Homeಮುಖಪುಟದೆಹಲಿ ಗಲಭೆ ಪ್ರಕರಣ | ಶಾರ್ಜೀಲ್ ಇಮಾಮ್ ಜಾಮೀನು ಅರ್ಜಿ ತ್ವರಿತ ವಿಲೇವಾರಿಗೆ ಸುಪ್ರೀಂ ಕೋರ್ಟ್...

ದೆಹಲಿ ಗಲಭೆ ಪ್ರಕರಣ | ಶಾರ್ಜೀಲ್ ಇಮಾಮ್ ಜಾಮೀನು ಅರ್ಜಿ ತ್ವರಿತ ವಿಲೇವಾರಿಗೆ ಸುಪ್ರೀಂ ಕೋರ್ಟ್ ಸೂಚನೆ

- Advertisement -
- Advertisement -

ದೆಹಲಿ ಗಲಭೆ ಹಿಂದಿನ ಪಿತೂರಿ ಆರೋಪ ಪ್ರಕರಣದಲ್ಲಿ ಜಾಮೀನು ಕೋರಿ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಸಲ್ಲಿಸಿರುವ ಅರ್ಜಿಯನ್ನು ತ್ವರಿತವಾಗಿ ವಿಲೇವಾರಿ ಮಾಡುವ ಮನವಿಯನ್ನು ಪರಿಗಣಿಸುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ (ಅ.25) ದೆಹಲಿ ಹೈಕೋರ್ಟ್‌ಗೆ ಸೂಚಿಸಿದೆ. ಶಾರ್ಜೀಲ್ ಇಮಾಮ್ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ಏಪ್ರಿಲ್ 2022 ರಿಂದ ಇತ್ಯರ್ಥವಾಗದೆ ಬಾಕಿ ಉಳಿದಿದೆ.

ತನ್ನ ಜಾಮೀನು ಅರ್ಜಿಯನ್ನು ಶೀಘ್ರವಾಗಿ ವಿಲೇವಾರಿ ಮಾಡುವಂತೆ ಹೈಕೋರ್ಟ್‌ಗೆ ನಿರ್ದೇಶನ ನೀಡಲು ಕೋರಿ ಇಮಾಮ್ ಅವರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ನ್ಯಾಯಪೀಠ ಪರಿಗಣಿಸಿದೆ. ಆದಷ್ಟು ಬೇಗ ಜಾಮೀನು ಅರ್ಜಿಯನ್ನು ವಿಲೇವಾರಿ ಮಾಡುವಂತೆ ಹೈಕೋರ್ಟ್‌ಗೆ ಕೋರುವ ಸ್ವಾತಂತ್ರ್ಯ ಅರ್ಜಿದಾರರಿಗೆ ಇದೆ ಎಂದು ಹೇಳಿದೆ. ಇಮಾಮ್ ಅವರ ಜಾಮೀನು ಅರ್ಜಿಯನ್ನು ನವೆಂಬರ್ 25 ರಂದು ವಿಚಾರಣೆಗೆ ಹೈಕೋರ್ಟ್‌ನಲ್ಲಿ ಪಟ್ಟಿ ಮಾಡಿರುವುದನ್ನು ಇದೇ ವೇಳೆ ಪೀಠ ಗಮನಿಸಿದೆ.

ವಿಚಾರಣೆಯ ಆರಂಭದಲ್ಲಿ, ಹೈಕೋರ್ಟ್‌ನಲ್ಲಿ ವಿಷಯ ಬಾಕಿ ಇರುವಾಗ ಅರ್ಜಿದಾರರು ಸುಪ್ರೀಂ ಕೋರ್ಟ್‌ನಲ್ಲಿ ರಿಟ್ ಅರ್ಜಿಯನ್ನು ಏಕೆ ಸಲ್ಲಿಸಿದ್ದಾರೆ? ಎಂದು ಪೀಠವು ಕೇಳಿತ್ತು.

