Homeಮುಖಪುಟಸುಪ್ರೀಂಕೋರ್ಟ್‌ಗೆ ಸುಳ್ಳು ಹೇಳಿದ ದೆಹಲಿ ಲೆಫ್ಟಿನೆಂಟ್ ಗವರ್ನರ್?

ಸುಪ್ರೀಂಕೋರ್ಟ್‌ಗೆ ಸುಳ್ಳು ಹೇಳಿದ ದೆಹಲಿ ಲೆಫ್ಟಿನೆಂಟ್ ಗವರ್ನರ್?

- Advertisement -
- Advertisement -

ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಅವರು ಜೂನ್ ತಿಂಗಳಿನಲ್ಲಿಯೇ ದೆಹಲಿಯ ಪರ್ವತ ಪ್ರದೇಶದಲ್ಲಿ ಅನಧಿಕೃತವಾಗಿ ಮರಗಳನ್ನು ಕಡಿಯುತ್ತಿರುವ ಬಗ್ಗೆ ನನಗೆ ತಿಳಿಸಲಾಗಿದೆ ಎಂಬ ಹೇಳಿಕೆಯನ್ನು ಸುಪ್ರೀಂ ಕೋರ್ಟ್ ಗುರುವಾರ ಪ್ರಶ್ನಿಸಿದೆ. ಈ ಬಗ್ಗೆ ಅವರ ಹೇಳಿಕೆಯಲ್ಲಿ ಇರುವ ದ್ವಂದ್ವ ಇರುವುದನ್ನು ಕೋರ್ಟ್ ಕಂಡುಕೊಂಡಿದೆ. ಸುಪ್ರೀಂಕೋರ್ಟ್‌ಗೆ ಸುಳ್ಳು ಹೇಳಿದ

ಮರಗಳನ್ನು ಕಡಿಯಲು ನ್ಯಾಯಾಲಯದಿಂದ ಪೂರ್ವಾನುಮತಿ ಪಡೆಯಬೇಕು ಎಂಬ ಸುಪ್ರಿಂಕೋರ್ಟ್‌ನ ನಿರ್ದೇಶನವನ್ನು ಉಲ್ಲಂಘಿಸಿ ದೆಹಲಿ ಅಭಿವೃದ್ಧಿ ಪ್ರಾಧಿಕಾರ (ಡಿಡಿಎ) ಮರಗಳನ್ನು ಕಡಿಯಲು ಅನುಮತಿ ನೀಡಿರುವುದು ಬೆಳಕಿಗೆ ಬಂದ ನಂತರ ಸಕ್ಸೇನಾ ವಿರುದ್ಧ ಸುಪ್ರೀಂಕೋರ್ಟ್ ಕಿಡಿ ಕಾರಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಫೆಬ್ರವರಿಯಲ್ಲಿ ಮರ ಕಡಿಯುವ ಕಾರ್ಯ ನಡೆದಿತ್ತು. ಫೆಬ್ರುವರಿಯಲ್ಲಿ ಮರ ಕಡಿಯುವ ಕಾರ್ಯ ಆರಂಭವಾದ ನಂತರವೇ ಮಾರ್ಚ್‌ನಲ್ಲಿ ನ್ಯಾಯಾಲಯದ ಒಪ್ಪಿಗೆಯ ಅಗತ್ಯವಿದೆ ಎಂಬುದು ತನಗೆ ಗೊತ್ತಾಯಿತು ಎಂದು ಸಕ್ಸೇನಾ ಹೇಳಿಕೊಂಡಿದ್ದಾರೆ. ಆದರೆ ನ್ಯಾಯಾಲಯಕ್ಕೆ ಸಲ್ಲಿಸಿದ ಅಫಿಡವಿಟ್‌ನಲ್ಲಿ, ಸಕ್ಸೇನಾ ಅವರು ಜೂನ್‌ ವೇಳೆ ಮರಗಳನ್ನು ಕಡಿಯುವ ಬಗ್ಗೆ ತನಗೆ ತಿಳಿಸಲಾಗಿತ್ತು ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಸುಪ್ರೀಂಕೋರ್ಟ್‌ಗೆ ಸುಳ್ಳು ಹೇಳಿದ

ಆದಾಗ್ಯೂ, ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರೊಂದಿಗೆ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ. ಚಂದ್ರಚೂಡ್ ಅವರ ಪೀಠವು ದಾಖಲೆಯನ್ನು ಪರಿಶೀಲಿಸಿದ್ದು, ದೆಹಲಿ ಅಭಿವೃದ್ಧಿ ಪ್ರಾಧಿಕಾರದ ಅಂದಿನ ಉಪಾಧ್ಯಕ್ಷ ಸುಭಾಶಿಶ್ ಪಾಂಡಾ ಅವರು ಏಪ್ರಿಲ್ ನಲ್ಲಿಯೇ ಮರ ಕಡಿಯುವ ಬಗ್ಗೆ ಸಕ್ಸೇನಾ ಅವರಿಗೆ ಮಾಹಿತಿ ನೀಡಿದ್ದರು ಕಂಡುಕೊಂಡಿದೆ. ಅದರ ನಂತರ ಸುಭಾಶಿಶ್ ಪಾಂಡಾ ಅವರನ್ನು ಪ್ರಧಾನ ಮಂತ್ರಿ ಕಚೇರಿಗೆ (ಪಿಎಂಒ) ವರ್ಗಾಯಿಸಲಾಗಿದೆ.

