Homeಕರ್ನಾಟಕಮರಕುಂಬಿ ದಲಿತ ದೌರ್ಜನ್ಯ ಪ್ರಕರಣ | 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ

ಮರಕುಂಬಿ ದಲಿತ ದೌರ್ಜನ್ಯ ಪ್ರಕರಣ | 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ

- Advertisement -
- Advertisement -

ಕೊಪ್ಪಳ ಜಿಲ್ಲೆಯ ಗಂಗಾವತಿಯ ಮರಕುಂಬಿ ಗ್ರಾಮದ ದಲಿತರ ಮೇಲೆ ನಡೆದ ದೌರ್ಜನ್ಯ ಪ್ರಕರಣದಲ್ಲಿ ನ್ಯಾಯಾಲಯ ಅಪರಾಧಿಗಳಿಗೆ ಗುರುವಾರ ಶಿಕ್ಷೆ ಘೋಷಿಸಿದೆ. ಪ್ರಕರಣದಲ್ಲಿ 101 ಜನರನ್ನು ಅಪರಾಧಿಗಳು ಎಂದು ನ್ಯಾಯಾಲಯ ಹೇಳಿದ್ದು, ಅದರಲ್ಲಿ 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಉಳಿದ ಮೂವರಿಗೆ ಐದು ವರ್ಷ ಜೈಲು ಶಿಕ್ಷೆಯನ್ನು ನ್ಯಾಯಾಲಯ ಘೋಷಿಸಿದೆ. ಮರಕುಂಬಿ ದಲಿತ ದೌರ್ಜನ್ಯ

ಮರಕುಂಬಿ ಗ್ರಾಮದಲ್ಲಿ ಸುಮಾರು 9 ವರ್ಷಗಳ ಹಿಂದೆ ನಡೆದ ಅಸ್ಪೃಶ್ಯತೆ ಆಚರಣೆ ಮತ್ತು ದಲಿತರ ಓಣಿಗೆ ನುಗ್ಗಿ ಗುಡಿಸಲುಗಳಿಗೆ ಬೆಂಕಿ ಹಚ್ಚಿ ಹಲ್ಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ 101 ಮಂದಿಯ ವಿರುದ್ದದ ಆರೋಪ ಸಾಬೀತಾಗಿದೆ ಎಂದು ಸೋಮವಾರ ನ್ಯಾಯಾಲಯ ತೀರ್ಪು ಪ್ರಕಟಿಸಿತ್ತು. ಆದರೆ ಶಿಕ್ಷೆಯ ಪ್ರಮಾಣವನ್ನು ಗುರುವಾರ ಪ್ರಕಟಿಸುವುದಾಗಿ ಹೇಳಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪ್ರಕರಣದ ವಿಚಾರಣೆ ಪೂರ್ಣಗೊಳಿಸಿದ್ದ ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಸಿ. ಚಂದ್ರಶೇಖರ ಅವರು 101 ಆರೋಪಿಗಳ ವಿರುದ್ಧದ ಆರೋಪ ಸಾಬೀತಾಗಿರುವುದಾಗಿ ಸೋಮವಾರ ತೀರ್ಪು ನೀಡಿದ್ದರು.

ಮರುಕುಂಬಿಯ ದಲಿತರ ಗುಡಿಸಲುಗಳಿಗೆ ಬೆಂಕಿ ಹಚ್ಚಿದ್ದ ಈ ಘಟನೆಯಿಂದ 2014ರಲ್ಲಿ ರಾಜ್ಯವೆ ಬೆಚ್ಚಿಬಿದ್ದಿತ್ತು. ಗ್ರಾಮದ ಹೋಟೆಲ್‌ಗಳು ಮತ್ತು ಕ್ಷೌರಿಕ ಅಂಗಡಿಗಳಲ್ಲಿ ದಲಿತರಿಗೆ ಪ್ರವೇಶ ನಿರಾಕರಿಸಿದ್ದಕ್ಕೆ ಸಂತ್ರಸ್ತರು ಮತ್ತು ಆರೋಪಿಗಳ ನಡುವೆ ಘರ್ಷಣೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳು ಮರುಕುಂಬಿಗೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮಾಡುತ್ತಿದ್ದರು.  ಮರಕುಂಬಿ ದಲಿತ ದೌರ್ಜನ್ಯ

