ ನಾಯಕರು ಇಂದು ಬಿಎಸ್‌ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ನಂತರ, ಅಧಿಕೃತವಾಗಿ ನಿಖಿಲ್ ಹೆಸರು ಘೋಷಿಸಿದ್ದಾರೆ. ಆ ಮೂಲಕ ಎನ್‌ಡಿಎ ಅಭ್ಯರ್ಥಿ ಯಾರು ಎನ್ನುವ ಪ್ರಶ್ನೆಗೆ ತೆರೆ ಬಿದ್ದಿದೆ.

ಜೆಡಿಎಸ್ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಚನ್ನಪಟ್ಟಣ ಜೆಡಿಎಸ್ ಕಾರ್ಯಕರ್ತರು ಹಾಗೂ ಮುಖಂಡರ ಸಭೆಯಲ್ಲಿ ನಿಖಿಲ್ ಕುಮಾರಸ್ವಾಮಿಯೇ ಅಭ್ಯರ್ಥಿಯಾಗಲಿ ಎಂದು ಒತ್ತಾಯಿಸಿದ್ದರು. ಇಂದು ಸಹ ಹಲವು ಕಾರ್ಯಕರ್ತರು ನಿಖಿಲ ಪರವಾಗಿ ಫ್ಲೆಕಾರ್ಡ್‌ ಹಿಡಿದು ಬಂದಿದ್ದರು. ಚನ್ನಪಟ್ಟಣ ಸ್ಥಳೀಯ ಕಾರ್ಯಕರ್ತರ ಒತ್ತಡಕ್ಕೆ ಮಣಿದಿರುವ ಕುಮಾರಸ್ವಾಮಿಯವರು, ನಿಖಿಲ್ ಅವರ ಹೆಸರನ್ನು ಅಂತಿಮಗೊಳಿಸಿದ್ದಾರೆ.

ಯೋಗೇಶ್ವರ್ ಬೆನ್ನಿಗೆ ನಿಂತ ಕಾಂಗ್ರೆಸ್

ಇಂದು ನಾಮಪತ್ರ ಸಲ್ಲಿಸಲು ಮೆರವಣಿಗೆಯಲ್ಲಿ ತೆರಳಿದ ಸಿಪಿ ಯೋಗೇಶ್ವರ್ ಅವರಿಗೆ  ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮಾಜಿಸ ಸಂಸದ ಡಿಕೆ ಸುರೇಶ್, ಸಚಿವರಾದ ರಾಮಲಿಂಗಾರೆಡ್ಡಿ ಸೇರಿದಂತೆ ಸಚಿವ ಸಂಪುಟದ ಹಲವು ಸದಸ್ಯರು ಭಾಗವಹಿಸಿದ್ದರು. ಭಾರೀ ಜನಸ್ತೋಮದ ನಡುವೆ ಮೆರವಣಿಗೆ ನಡೆಸಿ, ನಾಮಪತ್ರ ಸಲ್ಲಿಸಿದರು.

