Homeಮುಖಪುಟದೆಹಲಿ ಗಲಭೆ ಪ್ರಕರಣ | ಶಾರ್ಜೀಲ್ ಇಮಾಮ್ ಜಾಮೀನು ಅರ್ಜಿ ತ್ವರಿತ ವಿಲೇವಾರಿಗೆ ಸುಪ್ರೀಂ ಕೋರ್ಟ್...

ದೆಹಲಿ ಗಲಭೆ ಪ್ರಕರಣ | ಶಾರ್ಜೀಲ್ ಇಮಾಮ್ ಜಾಮೀನು ಅರ್ಜಿ ತ್ವರಿತ ವಿಲೇವಾರಿಗೆ ಸುಪ್ರೀಂ ಕೋರ್ಟ್ ಸೂಚನೆ

- Advertisement -
- Advertisement -

ದೆಹಲಿ ಗಲಭೆ ಹಿಂದಿನ ಪಿತೂರಿ ಆರೋಪ ಪ್ರಕರಣದಲ್ಲಿ ಜಾಮೀನು ಕೋರಿ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಸಲ್ಲಿಸಿರುವ ಅರ್ಜಿಯನ್ನು ತ್ವರಿತವಾಗಿ ವಿಲೇವಾರಿ ಮಾಡುವ ಮನವಿಯನ್ನು ಪರಿಗಣಿಸುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ (ಅ.25) ದೆಹಲಿ ಹೈಕೋರ್ಟ್‌ಗೆ ಸೂಚಿಸಿದೆ. ಶಾರ್ಜೀಲ್ ಇಮಾಮ್ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ಏಪ್ರಿಲ್ 2022 ರಿಂದ ಇತ್ಯರ್ಥವಾಗದೆ ಬಾಕಿ ಉಳಿದಿದೆ.

ತನ್ನ ಜಾಮೀನು ಅರ್ಜಿಯನ್ನು ಶೀಘ್ರವಾಗಿ ವಿಲೇವಾರಿ ಮಾಡುವಂತೆ ಹೈಕೋರ್ಟ್‌ಗೆ ನಿರ್ದೇಶನ ನೀಡಲು ಕೋರಿ ಇಮಾಮ್ ಅವರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ನ್ಯಾಯಪೀಠ ಪರಿಗಣಿಸಿದೆ. ಆದಷ್ಟು ಬೇಗ ಜಾಮೀನು ಅರ್ಜಿಯನ್ನು ವಿಲೇವಾರಿ ಮಾಡುವಂತೆ ಹೈಕೋರ್ಟ್‌ಗೆ ಕೋರುವ ಸ್ವಾತಂತ್ರ್ಯ ಅರ್ಜಿದಾರರಿಗೆ ಇದೆ ಎಂದು ಹೇಳಿದೆ. ಇಮಾಮ್ ಅವರ ಜಾಮೀನು ಅರ್ಜಿಯನ್ನು ನವೆಂಬರ್ 25 ರಂದು ವಿಚಾರಣೆಗೆ ಹೈಕೋರ್ಟ್‌ನಲ್ಲಿ ಪಟ್ಟಿ ಮಾಡಿರುವುದನ್ನು ಇದೇ ವೇಳೆ ಪೀಠ ಗಮನಿಸಿದೆ.

ವಿಚಾರಣೆಯ ಆರಂಭದಲ್ಲಿ, ಹೈಕೋರ್ಟ್‌ನಲ್ಲಿ ವಿಷಯ ಬಾಕಿ ಇರುವಾಗ ಅರ್ಜಿದಾರರು ಸುಪ್ರೀಂ ಕೋರ್ಟ್‌ನಲ್ಲಿ ರಿಟ್ ಅರ್ಜಿಯನ್ನು ಏಕೆ ಸಲ್ಲಿಸಿದ್ದಾರೆ? ಎಂದು ಪೀಠವು ಕೇಳಿತ್ತು.

ಇದಕ್ಕೆ ಉತ್ತರಿಸಿದ ಇಮಾಮ್ ಪರ ಹಿರಿಯ ವಕೀಲ ಸಿದ್ಧಾರ್ಥ್ ದವೆ ಅವರು, “ನಾವು ಸುಪ್ರೀಂ ಕೋರ್ಟ್‌ನಲ್ಲಿ ಜಾಮೀನು ನೀಡುವಂತೆ ಒತ್ತಾಯಿಸುತ್ತಿಲ್ಲ. ಹೈಕೋರ್ಟ್‌ನಲ್ಲಿರುವ ಜಾಮೀನು ಅರ್ಜಿಯ ವಿಚಾರಣೆ ತ್ವರಿತಗೊಳಿಸಲು ನಿರ್ದೇಶಿಸುವಂತೆ ಮನವಿ ಮಾಡಿದ್ದೇವೆ” ಎಂದರು.

ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಕಾಯ್ದೆಯ ಸೆಕ್ಷನ್ 21(2)ರ ಪ್ರಕಾರ, ಹೈಕೋರ್ಟ್ ಮೂರು ತಿಂಗಳೊಳಗೆ ಮೇಲ್ಮನವಿಯನ್ನು ತೀರ್ಮಾನಿಸಬೇಕೆಂಬ ಆದೇಶವಿದೆ ಎಂದು ದವೆ ತಿಳಿಸಿದರು. ಜಾಮೀನು ತಿರಸ್ಕಾರವನ್ನು ಪ್ರಶ್ನಿಸಿ ಇಮಾಮ್ ಅವರ ಮೇಲ್ಮನವಿಯನ್ನು ಏಪ್ರಿಲ್ 29, 2022 ರಂದು ಸಲ್ಲಿಸಲಾಗಿದೆ. ಅದನ್ನು 64 ಬಾರಿ ಮುಂದೂಡಲಾಗಿದೆ ಎಂದು ವಕೀಲ ದವೆ” ಹೇಳಿದರು.

“ನಾವು ಯಾರ ವಿರುದ್ಧ ಏನೂ ಹೇಳುತ್ತಿಲ್ಲ. ನಾವು ಯಾರನ್ನೂ ದೂಷಿಸುತ್ತಿಲ್ಲ. ಆದರೆ, ನಮ್ಮ ಕಕ್ಷಿದಾರರ ಅರ್ಜಿಯನ್ನು ಪುರಸ್ಕರಿಸಿ ಅಥವಾ ತಿರಸ್ಕರಿಸಿ ಒಟ್ಟಿನಲ್ಲಿ ಅದನ್ನು ವಿಲೇವಾರಿ ಮಾಡಿ” ಎಂದು ದವೆ ಮನವಿ ಮಾಡಿದರು.

ಅರ್ಜಿದಾರರ ವಿರುದ್ಧ ಎಂಟು ಎಫ್‌ಐಆರ್‌ಗಳಿವೆ ಎಂದು ನ್ಯಾಯಮೂರ್ತಿ ತ್ರಿವೇದಿ ಹೇಳಿದಾಗ, ಪ್ರಸ್ತುತ ವಿಷಯವು 2020ರ ದೆಹಲಿ ಗಲಭೆಯ ಹಿಂದಿನ ಪಿತೂರಿ ಆರೋಪದ ಮೇಲೆ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ(ಯುಎಪಿಎ) ಅಡಿ ದಾಖಲಾದ ಕೇವಲ ಒಂದು ಎಫ್‌ಐಆರ್‌ಗೆ ಸಂಬಂಧಿಸಿದೆ ಎಂದು ದವೆ ಸ್ಪಷ್ಟಪಡಿಸಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧದ ಪ್ರತಿಭಟನೆಯ ನಂತರ ಈಶಾನ್ಯ ದೆಹಲಿಯಲ್ಲಿ ನಡೆದ 2020ರ ಕೋಮು ಗಲಭೆಯ ಹಿಂದಿನ ಪಿತೂರಿಯ ಆರೋಪದ ಮೇಲೆ ಶಾರ್ಜೀಲ್ ಇಮಾಮ್ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಮತ್ತು ಭಾರತೀಯ ದಂಡ ಸಂಹಿತೆಯ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇಮಾಮ್ ಅವರನ್ನು ಜನವರಿ 28, 2020ರಂದು ಪೊಲೀಸರು ವಶಕ್ಕೆ ಪಡೆದಿದ್ದರು. ಅಂದಿನಿಂದ ಇಮಾಮ್ ವಿಚಾರಣಾಧೀನ ಕೈದಿಯಾಗಿ ಇಮಾನ್ ಜೈಲಿನಲ್ಲಿದ್ದಾರೆ. ಅವರ ವಿರುದ್ದ ಇದುವರೆಗೆ ಆರೋಪಗಳನ್ನು ರೂಪಿಸಲಾಗಿಲ್ಲ.

ಇದನ್ನೂ ಓದಿ : ಅವಹೇಳನಕಾರಿ ಹೇಳಿಕೆ; ತೆಲಂಗಾಣ ಸಚಿವೆ ಸುರೇಖಾಗೆ ಛೀಮಾರಿ ಹಾಕಿದ ಕೋರ್ಟ್ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...