ಇದಕ್ಕೆ ಉತ್ತರಿಸಿದ ಇಮಾಮ್ ಪರ ಹಿರಿಯ ವಕೀಲ ಸಿದ್ಧಾರ್ಥ್ ದವೆ ಅವರು, “ನಾವು ಸುಪ್ರೀಂ ಕೋರ್ಟ್‌ನಲ್ಲಿ ಜಾಮೀನು ನೀಡುವಂತೆ ಒತ್ತಾಯಿಸುತ್ತಿಲ್ಲ. ಹೈಕೋರ್ಟ್‌ನಲ್ಲಿರುವ ಜಾಮೀನು ಅರ್ಜಿಯ ವಿಚಾರಣೆ ತ್ವರಿತಗೊಳಿಸಲು ನಿರ್ದೇಶಿಸುವಂತೆ ಮನವಿ ಮಾಡಿದ್ದೇವೆ” ಎಂದರು.

ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಕಾಯ್ದೆಯ ಸೆಕ್ಷನ್ 21(2)ರ ಪ್ರಕಾರ, ಹೈಕೋರ್ಟ್ ಮೂರು ತಿಂಗಳೊಳಗೆ ಮೇಲ್ಮನವಿಯನ್ನು ತೀರ್ಮಾನಿಸಬೇಕೆಂಬ ಆದೇಶವಿದೆ ಎಂದು ದವೆ ತಿಳಿಸಿದರು. ಜಾಮೀನು ತಿರಸ್ಕಾರವನ್ನು ಪ್ರಶ್ನಿಸಿ ಇಮಾಮ್ ಅವರ ಮೇಲ್ಮನವಿಯನ್ನು ಏಪ್ರಿಲ್ 29, 2022 ರಂದು ಸಲ್ಲಿಸಲಾಗಿದೆ. ಅದನ್ನು 64 ಬಾರಿ ಮುಂದೂಡಲಾಗಿದೆ ಎಂದು ವಕೀಲ ದವೆ” ಹೇಳಿದರು.

“ನಾವು ಯಾರ ವಿರುದ್ಧ ಏನೂ ಹೇಳುತ್ತಿಲ್ಲ. ನಾವು ಯಾರನ್ನೂ ದೂಷಿಸುತ್ತಿಲ್ಲ. ಆದರೆ, ನಮ್ಮ ಕಕ್ಷಿದಾರರ ಅರ್ಜಿಯನ್ನು ಪುರಸ್ಕರಿಸಿ ಅಥವಾ ತಿರಸ್ಕರಿಸಿ ಒಟ್ಟಿನಲ್ಲಿ ಅದನ್ನು ವಿಲೇವಾರಿ ಮಾಡಿ” ಎಂದು ದವೆ ಮನವಿ ಮಾಡಿದರು.

ಅರ್ಜಿದಾರರ ವಿರುದ್ಧ ಎಂಟು ಎಫ್‌ಐಆರ್‌ಗಳಿವೆ ಎಂದು ನ್ಯಾಯಮೂರ್ತಿ ತ್ರಿವೇದಿ ಹೇಳಿದಾಗ, ಪ್ರಸ್ತುತ ವಿಷಯವು 2020ರ ದೆಹಲಿ ಗಲಭೆಯ ಹಿಂದಿನ ಪಿತೂರಿ ಆರೋಪದ ಮೇಲೆ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ(ಯುಎಪಿಎ) ಅಡಿ ದಾಖಲಾದ ಕೇವಲ ಒಂದು ಎಫ್‌ಐಆರ್‌ಗೆ ಸಂಬಂಧಿಸಿದೆ ಎಂದು ದವೆ ಸ್ಪಷ್ಟಪಡಿಸಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧದ ಪ್ರತಿಭಟನೆಯ ನಂತರ ಈಶಾನ್ಯ ದೆಹಲಿಯಲ್ಲಿ ನಡೆದ 2020ರ ಕೋಮು ಗಲಭೆಯ ಹಿಂದಿನ ಪಿತೂರಿಯ ಆರೋಪದ ಮೇಲೆ ಶಾರ್ಜೀಲ್ ಇಮಾಮ್ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಮತ್ತು ಭಾರತೀಯ ದಂಡ ಸಂಹಿತೆಯ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇಮಾಮ್ ಅವರನ್ನು ಜನವರಿ 28, 2020ರಂದು ಪೊಲೀಸರು ವಶಕ್ಕೆ ಪಡೆದಿದ್ದರು. ಅಂದಿನಿಂದ ಇಮಾಮ್ ವಿಚಾರಣಾಧೀನ ಕೈದಿಯಾಗಿ ಇಮಾನ್ ಜೈಲಿನಲ್ಲಿದ್ದಾರೆ. ಅವರ ವಿರುದ್ದ ಇದುವರೆಗೆ ಆರೋಪಗಳನ್ನು ರೂಪಿಸಲಾಗಿಲ್ಲ.