ಇದೇ ಸಿಟ್ಟಿನಿಂದ ಸರ್ವಣೀಯರು ರಾತ್ರಿ ಸಮಯದಲ್ಲಿ ದಲಿತರ ಕೇರಿಗೆ ನುಗ್ಗಿ ದಲಿತರ ಗುಡಿಸಲುಗಳಿಗೆ ಬೆಂಕಿ ಹಚ್ಚಿದ್ದಲ್ಲದೆ, ದಲಿತರ ಮೇಲೆ ಹಲ್ಲೆ ನಡೆಸಿದ್ದರು. ಈ ವಿಚಾರ ರಾಜ್ಯಾದ್ಯಂತ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು.

ಘಟನೆಯನ್ನು ವಿರೋಧಿಸಿ ಎಡ ಪಕ್ಷಗಳು ಸೇರಿದಂತೆ ಹಲವು ದಲಿತ ಮುಖಂಡರು ಕೊಪ್ಪಳ ಜಿಲ್ಲೆಯಿಂದ ಬೆಂಗಳೂರಿಗೆ ಪಾದಯಾತ್ರೆ ಕೈಗೊಂಡಿದ್ದರು. ಆರಂಭದಲ್ಲಿ 117 ಮಂದಿಯ  ವಿರುದ್ಧ ಪ್ರಕರಣದ ದಾಖಲಿಸಲಾಗಿತ್ತು. ಆದರೆ ಅವರಲ್ಲಿ ಕೆಲವರು ಸಾವನ್ನಪ್ಪಿದ್ದರೆ, ಸೋಮವಾರ ನ್ಯಾಯಾಲಯ ತೀರ್ಪು ಪ್ರಕಟಿಸಿದಾಗ 100 ಆರೋಪಿಗಳನ್ನು ಬಂಧಿಸಲಾಗಿದೆ.

ಓರ್ವ ಆರೋಪಿ ಇನ್ನೂ ನಾಪತ್ತೆಯಾಗಿದ್ದು, ಆತನಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ. 101 ಮಂದಿಗೆ ಏಕಕಾಲದಲ್ಲಿ ಶಿಕ್ಷೆ ವಿಧಿಸುತ್ತಿರುವುದು ಜಿಲ್ಲೆಯ ಇತಿಹಾಸದಲ್ಲಿ ಇದೇ ಮೊದಲಾಗಿದೆ.

ಈ ಘಟನೆಯ ನಂತರ ಮೂರು ತಿಂಗಳ ಕಾಲ ಮರುಕುಂಬಿ ಗ್ರಾಮದಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದರು. ದೌರ್ಜನ್ಯವನ್ನು ವಿರೋಧಿಸುವಲ್ಲಿ ನಾಯಕತ್ವ ವಹಿಸಿದ್ದ ದಲಿತ ಮುಖಂಡ ವೀರೇಶ ಮರುಕುಂಬಿ 2014ರಲ್ಲಿ ಕೊಪ್ಪಳ ರೈಲು ನಿಲ್ದಾಣದ ಬಳಿ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.

ಇದನ್ನೂ ಓದಿ: ದಲಿತ ವಿರುದ್ಧ ನಡೆಯುವ ದೌರ್ಜನ್ಯಗಳಿಗಾಗಿ ನಾನುಗೌರಿ.ಕಾಂ ನ ದಲಿತ್ ಫೈಲ್ಸ್ ವಿಭಾಗದಲ್ಲಿ ಓದಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...