“ಅಫಿಡವಿಟ್‌ನಲ್ಲಿ, ಫೆಬ್ರವರಿ 16, 2024 ರ ಮೊದಲು ವಾಸ್ತವದಲ್ಲಿ ಮರ ಕಡಿಯುವಿಕೆ ನಡೆದಿದೆ ಎಂಬ ಅಂಶವನ್ನು ಅಧ್ಯಕ್ಷರಿಗೆ ತಿಳಿಸಲಾಗಿದೆ ಎಂದು ತೋರಿಸುತ್ತದೆ” ಎಂದು ನ್ಯಾಯಾಲಯವು ಗುರುವಾರ ಆದೇಶದಲ್ಲಿ ಉಲ್ಲೇಖಿಸಿದೆ. ಫೆಬ್ರುವರಿಯಲ್ಲಿ ವಾಸ್ತವವಾಗಿ ಕಡಿಯಲಾಗಿದೆ ಎಂಬ ಅಂಶ ಸಕ್ಸೇನಾ ಅವರಿಗೆ ತಿಳಿದಿದ್ದು ಜೂನ್ 10 ರಂದು ಎಂಬ ಅವರ ಹೇಳಿಕೆಯು ತಪ್ಪಾಗಿದೆ ಎಂದು ನ್ಯಾಯಾಲಯ ಹೇಳಿದೆ.

ಇದನ್ನೂ ಓದಿ: FACT CHECK : ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ ವೇಳೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೊರಗಡೆ ನಿಲ್ಲಿಸಿ ಅವಮಾನಿಸಲಾಗಿದೆಯಾ?

“ಹೀಗಾಗಿ ನಾವು ಮೇಲಿನ ವ್ಯತ್ಯಾಸದ ಕುರಿತು ಡಿಡಿಎ ಉಪಾಧ್ಯಕ್ಷರಿಂದ ಹೆಚ್ಚುವರಿ ಅಫಿಡವಿಟ್‌ಗೆ ಕರೆ ನೀಡುತ್ತೇವೆ. ಎಲ್ಲಾ ಮೂಲ ದಾಖಲೆಗಳನ್ನು ಈ ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ನಾವು ನಿರ್ದೇಶಿಸುತ್ತೇವೆ. ವಿಚಾರಣೆಯನ್ನು ಮಂಗಳವಾರ ಪಟ್ಟಿ ಮಾಡಿ… ಮರಗಳನ್ನು ಕಡಿಯುವ ಬಗ್ಗೆ ಅವರಿಗೆ ಯಾವಾಗ ತಿಳಿಯಿತು ಎಂದು ಅವರು ನಿರ್ದಿಷ್ಟ ದಿನಾಂಕವನ್ನು ಅಫಿಡವಿಟ್‌ನಲ್ಲಿ ಹೇಳಲಿ” ಕೋರ್ಟ್ ಆದೇಶಿಸಿದೆ.

ದೆಹಲಿಯ ರಿಡ್ಜ್ ಪ್ರದೇಶದಲ್ಲಿ ನೂರಾರು ಮರಗಳನ್ನು ಅಕ್ರಮವಾಗಿ ಕಡಿಯುತ್ತಿರುವ ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯ ನಡೆಸುತ್ತಿದೆ. ಸುಪ್ರೀಂ ಕೋರ್ಟ್‌ನ ಅನುಮತಿಯಿಲ್ಲದೆ ಈ ಪ್ರದೇಶದಲ್ಲಿ ಮರಗಳನ್ನು ಕಡಿಯುವುದರ ವಿರುದ್ಧ ನ್ಯಾಯಾಲಯವು ಈ ಹಿಂದೆ ನಿರ್ದೇಶನ ನೀಡಿದ್ದರೂ ಸಹ, ಮರಗಳನ್ನು ಹೇಗೆ ಕತ್ತರಿಸಲಾಯಿತು ಎಂಬುದನ್ನು ವಿವರಿಸಲು ಪೀಠವು ಇತ್ತೀಚೆಗೆ ಲೆಫ್ಟಿನೆಂಟ್‌ ಸಕ್ಸೇನ್ ಅವರನ್ನು ಕೇಳಿದೆ.

ಅಕ್ಟೋಬರ್ 22 ರ ಅಫಿಡವಿಟ್‌ನಲ್ಲಿ, ಎಲ್‌ಜಿ ಸಕ್ಸೇನಾ ಅವರು ಪೂರ್ವಾನುಮತಿ ಅಗತ್ಯದ ಬಗ್ಗೆ ತನಗೆ ತಿಳಿದಿರಲಿಲ್ಲ ಮತ್ತು ತಾನು ಸಾರ್ವಜನಿಕ ಹಿತಾಸಕ್ತಿಯ ಆಧಾರದಲ್ಲಿ ಕಾರ್ಯನಿರ್ವಹಿಸಿದ್ದೇನೆ ಎಂದು ಹೇಳಿದ್ದರು. 2,200 ಕೋಟಿ ಸಾರ್ವಜನಿಕ ಹಣವನ್ನು ಈಗಾಗಲೇ ಹೂಡಿಕೆ ಮಾಡಿರುವ ಮಹತ್ವದ ಯೋಜನೆಗಾಗಿ ಮರ ಕಡಿಯುವುದಾಗಿ ಅವರು ಒತ್ತಿ ಹೇಳಿದ್ದರು.

ಇದನ್ನೂ ಓದಿ: ಯುಪಿ ಉಪ ಚುನಾವಣೆ | ಸ್ಪರ್ಧೆಯಿಂದ ಹೊರಗುಳಿಯಲು ನಿರ್ಧರಿಸಿದ ಕಾಂಗ್ರೆಸ್!

ಯುಪಿ ಉಪ ಚುನಾವಣೆ | ಸ್ಪರ್ಧೆಯಿಂದ ಹೊರಗುಳಿಯಲು ನಿರ್ಧರಿಸಿದ ಕಾಂಗ್ರೆಸ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...