ಇದನ್ನೂ ಓದಿ : ಅವಹೇಳನಕಾರಿ ಹೇಳಿಕೆ; ತೆಲಂಗಾಣ ಸಚಿವೆ ಸುರೇಖಾಗೆ ಛೀಮಾರಿ ಹಾಕಿದ ಕೋರ್ಟ್ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂ: ರಂಜಾನ್ ಆಹಾರ ವ್ಯವಸ್ಥೆಗಾಗಿ ಮೀನು ಹಿಡಿಯುತ್ತಿದ್ದ ಮುಸ್ಲಿಂ ಸಹೋದರರ ಮೇಲೆ ಬಿಎಸ್‌ಎಫ್ ಗುಂಡಿನ ದಾಳಿ: ಗಂಭೀರ ಗಾಯ

ಅಸ್ಸಾಂನ ದಕ್ಷಿಣ ಸಲ್ಮಾರಾ–ಮಂಕಚಾರ್ ಜಿಲ್ಲೆಯ ಇಬ್ಬರು ಸಹೋದರರು ಭಾರತದ ಭೂಪ್ರದೇಶದೊಳಗಿನ ನದಿನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಗುಂಡು ಹಾರಿಸಿ ಪ್ರಾಣಕ್ಕಾಗಿ ಹೋರಾಡುತ್ತಿದ್ದಾರೆ. ಈ ಘಟನೆ ಮಾರ್ಚ್ 8-9, 2026...

ಊನಾ ದಲಿತ ದೌರ್ಜನ್ಯ ಪ್ರಕರಣ: ಐವರು ದೋಷಿಗಳೆಂದು ತೀರ್ಪು ನೀಡಿದ ನ್ಯಾಯಾಲಯ; 37 ಆರೋಪಿಗಳು ಖುಲಾಸೆ

ದೇಶದಲ್ಲಿ ನಡೆಯುತ್ತಿರುವ ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಗುಜರಾತ್‌ನ ಊನಾ ದಲಿತರ ಮೇಲೆ ಹಲ್ಲೆ ಪ್ರಕರಣದಲ್ಲಿ, ಗಿರ್ ಸೋಮನಾಥ್ ಜಿಲ್ಲೆಯ ವೆರಾವಲ್ ನ್ಯಾಯಾಲಯವು ಸೋಮವಾರ ತನ್ನ ತೀರ್ಪು ನೀಡಿದ್ದು,...

ರಾಜ್ಯಸಭೆ ಚುನಾವಣೆ : ಬಿಹಾರದ ಎಲ್ಲಾ ಐದು ಸ್ಥಾನಗಳು ಎನ್‌ಡಿಎ ಪಾಲು; ಒಡಿಶಾದ ಮೂರು ಸ್ಥಾನಗಳಲ್ಲಿ ಗೆಲುವು

ರಾಜ್ಯಸಭೆಯ 37 ಸ್ಥಾನಗಳಿಗೆ ಸೋಮವಾರ (ಮಾ.16) ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 21 ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಪೈಕಿ ಬಿಜೆಪಿ ಮಾತ್ರ 11 ಸ್ಥಾನಗಳನ್ನು ಪಡೆದಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಒಟ್ಟು 11 ಸ್ಥಾನಗಳನ್ನು...

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...