“ಚನ್ನಪಟ್ಟಣ ಉಪಚುನಾವಣೆ ಫಲಿತಾಂಶವನ್ನು ನಾನೂ ನೋಡುತ್ತೇನೆ. ಕನಿಷ್ಠ 50 ಸಾವಿರ ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಯೋಗೀಶ್ವರ್ ಅವರು ಜಯಗಳಿಸಬೇಕು. ನನ್ನ ಈ ಕೋರಿಕೆಯನ್ನು ತಾವೆಲ್ಲರೂ ಈಡೇರಿಸುತ್ತೀರಿ ಎಂದು ನಂಬಿದ್ದೇನೆ. ಕೆರೆಗಳಿಗೆ ಜೀವದಾನ ಮಾಡಿದ ಯೋಗೇಶ್ವರ್, ಅಭಿವೃದ್ಧಿ ಪರವಾಗಿ ಇರುವುದರಿಂದಲೇ ಐದು ಬಾರಿ ಶಾಸಕರಾಗಿದ್ದಾರೆ. ಈಗ ಅಭಿವೃದ್ಧಿಪರವಾಗಿರುವ ಕಾಂಗ್ರೆಸ್ಸಿಗೆ ಮರಳಿದ್ದಾರೆ. ಇವರನ್ನು ನಾವೆಲ್ಲಾ ಖುಷಿಯಿಂದ ಸ್ವಾಗತಿಸಿದ್ದೇವೆ. ಯೋಗೇಶ್ವರ್ ಗೆಲ್ಲುವ ಮೂಲಕ‌ ಚನ್ನಪಟ್ಟಣದಲ್ಲಿ ನಿಂತು ಹೋಗಿರುವ ಅಭಿವೃದ್ಧಿಗೆ ಮರು ಚಾಲನೆ ನೀಡಬೇಕು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

“ಕುಮಾರಸ್ವಾಮಿಗೆ ಚನ್ನಪಟ್ಟಣ ಮರೆತುಹೋಗಿ ಮಂಡ್ಯಕ್ಕೆ ಸೀಮಿತರಾಗಿದ್ದಾರೆ. ಬಿಜೆಪಿ ಒಕ್ಕೂಟದಿಂದ ಕುಮಾರಸ್ವಾಮಿಯೇ ನಿಲ್ಲಲಿ, ನಿಖಿಲ್ ಕುಮಾರಸ್ವಾಮಿಯೇ ನಿಲ್ಲಲಿ, ಶ್ರೀಮತಿ ಅನಿತಾ ಕುಮಾರಸ್ವಾಮಿಯವರೇ ನಿಲ್ಲಲಿ ಇಲ್ಲಿ ಕಾಂಗ್ರೆಸ್ ಪಕ್ಷದ ಯೋಗೇಶ್ವರ್ ಅವರೇ ಭರ್ಜರಿ ಬಹುಮತದಿಂದ ಜಯಗಳಿಸೋದು ಖಚಿತ” ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

“ನಮ್ಮದು ಜನಕಲ್ಯಾಣದ ಸರ್ಕಾರ. ಈ ಸರ್ಕಾರದಲ್ಲಿ ಯೋಗೇಶ್ವರ್ ಅವರು ಇರಬೇಕು. ಎಚ್.ಡಿ.ಕುಮಾರಸ್ವಾಮಿ ಅವರು ಶಾಸಕರಾಗಿ, ಮುಖ್ಯಮಂತ್ರಿ ಆಗಿದ್ದಾಗಲೂ ಮಾಡದ ಚನ್ನಪಟ್ಟಣದ ಅಭಿವೃದ್ಧಿ ಕೆಲಸಗಳು ಮುಂದಿನ ತಿಂಗಳಿನಿಂದ ಶಾಸಕರಾಗಿ ಯೋಗೇಶ್ವರ್ ಅವರು ಮುಂದುವರೆಸುತ್ತಾರೆ. ಇವತ್ತು ನಾಮಪತ್ರ ಸಲ್ಲಿಕೆ ಬಳಿಕ ನಾನು ಮತ್ತೆ ಚನ್ನಪಟ್ಟಣಕ್ಕೆ ಪ್ರಚಾರಕ್ಕೆ ಬರುತ್ತೇನೆ” ಎಂದು ಘೋಷಿಸಿದರು.

ಇದನ್ನೂ ಓದಿ; “ಪೇಜಾವರ ಶ್ರೀ ಜಾತ್ಯತೀತತೆ ಬಗ್ಗೆ ಮಾತಾಡುವುದು ಭೂತದ ಬಾಯಲ್ಲಿ ಭಗವದ್ಗೀತೆ ಕೇಳಿದಂತಿದೆ” : ಬಿ.ಕೆ ಹರಿಪ್ರಸಾದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...